Homeಅಂತರಾಷ್ಟ್ರೀಯಗಾಝಾ ಕದನ ವಿರಾಮ ಜಾರಿಯಾದರೂ ಆಕ್ರಮಣ ಮುಂದುವರಿಸಿದ ಇಸ್ರೇಲ್ : ಪ್ಯಾಲೆಸ್ತೀನಿಯರ ಹತ್ಯೆ, ಬಂಧನ

ಗಾಝಾ ಕದನ ವಿರಾಮ ಜಾರಿಯಾದರೂ ಆಕ್ರಮಣ ಮುಂದುವರಿಸಿದ ಇಸ್ರೇಲ್ : ಪ್ಯಾಲೆಸ್ತೀನಿಯರ ಹತ್ಯೆ, ಬಂಧನ

- Advertisement -
- Advertisement -

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿದೆ ಎಂದು ಇಡೀ ಜಗತ್ತು ಮಾತನಾಡಿಕೊಳ್ಳುತ್ತಿದೆ. ತಾನೇ ಬಾಂಬ್ ಕೊಟ್ಟು ಕಂದಮ್ಮಗಳ ಸಾವಿಗೆ ಕಾರಣರಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈಗ ಯುದ್ಧ ನಿಲ್ಲಿಸಿದ ಶಾಂತಿಯ ರಾಯಭಾರಿಯಾಗಿ ಹೊರ ಹೊಮ್ಮಿದ್ದಾರೆ. ಮುಂದೆ ನಿಂತು ಕಂದಮ್ಮಗಳ ರಕ್ತ ಹರಿಸಿದ ಇಸ್ರೇಲ್ ಅಧ್ಯಕ್ಷ ನೆತನ್ಯಾಹು ನಿರಪರಾಧಿ ಎಂಬಂತೆ ಜಾಗತಿಕ ನಾಯಕರು ಕೈ ಕುಲುಕುತ್ತಿದ್ದಾರೆ.

ಈ ನಡುವೆ ಕದನ ವಿರಾಮದಿಂದ ಪ್ಯಾಲೆಸ್ತೀನಿಯರಿಗೆ ಕನಿಷ್ಠ ಬದುಕುವ ಅವಕಾಶ ಸಿಕ್ಕಿತಾ? ಎಂದು ನೋಡಿದರೆ, ಇಲ್ಲ ಎನ್ನುತ್ತವೆ ವರದಿಗಳು.

ಆಕ್ರಮಿತ ಜೆರುಸಲೆಮ್‌ನ ಉತ್ತರದಲ್ಲಿ ಓರ್ವ ಪ್ಯಾಲೆಸ್ತೀನಿಯ ಹತ್ಯೆ 

ಇತ್ತೀಚಿನ ವರದಿಗಳ ಪ್ರಕಾರ, ಆಕ್ರಮಿತ ಜೆರುಸಲೆಮ್‌ನ ಉತ್ತರಕ್ಕೆ ಇರುವ ಅರ್ರಾಮ್ ಪಟ್ಟಣದಲ್ಲಿ ಇಸ್ರೇಲಿ ಪಡೆಗಳು ನಡೆಸಿದ ದಾಳಿಯಲ್ಲಿ ಒಬ್ಬರು ಪ್ಯಾಲೆಸ್ತೀನಿ ವ್ಯಕ್ತಿ ಸಾವನ್ನಪ್ಪಿದ್ದಾರೆ. 57 ವರ್ಷದ ವ್ಯಕ್ತಿಯನ್ನು ಇಸ್ರೇಲಿ ಸೈನಿಕರು ಹೊಡೆದು ಕೊಂದಿದ್ದಾರೆ ಎಂದು ಭದ್ರತಾ ಮೂಲಗಳನ್ನು ಉಲ್ಲೇಖಿಸಿ ಪ್ಯಾಲೆಸ್ತೀನಿ ಸುದ್ದಿ ಸಂಸ್ಥೆ ವಫಾ ವರದಿ ಮಾಡಿದೆ.

ನಮ್ಮ ಸಿಬ್ಬಂದಿ ಮೃತ ವ್ಯಕ್ತಿಯ ದೇಹವನ್ನು ಕಲಾಂಡಿಯಾ ಚೆಕ್‌ಪಾಯಿಂಟ್‌ನಲ್ಲಿ ಸ್ವೀಕರಿಸಿ ಪ್ಯಾಲೆಸ್ತೀನ್ ವೈದ್ಯಕೀಯ ಸಂಕೀರ್ಣಕ್ಕೆ ಸಾಗಿಸಿದ್ದಾರೆ ಪ್ಯಾಲೆಸ್ತೀನ್ ರೆಡ್ ಕ್ರೆಸೆಂಟ್ ಖಚಿತಪಡಿಸಿದೆ.

