Homeಅಂತರಾಷ್ಟ್ರೀಯಗಾಝಾ ಹತ್ಯಾಕಾಂಡ: ನೆತನ್ಯಾಹು ಸೇರಿ ಇಸ್ರೇಲ್‌ ಅಧಿಕಾರಿಗಳ ಬಂಧನಕ್ಕೆ ವಾರೆಂಟ್‌ ಜಾರಿ ಸಾಧ್ಯತೆ

ಗಾಝಾ ಹತ್ಯಾಕಾಂಡ: ನೆತನ್ಯಾಹು ಸೇರಿ ಇಸ್ರೇಲ್‌ ಅಧಿಕಾರಿಗಳ ಬಂಧನಕ್ಕೆ ವಾರೆಂಟ್‌ ಜಾರಿ ಸಾಧ್ಯತೆ

- Advertisement -
- Advertisement -

ಕಳೆದ ಆರು ತಿಂಗಳಿನಿಂದ ಗಾಝಾದಲ್ಲಿಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡವನ್ನು’ಯುದ್ಧ ಅಪರಾಧ’ ಮತ್ತು ‘ಮಾನವ ಹಕ್ಕುಗಳ ಉಲ್ಲಂಘನೆ’ ಎಂದು ಅಂತರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೇರಿದಂತೆ ಹಿರಿಯ ಅಧಿಕಾರಿಗಳ ಬಂಧನಕ್ಕೆ ವಾರೆಂಟ್‌ ಜಾರಿ ಮಾಡುವ ಸಾಧ್ಯತೆ ಇದೆ.

ಇಸ್ರೇಲ್‌ ಉಂಟು ಮಾಡಿದ ಯುದ್ಧಾಪರಾಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧದ ಬಗ್ಗೆ  ಐಸಿಸಿ ತನಿಖೆ ನಡೆಸುತ್ತಿದ್ದು ಆರೋಪ ಸಾಬೀತಾದರೆ ಯುದ್ಧಕ್ಕೆ ಕಾರಣರಾದವರ ವಿರುದ್ಧ ಪ್ರಕರಣ ದಾಖಲಿಸಬಹುದು. ವಿಧ್ವಂಸಕ ಮಿಲಿಟರಿ ದಾಳಿ ಹಿನ್ನೆಲೆ ಐಸಿಸಿ ಇಸ್ರೇಲ್‌ ಮೇಲೆ ಯುದ್ಧ ಅಪರಾಧ, ಮಾನವೀಯತೆಯ ವಿರುದ್ಧದ ಅಪರಾಧ ಮತ್ತು ನರಮೇಧಗಳ ಆರೋಪವನ್ನು ಹೊರಿಸಬಹುದಾಗಿದೆ. ಗಾಝಾದಲ್ಲಿ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಉಲ್ಲಂಘನೆ ಆರೋಪದಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೇರಿದಂತೆ ಇಸ್ರೇಲ್‍ನ ಉನ್ನತ  ಅಧಿಕಾರಿಗಳು ಮತ್ತು ಸೇನಾಧಿಕಾರಿಗಳ ವಿರುದ್ಧ ಐಸಿಸಿ ಶೀಘ್ರವೇ ಬಂಧನ ವಾರಂಟ್ ಜಾರಿಗೊಳಿಸಬಹುದು ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ.

ಇದರ ಬೆನ್ನಲ್ಲಿ ಇಸ್ರೇಲ್‍ನ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಝ್ ` ತೀವ್ರವಾದ ಯೆಹೂದಿ ವಿರೋಧಿ ಅಲೆಯ ಅಪಾಯದ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸುವಂತೆ ಇಸ್ರೇಲ್ ರಾಯಭಾರಿ ಕಚೇರಿಗಳಿಗೆ ಸೂಚಿಸಲಾಗಿದೆ’ ಎಂದಿದ್ದಾರೆ. ನ್ಯಾಯಾಲಯವು ಹಿರಿಯ ಇಸ್ರೇಲ್‌ ರಾಜಕೀಯ ಮತ್ತು ಭದ್ರತಾ ಅಧಿಕಾರಿಗಳ ವಿರುದ್ಧ ಬಂಧನ ವಾರಂಟ್‌ಗಳನ್ನು ನೀಡುವುದನ್ನು ತಡೆಯುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಕಾಟ್ಜ್ ಹೇಳಿದರು. ನಾವು ತಲೆಬಾಗುವುದಿಲ್ಲ ಮತ್ತು ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.

