Homeಅಂತರಾಷ್ಟ್ರೀಯಗಾಝಾ ಹತ್ಯಾಕಾಂಡ: ನೆತನ್ಯಾಹು ಸೇರಿ ಇಸ್ರೇಲ್‌ ಅಧಿಕಾರಿಗಳ ಬಂಧನಕ್ಕೆ ವಾರೆಂಟ್‌ ಜಾರಿ ಸಾಧ್ಯತೆ

ಗಾಝಾ ಹತ್ಯಾಕಾಂಡ: ನೆತನ್ಯಾಹು ಸೇರಿ ಇಸ್ರೇಲ್‌ ಅಧಿಕಾರಿಗಳ ಬಂಧನಕ್ಕೆ ವಾರೆಂಟ್‌ ಜಾರಿ ಸಾಧ್ಯತೆ

- Advertisement -
- Advertisement -

ಕಳೆದ ಆರು ತಿಂಗಳಿನಿಂದ ಗಾಝಾದಲ್ಲಿಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡವನ್ನು’ಯುದ್ಧ ಅಪರಾಧ’ ಮತ್ತು ‘ಮಾನವ ಹಕ್ಕುಗಳ ಉಲ್ಲಂಘನೆ’ ಎಂದು ಅಂತರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೇರಿದಂತೆ ಹಿರಿಯ ಅಧಿಕಾರಿಗಳ ಬಂಧನಕ್ಕೆ ವಾರೆಂಟ್‌ ಜಾರಿ ಮಾಡುವ ಸಾಧ್ಯತೆ ಇದೆ.

ಇಸ್ರೇಲ್‌ ಉಂಟು ಮಾಡಿದ ಯುದ್ಧಾಪರಾಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧದ ಬಗ್ಗೆ  ಐಸಿಸಿ ತನಿಖೆ ನಡೆಸುತ್ತಿದ್ದು ಆರೋಪ ಸಾಬೀತಾದರೆ ಯುದ್ಧಕ್ಕೆ ಕಾರಣರಾದವರ ವಿರುದ್ಧ ಪ್ರಕರಣ ದಾಖಲಿಸಬಹುದು. ವಿಧ್ವಂಸಕ ಮಿಲಿಟರಿ ದಾಳಿ ಹಿನ್ನೆಲೆ ಐಸಿಸಿ ಇಸ್ರೇಲ್‌ ಮೇಲೆ ಯುದ್ಧ ಅಪರಾಧ, ಮಾನವೀಯತೆಯ ವಿರುದ್ಧದ ಅಪರಾಧ ಮತ್ತು ನರಮೇಧಗಳ ಆರೋಪವನ್ನು ಹೊರಿಸಬಹುದಾಗಿದೆ. ಗಾಝಾದಲ್ಲಿ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಉಲ್ಲಂಘನೆ ಆರೋಪದಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೇರಿದಂತೆ ಇಸ್ರೇಲ್‍ನ ಉನ್ನತ  ಅಧಿಕಾರಿಗಳು ಮತ್ತು ಸೇನಾಧಿಕಾರಿಗಳ ವಿರುದ್ಧ ಐಸಿಸಿ ಶೀಘ್ರವೇ ಬಂಧನ ವಾರಂಟ್ ಜಾರಿಗೊಳಿಸಬಹುದು ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ.

ಇದರ ಬೆನ್ನಲ್ಲಿ ಇಸ್ರೇಲ್‍ನ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಝ್ ` ತೀವ್ರವಾದ ಯೆಹೂದಿ ವಿರೋಧಿ ಅಲೆಯ ಅಪಾಯದ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸುವಂತೆ ಇಸ್ರೇಲ್ ರಾಯಭಾರಿ ಕಚೇರಿಗಳಿಗೆ ಸೂಚಿಸಲಾಗಿದೆ’ ಎಂದಿದ್ದಾರೆ. ನ್ಯಾಯಾಲಯವು ಹಿರಿಯ ಇಸ್ರೇಲ್‌ ರಾಜಕೀಯ ಮತ್ತು ಭದ್ರತಾ ಅಧಿಕಾರಿಗಳ ವಿರುದ್ಧ ಬಂಧನ ವಾರಂಟ್‌ಗಳನ್ನು ನೀಡುವುದನ್ನು ತಡೆಯುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಕಾಟ್ಜ್ ಹೇಳಿದರು. ನಾವು ತಲೆಬಾಗುವುದಿಲ್ಲ ಮತ್ತು ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.