ಇಸ್ರೇಲಿ ಪಡೆಗಳು ಇಂದು (ಅ.15) ಬೆಳಿಗ್ಗೆಯಿಂದ ಆಕ್ರಮಿತ ಪಶ್ಚಿಮ ದಂಡೆಯ ವಿವಿಧ ಪ್ರದೇಶಗಳ ಮೇಲೆ ಸರಣಿ ದಾಳಿ ಮತ್ತು ಅತಿಕ್ರಮಣಗಳನ್ನು ನಡೆಸಿವೆ. ಸೈನಿಕರು ಬಿಡುಗಡೆಯಾದ ಕೈದಿಗಳ ಮನೆಗಳ ಮೇಲೂ ದಾಳಿ ನಡೆಸಿದ್ದಾರೆ ಮತ್ತು ಇಸ್ರೇಲಿ ಜೈಲುಗಳಿಂದ ಬಿಡುಗಡೆಯಾದ ಕೈದಿಗಳನ್ನು ಬೆಂಬಲಿಸಿ ಯಾವುದೇ ಸಂಭ್ರಮಾಚರಣೆ ನಡೆಸದಂತೆ ಅವರ ಕುಟುಂಬಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಗಳು ಹೇಳಿವೆ.

ಬೆತ್ಲಹೆಮ್ ಗವರ್ನರೇಟ್‌ನಲ್ಲಿ ನಾಲ್ವರು ಬಂಧಿಸಿದ ಇಸ್ರೇಲಿ ಪಡೆಗಳು

ಬೆತ್ಲಹೆಮ್ ಗವರ್ನರೇಟ್‌ನಲ್ಲಿ ಪ್ಯಾಲೆಸ್ತೀನಿಯರ ಮನೆಗಳ ಮೇಲೆ ದಾಳಿ ನಡೆಸಿದ ಇಸ್ರೇಲಿ ಪಡೆಗಳು ಶೋಧ ಕಾರ್ಯ ಕೈಗೊಂಡಿವೆ. ಕನಿಷ್ಠ ನಾಲ್ವರನ್ನು ಬಂಧಿಸಿವೆ ಎಂದು ಭದ್ರತಾ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ವಫಾ ವರದಿ ಮಾಡಿದೆ.

ಜಬಲ್ ಅಲ್-ಮವಾಲೆಹ್ ಪ್ರದೇಶದಿಂದ ಕರೆದೊಯ್ಯಲ್ಪಟ್ಟ ಮುಸ್ತಫಾ ಮೂಸಾ ನವವ್ರಾ, ಅಲ್-ಕರ್ಕಫಾದ ಮುಹಮ್ಮದ್ ರಈದ್ ಜವಾಹರಾ, ಕ್ಯಾರಿಟಾಸ್ ಪ್ರದೇಶದ ರಈದ್ ಅಬ್ದುಲ್ ಕರೀಮ್ ಅಲ್-ಮದ್ಬೌಹ್ ಮತ್ತು ಬೆತ್ಲೆಹೆಮ್ ನಗರದ ಪೂರ್ವದಲ್ಲಿರುವ ಹಿಂಡಾಜಾದ ಝಕಾರಿಯಾ ಜಮಾಲ್ ಅವಿದಾ ಬಂಧಿತರು ಎಂದು ತಿಳಿದು ಬಂದಿದೆ.

ಗವರ್ನರೇಟ್‌ನ ವಿವಿಧ ಪ್ರದೇಶಗಳಲ್ಲಿ ಅನೇಕ ಮನೆಗಳ ಮೇಲೆ ಇಸ್ರೇಲಿ ಪಡೆಗಳು ದಾಳಿ ನಡೆಸಿವೆ. ಆದರೆ, ನಾಲ್ವರು ಹೊರತು ಇತರ ಯಾವುದೇ ಬಂಧನಗಳು ವರದಿಯಾಗಿಲ್ಲ ಎಂದು ವರದಿಗಳು ಹೇಳಿವೆ.