ಯಾವುದೇ ಐಸಿಸಿ ನಿರ್ಧಾರಗಳು ಇಸ್ರೇಲ್‌ನ ಕ್ರಮಗಳ ಮೇಲೆ ಪರಿಣಾಮ ಬೀರುವುದಿಲ್ಲ ಆದರೆ ಅಪಾಯಕಾರಿ ಪೂರ್ವನಿದರ್ಶನವನ್ನು ನೀಡುತ್ತದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಐಸಿಸಿ ಮತ್ತು ಹಮಾಸ್ ಈ ಬಗ್ಗೆ ಯಾವುದೇ ತಕ್ಷಣದ ಪ್ರತಿಕ್ರಿಯೆಯನ್ನು ನೀಡಿಲ್ಲ.

ಇಸ್ರೇಲ್ ಅಂತರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದ ಸದಸ್ಯತ್ವ ಹೊಂದಿಲ್ಲ,  ಆದರೆ ಪ್ಯಾಲೇಸ್ತೀನ್‌ ಪ್ರದೇಶಗಳು 2015ರಲ್ಲಿ ಸದಸ್ಯ ರಾಷ್ಟ್ರದ ಸ್ಥಾನಮಾನ ಪಡೆದಿದೆ. ಅಕ್ಟೋಬರ್‌ನಲ್ಲಿ ICC ಮುಖ್ಯ ಪ್ರಾಸಿಕ್ಯೂಟರ್ ಕರೀಮ್ ಖಾನ್, ಇಸ್ರೇಲ್‌ನಲ್ಲಿ ಹಮಾಸ್ ಹೋರಾಟಗಾರರು ಮತ್ತು ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ ಪಡೆಗಳು ಮಾಡಿದ ಯಾವುದೇ ಸಂಭಾವ್ಯ ಯುದ್ಧಾಪರಾಧಗಳ ಬಗ್ಗೆ ತನಿಖೆ ನ್ಯಾಯಾಲಯದ ನ್ಯಾಯವ್ಯಾಪ್ತಿಗೆ ಒಳಪಟ್ಟಿದೆ ಎಂದು ಹೇಳಿದೆ. ಗಾಝಾದಲ್ಲಿ ನಡೆದಿರುವ ಯಾವುದೇ ಅಪರಾಧಗಳ ಕುರಿತು ತಮ್ಮ ತಂಡವು ಸಕ್ರಿಯವಾಗಿ ತನಿಖೆ ನಡೆಸುತ್ತಿದೆ ಮತ್ತು ಕಾನೂನನ್ನು ಉಲ್ಲಂಘಿಸಿದವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಖಾನ್ ಹೇಳಿದ್ದಾರೆ.

ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್‌ ಮೇಲೆ ದಾಳಿ ನಡೆಸಿತ್ತು, ಇದರಲ್ಲಿ 1,200 ಜನರು ಕೊಲ್ಲಲ್ಪಟ್ಟಿದ್ದರು.   253 ಜನರನ್ನು ಒತ್ತೆಯಾಳುಗಳಾಗಿ ಇಟ್ಟು ಕೊಳ್ಳಲಾಗಿತ್ತು. ಆ ಬಳಿಕ ಯುದ್ಧ ಘೋಷಿಸಿ ಇಸ್ರೇಲ್‌ ಗಾಝಾ ಮೇಲೆ ದಾಳಿ ನಡೆಸಿದ್ದು, ಈವರೆಗೆ 34,000ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಿದೆ. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ.

ಇದನ್ನು ಓದಿ: ಕೋವಿಶೀಲ್ಡ್ ‘ಅಪರೂಪದ ಅಡ್ಡ ಪರಿಣಾಮ’ ಉಂಟುಮಾಡಬಹುದು ಎಂದು ಒಪ್ಪಿಕೊಂಡ ಅಸ್ಟ್ರಾಜೆನೆಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...