Homeಅಂತರಾಷ್ಟ್ರೀಯಗಾಝಾ ಹತ್ಯಾಕಾಂಡ: ನೆತನ್ಯಾಹು ಸೇರಿ ಇಸ್ರೇಲ್‌ ಅಧಿಕಾರಿಗಳ ಬಂಧನಕ್ಕೆ ವಾರೆಂಟ್‌ ಜಾರಿ ಸಾಧ್ಯತೆ

ಗಾಝಾ ಹತ್ಯಾಕಾಂಡ: ನೆತನ್ಯಾಹು ಸೇರಿ ಇಸ್ರೇಲ್‌ ಅಧಿಕಾರಿಗಳ ಬಂಧನಕ್ಕೆ ವಾರೆಂಟ್‌ ಜಾರಿ ಸಾಧ್ಯತೆ

- Advertisement -
- Advertisement -

ಕಳೆದ ಆರು ತಿಂಗಳಿನಿಂದ ಗಾಝಾದಲ್ಲಿಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡವನ್ನು’ಯುದ್ಧ ಅಪರಾಧ’ ಮತ್ತು ‘ಮಾನವ ಹಕ್ಕುಗಳ ಉಲ್ಲಂಘನೆ’ ಎಂದು ಅಂತರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೇರಿದಂತೆ ಹಿರಿಯ ಅಧಿಕಾರಿಗಳ ಬಂಧನಕ್ಕೆ ವಾರೆಂಟ್‌ ಜಾರಿ ಮಾಡುವ ಸಾಧ್ಯತೆ ಇದೆ.

ಇಸ್ರೇಲ್‌ ಉಂಟು ಮಾಡಿದ ಯುದ್ಧಾಪರಾಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧದ ಬಗ್ಗೆ  ಐಸಿಸಿ ತನಿಖೆ ನಡೆಸುತ್ತಿದ್ದು ಆರೋಪ ಸಾಬೀತಾದರೆ ಯುದ್ಧಕ್ಕೆ ಕಾರಣರಾದವರ ವಿರುದ್ಧ ಪ್ರಕರಣ ದಾಖಲಿಸಬಹುದು. ವಿಧ್ವಂಸಕ ಮಿಲಿಟರಿ ದಾಳಿ ಹಿನ್ನೆಲೆ ಐಸಿಸಿ ಇಸ್ರೇಲ್‌ ಮೇಲೆ ಯುದ್ಧ ಅಪರಾಧ, ಮಾನವೀಯತೆಯ ವಿರುದ್ಧದ ಅಪರಾಧ ಮತ್ತು ನರಮೇಧಗಳ ಆರೋಪವನ್ನು ಹೊರಿಸಬಹುದಾಗಿದೆ. ಗಾಝಾದಲ್ಲಿ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಉಲ್ಲಂಘನೆ ಆರೋಪದಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೇರಿದಂತೆ ಇಸ್ರೇಲ್‍ನ ಉನ್ನತ  ಅಧಿಕಾರಿಗಳು ಮತ್ತು ಸೇನಾಧಿಕಾರಿಗಳ ವಿರುದ್ಧ ಐಸಿಸಿ ಶೀಘ್ರವೇ ಬಂಧನ ವಾರಂಟ್ ಜಾರಿಗೊಳಿಸಬಹುದು ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ.

ಇದರ ಬೆನ್ನಲ್ಲಿ ಇಸ್ರೇಲ್‍ನ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಝ್ ` ತೀವ್ರವಾದ ಯೆಹೂದಿ ವಿರೋಧಿ ಅಲೆಯ ಅಪಾಯದ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸುವಂತೆ ಇಸ್ರೇಲ್ ರಾಯಭಾರಿ ಕಚೇರಿಗಳಿಗೆ ಸೂಚಿಸಲಾಗಿದೆ’ ಎಂದಿದ್ದಾರೆ. ನ್ಯಾಯಾಲಯವು ಹಿರಿಯ ಇಸ್ರೇಲ್‌ ರಾಜಕೀಯ ಮತ್ತು ಭದ್ರತಾ ಅಧಿಕಾರಿಗಳ ವಿರುದ್ಧ ಬಂಧನ ವಾರಂಟ್‌ಗಳನ್ನು ನೀಡುವುದನ್ನು ತಡೆಯುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಕಾಟ್ಜ್ ಹೇಳಿದರು. ನಾವು ತಲೆಬಾಗುವುದಿಲ್ಲ ಮತ್ತು ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.

