Homeಅಂತರಾಷ್ಟ್ರೀಯಗಾಝಾ ಕದನ ವಿರಾಮ ಜಾರಿಯಾದರೂ ಆಕ್ರಮಣ ಮುಂದುವರಿಸಿದ ಇಸ್ರೇಲ್ : ಪ್ಯಾಲೆಸ್ತೀನಿಯರ ಹತ್ಯೆ, ಬಂಧನ

ಗಾಝಾ ಕದನ ವಿರಾಮ ಜಾರಿಯಾದರೂ ಆಕ್ರಮಣ ಮುಂದುವರಿಸಿದ ಇಸ್ರೇಲ್ : ಪ್ಯಾಲೆಸ್ತೀನಿಯರ ಹತ್ಯೆ, ಬಂಧನ

- Advertisement -
- Advertisement -

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿದೆ ಎಂದು ಇಡೀ ಜಗತ್ತು ಮಾತನಾಡಿಕೊಳ್ಳುತ್ತಿದೆ. ತಾನೇ ಬಾಂಬ್ ಕೊಟ್ಟು ಕಂದಮ್ಮಗಳ ಸಾವಿಗೆ ಕಾರಣರಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈಗ ಯುದ್ಧ ನಿಲ್ಲಿಸಿದ ಶಾಂತಿಯ ರಾಯಭಾರಿಯಾಗಿ ಹೊರ ಹೊಮ್ಮಿದ್ದಾರೆ. ಮುಂದೆ ನಿಂತು ಕಂದಮ್ಮಗಳ ರಕ್ತ ಹರಿಸಿದ ಇಸ್ರೇಲ್ ಅಧ್ಯಕ್ಷ ನೆತನ್ಯಾಹು ನಿರಪರಾಧಿ ಎಂಬಂತೆ ಜಾಗತಿಕ ನಾಯಕರು ಕೈ ಕುಲುಕುತ್ತಿದ್ದಾರೆ.

ಈ ನಡುವೆ ಕದನ ವಿರಾಮದಿಂದ ಪ್ಯಾಲೆಸ್ತೀನಿಯರಿಗೆ ಕನಿಷ್ಠ ಬದುಕುವ ಅವಕಾಶ ಸಿಕ್ಕಿತಾ? ಎಂದು ನೋಡಿದರೆ, ಇಲ್ಲ ಎನ್ನುತ್ತವೆ ವರದಿಗಳು.

ಆಕ್ರಮಿತ ಜೆರುಸಲೆಮ್‌ನ ಉತ್ತರದಲ್ಲಿ ಓರ್ವ ಪ್ಯಾಲೆಸ್ತೀನಿಯ ಹತ್ಯೆ 

ಇತ್ತೀಚಿನ ವರದಿಗಳ ಪ್ರಕಾರ, ಆಕ್ರಮಿತ ಜೆರುಸಲೆಮ್‌ನ ಉತ್ತರಕ್ಕೆ ಇರುವ ಅರ್ರಾಮ್ ಪಟ್ಟಣದಲ್ಲಿ ಇಸ್ರೇಲಿ ಪಡೆಗಳು ನಡೆಸಿದ ದಾಳಿಯಲ್ಲಿ ಒಬ್ಬರು ಪ್ಯಾಲೆಸ್ತೀನಿ ವ್ಯಕ್ತಿ ಸಾವನ್ನಪ್ಪಿದ್ದಾರೆ. 57 ವರ್ಷದ ವ್ಯಕ್ತಿಯನ್ನು ಇಸ್ರೇಲಿ ಸೈನಿಕರು ಹೊಡೆದು ಕೊಂದಿದ್ದಾರೆ ಎಂದು ಭದ್ರತಾ ಮೂಲಗಳನ್ನು ಉಲ್ಲೇಖಿಸಿ ಪ್ಯಾಲೆಸ್ತೀನಿ ಸುದ್ದಿ ಸಂಸ್ಥೆ ವಫಾ ವರದಿ ಮಾಡಿದೆ.

ನಮ್ಮ ಸಿಬ್ಬಂದಿ ಮೃತ ವ್ಯಕ್ತಿಯ ದೇಹವನ್ನು ಕಲಾಂಡಿಯಾ ಚೆಕ್‌ಪಾಯಿಂಟ್‌ನಲ್ಲಿ ಸ್ವೀಕರಿಸಿ ಪ್ಯಾಲೆಸ್ತೀನ್ ವೈದ್ಯಕೀಯ ಸಂಕೀರ್ಣಕ್ಕೆ ಸಾಗಿಸಿದ್ದಾರೆ ಪ್ಯಾಲೆಸ್ತೀನ್ ರೆಡ್ ಕ್ರೆಸೆಂಟ್ ಖಚಿತಪಡಿಸಿದೆ.

