Homeಅಂತರಾಷ್ಟ್ರೀಯಕದನ ವಿರಾಮ ಮುರಿದ ಇಸ್ರೇಲ್, ಗಾಝಾ ಪಟ್ಟಿಯಾದ್ಯಂತ ವೈಮಾನಿಕ ದಾಳಿ; 200ಕ್ಕೂ ಅಧಿಕ ಜನರು ಸಾವು

ಕದನ ವಿರಾಮ ಮುರಿದ ಇಸ್ರೇಲ್, ಗಾಝಾ ಪಟ್ಟಿಯಾದ್ಯಂತ ವೈಮಾನಿಕ ದಾಳಿ; 200ಕ್ಕೂ ಅಧಿಕ ಜನರು ಸಾವು

- Advertisement -
- Advertisement -

ಕದನ ವಿರಾಮ ಒಪ್ಪಂದ ಮುರಿದಿರುವ ಇಸ್ರೇಲ್, ಇಂದು (ಮಾ.18) ನಸುಕಿನಲ್ಲಿ ಗಾಝಾ ಪಟ್ಟಿಯಾದ್ಯಂತ ಭಾರೀ ವೈಮಾನಿಕ ದಾಳಿ ನಡೆಸಿದ್ದು, ಮಕ್ಕಳು ಸೇರಿದಂತೆ 200ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಜನವರಿ 19ರಿಂದ ಕದನ ವಿರಾಮ ಜಾರಿಯಾದ ಬಳಿಕ ಇಸ್ರೇಲ್ ನಡೆಸಿದ ಅತಿ ದೊಡ್ಡ ದಾಳಿ ಇದಾಗಿದೆ. ಹಮಾಸ್ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ನಿರಾಕರಿಸಿದ್ದಕ್ಕೆ ಇಸ್ರೇಲ್ ದಾಳಿ ನಡೆಸಿದೆ ಎಂದು ವರದಿಗಳು ಹೇಳಿವೆ.

ಹಮಾಸ್ ನಾಯಕರನ್ನು ಗುರಿಯಾಗಿಸಿ, ಅದರ ನೆಲೆಗಳ ಮೇಲೆ ದಾಳಿ ಮಾಡಿದ್ದೇವೆ ಎಂದು ಇಸ್ರೇಲ್ ಹೇಳಿಕೊಂಡಿದೆ.

ನಿನ್ನೆ (ಮಾ.17) ರಾತ್ರಿ ದಕ್ಷಿಣ ಸಿರಿಯಾದ ಡೆರಾ ಪ್ರಾಂತ್ಯದ ಹೊರವಲಯದಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, 19 ಮಂದಿ ಗಾಯಗೊಂಡಿದ್ದಾರೆ ಎಂದು ಸಿರಿಯಾದ ರಾಜ್ಯ ಸುದ್ದಿ ಸಂಸ್ಥೆ ಸನಾ ವರದಿ ಮಾಡಿದೆ.

ಸೋಮವಾರ ರಾತ್ರಿ ದಾಳಿ ನಡೆಸಿದ್ದೇವೆ ಎಂದು ಇಸ್ರೇಲ್ ಸೇನೆ ದೃಢಪಡಿಸಿದೆ. ಪದಚ್ಯುತ ಸಿರಿಯಾದ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಅವರ ಪಡೆಗಳಿಗೆ ಸೇರಿದ ಶಸ್ತ್ರಾಸ್ತ್ರಗಳು ಮತ್ತು ವಾಹನಗಳನ್ನು ಹೊಂದಿರುವ ಮಿಲಿಟರಿ ತಾಣಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ ಎಂದು ಹೇಳಿದೆ.

ನಿನ್ನೆ (ಮಾ.17) ಸಿರಿಯಾ-ಲೆಬನಾನ್ ಗಡಿಯಲ್ಲಿ ನಡೆದ ಘರ್ಷಣೆಯಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 52 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್‌ನ ಸಾರ್ವಜನಿಕ ಆರೋಗ್ಯ ಸಚಿವಾಲಯ ತಿಳಿಸಿದೆ.

