Homeಅಂತರಾಷ್ಟ್ರೀಯಕದನ ವಿರಾಮ ಮುರಿದ ಇಸ್ರೇಲ್, ಗಾಝಾ ಪಟ್ಟಿಯಾದ್ಯಂತ ವೈಮಾನಿಕ ದಾಳಿ; 200ಕ್ಕೂ ಅಧಿಕ ಜನರು ಸಾವು

ಕದನ ವಿರಾಮ ಮುರಿದ ಇಸ್ರೇಲ್, ಗಾಝಾ ಪಟ್ಟಿಯಾದ್ಯಂತ ವೈಮಾನಿಕ ದಾಳಿ; 200ಕ್ಕೂ ಅಧಿಕ ಜನರು ಸಾವು

- Advertisement -
- Advertisement -

ಕದನ ವಿರಾಮ ಒಪ್ಪಂದ ಮುರಿದಿರುವ ಇಸ್ರೇಲ್, ಇಂದು (ಮಾ.18) ನಸುಕಿನಲ್ಲಿ ಗಾಝಾ ಪಟ್ಟಿಯಾದ್ಯಂತ ಭಾರೀ ವೈಮಾನಿಕ ದಾಳಿ ನಡೆಸಿದ್ದು, ಮಕ್ಕಳು ಸೇರಿದಂತೆ 200ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಜನವರಿ 19ರಿಂದ ಕದನ ವಿರಾಮ ಜಾರಿಯಾದ ಬಳಿಕ ಇಸ್ರೇಲ್ ನಡೆಸಿದ ಅತಿ ದೊಡ್ಡ ದಾಳಿ ಇದಾಗಿದೆ. ಹಮಾಸ್ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ನಿರಾಕರಿಸಿದ್ದಕ್ಕೆ ಇಸ್ರೇಲ್ ದಾಳಿ ನಡೆಸಿದೆ ಎಂದು ವರದಿಗಳು ಹೇಳಿವೆ.

ಹಮಾಸ್ ನಾಯಕರನ್ನು ಗುರಿಯಾಗಿಸಿ, ಅದರ ನೆಲೆಗಳ ಮೇಲೆ ದಾಳಿ ಮಾಡಿದ್ದೇವೆ ಎಂದು ಇಸ್ರೇಲ್ ಹೇಳಿಕೊಂಡಿದೆ.

ನಿನ್ನೆ (ಮಾ.17) ರಾತ್ರಿ ದಕ್ಷಿಣ ಸಿರಿಯಾದ ಡೆರಾ ಪ್ರಾಂತ್ಯದ ಹೊರವಲಯದಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, 19 ಮಂದಿ ಗಾಯಗೊಂಡಿದ್ದಾರೆ ಎಂದು ಸಿರಿಯಾದ ರಾಜ್ಯ ಸುದ್ದಿ ಸಂಸ್ಥೆ ಸನಾ ವರದಿ ಮಾಡಿದೆ.

ಸೋಮವಾರ ರಾತ್ರಿ ದಾಳಿ ನಡೆಸಿದ್ದೇವೆ ಎಂದು ಇಸ್ರೇಲ್ ಸೇನೆ ದೃಢಪಡಿಸಿದೆ. ಪದಚ್ಯುತ ಸಿರಿಯಾದ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಅವರ ಪಡೆಗಳಿಗೆ ಸೇರಿದ ಶಸ್ತ್ರಾಸ್ತ್ರಗಳು ಮತ್ತು ವಾಹನಗಳನ್ನು ಹೊಂದಿರುವ ಮಿಲಿಟರಿ ತಾಣಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ ಎಂದು ಹೇಳಿದೆ.

ನಿನ್ನೆ (ಮಾ.17) ಸಿರಿಯಾ-ಲೆಬನಾನ್ ಗಡಿಯಲ್ಲಿ ನಡೆದ ಘರ್ಷಣೆಯಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 52 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್‌ನ ಸಾರ್ವಜನಿಕ ಆರೋಗ್ಯ ಸಚಿವಾಲಯ ತಿಳಿಸಿದೆ.