ಯಾವುದೇ ಐಸಿಸಿ ನಿರ್ಧಾರಗಳು ಇಸ್ರೇಲ್‌ನ ಕ್ರಮಗಳ ಮೇಲೆ ಪರಿಣಾಮ ಬೀರುವುದಿಲ್ಲ ಆದರೆ ಅಪಾಯಕಾರಿ ಪೂರ್ವನಿದರ್ಶನವನ್ನು ನೀಡುತ್ತದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಐಸಿಸಿ ಮತ್ತು ಹಮಾಸ್ ಈ ಬಗ್ಗೆ ಯಾವುದೇ ತಕ್ಷಣದ ಪ್ರತಿಕ್ರಿಯೆಯನ್ನು ನೀಡಿಲ್ಲ.

ಇಸ್ರೇಲ್ ಅಂತರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದ ಸದಸ್ಯತ್ವ ಹೊಂದಿಲ್ಲ,  ಆದರೆ ಪ್ಯಾಲೇಸ್ತೀನ್‌ ಪ್ರದೇಶಗಳು 2015ರಲ್ಲಿ ಸದಸ್ಯ ರಾಷ್ಟ್ರದ ಸ್ಥಾನಮಾನ ಪಡೆದಿದೆ. ಅಕ್ಟೋಬರ್‌ನಲ್ಲಿ ICC ಮುಖ್ಯ ಪ್ರಾಸಿಕ್ಯೂಟರ್ ಕರೀಮ್ ಖಾನ್, ಇಸ್ರೇಲ್‌ನಲ್ಲಿ ಹಮಾಸ್ ಹೋರಾಟಗಾರರು ಮತ್ತು ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ ಪಡೆಗಳು ಮಾಡಿದ ಯಾವುದೇ ಸಂಭಾವ್ಯ ಯುದ್ಧಾಪರಾಧಗಳ ಬಗ್ಗೆ ತನಿಖೆ ನ್ಯಾಯಾಲಯದ ನ್ಯಾಯವ್ಯಾಪ್ತಿಗೆ ಒಳಪಟ್ಟಿದೆ ಎಂದು ಹೇಳಿದೆ. ಗಾಝಾದಲ್ಲಿ ನಡೆದಿರುವ ಯಾವುದೇ ಅಪರಾಧಗಳ ಕುರಿತು ತಮ್ಮ ತಂಡವು ಸಕ್ರಿಯವಾಗಿ ತನಿಖೆ ನಡೆಸುತ್ತಿದೆ ಮತ್ತು ಕಾನೂನನ್ನು ಉಲ್ಲಂಘಿಸಿದವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಖಾನ್ ಹೇಳಿದ್ದಾರೆ.

ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್‌ ಮೇಲೆ ದಾಳಿ ನಡೆಸಿತ್ತು, ಇದರಲ್ಲಿ 1,200 ಜನರು ಕೊಲ್ಲಲ್ಪಟ್ಟಿದ್ದರು.   253 ಜನರನ್ನು ಒತ್ತೆಯಾಳುಗಳಾಗಿ ಇಟ್ಟು ಕೊಳ್ಳಲಾಗಿತ್ತು. ಆ ಬಳಿಕ ಯುದ್ಧ ಘೋಷಿಸಿ ಇಸ್ರೇಲ್‌ ಗಾಝಾ ಮೇಲೆ ದಾಳಿ ನಡೆಸಿದ್ದು, ಈವರೆಗೆ 34,000ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಿದೆ. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ.

ಇದನ್ನು ಓದಿ: ಕೋವಿಶೀಲ್ಡ್ ‘ಅಪರೂಪದ ಅಡ್ಡ ಪರಿಣಾಮ’ ಉಂಟುಮಾಡಬಹುದು ಎಂದು ಒಪ್ಪಿಕೊಂಡ ಅಸ್ಟ್ರಾಜೆನೆಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...