Homeಮುಖಪುಟಲೆಬನಾನ್ ಮೇಲೆ ದಾಳಿ ಮುಂದುವರೆಸಿದ ಇಸ್ರೇಲ್ : ಮತ್ತೆ 37 ಮಂದಿ ಸಾವು, ಹಲವರಿಗೆ ಗಾಯ

ಲೆಬನಾನ್ ಮೇಲೆ ದಾಳಿ ಮುಂದುವರೆಸಿದ ಇಸ್ರೇಲ್ : ಮತ್ತೆ 37 ಮಂದಿ ಸಾವು, ಹಲವರಿಗೆ ಗಾಯ

ಕಳೆದ 24 ಗಂಟೆಯಲ್ಲಿ ಬೈರುತ್, ಗಾಝಾ, ಪಶ್ಚಿಮ ದಂಡೆ ಮೇಲೆ ಆಕ್ರಮಣ

- Advertisement -
- Advertisement -

ಲೆಬನಾನ್, ಗಾಝಾ ಮತ್ತು ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲಿ ಪಡೆಗಳ ಆಕ್ರಮಣ ಮುಂದುವರೆದಿದೆ.

ಕಳೆದ 24 ಗಂಟೆಗಳಲ್ಲಿ ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಗಳಲ್ಲಿ 37 ಮಂದಿ ಸಾವನ್ನಪ್ಪಿದ್ದು, 151 ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ತಿಳಿಸಿದೆ.

ಲೆಬಾನಾನ್ ರಾಜಧಾನಿ ಬೈರುತ್‌ನ ಜನನಿಬಿಡ ಧೈಯಾ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಇಸ್ರೇಲ್ ಸರಣಿ ಬಾಂಬ್ ದಾಳಿ ನಡೆಸಿದೆ. ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಹೆಜ್ಬುಲ್ಲಾ-ಇಸ್ರೇಲ್ ಸಂಘರ್ಷ ಪ್ರಾರಂಭಗೊಂಡ ಬಳಿಕ ನಡೆದ ಅತೀ ದೊಡ್ಡ ದಾಳಿ ಇದು ಎನ್ನಲಾಗಿದೆ.

ಇತ್ತೀಚೆಗೆ ಹತ್ಯೆಗೀಡಾದ ಹೆಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಅವರ ಸೋಧರ ಸಂಬಂಧಿ ಹಾಗೂ ನಸ್ರಲಾ ಅವರ ಉತ್ತರಾಧಿಕಾರಿ ಎಂದು ಹೇಳಲಾಗುತ್ತಿರುವ ಸೈಫುದ್ದೀನ್ ಗುರಿಯಾಗಿಸಿಕೊಂಡು ಬೈರುತ್‌ನ ಭೂಗತ ಬಂಕರ್ ಮೇಲೆ ಇಸ್ರೇಲ್ ದಾಳಿ ನಡೆಸಿದೆ.

ಮತ್ತೊಂದೆಡೆ ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ತುಲ್ಕರೆಮ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲಿ ಜೆಟ್ ಫೈಟರ್ ನಡೆಸಿದ ದಾಳಿಯಲ್ಲಿ ಕನಿಷ್ಠ 18 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ.

ಎರಡು ದಿನಗಳಲ್ಲಿ ಗಾಝಾ ಪಟ್ಟಿಯಲ್ಲಿ ಇಸ್ರೇಲಿ ಪಡೆಗಳು ಮೂರು ಯುಎನ್ ನಡೆಸುವ ಶಾಲಾ ಆಶ್ರಯಗಳ ಮೇಲೆ ದಾಳಿ ನಡೆಸಿದ್ದರಿಂದ ಕನಿಷ್ಠ 21 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಪ್ಯಾಲೆಸ್ತೀನ್ ನಿರಾಶ್ರಿತರಿಗಾಗಿ ಕೆಲಸ ಮಾಡುವ ವಿಶ್ವ ಸಂಸ್ಥೆಯ ಏಜೆನ್ಸಿ ಯುಎನ್‌ಆರ್‌ಡಬ್ಲ್ಯೂಎನ ಮುಖ್ಯಸ್ಥರು ತಿಳಿಸಿದ್ದಾರೆ.

ಇರಾನ್ ಪ್ರಾದೇಶಿಕ ಯುದ್ಧವನ್ನು ಬಯಸುವುದಿಲ್ಲ ಎಂದು ಕತಾರ್ ಮೂಲಕ ವಾಷಿಂಗ್ಟನ್‌ಗೆ ಸಂದೇಶವನ್ನು ರವಾನಿಸಿದೆ. ಆದರೆ ‘ಏಕಪಕ್ಷೀಯ ಸ್ವಯಂ ಸಂಯಮದ ಹಂತವು ಕೊನೆಗೊಂಡಿದೆ’ ಎಂದು ತಿಳಿಸಿದೆ ಅಲ್ ಜಝೀರಾ ವರದಿ ಮಾಡಿದೆ.

ಕಳೆದ ವರ್ಷ ಅಕ್ಟೋಬರ್‌ನಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಲ್ಲಿ ಇದುವರೆಗೆ 41,788 ಜನರು ಸಾವನ್ನಪ್ಪಿದ್ದಾರೆ ಮತ್ತು 96,794 ಜನರು ಗಾಯಗೊಂಡಿದ್ದಾರೆ. ಇದಕ್ಕೂ ಮುನ್ನ ಇಸ್ರೇಲ್‌ ರಾಜಧಾನಿ ಟೆಲ್‌ ಅವೀವ್ ಮೇಲೆ ಹಮಾಸ್ ನಡೆಸಿದ ದಾಳಿಯಲ್ಲಿ 1,139 ಜನರು ಸಾವನ್ನಪ್ಪಿದ್ದರು ಮತ್ತು 200ಕ್ಕೂ ಹೆಚ್ಚು ಜನರನ್ನು ಹಮಾಸ್ ಒತ್ತೆಯಾಳಾಗಿಟ್ಟುಕೊಂಡಿತ್ತು.

ಇದನ್ನೂ ಓದಿ : ಉತ್ತರ ಪ್ರದೇಶ: ಮಿರ್ಜಾಪುರದಲ್ಲಿ ಟ್ರಕ್-ಟ್ರಾಕ್ಟರ್ ಡಿಕ್ಕಿಯಿಂದ 10 ಮಂದಿ ಕಾರ್ಮಿಕರು ಸಾವು, ಮೂವರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...