Homeಮುಖಪುಟಇರಾನ್‌ನಿಂದ ವೈಮಾನಿಕ ದಾಳಿ: ಶಿಕ್ಷಣ ಸಂಸ್ಥೆಗಳಿಗೆ ಅನಿರ್ದಿಷ್ಠಾವಧಿ ಬಂದ್‌ ಆದೇಶ ಹೊರಡಿಸಿದ ಇಸ್ರೇಲ್‌

ಇರಾನ್‌ನಿಂದ ವೈಮಾನಿಕ ದಾಳಿ: ಶಿಕ್ಷಣ ಸಂಸ್ಥೆಗಳಿಗೆ ಅನಿರ್ದಿಷ್ಠಾವಧಿ ಬಂದ್‌ ಆದೇಶ ಹೊರಡಿಸಿದ ಇಸ್ರೇಲ್‌

- Advertisement -
- Advertisement -

ಇರಾನ್ ದಾಳಿಯ ನಂತರ ಇಸ್ರೇಲ್ ತನ್ನ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಏಪ್ರಿಲ್ 14ರ ಭಾನುವಾರದಿಂದ ಅನಿರ್ದಿಷ್ಟ ಅವಧಿಗೆ ಬಂದ್‌ ಮಾಡಿದೆ. ಇರಾನ್ ನಿನ್ನೆ ಇಸ್ರೇಲ್‌ ಮೇಲೆ ಕೆಲ ಡ್ರೋನ್‌ಗಳು ಮತ್ತು ಕೆಲವು ಕ್ಷಿಪಣಿಗಳ ದಾಳಿ ನಡೆಸಿದೆ.

ಏಪ್ರಿಲ್ 1ರಂದು ಇಸ್ರೇಲ್ ರಕ್ಷಣಾ ಪಡೆಗಳು (IDF) ಸಿರಿಯಾದ ಡಮಾಸ್ಕಸ್‌ನಲ್ಲಿರುವ ಇರಾನ್‌ನ ರಾಯಭಾರಿ ಕಚೇರಿ ಮೇಲೆ ದಾಳಿ ನಡೆಸಿದ ನಂತರ ಇರಾನ್ ಇಸ್ರೇಲ್‌ಗೆ ದಾಳಿಯ ಬೆದರಿಕೆ ಹಾಕುತ್ತಿದೆ. ದಾಳಿಯಲ್ಲಿ ಬ್ರಿಗೇಡ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಸೇರಿದಂತೆ ಇರಾನ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್ (IRGC)ನ ಏಳು ಉನ್ನತ ಅಧಿಕಾರಿಗಳು ಸಾವನ್ನಪ್ಪಿದ್ದರು.

ಮುಂದಿನ ಆದೇಶದವರೆಗೆ ದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಇಸ್ರೇಲ್ ಹೋಮ್ ಫ್ರಂಟ್ ಹೇಳಿದೆ. ಏಪ್ರಿಲ್ 14ರಿಂದ ಯಾವುದೇ ಶಿಕ್ಷಣ ಸಂಸ್ಥೆಗಳು ತೆರೆದಿರುವುದಿಲ್ಲ ಮತ್ತು ಯಾವುದೇ ಶಿಬಿರ, ಕಾರ್ಯಕ್ರಮಗಳು ಅಥವಾ ಪಠ್ಯೇತರ ಚಟುವಟಿಕೆಗಳು ನಡೆಯುವುದಿಲ್ಲ ಎಂದು ಐಡಿಎಫ್ ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಹಗರಿ ಏಪ್ರಿಲ್ 13ರಂದು ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

ಡೇನಿಯಲ್ ಹಗರಿ ಅವರು ಇಸ್ರೇಲಿ ನಾಗರಿಕರಿಗೆ ಎಚ್ಚರಿಕೆಯಿಂದಿರುವಂತೆ ಸೂಚಿಸಿದ್ದಾರೆ ಮತ್ತು ಎಚ್ಚರಿಕೆಯ ಸೈರನ್ ಕೇಳುವ 10 ನಿಮಿಷಗಳ ಕಾಲ ಮನೆಗಳಿಂದ, ಆಶ್ರಯ ತಾಣಗಳಿಂದ ಹೊರಬರದಂತೆ ನಾಗರಿಕರಿಗೆ ಸೂಚಿಸಿದೆ. ಇರಾನ್‌ ದಾಳಿಯ ಭೀತಿಯಿಂದ ಇಸ್ರೇಲ್ ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದೆ ಎಂದು ಇಸ್ರೇಲ್ ರಕ್ಷಣಾ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಹಮಾಸ್, ಹೆಜ್ಬುಲ್ಲಾ ಮತ್ತು ಹೌತಿ  ಯೆಮನ್‌ನ ಗುಂಪು ಮೇಲೆ ದಾಳಿ ನಡೆಸಲು ಮುಂದಾಗಿದ್ದಾರೆ. ತಮ್ಮ ದೇಶವು ಯಾವುದೇ  ರೀತಿಯ ಪ್ರತಿಕ್ರಿಯೆಗೆ ಸಿದ್ದವಾಗಿದೆ ಎಂದು ಇಸ್ರೇಲ್‌ ಹೇಳಿಕೊಂಡಿದೆ.

