Homeಅಂತರಾಷ್ಟ್ರೀಯಗಾಝಾ ಕದನ ವಿರಾಮ ಜಾರಿಯಾದರೂ ಆಕ್ರಮಣ ಮುಂದುವರಿಸಿದ ಇಸ್ರೇಲ್ : ಪ್ಯಾಲೆಸ್ತೀನಿಯರ ಹತ್ಯೆ, ಬಂಧನ

ಗಾಝಾ ಕದನ ವಿರಾಮ ಜಾರಿಯಾದರೂ ಆಕ್ರಮಣ ಮುಂದುವರಿಸಿದ ಇಸ್ರೇಲ್ : ಪ್ಯಾಲೆಸ್ತೀನಿಯರ ಹತ್ಯೆ, ಬಂಧನ

- Advertisement -
- Advertisement -

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿದೆ ಎಂದು ಇಡೀ ಜಗತ್ತು ಮಾತನಾಡಿಕೊಳ್ಳುತ್ತಿದೆ. ತಾನೇ ಬಾಂಬ್ ಕೊಟ್ಟು ಕಂದಮ್ಮಗಳ ಸಾವಿಗೆ ಕಾರಣರಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈಗ ಯುದ್ಧ ನಿಲ್ಲಿಸಿದ ಶಾಂತಿಯ ರಾಯಭಾರಿಯಾಗಿ ಹೊರ ಹೊಮ್ಮಿದ್ದಾರೆ. ಮುಂದೆ ನಿಂತು ಕಂದಮ್ಮಗಳ ರಕ್ತ ಹರಿಸಿದ ಇಸ್ರೇಲ್ ಅಧ್ಯಕ್ಷ ನೆತನ್ಯಾಹು ನಿರಪರಾಧಿ ಎಂಬಂತೆ ಜಾಗತಿಕ ನಾಯಕರು ಕೈ ಕುಲುಕುತ್ತಿದ್ದಾರೆ.

ಈ ನಡುವೆ ಕದನ ವಿರಾಮದಿಂದ ಪ್ಯಾಲೆಸ್ತೀನಿಯರಿಗೆ ಕನಿಷ್ಠ ಬದುಕುವ ಅವಕಾಶ ಸಿಕ್ಕಿತಾ? ಎಂದು ನೋಡಿದರೆ, ಇಲ್ಲ ಎನ್ನುತ್ತವೆ ವರದಿಗಳು.

ಆಕ್ರಮಿತ ಜೆರುಸಲೆಮ್‌ನ ಉತ್ತರದಲ್ಲಿ ಓರ್ವ ಪ್ಯಾಲೆಸ್ತೀನಿಯ ಹತ್ಯೆ 

ಇತ್ತೀಚಿನ ವರದಿಗಳ ಪ್ರಕಾರ, ಆಕ್ರಮಿತ ಜೆರುಸಲೆಮ್‌ನ ಉತ್ತರಕ್ಕೆ ಇರುವ ಅರ್ರಾಮ್ ಪಟ್ಟಣದಲ್ಲಿ ಇಸ್ರೇಲಿ ಪಡೆಗಳು ನಡೆಸಿದ ದಾಳಿಯಲ್ಲಿ ಒಬ್ಬರು ಪ್ಯಾಲೆಸ್ತೀನಿ ವ್ಯಕ್ತಿ ಸಾವನ್ನಪ್ಪಿದ್ದಾರೆ. 57 ವರ್ಷದ ವ್ಯಕ್ತಿಯನ್ನು ಇಸ್ರೇಲಿ ಸೈನಿಕರು ಹೊಡೆದು ಕೊಂದಿದ್ದಾರೆ ಎಂದು ಭದ್ರತಾ ಮೂಲಗಳನ್ನು ಉಲ್ಲೇಖಿಸಿ ಪ್ಯಾಲೆಸ್ತೀನಿ ಸುದ್ದಿ ಸಂಸ್ಥೆ ವಫಾ ವರದಿ ಮಾಡಿದೆ.

ನಮ್ಮ ಸಿಬ್ಬಂದಿ ಮೃತ ವ್ಯಕ್ತಿಯ ದೇಹವನ್ನು ಕಲಾಂಡಿಯಾ ಚೆಕ್‌ಪಾಯಿಂಟ್‌ನಲ್ಲಿ ಸ್ವೀಕರಿಸಿ ಪ್ಯಾಲೆಸ್ತೀನ್ ವೈದ್ಯಕೀಯ ಸಂಕೀರ್ಣಕ್ಕೆ ಸಾಗಿಸಿದ್ದಾರೆ ಪ್ಯಾಲೆಸ್ತೀನ್ ರೆಡ್ ಕ್ರೆಸೆಂಟ್ ಖಚಿತಪಡಿಸಿದೆ.

