Homeಅಂತರಾಷ್ಟ್ರೀಯಗಾಝಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂದ ವಿಶ್ವಸಂಸ್ಥೆಯ ವರದಿ: ಜಾಗತಿಕ ಕ್ರಮಕ್ಕೆ ಕರೆ

ಗಾಝಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂದ ವಿಶ್ವಸಂಸ್ಥೆಯ ವರದಿ: ಜಾಗತಿಕ ಕ್ರಮಕ್ಕೆ ಕರೆ

- Advertisement -
- Advertisement -

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯು ನಿಯೋಜಿಸಿದ ಸ್ವತಂತ್ರ ತಜ್ಞರ ತಂಡವು ಇಸ್ರೇಲ್ ಗಾಝಾದಲ್ಲಿ ನರಮೇಧ ನಡೆಸುತ್ತಿದೆ ಎಂದು ಹೇಳಿದ್ದು, ಮಂಗಳವಾರ (ಸೆ.16) ಈ ಕುರಿತು ವರದಿ ಬಿಡುಗಡೆ ಮಾಡಿದೆ. ಅಂತಾರಾಷ್ಟ್ರೀಯ ಸಮುದಾಯವು ನರಮೇಧವನ್ನು ಕೊನೆಗೊಳಿಸಬೇಕು ಮತ್ತು ಅದಕ್ಕೆ ಕಾರಣರಾದವರನ್ನು ಶಿಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದೆ.

ಗಾಝಾದಲ್ಲಿ ಹಮಾಸ್ ವಿರುದ್ಧ ಇಸ್ರೇಲ್ ತನ್ನ ಯುದ್ಧವನ್ನು ಮುಂದುವರೆಸುತ್ತಿರುವಾಗ, ಹತ್ತಾರು ಸಾವಿರ ಜನರನ್ನು ಕೊಂದಿರುವಾಗ, ಮೂವರು ಸದಸ್ಯರ ತಂಡದಿಂದ ಆಳವಾಗಿ ದಾಖಲಿಸಲ್ಪಟ್ಟ ವಿಷಯಗಳು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸರ್ಕಾರದ ವಿರುದ್ಧ ಕೇಳಿ ಬಂದಿರುವ ಆರೋಪಗಳು ಇತ್ತೀಚಿನ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ.

ನಾಲ್ಕು ವರ್ಷಗಳ ಹಿಂದೆ ರಚಿಸಲಾದ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಮತ್ತು ಇಸ್ರೇಲ್ ಕುರಿತ ತಜ್ಞರ ತಂಡ, ಅಕ್ಟೋಬರ್ 7,2023ರಂದು ಹಮಾಸ್ ನೇತೃತ್ವದಲ್ಲಿ ಇಸ್ರೇಲ್ ಮತ್ತು ಇತರ ಪ್ಯಾಲೆಸ್ತೀನ್‌ ಪ್ರದೇಶಗಳಲ್ಲಿ ನಡೆದ ದಾಳಿಯ ನಂತರ ಗಾಝಾದಲ್ಲಿ ನಡೆದ ಮಾನವ ಹಕ್ಕುಗಳ ಉಲ್ಲಂಘನೆಗಳನ್ನು ಪದೇ ಪದೇ ದಾಖಲಿಸಿದೆ.

ಇಸ್ರೇಲ್‌ ವಿರುದ್ದದ ಆರೋಪಗಳು ಮತ್ತು ಗಾಝಾದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ವಿಷಯಗಳನ್ನು ಆಧರಿಸಿ ತಜ್ಞರ ತಂಡವಾಗಲಿ ಅಥವಾ ವಿಶ್ವಸಂಸ್ಥೆಯ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುವ 47 ಸದಸ್ಯ ರಾಷ್ಟ್ರಗಳ ಮಂಡಳಿಯಾಗಲಿ ಯಾವುದೇ ದೇಶದ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವಾದರೂ, ಈ ಫಲಿತಾಂಶಗಳನ್ನು ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಅಥವಾ ಯುಎನ್‌ನ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಟರ್‌ಗಳು ಬಳಸಬಹುದು ಎಂದು ವರದಿಗಳು ಅಭಿಪ್ರಾಯಪಟ್ಟಿವೆ.