ಇಸ್ರೇಲಿ ಪಡೆಗಳು ಇಂದು (ಅ.15) ಬೆಳಿಗ್ಗೆಯಿಂದ ಆಕ್ರಮಿತ ಪಶ್ಚಿಮ ದಂಡೆಯ ವಿವಿಧ ಪ್ರದೇಶಗಳ ಮೇಲೆ ಸರಣಿ ದಾಳಿ ಮತ್ತು ಅತಿಕ್ರಮಣಗಳನ್ನು ನಡೆಸಿವೆ. ಸೈನಿಕರು ಬಿಡುಗಡೆಯಾದ ಕೈದಿಗಳ ಮನೆಗಳ ಮೇಲೂ ದಾಳಿ ನಡೆಸಿದ್ದಾರೆ ಮತ್ತು ಇಸ್ರೇಲಿ ಜೈಲುಗಳಿಂದ ಬಿಡುಗಡೆಯಾದ ಕೈದಿಗಳನ್ನು ಬೆಂಬಲಿಸಿ ಯಾವುದೇ ಸಂಭ್ರಮಾಚರಣೆ ನಡೆಸದಂತೆ ಅವರ ಕುಟುಂಬಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಗಳು ಹೇಳಿವೆ.

ಬೆತ್ಲಹೆಮ್ ಗವರ್ನರೇಟ್‌ನಲ್ಲಿ ನಾಲ್ವರು ಬಂಧಿಸಿದ ಇಸ್ರೇಲಿ ಪಡೆಗಳು

ಬೆತ್ಲಹೆಮ್ ಗವರ್ನರೇಟ್‌ನಲ್ಲಿ ಪ್ಯಾಲೆಸ್ತೀನಿಯರ ಮನೆಗಳ ಮೇಲೆ ದಾಳಿ ನಡೆಸಿದ ಇಸ್ರೇಲಿ ಪಡೆಗಳು ಶೋಧ ಕಾರ್ಯ ಕೈಗೊಂಡಿವೆ. ಕನಿಷ್ಠ ನಾಲ್ವರನ್ನು ಬಂಧಿಸಿವೆ ಎಂದು ಭದ್ರತಾ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ವಫಾ ವರದಿ ಮಾಡಿದೆ.

ಜಬಲ್ ಅಲ್-ಮವಾಲೆಹ್ ಪ್ರದೇಶದಿಂದ ಕರೆದೊಯ್ಯಲ್ಪಟ್ಟ ಮುಸ್ತಫಾ ಮೂಸಾ ನವವ್ರಾ, ಅಲ್-ಕರ್ಕಫಾದ ಮುಹಮ್ಮದ್ ರಈದ್ ಜವಾಹರಾ, ಕ್ಯಾರಿಟಾಸ್ ಪ್ರದೇಶದ ರಈದ್ ಅಬ್ದುಲ್ ಕರೀಮ್ ಅಲ್-ಮದ್ಬೌಹ್ ಮತ್ತು ಬೆತ್ಲೆಹೆಮ್ ನಗರದ ಪೂರ್ವದಲ್ಲಿರುವ ಹಿಂಡಾಜಾದ ಝಕಾರಿಯಾ ಜಮಾಲ್ ಅವಿದಾ ಬಂಧಿತರು ಎಂದು ತಿಳಿದು ಬಂದಿದೆ.

ಗವರ್ನರೇಟ್‌ನ ವಿವಿಧ ಪ್ರದೇಶಗಳಲ್ಲಿ ಅನೇಕ ಮನೆಗಳ ಮೇಲೆ ಇಸ್ರೇಲಿ ಪಡೆಗಳು ದಾಳಿ ನಡೆಸಿವೆ. ಆದರೆ, ನಾಲ್ವರು ಹೊರತು ಇತರ ಯಾವುದೇ ಬಂಧನಗಳು ವರದಿಯಾಗಿಲ್ಲ ಎಂದು ವರದಿಗಳು ಹೇಳಿವೆ.