ಯಾವುದೇ ಐಸಿಸಿ ನಿರ್ಧಾರಗಳು ಇಸ್ರೇಲ್‌ನ ಕ್ರಮಗಳ ಮೇಲೆ ಪರಿಣಾಮ ಬೀರುವುದಿಲ್ಲ ಆದರೆ ಅಪಾಯಕಾರಿ ಪೂರ್ವನಿದರ್ಶನವನ್ನು ನೀಡುತ್ತದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಐಸಿಸಿ ಮತ್ತು ಹಮಾಸ್ ಈ ಬಗ್ಗೆ ಯಾವುದೇ ತಕ್ಷಣದ ಪ್ರತಿಕ್ರಿಯೆಯನ್ನು ನೀಡಿಲ್ಲ.

ಇಸ್ರೇಲ್ ಅಂತರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದ ಸದಸ್ಯತ್ವ ಹೊಂದಿಲ್ಲ,  ಆದರೆ ಪ್ಯಾಲೇಸ್ತೀನ್‌ ಪ್ರದೇಶಗಳು 2015ರಲ್ಲಿ ಸದಸ್ಯ ರಾಷ್ಟ್ರದ ಸ್ಥಾನಮಾನ ಪಡೆದಿದೆ. ಅಕ್ಟೋಬರ್‌ನಲ್ಲಿ ICC ಮುಖ್ಯ ಪ್ರಾಸಿಕ್ಯೂಟರ್ ಕರೀಮ್ ಖಾನ್, ಇಸ್ರೇಲ್‌ನಲ್ಲಿ ಹಮಾಸ್ ಹೋರಾಟಗಾರರು ಮತ್ತು ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ ಪಡೆಗಳು ಮಾಡಿದ ಯಾವುದೇ ಸಂಭಾವ್ಯ ಯುದ್ಧಾಪರಾಧಗಳ ಬಗ್ಗೆ ತನಿಖೆ ನ್ಯಾಯಾಲಯದ ನ್ಯಾಯವ್ಯಾಪ್ತಿಗೆ ಒಳಪಟ್ಟಿದೆ ಎಂದು ಹೇಳಿದೆ. ಗಾಝಾದಲ್ಲಿ ನಡೆದಿರುವ ಯಾವುದೇ ಅಪರಾಧಗಳ ಕುರಿತು ತಮ್ಮ ತಂಡವು ಸಕ್ರಿಯವಾಗಿ ತನಿಖೆ ನಡೆಸುತ್ತಿದೆ ಮತ್ತು ಕಾನೂನನ್ನು ಉಲ್ಲಂಘಿಸಿದವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಖಾನ್ ಹೇಳಿದ್ದಾರೆ.

ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್‌ ಮೇಲೆ ದಾಳಿ ನಡೆಸಿತ್ತು, ಇದರಲ್ಲಿ 1,200 ಜನರು ಕೊಲ್ಲಲ್ಪಟ್ಟಿದ್ದರು.   253 ಜನರನ್ನು ಒತ್ತೆಯಾಳುಗಳಾಗಿ ಇಟ್ಟು ಕೊಳ್ಳಲಾಗಿತ್ತು. ಆ ಬಳಿಕ ಯುದ್ಧ ಘೋಷಿಸಿ ಇಸ್ರೇಲ್‌ ಗಾಝಾ ಮೇಲೆ ದಾಳಿ ನಡೆಸಿದ್ದು, ಈವರೆಗೆ 34,000ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಿದೆ. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ.

ಇದನ್ನು ಓದಿ: ಕೋವಿಶೀಲ್ಡ್ ‘ಅಪರೂಪದ ಅಡ್ಡ ಪರಿಣಾಮ’ ಉಂಟುಮಾಡಬಹುದು ಎಂದು ಒಪ್ಪಿಕೊಂಡ ಅಸ್ಟ್ರಾಜೆನೆಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...