ಈ ವರದಿಯು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ ಮುಖ್ಯಸ್ಥೆ ನವಿ ಪಿಳ್ಳೆ ನೇತೃತ್ವದ ತಂಡದ ಅಂತಿಮ ಸಂದೇಶವಾಗಿದೆ. ಅದರ, ಮೂವರು ಸದಸ್ಯರು ಜುಲೈನಲ್ಲಿ ವೈಯಕ್ತಿಕ ಕಾರಣಗಳು ಮತ್ತು ಬದಲಾವಣೆಯ ಅಗತ್ಯವನ್ನು ಉಲ್ಲೇಖಿಸಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಈ ತಂಡವನ್ನು ವಿಶ್ವಸಂಸ್ಥೆಯ ಉನ್ನತ ಮಾನವ ಹಕ್ಕುಗಳ ಸಂಸ್ಥೆಯಾದ ಮಾನವ ಹಕ್ಕುಗಳ ಮಂಡಳಿಯು ನಿಯೋಜಿಸಿತ್ತು. ಆದರೆ, ಅದು ವಿಶ್ವಸಂಸ್ಥೆಯ ಪರವಾಗಿ ಮಾತನಾಡಲು ಅಲ್ಲ.

ಇಸ್ರೇಲ್ ಈ ತಂಡದೊಂದಿಗೆ ಸಹಕರಿಸಲು ನಿರಾಕರಿಸಿದೆ ಮತ್ತು ವಿಶ್ವಸಂಸ್ಥೆಯ ಮಾನವ ಮಂಡಳಿ ಸಮಿತಿ ಇಸ್ರೇಲ್ ವಿರೋಧಿ ಪಕ್ಷಪಾತವನ್ನು ಹೊಂದಿದೆ ಎಂದು ಆರೋಪಿಸಿದೆ. ಈ ವರ್ಷದ ಆರಂಭದಲ್ಲಿ, ಇಸ್ರೇಲ್‌ನ ಪ್ರಮುಖ ಮಿತ್ರ ರಾಷ್ಟ್ರವಾದ ಅಮೆರಿಕ ಮಾನವ ಹಕ್ಕುಗಳ ಮಂಡಳಿಯಿಂದ ಹೊರನಡೆದಿತ್ತು.

ಎರಡನೇ ಮಹಾಯುದ್ಧ ಮತ್ತು ಹತ್ಯಾಕಾಂಡ ಅಂತ್ಯಗೊಂಡ ಮೂರು ವರ್ಷಗಳ ನಂತರ, ಅಂದರೆ, 1948 ರಲ್ಲಿ ನಡೆದ, ಆಡುಮಾತಿನಲ್ಲಿ ‘ಜನಾಂಗೀಯ ಹತ್ಯೆ ಸಮಾವೇಶ’ ಎಂದು ಕರೆಯಲ್ಪಡುವ ಅಂತಾರಾಷ್ಟ್ರೀಯ ಸಮಾವೇಶದಡಿಯಲ್ಲಿ ವ್ಯಾಖ್ಯಾನಿಸಲಾದ ಐದು ‘ಜನಾಂಗೀಯ ಹತ್ಯೆ ಕೃತ್ಯಗಳಲ್ಲಿ’ ನಾಲ್ಕನ್ನು ಇಸ್ರೇಲ್ ಮಾಡಿದೆ ಎಂದು ತಜ್ಞರ ತಂಡ ಹೇಳಿದೆ.

“ಗಾಝಾದಲ್ಲಿ ನಡೆದ ನರಮೇಧಕ್ಕೆ ಇಸ್ರೇಲ್ ಕಾರಣ ಎಂದು ತಂಡವು ಕಂಡುಕೊಂಡಿದೆ” ಎಂದು ತಂಡದ ಅಧ್ಯಕ್ಷೆ ಪಿಳ್ಳೈ ತಿಳಿಸಿದ್ದಾರೆ. ‘ಜನಾಂಗೀಯ ಹತ್ಯೆ ಸಮಾವೇಶ’ದಲ್ಲಿ ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸುವ ಕೃತ್ಯಗಳ ಮೂಲಕ ಗಾಝಾದಲ್ಲಿರುವ ಪ್ಯಾಲೆಸ್ತೀನಿಯರನ್ನು ನಾಶಮಾಡುವ ಉದ್ದೇಶ ಇಸ್ರೇಲ್‌ಗೆ ಇದೆ ಎಂಬುದು ಸ್ಪಷ್ಟವಾಗಿದೆ ಎಂದಿದ್ದಾರೆ.

ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....