ನಮ್ಮ ಸೈನಿಕರನ್ನು ಲೆಬನಾನ್‌ಗೆ ಕರೆದೊಯ್ದು ಕೊಲ್ಲಲಾಗಿದೆ ಎಂದು ಸಿರಿಯಾ ಆರೋಪಿಸಿದೆ. ಆದರೆ, ಕೊಲ್ಲಲ್ಪಟ್ಟ ಮೂವರು ಕಳ್ಳಸಾಗಣೆದಾರರು ಎಂಬುವುದಾಗಿ ರಕ್ಷಣಾ ಸಚಿವರು ಕ್ಯಾಬಿನೆಟ್ ಸಭೆಯಲ್ಲಿ ತಿಳಿಸಿದ್ದಾರೆ ಎಂದು ಲೆಬನಾನ್‌ನ ಮಾಹಿತಿ ಸಚಿವ ಪಾಲ್ ಮೊರ್ಕೋಸ್ ಹೇಳಿದ್ದಾರೆ.

ಸಿರಿಯಾದ ಉತ್ತರ ಮತ್ತು ಪೂರ್ವ ಗಡಿಗಳಲ್ಲಿ ಹಿಂಸಾಚಾರಕ್ಕೆ ಪ್ರತಿಕ್ರಿಯಿಸಲು ಸೈನ್ಯಕ್ಕೆ ಆದೇಶ ನೀಡಿರುವುದಾಗಿ ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ನಿನ್ನೆ ಘೋಷಿಸಿದ್ದಾರೆ.

ಕಳೆದ ಶನಿವಾರ ಯೆಮನ್ ಮೇಲೆ ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ ಹಲವು ಹೌತಿ ಬಂಡುಕೋರರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕದ ಲೆಫ್ಟಿನೆಂಟ್ ಜನರಲ್ ಅಲೆಕ್ಸಸ್ ಗ್ರಿನ್‌ಕೆವಿಚ್ ಹೇಳಿದ್ದಾರೆ. ಆರು ಮತ್ತು ಎಂಟು ವರ್ಷ ವಯಸ್ಸಿನ ಕನಿಷ್ಠ ಇಬ್ಬರು ಮಕ್ಕಳು ಸತ್ತವರಲ್ಲಿ ಸೇರಿದ್ದಾರೆ ಎಂದು ವಿಶ್ವಸಂಸ್ಥೆಯ ಮಕ್ಕಳ ಸಂಸ್ಥೆ ಯುನಿಸೆಫ್ ತಿಳಿಸಿದೆ.

ಅಮೆರಿಕದ ದಾಳಿಗಳಿಗೆ ಪ್ರತಿಕ್ರಿಯಿಸುವುದಾಗಿ ಪ್ರತಿಜ್ಞೆ ಮಾಡಿರುವ ಹೌತಿಗಳಿಗೆ ಬೆಂಬಲವಾಗಿ ಯೆಮನ್‌ನ ಸನಾದಲ್ಲಿ ಸಾವಿರಾರು ಜನರು ಸೋಮವಾರ ರ್‍ಯಾಲಿ ನಡೆಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ “ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಗಾಝಾದ ಜನರೊಂದಿಗೆ ಒಗ್ಗಟ್ಟು ತೋರಿಸಲು ಕೆಂಪು ಸಮುದ್ರದಲ್ಲಿ ಅಮೆರಿಕ ಮತ್ತು ಇಸ್ರೇಲ್‌ಗೆ ಸಂಬಂಧಿಸಿದ ಹಡಗುಗಳ ಮೇಲೆ ದಾಳಿ ನಡೆಸಿರುವುದಾಗಿ ಹೌತಿಗಳು ಹೇಳಿಕೊಂಡಿದ್ದಾರೆ. ಗಾಝಾ ಮೇಲಿನ ಇಸ್ರೇಲ್‌ ದಿಗ್ಬಂಧನವು ಹದಿನಾರನೇ ದಿನಕ್ಕೆ ತಲುಪಿದೆ.

“ಹಮಾಸ್ ಅಗೆಯುವುದನ್ನು ಎಂದಿಗೂ ನಿಲ್ಲಿಸಲಿಲ್ಲ”: ಗಾಜಾ ಸುರಂಗಗಳ ಕುರಿತು ಮಾಜಿ ಒತ್ತೆಯಾಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...