Homeಅಂತರಾಷ್ಟ್ರೀಯಗಾಝಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂದ ವಿಶ್ವಸಂಸ್ಥೆಯ ವರದಿ: ಜಾಗತಿಕ ಕ್ರಮಕ್ಕೆ ಕರೆ

ಗಾಝಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂದ ವಿಶ್ವಸಂಸ್ಥೆಯ ವರದಿ: ಜಾಗತಿಕ ಕ್ರಮಕ್ಕೆ ಕರೆ

- Advertisement -
- Advertisement -

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯು ನಿಯೋಜಿಸಿದ ಸ್ವತಂತ್ರ ತಜ್ಞರ ತಂಡವು ಇಸ್ರೇಲ್ ಗಾಝಾದಲ್ಲಿ ನರಮೇಧ ನಡೆಸುತ್ತಿದೆ ಎಂದು ಹೇಳಿದ್ದು, ಮಂಗಳವಾರ (ಸೆ.16) ಈ ಕುರಿತು ವರದಿ ಬಿಡುಗಡೆ ಮಾಡಿದೆ. ಅಂತಾರಾಷ್ಟ್ರೀಯ ಸಮುದಾಯವು ನರಮೇಧವನ್ನು ಕೊನೆಗೊಳಿಸಬೇಕು ಮತ್ತು ಅದಕ್ಕೆ ಕಾರಣರಾದವರನ್ನು ಶಿಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದೆ.

ಗಾಝಾದಲ್ಲಿ ಹಮಾಸ್ ವಿರುದ್ಧ ಇಸ್ರೇಲ್ ತನ್ನ ಯುದ್ಧವನ್ನು ಮುಂದುವರೆಸುತ್ತಿರುವಾಗ, ಹತ್ತಾರು ಸಾವಿರ ಜನರನ್ನು ಕೊಂದಿರುವಾಗ, ಮೂವರು ಸದಸ್ಯರ ತಂಡದಿಂದ ಆಳವಾಗಿ ದಾಖಲಿಸಲ್ಪಟ್ಟ ವಿಷಯಗಳು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸರ್ಕಾರದ ವಿರುದ್ಧ ಕೇಳಿ ಬಂದಿರುವ ಆರೋಪಗಳು ಇತ್ತೀಚಿನ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ.

ನಾಲ್ಕು ವರ್ಷಗಳ ಹಿಂದೆ ರಚಿಸಲಾದ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಮತ್ತು ಇಸ್ರೇಲ್ ಕುರಿತ ತಜ್ಞರ ತಂಡ, ಅಕ್ಟೋಬರ್ 7,2023ರಂದು ಹಮಾಸ್ ನೇತೃತ್ವದಲ್ಲಿ ಇಸ್ರೇಲ್ ಮತ್ತು ಇತರ ಪ್ಯಾಲೆಸ್ತೀನ್‌ ಪ್ರದೇಶಗಳಲ್ಲಿ ನಡೆದ ದಾಳಿಯ ನಂತರ ಗಾಝಾದಲ್ಲಿ ನಡೆದ ಮಾನವ ಹಕ್ಕುಗಳ ಉಲ್ಲಂಘನೆಗಳನ್ನು ಪದೇ ಪದೇ ದಾಖಲಿಸಿದೆ.

ಇಸ್ರೇಲ್‌ ವಿರುದ್ದದ ಆರೋಪಗಳು ಮತ್ತು ಗಾಝಾದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ವಿಷಯಗಳನ್ನು ಆಧರಿಸಿ ತಜ್ಞರ ತಂಡವಾಗಲಿ ಅಥವಾ ವಿಶ್ವಸಂಸ್ಥೆಯ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುವ 47 ಸದಸ್ಯ ರಾಷ್ಟ್ರಗಳ ಮಂಡಳಿಯಾಗಲಿ ಯಾವುದೇ ದೇಶದ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವಾದರೂ, ಈ ಫಲಿತಾಂಶಗಳನ್ನು ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಅಥವಾ ಯುಎನ್‌ನ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಟರ್‌ಗಳು ಬಳಸಬಹುದು ಎಂದು ವರದಿಗಳು ಅಭಿಪ್ರಾಯಪಟ್ಟಿವೆ.