ಪಶ್ಚಿಮ ದಂಡೆಯ ಅಲ್-ಮುಗಯೀರ್ ಗ್ರಾಮದ ಪ್ರವೇಶದ್ವಾರ ಮುಚ್ಚಿದ ಇಸ್ರೇಲಿ ಸೈನಿಕರು

ಇಸ್ರೇಲಿ ಸೈನಿಕರು ಆಕ್ರಮಿತ ಪಶ್ಚಿಮ ದಂಡೆಯ ಅಲ್-ಮುಗಯೀರ್ ಗ್ರಾಮದ ಪಶ್ಚಿಮ ದ್ವಾರವನ್ನು ಮುಚ್ಚಿ ಪ್ಯಾಲೆಸ್ತೀನಿರು ಗ್ರಾಮ ಪ್ರವೇಶಿಸದಂತೆ ಮತ್ತು ಹೊರ ಹೋಗದಂತೆ ತಡೆಯುತ್ತಿದ್ದಾರೆ ಎಂದು ಅಲ್-ಮುಘಯ್ಯಿರ್ ಗ್ರಾಮ ಮಂಡಳಿಯ ಮುಖ್ಯಸ್ಥ ಅಮೀನ್ ಅಬು ಅಲಿಯಾ ಅವರನ್ನು ಉಲ್ಲೇಖಿಸಿ ವಫಾ ವರದಿ ಮಾಡಿದೆ.

ಅಕ್ಟೋಬರ್ 7, 2023ರಂದು ಗಾಝಾದಲ್ಲಿ ಆಕ್ರಮಣ ಪ್ರಾರಂಭವಾದಾಗಿನಿಂದ ಇಸ್ರೇಲಿ ಪಡೆಗಳು ಗ್ರಾಮದ ಪೂರ್ವ ದ್ವಾರವನ್ನು ಮುಚ್ಚಿತ್ತು. ಹಾಗಾಗಿ, ಪಶ್ಚಿಮ ದ್ವಾರ ಗ್ರಾಮದ ಏಕೈಕ ಪ್ರವೇಶ ಮಾರ್ಗವಾಗಿತ್ತು.

ಇಸ್ರೇಲಿ ಸೈನಿಕರು ಪ್ರವೇಶದ್ವಾರವನ್ನು ಮುಚ್ಚುತ್ತಿರುವ ದೃಶ್ಯಗಳನ್ನು ಸುದ್ದಿ ಸಂಸ್ಥೆ ಅಲ್ ಜಝೀರಾ ಪ್ರಕಟಿಸಿದೆ.

ಒತ್ತೆಯಾಳುಗಳ ಮೃತದೇಹ ಹಸ್ತಾಂತರಿಸಿದ ಹಮಾಸ್ 

ಅಲ್‌-ಜಝೀರಾ ವರದಿಯ ಪ್ರಕಾರ, ಬುಧವಾರ ಹಮಾಸ್ ನಾಲ್ವರು ಇಸ್ರೇಲಿ ಒತ್ತೆಯಾಳುಗಳ ಮೃತದೇಹವನ್ನು ಹಸ್ತಾಂತರಿಸಿದೆ. ಈ ಮೂಲಕ ಕದನ ವಿರಾಮದ ಬಳಿಕ ಹಸ್ತಾಂತರಿಸಿದ ಮೃತದೇಹಗಳ ಸಂಖ್ಯೆ 8ಕ್ಕೆ ಏರಿದೆ. ಇನ್ನೂ 20 ಒತ್ತೆಯಾಳುಗಳ ಮೃತದೇಹ ಹಮಾಸ್ ಬಳಿ ಇವೆ.

ಒಪ್ಪಂದ ಮುರಿದ ಇಸ್ರೇಲ್

ವರದಿಗಳ ಪ್ರಕಾರ, ಇಸ್ರೇಲ್ ಒಪ್ಪಿಕೊಂಡ ಸಂಖ್ಯೆಯ ಅರ್ಧದಷ್ಟು ನೆರವು ಟ್ರಕ್‌ಗಳನ್ನು ಗಾಝಾಕ್ಕೆ ಅನುಮತಿಸುವುದಾಗಿ ಹೇಳುತ್ತಿದೆ. ಒತ್ತೆಯಾಳುಗಳ ಮೃತದೇಹ ಹಸ್ತಾಂತರಿಸುವಲ್ಲಿ ವಿಳಂಬವನ್ನು ಉಲ್ಲೇಖಿಸಿ ರಫಾ ಕ್ರಾಸಿಂಗ್ ತೆರೆಯುವುದನ್ನು ತಡ ಮಾಡಿದೆ.