ಇಸ್ರೇಲಿ ಪಡೆಗಳು ಇಂದು (ಅ.15) ಬೆಳಿಗ್ಗೆಯಿಂದ ಆಕ್ರಮಿತ ಪಶ್ಚಿಮ ದಂಡೆಯ ವಿವಿಧ ಪ್ರದೇಶಗಳ ಮೇಲೆ ಸರಣಿ ದಾಳಿ ಮತ್ತು ಅತಿಕ್ರಮಣಗಳನ್ನು ನಡೆಸಿವೆ. ಸೈನಿಕರು ಬಿಡುಗಡೆಯಾದ ಕೈದಿಗಳ ಮನೆಗಳ ಮೇಲೂ ದಾಳಿ ನಡೆಸಿದ್ದಾರೆ ಮತ್ತು ಇಸ್ರೇಲಿ ಜೈಲುಗಳಿಂದ ಬಿಡುಗಡೆಯಾದ ಕೈದಿಗಳನ್ನು ಬೆಂಬಲಿಸಿ ಯಾವುದೇ ಸಂಭ್ರಮಾಚರಣೆ ನಡೆಸದಂತೆ ಅವರ ಕುಟುಂಬಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಗಳು ಹೇಳಿವೆ.

ಬೆತ್ಲಹೆಮ್ ಗವರ್ನರೇಟ್‌ನಲ್ಲಿ ನಾಲ್ವರು ಬಂಧಿಸಿದ ಇಸ್ರೇಲಿ ಪಡೆಗಳು

ಬೆತ್ಲಹೆಮ್ ಗವರ್ನರೇಟ್‌ನಲ್ಲಿ ಪ್ಯಾಲೆಸ್ತೀನಿಯರ ಮನೆಗಳ ಮೇಲೆ ದಾಳಿ ನಡೆಸಿದ ಇಸ್ರೇಲಿ ಪಡೆಗಳು ಶೋಧ ಕಾರ್ಯ ಕೈಗೊಂಡಿವೆ. ಕನಿಷ್ಠ ನಾಲ್ವರನ್ನು ಬಂಧಿಸಿವೆ ಎಂದು ಭದ್ರತಾ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ವಫಾ ವರದಿ ಮಾಡಿದೆ.

ಜಬಲ್ ಅಲ್-ಮವಾಲೆಹ್ ಪ್ರದೇಶದಿಂದ ಕರೆದೊಯ್ಯಲ್ಪಟ್ಟ ಮುಸ್ತಫಾ ಮೂಸಾ ನವವ್ರಾ, ಅಲ್-ಕರ್ಕಫಾದ ಮುಹಮ್ಮದ್ ರಈದ್ ಜವಾಹರಾ, ಕ್ಯಾರಿಟಾಸ್ ಪ್ರದೇಶದ ರಈದ್ ಅಬ್ದುಲ್ ಕರೀಮ್ ಅಲ್-ಮದ್ಬೌಹ್ ಮತ್ತು ಬೆತ್ಲೆಹೆಮ್ ನಗರದ ಪೂರ್ವದಲ್ಲಿರುವ ಹಿಂಡಾಜಾದ ಝಕಾರಿಯಾ ಜಮಾಲ್ ಅವಿದಾ ಬಂಧಿತರು ಎಂದು ತಿಳಿದು ಬಂದಿದೆ.

ಗವರ್ನರೇಟ್‌ನ ವಿವಿಧ ಪ್ರದೇಶಗಳಲ್ಲಿ ಅನೇಕ ಮನೆಗಳ ಮೇಲೆ ಇಸ್ರೇಲಿ ಪಡೆಗಳು ದಾಳಿ ನಡೆಸಿವೆ. ಆದರೆ, ನಾಲ್ವರು ಹೊರತು ಇತರ ಯಾವುದೇ ಬಂಧನಗಳು ವರದಿಯಾಗಿಲ್ಲ ಎಂದು ವರದಿಗಳು ಹೇಳಿವೆ.

