Homeಅಂತರಾಷ್ಟ್ರೀಯಗಾಝಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂದ ವಿಶ್ವಸಂಸ್ಥೆಯ ವರದಿ: ಜಾಗತಿಕ ಕ್ರಮಕ್ಕೆ ಕರೆ

ಗಾಝಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂದ ವಿಶ್ವಸಂಸ್ಥೆಯ ವರದಿ: ಜಾಗತಿಕ ಕ್ರಮಕ್ಕೆ ಕರೆ

- Advertisement -
- Advertisement -

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯು ನಿಯೋಜಿಸಿದ ಸ್ವತಂತ್ರ ತಜ್ಞರ ತಂಡವು ಇಸ್ರೇಲ್ ಗಾಝಾದಲ್ಲಿ ನರಮೇಧ ನಡೆಸುತ್ತಿದೆ ಎಂದು ಹೇಳಿದ್ದು, ಮಂಗಳವಾರ (ಸೆ.16) ಈ ಕುರಿತು ವರದಿ ಬಿಡುಗಡೆ ಮಾಡಿದೆ. ಅಂತಾರಾಷ್ಟ್ರೀಯ ಸಮುದಾಯವು ನರಮೇಧವನ್ನು ಕೊನೆಗೊಳಿಸಬೇಕು ಮತ್ತು ಅದಕ್ಕೆ ಕಾರಣರಾದವರನ್ನು ಶಿಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದೆ.

ಗಾಝಾದಲ್ಲಿ ಹಮಾಸ್ ವಿರುದ್ಧ ಇಸ್ರೇಲ್ ತನ್ನ ಯುದ್ಧವನ್ನು ಮುಂದುವರೆಸುತ್ತಿರುವಾಗ, ಹತ್ತಾರು ಸಾವಿರ ಜನರನ್ನು ಕೊಂದಿರುವಾಗ, ಮೂವರು ಸದಸ್ಯರ ತಂಡದಿಂದ ಆಳವಾಗಿ ದಾಖಲಿಸಲ್ಪಟ್ಟ ವಿಷಯಗಳು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸರ್ಕಾರದ ವಿರುದ್ಧ ಕೇಳಿ ಬಂದಿರುವ ಆರೋಪಗಳು ಇತ್ತೀಚಿನ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ.

ನಾಲ್ಕು ವರ್ಷಗಳ ಹಿಂದೆ ರಚಿಸಲಾದ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಮತ್ತು ಇಸ್ರೇಲ್ ಕುರಿತ ತಜ್ಞರ ತಂಡ, ಅಕ್ಟೋಬರ್ 7,2023ರಂದು ಹಮಾಸ್ ನೇತೃತ್ವದಲ್ಲಿ ಇಸ್ರೇಲ್ ಮತ್ತು ಇತರ ಪ್ಯಾಲೆಸ್ತೀನ್‌ ಪ್ರದೇಶಗಳಲ್ಲಿ ನಡೆದ ದಾಳಿಯ ನಂತರ ಗಾಝಾದಲ್ಲಿ ನಡೆದ ಮಾನವ ಹಕ್ಕುಗಳ ಉಲ್ಲಂಘನೆಗಳನ್ನು ಪದೇ ಪದೇ ದಾಖಲಿಸಿದೆ.

ಇಸ್ರೇಲ್‌ ವಿರುದ್ದದ ಆರೋಪಗಳು ಮತ್ತು ಗಾಝಾದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ವಿಷಯಗಳನ್ನು ಆಧರಿಸಿ ತಜ್ಞರ ತಂಡವಾಗಲಿ ಅಥವಾ ವಿಶ್ವಸಂಸ್ಥೆಯ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುವ 47 ಸದಸ್ಯ ರಾಷ್ಟ್ರಗಳ ಮಂಡಳಿಯಾಗಲಿ ಯಾವುದೇ ದೇಶದ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವಾದರೂ, ಈ ಫಲಿತಾಂಶಗಳನ್ನು ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಅಥವಾ ಯುಎನ್‌ನ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಟರ್‌ಗಳು ಬಳಸಬಹುದು ಎಂದು ವರದಿಗಳು ಅಭಿಪ್ರಾಯಪಟ್ಟಿವೆ.