ಕದನ ವಿರಾಮ ಒಪ್ಪಂದದಲ್ಲಿ ಹೇಳಿದಷ್ಟು ನೆರವು ಟ್ರಕ್‌ಗಳನ್ನು ಮೊದಲ ದಿನ ಇಸ್ರೇಲ್‌ ಗಾಝದೊಳಗೆ ಬಿಟ್ಟಿಲ್ಲ. ವಿಶ್ವ ಆಹಾರ ಕಾರ್ಯಕ್ರಮದ ಮೂಲಕ 137 ನೆರವು ಟ್ರಕ್‌ಗಳು ಗಾಝಾ ಪಟ್ಟಿ ತಲುಪಿವೆ. ಆ ಟ್ರಕ್‌ಗಳಲ್ಲಿ ಹೆಚ್ಚಿನವು ಹಿಟ್ಟು ಮತ್ತು ಅತ್ಯಂತ ಅಗತ್ಯವಾದ ಸಾಮಗ್ರಿಗಳಿಂದ ತುಂಬಿದ್ದವು. ಇದರಿಂದ ಕನಿಷ್ಠ ಮೂರು ತಿಂಗಳ ಕಾಲ ಪ್ಯಾಲೆಸ್ತೀನಿಯರು ಜೀವಿಸಬಹುದು ಎಂದು ವರದಿಗಳು ಹೇಳಿವೆ.

ಪ್ರಸ್ತುತ, ಗಾಝಾದ ನೆಲದ ಮೇಲಿನ ಪರಿಸ್ಥಿತಿ ಶಾಂತವಾಗಿದೆ. ಒಪ್ಪಂದಂತೆ ಇಸ್ರೇಲ್ ಎಲ್ಲಾ ನೆರವು ಟ್ರಕ್‌ಗಳನ್ನು ಗಾಝಾದ ಒಳಗೆ ಬಿಡಬೇಕು ಎಂದು ಪ್ಯಾಲೆಸ್ತೀನಿಯರು ನಿರೀಕ್ಷಿಸುತ್ತಿದ್ದಾರೆ. ಆದರೆ, ಒತ್ತೆಯಾಳುಗಳ ಎಲ್ಲಾ ಮೃತದೇಹಗಳನ್ನು ಹಸ್ತಾಂತರಿಸಿದ ಬಳಿಕ ಇಸ್ರೇಲ್ ಬದ್ದತೆ ಬದಲಾಯಿಸುವ ಆತಂಕವಿದೆ.

ಹಮಾಸ್‌ಗೆ ಎಚ್ಚರಿಕೆ ಕೊಟ್ಟ ಟ್ರಂಪ್ 

ಶಸ್ತ್ರಾಸ್ತ್ರ ತ್ಯಜಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಮಾಸ್ ಕರೆ ಕೊಟ್ಟಿದ್ದಾರೆ. ನೀವು ತ್ಯಜಿಸದಿದ್ದರೆ, ನಾನು ತ್ಯಜಿಸುವಂತೆ ಮಾಡುತ್ತೇವೆ, ಅದೂ ಕೂಡ ತ್ವರಿತವಾಗಿ, ಬಹುಶಃ ಹಿಂಸಾತ್ಮಕವಾಗಿ ಎಂದು ಟ್ರಂಪ್ ಎಚ್ಚರಿಸಿದ್ದಾರೆ.

9 ಜನರನ್ನು ಹತ್ಯೆಗೈದ ಇಸ್ರೇಲ್ 

ಕದನ ವಿರಾಮ ಸಂಪೂರ್ಣ ಜಾರಿಯಾಗಿ ಒತ್ತೆಯಾಳುಗಳು, ಬಂಧಿತರ ಹಸ್ತಾಂತರ ಬಹುತೇಕ ಪೂರ್ಣಗೊಳ್ಳುತ್ತಿದ್ದರೂ, ಇಸ್ರೇಲ್ ಮಂಗಳವಾರ 9 ಪ್ಯಾಲೆಸ್ತೀನಿಯರನ್ನು ಹತ್ಯೆ ಮಾಡಿದೆ ಎಂದು ವರದಿಗಳು ಹೇಳಿವೆ. ಹಾಗಾಗಿ, ಇಸ್ರೇಲ್ ಮತ್ತೆ ಕದನ ವಿರಾಮ ಮುರಿದಿದೆ ಎನ್ನಲಾಗಿದೆ. ಹಮಾಸ್ ಒತ್ತೆಯಾಳುಗಳ ಮೃತದೇಹಗಳನ್ನು ಸಂಪೂರ್ಣವಾಗಿ ಹಸ್ತಾಂತರಿಸಿದ ಬಳಿಕ ಇಸ್ರೇಲ್ ಕದನ ವಿರಾಮ ಒಪ್ಪಂದಕ್ಕೆ ಬದ್ದವಾಗಿ ಇರುತ್ತದೆಯೇ? ಎಂಬ ಪ್ರಶ್ನೆ ಈಗ ಮೂಡಿದೆ.

ಗಾಝಾ ಕದನ ವಿರಾಮ: ಚಿವುಟಿ ತೊಟ್ಟಿಲು ತೂಗಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...