ಪಶ್ಚಿಮ ದಂಡೆಯ ಅಲ್-ಮುಗಯೀರ್ ಗ್ರಾಮದ ಪ್ರವೇಶದ್ವಾರ ಮುಚ್ಚಿದ ಇಸ್ರೇಲಿ ಸೈನಿಕರು

ಇಸ್ರೇಲಿ ಸೈನಿಕರು ಆಕ್ರಮಿತ ಪಶ್ಚಿಮ ದಂಡೆಯ ಅಲ್-ಮುಗಯೀರ್ ಗ್ರಾಮದ ಪಶ್ಚಿಮ ದ್ವಾರವನ್ನು ಮುಚ್ಚಿ ಪ್ಯಾಲೆಸ್ತೀನಿರು ಗ್ರಾಮ ಪ್ರವೇಶಿಸದಂತೆ ಮತ್ತು ಹೊರ ಹೋಗದಂತೆ ತಡೆಯುತ್ತಿದ್ದಾರೆ ಎಂದು ಅಲ್-ಮುಘಯ್ಯಿರ್ ಗ್ರಾಮ ಮಂಡಳಿಯ ಮುಖ್ಯಸ್ಥ ಅಮೀನ್ ಅಬು ಅಲಿಯಾ ಅವರನ್ನು ಉಲ್ಲೇಖಿಸಿ ವಫಾ ವರದಿ ಮಾಡಿದೆ.

ಅಕ್ಟೋಬರ್ 7, 2023ರಂದು ಗಾಝಾದಲ್ಲಿ ಆಕ್ರಮಣ ಪ್ರಾರಂಭವಾದಾಗಿನಿಂದ ಇಸ್ರೇಲಿ ಪಡೆಗಳು ಗ್ರಾಮದ ಪೂರ್ವ ದ್ವಾರವನ್ನು ಮುಚ್ಚಿತ್ತು. ಹಾಗಾಗಿ, ಪಶ್ಚಿಮ ದ್ವಾರ ಗ್ರಾಮದ ಏಕೈಕ ಪ್ರವೇಶ ಮಾರ್ಗವಾಗಿತ್ತು.

ಇಸ್ರೇಲಿ ಸೈನಿಕರು ಪ್ರವೇಶದ್ವಾರವನ್ನು ಮುಚ್ಚುತ್ತಿರುವ ದೃಶ್ಯಗಳನ್ನು ಸುದ್ದಿ ಸಂಸ್ಥೆ ಅಲ್ ಜಝೀರಾ ಪ್ರಕಟಿಸಿದೆ.

ಒತ್ತೆಯಾಳುಗಳ ಮೃತದೇಹ ಹಸ್ತಾಂತರಿಸಿದ ಹಮಾಸ್ 

ಅಲ್‌-ಜಝೀರಾ ವರದಿಯ ಪ್ರಕಾರ, ಬುಧವಾರ ಹಮಾಸ್ ನಾಲ್ವರು ಇಸ್ರೇಲಿ ಒತ್ತೆಯಾಳುಗಳ ಮೃತದೇಹವನ್ನು ಹಸ್ತಾಂತರಿಸಿದೆ. ಈ ಮೂಲಕ ಕದನ ವಿರಾಮದ ಬಳಿಕ ಹಸ್ತಾಂತರಿಸಿದ ಮೃತದೇಹಗಳ ಸಂಖ್ಯೆ 8ಕ್ಕೆ ಏರಿದೆ. ಇನ್ನೂ 20 ಒತ್ತೆಯಾಳುಗಳ ಮೃತದೇಹ ಹಮಾಸ್ ಬಳಿ ಇವೆ.

ಒಪ್ಪಂದ ಮುರಿದ ಇಸ್ರೇಲ್

ವರದಿಗಳ ಪ್ರಕಾರ, ಇಸ್ರೇಲ್ ಒಪ್ಪಿಕೊಂಡ ಸಂಖ್ಯೆಯ ಅರ್ಧದಷ್ಟು ನೆರವು ಟ್ರಕ್‌ಗಳನ್ನು ಗಾಝಾಕ್ಕೆ ಅನುಮತಿಸುವುದಾಗಿ ಹೇಳುತ್ತಿದೆ. ಒತ್ತೆಯಾಳುಗಳ ಮೃತದೇಹ ಹಸ್ತಾಂತರಿಸುವಲ್ಲಿ ವಿಳಂಬವನ್ನು ಉಲ್ಲೇಖಿಸಿ ರಫಾ ಕ್ರಾಸಿಂಗ್ ತೆರೆಯುವುದನ್ನು ತಡ ಮಾಡಿದೆ.