ಇಸ್ರೇಲ್‌-ಗಾಝಾ ಯುದ್ಧದ ಮಧ್ಯೆ ಪ್ರಾದೇಶಿಕ ಸಂಘರ್ಷದ ಭೀತಿ ಉಂಟಾಗಿದೆ. ಇಸ್ರೇಲ್‌, ಇರಾನ್‌ ರಾಯಭಾರಿ ಕಚೇರಿ ಮೇಲೆ ನಡೆಸಿದ ದಾಳಿಯು ಈ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಗಾಝಾದ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಯುದ್ಧ ಪ್ರಾರಂಭವಾದಾಗಿನಿಂದ ಗಾಝಾದಲ್ಲಿ 33,175 ಮಂದಿ ಸಾವನ್ನಪ್ಪಿದ್ದಾರೆ. ಮೃತರದಲ್ಲಿ ಮೂರನೇ ಎರಡರಷ್ಟು ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ. ಇಸ್ರೇಲ್‌ ಗಾಝಾದಲ್ಲಿ ಹತ್ಯಾಕಾಂಡ ನಡೆಸುತ್ತಿರುವ ಮಧ್ಯೆ ಡಮಾಸ್ಕಸ್‌ನಲ್ಲಿರುವ ಇರಾನಿನ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ವೈಮಾನಿಕ ದಾಳಿ ನಡೆಸಿತ್ತು. ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್ (IRGC)ನ ಇಬ್ಬರು ಕಮಾಂಡರ್‌ಗಳು ಸೇರಿದಂತೆ ಏಳು ಜನರು ಮೃತಪಟ್ಟಿದ್ದರು. ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ಐಆರ್‌ಜಿಸಿಯ ಎಲೈಟ್ ಕುಡ್ಸ್ ಫೋರ್ಸ್‌ನ ಹಿರಿಯ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಉಪ ಜನರಲ್ ಮೊಹಮ್ಮದ್ ಹಾದಿ ಹಜ್ರಿಯಾಹಿಮಿ ಅವರು ಸಾವನ್ನಪ್ಪಿದ್ದರು. ಇದಕ್ಕೆ ತಕ್ಕ ಪ್ರತಿಕ್ರಿಯೆಯನ್ನು ನೀಡುವುದಾಗಿ ಇರಾನ್‌ ಹೇಳಿತ್ತು. ಇದಲ್ಲದೆ ಇಸ್ರೇಲ್‌- ಲೆಬನಾನ್‌ ಮೇಲೆ ಇತ್ತೀಚೆಗೆ ವೈಮಾನಿಕ ದಾಳಿಯನ್ನು ನಡೆಸಿದೆ. ದಾಳಿಯಲ್ಲಿ ಹೆಜ್ಬೊಲ್ಲಾ ಕಮಾಂಡರ್‌ನ್ನು ಹತ್ಯೆ ಮಾಡಿರುವುದಾಗಿ ಹೇಳಿಕೊಂಡಿದ್ದು, ವಿಶ್ವಸಂಸ್ಥೆಯು ಯುದ್ಧ ವ್ಯಾಪಿಸುತ್ತಿರುವ ಬಗ್ಗೆ ಎಚ್ಚರಿಕೆಯನ್ನು ನೀಡಿತ್ತು.

ಇರಾನ್ ನಿನ್ನೆ ಇಸ್ರೇಲ್ ಮೇಲೆ ವಾಯುದಾಳಿ ಆರಂಭಿಸಿತ್ತು, ಇಸ್ರೇಲ್‌ನತ್ತ ಇರಾನ್ ತನ್ನ ಭೂ ಪ್ರದೇಶದಿಂದ ಯುಎವಿಗಳನ್ನು ಉಡಾಯಿಸಿದೆ ಎಂದು ಇಸ್ರೇಲ್ ಸೇನಾ ವಕ್ತಾರ ಡೇನಿಯಲ್ ಹಗಾರಿ ವಿಡಿಯೊ ಹೇಳಿಕೆಯಲ್ಲಿ ತಿಳಿಸಿದ್ದರು.

ಇದನ್ನು ಓದಿ: ನಿರಂಕುಶಾಧಿಕಾರ ದೇಶಕ್ಕೆ ಹಾನಿಕರ, ಸಮ್ಮಿಶ್ರ ಸರಕಾರವನ್ನು ಅಧಿಕಾರಕ್ಕೆ ತರಬೇಕು-ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...