ಈ ವರದಿಯು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ ಮುಖ್ಯಸ್ಥೆ ನವಿ ಪಿಳ್ಳೆ ನೇತೃತ್ವದ ತಂಡದ ಅಂತಿಮ ಸಂದೇಶವಾಗಿದೆ. ಅದರ, ಮೂವರು ಸದಸ್ಯರು ಜುಲೈನಲ್ಲಿ ವೈಯಕ್ತಿಕ ಕಾರಣಗಳು ಮತ್ತು ಬದಲಾವಣೆಯ ಅಗತ್ಯವನ್ನು ಉಲ್ಲೇಖಿಸಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಈ ತಂಡವನ್ನು ವಿಶ್ವಸಂಸ್ಥೆಯ ಉನ್ನತ ಮಾನವ ಹಕ್ಕುಗಳ ಸಂಸ್ಥೆಯಾದ ಮಾನವ ಹಕ್ಕುಗಳ ಮಂಡಳಿಯು ನಿಯೋಜಿಸಿತ್ತು. ಆದರೆ, ಅದು ವಿಶ್ವಸಂಸ್ಥೆಯ ಪರವಾಗಿ ಮಾತನಾಡಲು ಅಲ್ಲ.

ಇಸ್ರೇಲ್ ಈ ತಂಡದೊಂದಿಗೆ ಸಹಕರಿಸಲು ನಿರಾಕರಿಸಿದೆ ಮತ್ತು ವಿಶ್ವಸಂಸ್ಥೆಯ ಮಾನವ ಮಂಡಳಿ ಸಮಿತಿ ಇಸ್ರೇಲ್ ವಿರೋಧಿ ಪಕ್ಷಪಾತವನ್ನು ಹೊಂದಿದೆ ಎಂದು ಆರೋಪಿಸಿದೆ. ಈ ವರ್ಷದ ಆರಂಭದಲ್ಲಿ, ಇಸ್ರೇಲ್‌ನ ಪ್ರಮುಖ ಮಿತ್ರ ರಾಷ್ಟ್ರವಾದ ಅಮೆರಿಕ ಮಾನವ ಹಕ್ಕುಗಳ ಮಂಡಳಿಯಿಂದ ಹೊರನಡೆದಿತ್ತು.

ಎರಡನೇ ಮಹಾಯುದ್ಧ ಮತ್ತು ಹತ್ಯಾಕಾಂಡ ಅಂತ್ಯಗೊಂಡ ಮೂರು ವರ್ಷಗಳ ನಂತರ, ಅಂದರೆ, 1948 ರಲ್ಲಿ ನಡೆದ, ಆಡುಮಾತಿನಲ್ಲಿ ‘ಜನಾಂಗೀಯ ಹತ್ಯೆ ಸಮಾವೇಶ’ ಎಂದು ಕರೆಯಲ್ಪಡುವ ಅಂತಾರಾಷ್ಟ್ರೀಯ ಸಮಾವೇಶದಡಿಯಲ್ಲಿ ವ್ಯಾಖ್ಯಾನಿಸಲಾದ ಐದು ‘ಜನಾಂಗೀಯ ಹತ್ಯೆ ಕೃತ್ಯಗಳಲ್ಲಿ’ ನಾಲ್ಕನ್ನು ಇಸ್ರೇಲ್ ಮಾಡಿದೆ ಎಂದು ತಜ್ಞರ ತಂಡ ಹೇಳಿದೆ.

“ಗಾಝಾದಲ್ಲಿ ನಡೆದ ನರಮೇಧಕ್ಕೆ ಇಸ್ರೇಲ್ ಕಾರಣ ಎಂದು ತಂಡವು ಕಂಡುಕೊಂಡಿದೆ” ಎಂದು ತಂಡದ ಅಧ್ಯಕ್ಷೆ ಪಿಳ್ಳೈ ತಿಳಿಸಿದ್ದಾರೆ. ‘ಜನಾಂಗೀಯ ಹತ್ಯೆ ಸಮಾವೇಶ’ದಲ್ಲಿ ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸುವ ಕೃತ್ಯಗಳ ಮೂಲಕ ಗಾಝಾದಲ್ಲಿರುವ ಪ್ಯಾಲೆಸ್ತೀನಿಯರನ್ನು ನಾಶಮಾಡುವ ಉದ್ದೇಶ ಇಸ್ರೇಲ್‌ಗೆ ಇದೆ ಎಂಬುದು ಸ್ಪಷ್ಟವಾಗಿದೆ ಎಂದಿದ್ದಾರೆ.

ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...