ಕದನ ವಿರಾಮ ಒಪ್ಪಂದದಲ್ಲಿ ಹೇಳಿದಷ್ಟು ನೆರವು ಟ್ರಕ್‌ಗಳನ್ನು ಮೊದಲ ದಿನ ಇಸ್ರೇಲ್‌ ಗಾಝದೊಳಗೆ ಬಿಟ್ಟಿಲ್ಲ. ವಿಶ್ವ ಆಹಾರ ಕಾರ್ಯಕ್ರಮದ ಮೂಲಕ 137 ನೆರವು ಟ್ರಕ್‌ಗಳು ಗಾಝಾ ಪಟ್ಟಿ ತಲುಪಿವೆ. ಆ ಟ್ರಕ್‌ಗಳಲ್ಲಿ ಹೆಚ್ಚಿನವು ಹಿಟ್ಟು ಮತ್ತು ಅತ್ಯಂತ ಅಗತ್ಯವಾದ ಸಾಮಗ್ರಿಗಳಿಂದ ತುಂಬಿದ್ದವು. ಇದರಿಂದ ಕನಿಷ್ಠ ಮೂರು ತಿಂಗಳ ಕಾಲ ಪ್ಯಾಲೆಸ್ತೀನಿಯರು ಜೀವಿಸಬಹುದು ಎಂದು ವರದಿಗಳು ಹೇಳಿವೆ.

ಪ್ರಸ್ತುತ, ಗಾಝಾದ ನೆಲದ ಮೇಲಿನ ಪರಿಸ್ಥಿತಿ ಶಾಂತವಾಗಿದೆ. ಒಪ್ಪಂದಂತೆ ಇಸ್ರೇಲ್ ಎಲ್ಲಾ ನೆರವು ಟ್ರಕ್‌ಗಳನ್ನು ಗಾಝಾದ ಒಳಗೆ ಬಿಡಬೇಕು ಎಂದು ಪ್ಯಾಲೆಸ್ತೀನಿಯರು ನಿರೀಕ್ಷಿಸುತ್ತಿದ್ದಾರೆ. ಆದರೆ, ಒತ್ತೆಯಾಳುಗಳ ಎಲ್ಲಾ ಮೃತದೇಹಗಳನ್ನು ಹಸ್ತಾಂತರಿಸಿದ ಬಳಿಕ ಇಸ್ರೇಲ್ ಬದ್ದತೆ ಬದಲಾಯಿಸುವ ಆತಂಕವಿದೆ.

ಹಮಾಸ್‌ಗೆ ಎಚ್ಚರಿಕೆ ಕೊಟ್ಟ ಟ್ರಂಪ್ 

ಶಸ್ತ್ರಾಸ್ತ್ರ ತ್ಯಜಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಮಾಸ್ ಕರೆ ಕೊಟ್ಟಿದ್ದಾರೆ. ನೀವು ತ್ಯಜಿಸದಿದ್ದರೆ, ನಾನು ತ್ಯಜಿಸುವಂತೆ ಮಾಡುತ್ತೇವೆ, ಅದೂ ಕೂಡ ತ್ವರಿತವಾಗಿ, ಬಹುಶಃ ಹಿಂಸಾತ್ಮಕವಾಗಿ ಎಂದು ಟ್ರಂಪ್ ಎಚ್ಚರಿಸಿದ್ದಾರೆ.

9 ಜನರನ್ನು ಹತ್ಯೆಗೈದ ಇಸ್ರೇಲ್ 

ಕದನ ವಿರಾಮ ಸಂಪೂರ್ಣ ಜಾರಿಯಾಗಿ ಒತ್ತೆಯಾಳುಗಳು, ಬಂಧಿತರ ಹಸ್ತಾಂತರ ಬಹುತೇಕ ಪೂರ್ಣಗೊಳ್ಳುತ್ತಿದ್ದರೂ, ಇಸ್ರೇಲ್ ಮಂಗಳವಾರ 9 ಪ್ಯಾಲೆಸ್ತೀನಿಯರನ್ನು ಹತ್ಯೆ ಮಾಡಿದೆ ಎಂದು ವರದಿಗಳು ಹೇಳಿವೆ. ಹಾಗಾಗಿ, ಇಸ್ರೇಲ್ ಮತ್ತೆ ಕದನ ವಿರಾಮ ಮುರಿದಿದೆ ಎನ್ನಲಾಗಿದೆ. ಹಮಾಸ್ ಒತ್ತೆಯಾಳುಗಳ ಮೃತದೇಹಗಳನ್ನು ಸಂಪೂರ್ಣವಾಗಿ ಹಸ್ತಾಂತರಿಸಿದ ಬಳಿಕ ಇಸ್ರೇಲ್ ಕದನ ವಿರಾಮ ಒಪ್ಪಂದಕ್ಕೆ ಬದ್ದವಾಗಿ ಇರುತ್ತದೆಯೇ? ಎಂಬ ಪ್ರಶ್ನೆ ಈಗ ಮೂಡಿದೆ.

ಗಾಝಾ ಕದನ ವಿರಾಮ: ಚಿವುಟಿ ತೊಟ್ಟಿಲು ತೂಗಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...