ಪಶ್ಚಿಮ ದಂಡೆಯ ಅಲ್-ಮುಗಯೀರ್ ಗ್ರಾಮದ ಪ್ರವೇಶದ್ವಾರ ಮುಚ್ಚಿದ ಇಸ್ರೇಲಿ ಸೈನಿಕರು

ಇಸ್ರೇಲಿ ಸೈನಿಕರು ಆಕ್ರಮಿತ ಪಶ್ಚಿಮ ದಂಡೆಯ ಅಲ್-ಮುಗಯೀರ್ ಗ್ರಾಮದ ಪಶ್ಚಿಮ ದ್ವಾರವನ್ನು ಮುಚ್ಚಿ ಪ್ಯಾಲೆಸ್ತೀನಿರು ಗ್ರಾಮ ಪ್ರವೇಶಿಸದಂತೆ ಮತ್ತು ಹೊರ ಹೋಗದಂತೆ ತಡೆಯುತ್ತಿದ್ದಾರೆ ಎಂದು ಅಲ್-ಮುಘಯ್ಯಿರ್ ಗ್ರಾಮ ಮಂಡಳಿಯ ಮುಖ್ಯಸ್ಥ ಅಮೀನ್ ಅಬು ಅಲಿಯಾ ಅವರನ್ನು ಉಲ್ಲೇಖಿಸಿ ವಫಾ ವರದಿ ಮಾಡಿದೆ.

ಅಕ್ಟೋಬರ್ 7, 2023ರಂದು ಗಾಝಾದಲ್ಲಿ ಆಕ್ರಮಣ ಪ್ರಾರಂಭವಾದಾಗಿನಿಂದ ಇಸ್ರೇಲಿ ಪಡೆಗಳು ಗ್ರಾಮದ ಪೂರ್ವ ದ್ವಾರವನ್ನು ಮುಚ್ಚಿತ್ತು. ಹಾಗಾಗಿ, ಪಶ್ಚಿಮ ದ್ವಾರ ಗ್ರಾಮದ ಏಕೈಕ ಪ್ರವೇಶ ಮಾರ್ಗವಾಗಿತ್ತು.

ಇಸ್ರೇಲಿ ಸೈನಿಕರು ಪ್ರವೇಶದ್ವಾರವನ್ನು ಮುಚ್ಚುತ್ತಿರುವ ದೃಶ್ಯಗಳನ್ನು ಸುದ್ದಿ ಸಂಸ್ಥೆ ಅಲ್ ಜಝೀರಾ ಪ್ರಕಟಿಸಿದೆ.

ಒತ್ತೆಯಾಳುಗಳ ಮೃತದೇಹ ಹಸ್ತಾಂತರಿಸಿದ ಹಮಾಸ್ 

ಅಲ್‌-ಜಝೀರಾ ವರದಿಯ ಪ್ರಕಾರ, ಬುಧವಾರ ಹಮಾಸ್ ನಾಲ್ವರು ಇಸ್ರೇಲಿ ಒತ್ತೆಯಾಳುಗಳ ಮೃತದೇಹವನ್ನು ಹಸ್ತಾಂತರಿಸಿದೆ. ಈ ಮೂಲಕ ಕದನ ವಿರಾಮದ ಬಳಿಕ ಹಸ್ತಾಂತರಿಸಿದ ಮೃತದೇಹಗಳ ಸಂಖ್ಯೆ 8ಕ್ಕೆ ಏರಿದೆ. ಇನ್ನೂ 20 ಒತ್ತೆಯಾಳುಗಳ ಮೃತದೇಹ ಹಮಾಸ್ ಬಳಿ ಇವೆ.

ಒಪ್ಪಂದ ಮುರಿದ ಇಸ್ರೇಲ್

ವರದಿಗಳ ಪ್ರಕಾರ, ಇಸ್ರೇಲ್ ಒಪ್ಪಿಕೊಂಡ ಸಂಖ್ಯೆಯ ಅರ್ಧದಷ್ಟು ನೆರವು ಟ್ರಕ್‌ಗಳನ್ನು ಗಾಝಾಕ್ಕೆ ಅನುಮತಿಸುವುದಾಗಿ ಹೇಳುತ್ತಿದೆ. ಒತ್ತೆಯಾಳುಗಳ ಮೃತದೇಹ ಹಸ್ತಾಂತರಿಸುವಲ್ಲಿ ವಿಳಂಬವನ್ನು ಉಲ್ಲೇಖಿಸಿ ರಫಾ ಕ್ರಾಸಿಂಗ್ ತೆರೆಯುವುದನ್ನು ತಡ ಮಾಡಿದೆ.

