Homeಅಂತರಾಷ್ಟ್ರೀಯಕದನ ವಿರಾಮ ಮುರಿದ ಇಸ್ರೇಲ್, ಗಾಝಾ ಪಟ್ಟಿಯಾದ್ಯಂತ ವೈಮಾನಿಕ ದಾಳಿ; 200ಕ್ಕೂ ಅಧಿಕ ಜನರು ಸಾವು

ಕದನ ವಿರಾಮ ಮುರಿದ ಇಸ್ರೇಲ್, ಗಾಝಾ ಪಟ್ಟಿಯಾದ್ಯಂತ ವೈಮಾನಿಕ ದಾಳಿ; 200ಕ್ಕೂ ಅಧಿಕ ಜನರು ಸಾವು

- Advertisement -
- Advertisement -

ಕದನ ವಿರಾಮ ಒಪ್ಪಂದ ಮುರಿದಿರುವ ಇಸ್ರೇಲ್, ಇಂದು (ಮಾ.18) ನಸುಕಿನಲ್ಲಿ ಗಾಝಾ ಪಟ್ಟಿಯಾದ್ಯಂತ ಭಾರೀ ವೈಮಾನಿಕ ದಾಳಿ ನಡೆಸಿದ್ದು, ಮಕ್ಕಳು ಸೇರಿದಂತೆ 200ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಜನವರಿ 19ರಿಂದ ಕದನ ವಿರಾಮ ಜಾರಿಯಾದ ಬಳಿಕ ಇಸ್ರೇಲ್ ನಡೆಸಿದ ಅತಿ ದೊಡ್ಡ ದಾಳಿ ಇದಾಗಿದೆ. ಹಮಾಸ್ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ನಿರಾಕರಿಸಿದ್ದಕ್ಕೆ ಇಸ್ರೇಲ್ ದಾಳಿ ನಡೆಸಿದೆ ಎಂದು ವರದಿಗಳು ಹೇಳಿವೆ.

ಹಮಾಸ್ ನಾಯಕರನ್ನು ಗುರಿಯಾಗಿಸಿ, ಅದರ ನೆಲೆಗಳ ಮೇಲೆ ದಾಳಿ ಮಾಡಿದ್ದೇವೆ ಎಂದು ಇಸ್ರೇಲ್ ಹೇಳಿಕೊಂಡಿದೆ.

ನಿನ್ನೆ (ಮಾ.17) ರಾತ್ರಿ ದಕ್ಷಿಣ ಸಿರಿಯಾದ ಡೆರಾ ಪ್ರಾಂತ್ಯದ ಹೊರವಲಯದಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, 19 ಮಂದಿ ಗಾಯಗೊಂಡಿದ್ದಾರೆ ಎಂದು ಸಿರಿಯಾದ ರಾಜ್ಯ ಸುದ್ದಿ ಸಂಸ್ಥೆ ಸನಾ ವರದಿ ಮಾಡಿದೆ.

ಸೋಮವಾರ ರಾತ್ರಿ ದಾಳಿ ನಡೆಸಿದ್ದೇವೆ ಎಂದು ಇಸ್ರೇಲ್ ಸೇನೆ ದೃಢಪಡಿಸಿದೆ. ಪದಚ್ಯುತ ಸಿರಿಯಾದ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಅವರ ಪಡೆಗಳಿಗೆ ಸೇರಿದ ಶಸ್ತ್ರಾಸ್ತ್ರಗಳು ಮತ್ತು ವಾಹನಗಳನ್ನು ಹೊಂದಿರುವ ಮಿಲಿಟರಿ ತಾಣಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ ಎಂದು ಹೇಳಿದೆ.

ನಿನ್ನೆ (ಮಾ.17) ಸಿರಿಯಾ-ಲೆಬನಾನ್ ಗಡಿಯಲ್ಲಿ ನಡೆದ ಘರ್ಷಣೆಯಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 52 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್‌ನ ಸಾರ್ವಜನಿಕ ಆರೋಗ್ಯ ಸಚಿವಾಲಯ ತಿಳಿಸಿದೆ.

