Homeಮುಖಪುಟಇರಾನ್‌ನಿಂದ ವೈಮಾನಿಕ ದಾಳಿ: ಶಿಕ್ಷಣ ಸಂಸ್ಥೆಗಳಿಗೆ ಅನಿರ್ದಿಷ್ಠಾವಧಿ ಬಂದ್‌ ಆದೇಶ ಹೊರಡಿಸಿದ ಇಸ್ರೇಲ್‌

ಇರಾನ್‌ನಿಂದ ವೈಮಾನಿಕ ದಾಳಿ: ಶಿಕ್ಷಣ ಸಂಸ್ಥೆಗಳಿಗೆ ಅನಿರ್ದಿಷ್ಠಾವಧಿ ಬಂದ್‌ ಆದೇಶ ಹೊರಡಿಸಿದ ಇಸ್ರೇಲ್‌

- Advertisement -
- Advertisement -

ಇರಾನ್ ದಾಳಿಯ ನಂತರ ಇಸ್ರೇಲ್ ತನ್ನ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಏಪ್ರಿಲ್ 14ರ ಭಾನುವಾರದಿಂದ ಅನಿರ್ದಿಷ್ಟ ಅವಧಿಗೆ ಬಂದ್‌ ಮಾಡಿದೆ. ಇರಾನ್ ನಿನ್ನೆ ಇಸ್ರೇಲ್‌ ಮೇಲೆ ಕೆಲ ಡ್ರೋನ್‌ಗಳು ಮತ್ತು ಕೆಲವು ಕ್ಷಿಪಣಿಗಳ ದಾಳಿ ನಡೆಸಿದೆ.

ಏಪ್ರಿಲ್ 1ರಂದು ಇಸ್ರೇಲ್ ರಕ್ಷಣಾ ಪಡೆಗಳು (IDF) ಸಿರಿಯಾದ ಡಮಾಸ್ಕಸ್‌ನಲ್ಲಿರುವ ಇರಾನ್‌ನ ರಾಯಭಾರಿ ಕಚೇರಿ ಮೇಲೆ ದಾಳಿ ನಡೆಸಿದ ನಂತರ ಇರಾನ್ ಇಸ್ರೇಲ್‌ಗೆ ದಾಳಿಯ ಬೆದರಿಕೆ ಹಾಕುತ್ತಿದೆ. ದಾಳಿಯಲ್ಲಿ ಬ್ರಿಗೇಡ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಸೇರಿದಂತೆ ಇರಾನ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್ (IRGC)ನ ಏಳು ಉನ್ನತ ಅಧಿಕಾರಿಗಳು ಸಾವನ್ನಪ್ಪಿದ್ದರು.

ಮುಂದಿನ ಆದೇಶದವರೆಗೆ ದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಇಸ್ರೇಲ್ ಹೋಮ್ ಫ್ರಂಟ್ ಹೇಳಿದೆ. ಏಪ್ರಿಲ್ 14ರಿಂದ ಯಾವುದೇ ಶಿಕ್ಷಣ ಸಂಸ್ಥೆಗಳು ತೆರೆದಿರುವುದಿಲ್ಲ ಮತ್ತು ಯಾವುದೇ ಶಿಬಿರ, ಕಾರ್ಯಕ್ರಮಗಳು ಅಥವಾ ಪಠ್ಯೇತರ ಚಟುವಟಿಕೆಗಳು ನಡೆಯುವುದಿಲ್ಲ ಎಂದು ಐಡಿಎಫ್ ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಹಗರಿ ಏಪ್ರಿಲ್ 13ರಂದು ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

ಡೇನಿಯಲ್ ಹಗರಿ ಅವರು ಇಸ್ರೇಲಿ ನಾಗರಿಕರಿಗೆ ಎಚ್ಚರಿಕೆಯಿಂದಿರುವಂತೆ ಸೂಚಿಸಿದ್ದಾರೆ ಮತ್ತು ಎಚ್ಚರಿಕೆಯ ಸೈರನ್ ಕೇಳುವ 10 ನಿಮಿಷಗಳ ಕಾಲ ಮನೆಗಳಿಂದ, ಆಶ್ರಯ ತಾಣಗಳಿಂದ ಹೊರಬರದಂತೆ ನಾಗರಿಕರಿಗೆ ಸೂಚಿಸಿದೆ. ಇರಾನ್‌ ದಾಳಿಯ ಭೀತಿಯಿಂದ ಇಸ್ರೇಲ್ ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದೆ ಎಂದು ಇಸ್ರೇಲ್ ರಕ್ಷಣಾ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಹಮಾಸ್, ಹೆಜ್ಬುಲ್ಲಾ ಮತ್ತು ಹೌತಿ  ಯೆಮನ್‌ನ ಗುಂಪು ಮೇಲೆ ದಾಳಿ ನಡೆಸಲು ಮುಂದಾಗಿದ್ದಾರೆ. ತಮ್ಮ ದೇಶವು ಯಾವುದೇ  ರೀತಿಯ ಪ್ರತಿಕ್ರಿಯೆಗೆ ಸಿದ್ದವಾಗಿದೆ ಎಂದು ಇಸ್ರೇಲ್‌ ಹೇಳಿಕೊಂಡಿದೆ.