ಈ ವರದಿಯು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ ಮುಖ್ಯಸ್ಥೆ ನವಿ ಪಿಳ್ಳೆ ನೇತೃತ್ವದ ತಂಡದ ಅಂತಿಮ ಸಂದೇಶವಾಗಿದೆ. ಅದರ, ಮೂವರು ಸದಸ್ಯರು ಜುಲೈನಲ್ಲಿ ವೈಯಕ್ತಿಕ ಕಾರಣಗಳು ಮತ್ತು ಬದಲಾವಣೆಯ ಅಗತ್ಯವನ್ನು ಉಲ್ಲೇಖಿಸಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಈ ತಂಡವನ್ನು ವಿಶ್ವಸಂಸ್ಥೆಯ ಉನ್ನತ ಮಾನವ ಹಕ್ಕುಗಳ ಸಂಸ್ಥೆಯಾದ ಮಾನವ ಹಕ್ಕುಗಳ ಮಂಡಳಿಯು ನಿಯೋಜಿಸಿತ್ತು. ಆದರೆ, ಅದು ವಿಶ್ವಸಂಸ್ಥೆಯ ಪರವಾಗಿ ಮಾತನಾಡಲು ಅಲ್ಲ.

ಇಸ್ರೇಲ್ ಈ ತಂಡದೊಂದಿಗೆ ಸಹಕರಿಸಲು ನಿರಾಕರಿಸಿದೆ ಮತ್ತು ವಿಶ್ವಸಂಸ್ಥೆಯ ಮಾನವ ಮಂಡಳಿ ಸಮಿತಿ ಇಸ್ರೇಲ್ ವಿರೋಧಿ ಪಕ್ಷಪಾತವನ್ನು ಹೊಂದಿದೆ ಎಂದು ಆರೋಪಿಸಿದೆ. ಈ ವರ್ಷದ ಆರಂಭದಲ್ಲಿ, ಇಸ್ರೇಲ್‌ನ ಪ್ರಮುಖ ಮಿತ್ರ ರಾಷ್ಟ್ರವಾದ ಅಮೆರಿಕ ಮಾನವ ಹಕ್ಕುಗಳ ಮಂಡಳಿಯಿಂದ ಹೊರನಡೆದಿತ್ತು.

ಎರಡನೇ ಮಹಾಯುದ್ಧ ಮತ್ತು ಹತ್ಯಾಕಾಂಡ ಅಂತ್ಯಗೊಂಡ ಮೂರು ವರ್ಷಗಳ ನಂತರ, ಅಂದರೆ, 1948 ರಲ್ಲಿ ನಡೆದ, ಆಡುಮಾತಿನಲ್ಲಿ ‘ಜನಾಂಗೀಯ ಹತ್ಯೆ ಸಮಾವೇಶ’ ಎಂದು ಕರೆಯಲ್ಪಡುವ ಅಂತಾರಾಷ್ಟ್ರೀಯ ಸಮಾವೇಶದಡಿಯಲ್ಲಿ ವ್ಯಾಖ್ಯಾನಿಸಲಾದ ಐದು ‘ಜನಾಂಗೀಯ ಹತ್ಯೆ ಕೃತ್ಯಗಳಲ್ಲಿ’ ನಾಲ್ಕನ್ನು ಇಸ್ರೇಲ್ ಮಾಡಿದೆ ಎಂದು ತಜ್ಞರ ತಂಡ ಹೇಳಿದೆ.

“ಗಾಝಾದಲ್ಲಿ ನಡೆದ ನರಮೇಧಕ್ಕೆ ಇಸ್ರೇಲ್ ಕಾರಣ ಎಂದು ತಂಡವು ಕಂಡುಕೊಂಡಿದೆ” ಎಂದು ತಂಡದ ಅಧ್ಯಕ್ಷೆ ಪಿಳ್ಳೈ ತಿಳಿಸಿದ್ದಾರೆ. ‘ಜನಾಂಗೀಯ ಹತ್ಯೆ ಸಮಾವೇಶ’ದಲ್ಲಿ ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸುವ ಕೃತ್ಯಗಳ ಮೂಲಕ ಗಾಝಾದಲ್ಲಿರುವ ಪ್ಯಾಲೆಸ್ತೀನಿಯರನ್ನು ನಾಶಮಾಡುವ ಉದ್ದೇಶ ಇಸ್ರೇಲ್‌ಗೆ ಇದೆ ಎಂಬುದು ಸ್ಪಷ್ಟವಾಗಿದೆ ಎಂದಿದ್ದಾರೆ.

ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...