ನಮ್ಮ ಸೈನಿಕರನ್ನು ಲೆಬನಾನ್‌ಗೆ ಕರೆದೊಯ್ದು ಕೊಲ್ಲಲಾಗಿದೆ ಎಂದು ಸಿರಿಯಾ ಆರೋಪಿಸಿದೆ. ಆದರೆ, ಕೊಲ್ಲಲ್ಪಟ್ಟ ಮೂವರು ಕಳ್ಳಸಾಗಣೆದಾರರು ಎಂಬುವುದಾಗಿ ರಕ್ಷಣಾ ಸಚಿವರು ಕ್ಯಾಬಿನೆಟ್ ಸಭೆಯಲ್ಲಿ ತಿಳಿಸಿದ್ದಾರೆ ಎಂದು ಲೆಬನಾನ್‌ನ ಮಾಹಿತಿ ಸಚಿವ ಪಾಲ್ ಮೊರ್ಕೋಸ್ ಹೇಳಿದ್ದಾರೆ.

ಸಿರಿಯಾದ ಉತ್ತರ ಮತ್ತು ಪೂರ್ವ ಗಡಿಗಳಲ್ಲಿ ಹಿಂಸಾಚಾರಕ್ಕೆ ಪ್ರತಿಕ್ರಿಯಿಸಲು ಸೈನ್ಯಕ್ಕೆ ಆದೇಶ ನೀಡಿರುವುದಾಗಿ ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ನಿನ್ನೆ ಘೋಷಿಸಿದ್ದಾರೆ.

ಕಳೆದ ಶನಿವಾರ ಯೆಮನ್ ಮೇಲೆ ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ ಹಲವು ಹೌತಿ ಬಂಡುಕೋರರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕದ ಲೆಫ್ಟಿನೆಂಟ್ ಜನರಲ್ ಅಲೆಕ್ಸಸ್ ಗ್ರಿನ್‌ಕೆವಿಚ್ ಹೇಳಿದ್ದಾರೆ. ಆರು ಮತ್ತು ಎಂಟು ವರ್ಷ ವಯಸ್ಸಿನ ಕನಿಷ್ಠ ಇಬ್ಬರು ಮಕ್ಕಳು ಸತ್ತವರಲ್ಲಿ ಸೇರಿದ್ದಾರೆ ಎಂದು ವಿಶ್ವಸಂಸ್ಥೆಯ ಮಕ್ಕಳ ಸಂಸ್ಥೆ ಯುನಿಸೆಫ್ ತಿಳಿಸಿದೆ.

ಅಮೆರಿಕದ ದಾಳಿಗಳಿಗೆ ಪ್ರತಿಕ್ರಿಯಿಸುವುದಾಗಿ ಪ್ರತಿಜ್ಞೆ ಮಾಡಿರುವ ಹೌತಿಗಳಿಗೆ ಬೆಂಬಲವಾಗಿ ಯೆಮನ್‌ನ ಸನಾದಲ್ಲಿ ಸಾವಿರಾರು ಜನರು ಸೋಮವಾರ ರ್‍ಯಾಲಿ ನಡೆಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ “ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಗಾಝಾದ ಜನರೊಂದಿಗೆ ಒಗ್ಗಟ್ಟು ತೋರಿಸಲು ಕೆಂಪು ಸಮುದ್ರದಲ್ಲಿ ಅಮೆರಿಕ ಮತ್ತು ಇಸ್ರೇಲ್‌ಗೆ ಸಂಬಂಧಿಸಿದ ಹಡಗುಗಳ ಮೇಲೆ ದಾಳಿ ನಡೆಸಿರುವುದಾಗಿ ಹೌತಿಗಳು ಹೇಳಿಕೊಂಡಿದ್ದಾರೆ. ಗಾಝಾ ಮೇಲಿನ ಇಸ್ರೇಲ್‌ ದಿಗ್ಬಂಧನವು ಹದಿನಾರನೇ ದಿನಕ್ಕೆ ತಲುಪಿದೆ.

“ಹಮಾಸ್ ಅಗೆಯುವುದನ್ನು ಎಂದಿಗೂ ನಿಲ್ಲಿಸಲಿಲ್ಲ”: ಗಾಜಾ ಸುರಂಗಗಳ ಕುರಿತು ಮಾಜಿ ಒತ್ತೆಯಾಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...