ಇಸ್ರೇಲ್‌-ಗಾಝಾ ಯುದ್ಧದ ಮಧ್ಯೆ ಪ್ರಾದೇಶಿಕ ಸಂಘರ್ಷದ ಭೀತಿ ಉಂಟಾಗಿದೆ. ಇಸ್ರೇಲ್‌, ಇರಾನ್‌ ರಾಯಭಾರಿ ಕಚೇರಿ ಮೇಲೆ ನಡೆಸಿದ ದಾಳಿಯು ಈ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಗಾಝಾದ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಯುದ್ಧ ಪ್ರಾರಂಭವಾದಾಗಿನಿಂದ ಗಾಝಾದಲ್ಲಿ 33,175 ಮಂದಿ ಸಾವನ್ನಪ್ಪಿದ್ದಾರೆ. ಮೃತರದಲ್ಲಿ ಮೂರನೇ ಎರಡರಷ್ಟು ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ. ಇಸ್ರೇಲ್‌ ಗಾಝಾದಲ್ಲಿ ಹತ್ಯಾಕಾಂಡ ನಡೆಸುತ್ತಿರುವ ಮಧ್ಯೆ ಡಮಾಸ್ಕಸ್‌ನಲ್ಲಿರುವ ಇರಾನಿನ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ವೈಮಾನಿಕ ದಾಳಿ ನಡೆಸಿತ್ತು. ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್ (IRGC)ನ ಇಬ್ಬರು ಕಮಾಂಡರ್‌ಗಳು ಸೇರಿದಂತೆ ಏಳು ಜನರು ಮೃತಪಟ್ಟಿದ್ದರು. ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ಐಆರ್‌ಜಿಸಿಯ ಎಲೈಟ್ ಕುಡ್ಸ್ ಫೋರ್ಸ್‌ನ ಹಿರಿಯ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಉಪ ಜನರಲ್ ಮೊಹಮ್ಮದ್ ಹಾದಿ ಹಜ್ರಿಯಾಹಿಮಿ ಅವರು ಸಾವನ್ನಪ್ಪಿದ್ದರು. ಇದಕ್ಕೆ ತಕ್ಕ ಪ್ರತಿಕ್ರಿಯೆಯನ್ನು ನೀಡುವುದಾಗಿ ಇರಾನ್‌ ಹೇಳಿತ್ತು. ಇದಲ್ಲದೆ ಇಸ್ರೇಲ್‌- ಲೆಬನಾನ್‌ ಮೇಲೆ ಇತ್ತೀಚೆಗೆ ವೈಮಾನಿಕ ದಾಳಿಯನ್ನು ನಡೆಸಿದೆ. ದಾಳಿಯಲ್ಲಿ ಹೆಜ್ಬೊಲ್ಲಾ ಕಮಾಂಡರ್‌ನ್ನು ಹತ್ಯೆ ಮಾಡಿರುವುದಾಗಿ ಹೇಳಿಕೊಂಡಿದ್ದು, ವಿಶ್ವಸಂಸ್ಥೆಯು ಯುದ್ಧ ವ್ಯಾಪಿಸುತ್ತಿರುವ ಬಗ್ಗೆ ಎಚ್ಚರಿಕೆಯನ್ನು ನೀಡಿತ್ತು.

ಇರಾನ್ ನಿನ್ನೆ ಇಸ್ರೇಲ್ ಮೇಲೆ ವಾಯುದಾಳಿ ಆರಂಭಿಸಿತ್ತು, ಇಸ್ರೇಲ್‌ನತ್ತ ಇರಾನ್ ತನ್ನ ಭೂ ಪ್ರದೇಶದಿಂದ ಯುಎವಿಗಳನ್ನು ಉಡಾಯಿಸಿದೆ ಎಂದು ಇಸ್ರೇಲ್ ಸೇನಾ ವಕ್ತಾರ ಡೇನಿಯಲ್ ಹಗಾರಿ ವಿಡಿಯೊ ಹೇಳಿಕೆಯಲ್ಲಿ ತಿಳಿಸಿದ್ದರು.

ಇದನ್ನು ಓದಿ: ನಿರಂಕುಶಾಧಿಕಾರ ದೇಶಕ್ಕೆ ಹಾನಿಕರ, ಸಮ್ಮಿಶ್ರ ಸರಕಾರವನ್ನು ಅಧಿಕಾರಕ್ಕೆ ತರಬೇಕು-ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...