ಕದನ ವಿರಾಮ ಒಪ್ಪಂದದಲ್ಲಿ ಹೇಳಿದಷ್ಟು ನೆರವು ಟ್ರಕ್‌ಗಳನ್ನು ಮೊದಲ ದಿನ ಇಸ್ರೇಲ್‌ ಗಾಝದೊಳಗೆ ಬಿಟ್ಟಿಲ್ಲ. ವಿಶ್ವ ಆಹಾರ ಕಾರ್ಯಕ್ರಮದ ಮೂಲಕ 137 ನೆರವು ಟ್ರಕ್‌ಗಳು ಗಾಝಾ ಪಟ್ಟಿ ತಲುಪಿವೆ. ಆ ಟ್ರಕ್‌ಗಳಲ್ಲಿ ಹೆಚ್ಚಿನವು ಹಿಟ್ಟು ಮತ್ತು ಅತ್ಯಂತ ಅಗತ್ಯವಾದ ಸಾಮಗ್ರಿಗಳಿಂದ ತುಂಬಿದ್ದವು. ಇದರಿಂದ ಕನಿಷ್ಠ ಮೂರು ತಿಂಗಳ ಕಾಲ ಪ್ಯಾಲೆಸ್ತೀನಿಯರು ಜೀವಿಸಬಹುದು ಎಂದು ವರದಿಗಳು ಹೇಳಿವೆ.

ಪ್ರಸ್ತುತ, ಗಾಝಾದ ನೆಲದ ಮೇಲಿನ ಪರಿಸ್ಥಿತಿ ಶಾಂತವಾಗಿದೆ. ಒಪ್ಪಂದಂತೆ ಇಸ್ರೇಲ್ ಎಲ್ಲಾ ನೆರವು ಟ್ರಕ್‌ಗಳನ್ನು ಗಾಝಾದ ಒಳಗೆ ಬಿಡಬೇಕು ಎಂದು ಪ್ಯಾಲೆಸ್ತೀನಿಯರು ನಿರೀಕ್ಷಿಸುತ್ತಿದ್ದಾರೆ. ಆದರೆ, ಒತ್ತೆಯಾಳುಗಳ ಎಲ್ಲಾ ಮೃತದೇಹಗಳನ್ನು ಹಸ್ತಾಂತರಿಸಿದ ಬಳಿಕ ಇಸ್ರೇಲ್ ಬದ್ದತೆ ಬದಲಾಯಿಸುವ ಆತಂಕವಿದೆ.

ಹಮಾಸ್‌ಗೆ ಎಚ್ಚರಿಕೆ ಕೊಟ್ಟ ಟ್ರಂಪ್ 

ಶಸ್ತ್ರಾಸ್ತ್ರ ತ್ಯಜಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಮಾಸ್ ಕರೆ ಕೊಟ್ಟಿದ್ದಾರೆ. ನೀವು ತ್ಯಜಿಸದಿದ್ದರೆ, ನಾನು ತ್ಯಜಿಸುವಂತೆ ಮಾಡುತ್ತೇವೆ, ಅದೂ ಕೂಡ ತ್ವರಿತವಾಗಿ, ಬಹುಶಃ ಹಿಂಸಾತ್ಮಕವಾಗಿ ಎಂದು ಟ್ರಂಪ್ ಎಚ್ಚರಿಸಿದ್ದಾರೆ.

9 ಜನರನ್ನು ಹತ್ಯೆಗೈದ ಇಸ್ರೇಲ್ 

ಕದನ ವಿರಾಮ ಸಂಪೂರ್ಣ ಜಾರಿಯಾಗಿ ಒತ್ತೆಯಾಳುಗಳು, ಬಂಧಿತರ ಹಸ್ತಾಂತರ ಬಹುತೇಕ ಪೂರ್ಣಗೊಳ್ಳುತ್ತಿದ್ದರೂ, ಇಸ್ರೇಲ್ ಮಂಗಳವಾರ 9 ಪ್ಯಾಲೆಸ್ತೀನಿಯರನ್ನು ಹತ್ಯೆ ಮಾಡಿದೆ ಎಂದು ವರದಿಗಳು ಹೇಳಿವೆ. ಹಾಗಾಗಿ, ಇಸ್ರೇಲ್ ಮತ್ತೆ ಕದನ ವಿರಾಮ ಮುರಿದಿದೆ ಎನ್ನಲಾಗಿದೆ. ಹಮಾಸ್ ಒತ್ತೆಯಾಳುಗಳ ಮೃತದೇಹಗಳನ್ನು ಸಂಪೂರ್ಣವಾಗಿ ಹಸ್ತಾಂತರಿಸಿದ ಬಳಿಕ ಇಸ್ರೇಲ್ ಕದನ ವಿರಾಮ ಒಪ್ಪಂದಕ್ಕೆ ಬದ್ದವಾಗಿ ಇರುತ್ತದೆಯೇ? ಎಂಬ ಪ್ರಶ್ನೆ ಈಗ ಮೂಡಿದೆ.

ಗಾಝಾ ಕದನ ವಿರಾಮ: ಚಿವುಟಿ ತೊಟ್ಟಿಲು ತೂಗಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...