ನಮ್ಮ ಸೈನಿಕರನ್ನು ಲೆಬನಾನ್‌ಗೆ ಕರೆದೊಯ್ದು ಕೊಲ್ಲಲಾಗಿದೆ ಎಂದು ಸಿರಿಯಾ ಆರೋಪಿಸಿದೆ. ಆದರೆ, ಕೊಲ್ಲಲ್ಪಟ್ಟ ಮೂವರು ಕಳ್ಳಸಾಗಣೆದಾರರು ಎಂಬುವುದಾಗಿ ರಕ್ಷಣಾ ಸಚಿವರು ಕ್ಯಾಬಿನೆಟ್ ಸಭೆಯಲ್ಲಿ ತಿಳಿಸಿದ್ದಾರೆ ಎಂದು ಲೆಬನಾನ್‌ನ ಮಾಹಿತಿ ಸಚಿವ ಪಾಲ್ ಮೊರ್ಕೋಸ್ ಹೇಳಿದ್ದಾರೆ.

ಸಿರಿಯಾದ ಉತ್ತರ ಮತ್ತು ಪೂರ್ವ ಗಡಿಗಳಲ್ಲಿ ಹಿಂಸಾಚಾರಕ್ಕೆ ಪ್ರತಿಕ್ರಿಯಿಸಲು ಸೈನ್ಯಕ್ಕೆ ಆದೇಶ ನೀಡಿರುವುದಾಗಿ ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ನಿನ್ನೆ ಘೋಷಿಸಿದ್ದಾರೆ.

ಕಳೆದ ಶನಿವಾರ ಯೆಮನ್ ಮೇಲೆ ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ ಹಲವು ಹೌತಿ ಬಂಡುಕೋರರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕದ ಲೆಫ್ಟಿನೆಂಟ್ ಜನರಲ್ ಅಲೆಕ್ಸಸ್ ಗ್ರಿನ್‌ಕೆವಿಚ್ ಹೇಳಿದ್ದಾರೆ. ಆರು ಮತ್ತು ಎಂಟು ವರ್ಷ ವಯಸ್ಸಿನ ಕನಿಷ್ಠ ಇಬ್ಬರು ಮಕ್ಕಳು ಸತ್ತವರಲ್ಲಿ ಸೇರಿದ್ದಾರೆ ಎಂದು ವಿಶ್ವಸಂಸ್ಥೆಯ ಮಕ್ಕಳ ಸಂಸ್ಥೆ ಯುನಿಸೆಫ್ ತಿಳಿಸಿದೆ.

ಅಮೆರಿಕದ ದಾಳಿಗಳಿಗೆ ಪ್ರತಿಕ್ರಿಯಿಸುವುದಾಗಿ ಪ್ರತಿಜ್ಞೆ ಮಾಡಿರುವ ಹೌತಿಗಳಿಗೆ ಬೆಂಬಲವಾಗಿ ಯೆಮನ್‌ನ ಸನಾದಲ್ಲಿ ಸಾವಿರಾರು ಜನರು ಸೋಮವಾರ ರ್‍ಯಾಲಿ ನಡೆಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ “ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಗಾಝಾದ ಜನರೊಂದಿಗೆ ಒಗ್ಗಟ್ಟು ತೋರಿಸಲು ಕೆಂಪು ಸಮುದ್ರದಲ್ಲಿ ಅಮೆರಿಕ ಮತ್ತು ಇಸ್ರೇಲ್‌ಗೆ ಸಂಬಂಧಿಸಿದ ಹಡಗುಗಳ ಮೇಲೆ ದಾಳಿ ನಡೆಸಿರುವುದಾಗಿ ಹೌತಿಗಳು ಹೇಳಿಕೊಂಡಿದ್ದಾರೆ. ಗಾಝಾ ಮೇಲಿನ ಇಸ್ರೇಲ್‌ ದಿಗ್ಬಂಧನವು ಹದಿನಾರನೇ ದಿನಕ್ಕೆ ತಲುಪಿದೆ.

“ಹಮಾಸ್ ಅಗೆಯುವುದನ್ನು ಎಂದಿಗೂ ನಿಲ್ಲಿಸಲಿಲ್ಲ”: ಗಾಜಾ ಸುರಂಗಗಳ ಕುರಿತು ಮಾಜಿ ಒತ್ತೆಯಾಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...