Homeಅಂತರಾಷ್ಟ್ರೀಯಗಾಝಾ ನಗರದಲ್ಲಿ ಶಾಲೆ, ನಿರಾಶ್ರಿತರ ಶಿಬಿರ, ಕುಡಿಯುವ ನೀರಿನ ಸೌಲಭ್ಯದ ಮೇಲೆ ಇಸ್ರೇಲ್ ಬಾಂಬ್ ದಾಳಿ:...

ಗಾಝಾ ನಗರದಲ್ಲಿ ಶಾಲೆ, ನಿರಾಶ್ರಿತರ ಶಿಬಿರ, ಕುಡಿಯುವ ನೀರಿನ ಸೌಲಭ್ಯದ ಮೇಲೆ ಇಸ್ರೇಲ್ ಬಾಂಬ್ ದಾಳಿ: ಕನಿಷ್ಠ 16 ಪ್ಯಾಲೆಸ್ತೀನಿಯರು ಸಾವು

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 20 ಅಂಶಗಳ ಕದನ ವಿರಾಮ ಯೋಜನೆ ಮುಂದಿಟ್ಟಿರುವ ನಡುವೆಯೇ ಗಾಝಾದಲ್ಲಿ ಇಸ್ರೇಲ್ ತನ್ನ ಆಕ್ರಮಣವನ್ನು ಮುಂದುವರಿಸಿದೆ. ಬುಧವಾರ (ಅ.1) 16 ಮಂದಿ ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಹತ್ಯೆಗೈದಿದೆ ಎಂದು ವರದಿಯಾಗಿದೆ.

ಗಾಝಾ ನಗರದಲ್ಲಿ ಸ್ಥಳಾಂತರಗೊಂಡ ನಿರಾಶ್ರಿತರು ಆಶ್ರಯ ಪಡೆಯುತ್ತಿದ್ದ ಶಾಲೆಗಳನ್ನು ಗುರಿಯಾಗಿಸಿ ಇಸ್ರೇಲ್ ದಾಳಿ ನಡೆಸಿದೆ. ನಗರದ ಪೂರ್ವ ಝೈಟೌನ್ ಪ್ರದೇಶದಲ್ಲಿರುವ ಅಲ್-ಫಲಾಹ್ ಶಾಲೆಗೆ ನಿಮಿಷಗಳ ಅಂತರದಲ್ಲಿ ಎರಡು ಬಾರಿ ದಾಳಿ ಮಾಡಲಾಗಿದೆ ಎಂದು ಅಲ್-ಅಹ್ಲಿ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಬೆಳಿಗ್ಗೆ ಗಾಝಾ ನಗರದ ಪಶ್ಚಿಮ ಭಾಗದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಸುತ್ತಲೂ ನೆರೆದಿದ್ದ ಜನರ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಐವರು ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಅಲ್-ಅಹ್ಲಿ ಆಸ್ಪತ್ರೆ ಮಾಹಿತಿ ನೀಡಿದೆ.

ಇನ್ನು ಗಾಝಾ ನಗರದ ಪಶ್ಚಿಮದಲ್ಲಿರುವ ಅಪಾರ್ಟ್‌ಮೆಂಟ್ ಮೇಲೆ ನಡೆದ ದಾಳಿಯಲ್ಲಿ ಮೃತಪಟ್ಟ ವ್ಯಕ್ತಿಯ ಶವವನ್ನು ಸ್ವೀಕರಿಸಲಾಗಿದೆ ಎಂದು ಅಲ್ ಶಿಫಾ ಆಸ್ಪತ್ರೆ ಹೇಳಿದೆ.

ಮಧ್ಯ ಗಾಝಾದಲ್ಲಿರುವ ನುಸೇರತ್ ನಿರಾಶ್ರಿತರ ಶಿಬಿರದ ಮೇಲೂ ಇಸ್ರೇಲ್ ದಾಳಿ ನಡೆಸಿದ್ದು, ದಂಪತಿ ಸಾವನ್ನಪ್ಪಿದ್ದಾರೆ ಎಂದು ಅಲ್-ಅವ್ದಾ ಆಸ್ಪತ್ರೆ ತಿಳಿಸಿದೆ. ಬುರೈಜ್ ನಿರಾಶ್ರಿತರ ಶಿಬಿರದ ಮೇಲೆ ನಡೆಸಿದ ಪ್ರತ್ಯೇಕ ದಾಳಿಯಲ್ಲಿ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಮಾಹಿತಿ ನೀಡಿದೆ.

ಮಂಗಳವಾರ (ಸೆ.30) ಗಾಝಾದಲ್ಲಿ ನಡೆದ ದಾಳಿಯಲ್ಲಿ ಸಾವನ್ನಪ್ಪಿದ ಟರ್ಕಿಶ್ ಪ್ರಸಾರ ಸಂಸ್ಥೆ ಟಿಆರ್‌ಟಿಯಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತ ಯಾಹ್ಯಾ ಬರ್ಝಾಕ್ ಅವರ ಅಂತ್ಯಕ್ರಿಯೆಯನ್ನು ಯೋಜಿಸಲಾಗಿದೆ ಎಂದು ಟಿಆರ್‌ಟಿ ತಿಳಿಸಿದೆ.

ಹತ್ಯೆಗೀಡಾದ ಪತ್ರಕರ್ತ ಅಥವಾ ಬುಧವಾರದ ದಾಳಿಗಳ ಕುರಿತು ಇಸ್ರೇಲಿ ಸೇನೆಯು ತಕ್ಷಣಕ್ಕೆ ಪ್ರತಿಕ್ರಿಯಿಸಿಲ್ಲ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿಟ್ಟಿರುವ 20 ಅಂಶಗಳ ಕದನ ವಿರಾಮ ಯೋಜನೆಗೆ ಇಸ್ರೇಲ್ ಒಪ್ಪಿಗೆ ಸೂಚಿಸಿದೆ. ಆದರೆ, ಹಮಾಸ್ ಇನ್ನೂ ಪ್ರತಿಕ್ರಿಯಿಸಿಲ್ಲ. ಹಮಾಸ್‌ಗೆ ಪ್ರತಿಕ್ರಿಯಿಸಲು ನಾಲ್ಕು ದಿನಗಳ ಸಮಯವಕಾಶ ಇದೆ ಎಂದು ಟ್ರಂಪ್ ಹೇಳಿದ್ದಾರೆ. ಈ ನಡುವೆ ಗಾಝಾದಲ್ಲಿ ಇಸ್ರೇಲ್ ನರಮೇಧ ಮುಂದುವರಿಸಿದೆ.

ಇಸ್ರೇಲ್ ಬೆದರಿಕೆಗಳ ನಡುವೆಯೂ ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...