Homeಅಂತರಾಷ್ಟ್ರೀಯದಕ್ಷಿಣ ಲೆಬನಾನ್‌ ನಾಗರೀಕರಿಗೆ ಸ್ಥಳಾಂತರಗೊಳ್ಳುವಂತೆ ಕರೆಕೊಟ್ಟ ಇಸ್ರೇಲ್; ಹಾನಿಯಿಂದ ದೂರ ಇರುವಂತೆ ಯುಎನ್ ಶಾಂತಿಪಾಲಕರಿಗೆ ನೆತನ್ಯಾಹು...

ದಕ್ಷಿಣ ಲೆಬನಾನ್‌ ನಾಗರೀಕರಿಗೆ ಸ್ಥಳಾಂತರಗೊಳ್ಳುವಂತೆ ಕರೆಕೊಟ್ಟ ಇಸ್ರೇಲ್; ಹಾನಿಯಿಂದ ದೂರ ಇರುವಂತೆ ಯುಎನ್ ಶಾಂತಿಪಾಲಕರಿಗೆ ನೆತನ್ಯಾಹು ಸೂಚನೆ

- Advertisement -
- Advertisement -

ದಕ್ಷಿಣ ಲೆಬನಾನ್‌ನ 20 ಕ್ಕೂ ಹೆಚ್ಚು ಹಳ್ಳಿಗಳ ನಿವಾಸಿಗಳು ತಮ್ಮ ಮನೆಗಳಿಂದ ಸ್ಥಳಾಂತರಗೊಳ್ಳಬೇಕು ಎಂದು ಇಸ್ರೇಲಿ ಮಿಲಿಟರಿ ಭಾನುವಾರ ಕರೆ ನೀಡಿದೆ. ಏಕೆಂದರೆ, ಪಡೆಗಳು ಗಡಿಯುದ್ದಕ್ಕೂ ಹೆಜ್ಬುಲ್ಲಾ ವಿರುದ್ಧ ತಮ್ಮ ಕಾರ್ಯಾಚರಣೆಯನ್ನು ವಿಸ್ತರಿಸಿವೆ ಎಂದು ಹೇಳಿಕೊಂಡಿದೆ.

“ಸೇನೆಯು ನಿಮಗೆ ಹಾನಿ ಮಾಡುವ ಉದ್ದೇಶವನ್ನು ಹೊಂದಿಲ್ಲ. ನಿಮ್ಮ ಸುರಕ್ಷತೆಗಾಗಿ, ನೀವು ತಕ್ಷಣವೇ ನಿಮ್ಮ ಮನೆಗಳನ್ನು ಅವಲಿ ನದಿಯ ಉತ್ತರಕ್ಕೆ ಸ್ಥಳಾಂತರಿಸಬೇಕು” ಎಂದು ಇಸ್ರೇಲಿ ಸೇನಾ ವಕ್ತಾರ ಅವಿಚಾಯ್ ಅಡ್ರೇ ಎಕ್ಸ್‌ನಲ್ಲಿ ಅರೇಬಿಕ್‌ನಲ್ಲಿ ಬರೆದಿದ್ದಾರೆ.

ಇಸ್ರೇಲಿ ಮಿಲಿಟರಿಯು ದಕ್ಷಿಣ ಲೆಬನಾನ್‌ನಾದ್ಯಂತ ಮತ್ತು ರಾಜಧಾನಿ ಬೈರುತ್‌ನಲ್ಲಿರುವ ನಿವಾಸಿಗಳಿಗೆ ನಿಯಮಿತವಾಗಿ ಸ್ಥಳಾಂತರಿಸುವ ಸಂದೇಶಗಳನ್ನು ಇಸ್ರೇಲ್ ನೀಡುತ್ತಿದೆ. ಏಕೆಂದರೆ, ಅದು ಹಿಜ್ಬುಲ್ಲಾ ಭದ್ರಕೋಟೆಗಳನ್ನು ಮತ್ತು ವೈಮಾನಿಕ ದಾಳಿಗಳೊಂದಿಗೆ ದಾಳಿ ತೀವ್ರಗೊಳಿಸುತ್ತಿದೆ.

ಗಾಜಾದಲ್ಲಿ ಅದರ ಮಿತ್ರ ಹಮಾಸ್‌ಗೆ ಬೆಂಬಲವಾಗಿ, ಹೆಜ್ಬೊಲ್ಲಾಹ್ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಉತ್ತರ ಇಸ್ರೇಲ್‌ಗೆ ಗುಂಡು ಹಾರಿಸಲು ಪ್ರಾರಂಭಿಸಿತು. ಇದು ಪ್ರತಿದಿನದ ಉಭಯ ಪಕ್ಷಗಳ ನಡುವೆ ದಾಳಿ ವಿನಿಮಯವನ್ನು ಪ್ರಚೋದಿಸಿತು. ಎರಡೂ ಬದಿಗಳಲ್ಲಿ ಜನರನ್ನು ಸ್ಥಳಾಂತರಿಸಲು ಕಾರಣವಾಯಿತು.

ಸೆಪ್ಟೆಂಬರ್‌ನಲ್ಲಿ, ಇಸ್ರೇಲ್ ತನ್ನ ಗಮನವನ್ನು ಗಾಜಾದಿಂದ ಲೆಬನಾನ್‌ಗೆ ವಿಸ್ತರಿಸಿತು, ಪ್ರಧಾನಿ ಬೆಂಜಮಿನ್ ನೆತನ್ಯಾಹು ಹಿಂಸಾಚಾರದಿಂದ ಸ್ಥಳಾಂತರಗೊಂಡ ಇಸ್ರೇಲಿಗಳು ದೇಶದ ಉತ್ತರದಲ್ಲಿರುವ ತಮ್ಮ ಮನೆಗಳಿಗೆ ಹಿಂದಿರುಗುವವರೆಗೆ ಹಿಜ್ಬುಲ್ಲಾ ವಿರುದ್ಧ ಹೋರಾಡುವುದಾಗಿ ಪ್ರತಿಜ್ಞೆ ಮಾಡಿದರು.

ಇಸ್ರೇಲ್ ಲೆಬನಾನ್‌ ಮೇಲೆ ವೈಮಾನಿಕ ದಾಳಿಯನ್ನು ಪ್ರಾರಂಭಿಸಿದಾಗಿನಿಂದ ಮತ್ತು ಸೆಪ್ಟೆಂಬರ್ 30 ರಂದು ಗಡಿಯಾದ್ಯಂತ ಸೈನ್ಯವನ್ನು ಕಳುಹಿಸಿದ ಪರಿಣಾಮ 1,200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಲೆಬನಾನಿನ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಈವರೆಗೆ ಒಂದು ಮಿಲಿಯನ್ ಜನರು ಸ್ಥಳಾಂತರಗೊಂಡಿದ್ದಾರೆ.

ಇದನ್ನೂ ಓದಿ; ವಿಶ್ವಸಂಸ್ಥೆ ಶಾಂತಿಪಾಲಕರ ಮೇಲೆ ಇಸ್ರೇಲ್ ದಾಳಿ ಖಂಡಿಸುವ ಜಂಟಿ ಹೇಳಿಕೆ ಬೆಂಬಲಿಸಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...