Homeಅಂತರಾಷ್ಟ್ರೀಯಗಾಝಾ ಕದನ ವಿರಾಮ ಜಾರಿಯಾದರೂ ಆಕ್ರಮಣ ಮುಂದುವರಿಸಿದ ಇಸ್ರೇಲ್ : ಪ್ಯಾಲೆಸ್ತೀನಿಯರ ಹತ್ಯೆ, ಬಂಧನ

ಗಾಝಾ ಕದನ ವಿರಾಮ ಜಾರಿಯಾದರೂ ಆಕ್ರಮಣ ಮುಂದುವರಿಸಿದ ಇಸ್ರೇಲ್ : ಪ್ಯಾಲೆಸ್ತೀನಿಯರ ಹತ್ಯೆ, ಬಂಧನ

- Advertisement -
- Advertisement -

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿದೆ ಎಂದು ಇಡೀ ಜಗತ್ತು ಮಾತನಾಡಿಕೊಳ್ಳುತ್ತಿದೆ. ತಾನೇ ಬಾಂಬ್ ಕೊಟ್ಟು ಕಂದಮ್ಮಗಳ ಸಾವಿಗೆ ಕಾರಣರಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈಗ ಯುದ್ಧ ನಿಲ್ಲಿಸಿದ ಶಾಂತಿಯ ರಾಯಭಾರಿಯಾಗಿ ಹೊರ ಹೊಮ್ಮಿದ್ದಾರೆ. ಮುಂದೆ ನಿಂತು ಕಂದಮ್ಮಗಳ ರಕ್ತ ಹರಿಸಿದ ಇಸ್ರೇಲ್ ಅಧ್ಯಕ್ಷ ನೆತನ್ಯಾಹು ನಿರಪರಾಧಿ ಎಂಬಂತೆ ಜಾಗತಿಕ ನಾಯಕರು ಕೈ ಕುಲುಕುತ್ತಿದ್ದಾರೆ.

ಈ ನಡುವೆ ಕದನ ವಿರಾಮದಿಂದ ಪ್ಯಾಲೆಸ್ತೀನಿಯರಿಗೆ ಕನಿಷ್ಠ ಬದುಕುವ ಅವಕಾಶ ಸಿಕ್ಕಿತಾ? ಎಂದು ನೋಡಿದರೆ, ಇಲ್ಲ ಎನ್ನುತ್ತವೆ ವರದಿಗಳು.

ಆಕ್ರಮಿತ ಜೆರುಸಲೆಮ್‌ನ ಉತ್ತರದಲ್ಲಿ ಓರ್ವ ಪ್ಯಾಲೆಸ್ತೀನಿಯ ಹತ್ಯೆ 

ಇತ್ತೀಚಿನ ವರದಿಗಳ ಪ್ರಕಾರ, ಆಕ್ರಮಿತ ಜೆರುಸಲೆಮ್‌ನ ಉತ್ತರಕ್ಕೆ ಇರುವ ಅರ್ರಾಮ್ ಪಟ್ಟಣದಲ್ಲಿ ಇಸ್ರೇಲಿ ಪಡೆಗಳು ನಡೆಸಿದ ದಾಳಿಯಲ್ಲಿ ಒಬ್ಬರು ಪ್ಯಾಲೆಸ್ತೀನಿ ವ್ಯಕ್ತಿ ಸಾವನ್ನಪ್ಪಿದ್ದಾರೆ. 57 ವರ್ಷದ ವ್ಯಕ್ತಿಯನ್ನು ಇಸ್ರೇಲಿ ಸೈನಿಕರು ಹೊಡೆದು ಕೊಂದಿದ್ದಾರೆ ಎಂದು ಭದ್ರತಾ ಮೂಲಗಳನ್ನು ಉಲ್ಲೇಖಿಸಿ ಪ್ಯಾಲೆಸ್ತೀನಿ ಸುದ್ದಿ ಸಂಸ್ಥೆ ವಫಾ ವರದಿ ಮಾಡಿದೆ.

ನಮ್ಮ ಸಿಬ್ಬಂದಿ ಮೃತ ವ್ಯಕ್ತಿಯ ದೇಹವನ್ನು ಕಲಾಂಡಿಯಾ ಚೆಕ್‌ಪಾಯಿಂಟ್‌ನಲ್ಲಿ ಸ್ವೀಕರಿಸಿ ಪ್ಯಾಲೆಸ್ತೀನ್ ವೈದ್ಯಕೀಯ ಸಂಕೀರ್ಣಕ್ಕೆ ಸಾಗಿಸಿದ್ದಾರೆ ಪ್ಯಾಲೆಸ್ತೀನ್ ರೆಡ್ ಕ್ರೆಸೆಂಟ್ ಖಚಿತಪಡಿಸಿದೆ.

ಇಸ್ರೇಲಿ ಪಡೆಗಳು ಇಂದು (ಅ.15) ಬೆಳಿಗ್ಗೆಯಿಂದ ಆಕ್ರಮಿತ ಪಶ್ಚಿಮ ದಂಡೆಯ ವಿವಿಧ ಪ್ರದೇಶಗಳ ಮೇಲೆ ಸರಣಿ ದಾಳಿ ಮತ್ತು ಅತಿಕ್ರಮಣಗಳನ್ನು ನಡೆಸಿವೆ. ಸೈನಿಕರು ಬಿಡುಗಡೆಯಾದ ಕೈದಿಗಳ ಮನೆಗಳ ಮೇಲೂ ದಾಳಿ ನಡೆಸಿದ್ದಾರೆ ಮತ್ತು ಇಸ್ರೇಲಿ ಜೈಲುಗಳಿಂದ ಬಿಡುಗಡೆಯಾದ ಕೈದಿಗಳನ್ನು ಬೆಂಬಲಿಸಿ ಯಾವುದೇ ಸಂಭ್ರಮಾಚರಣೆ ನಡೆಸದಂತೆ ಅವರ ಕುಟುಂಬಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಗಳು ಹೇಳಿವೆ.

ಬೆತ್ಲಹೆಮ್ ಗವರ್ನರೇಟ್‌ನಲ್ಲಿ ನಾಲ್ವರು ಬಂಧಿಸಿದ ಇಸ್ರೇಲಿ ಪಡೆಗಳು

ಬೆತ್ಲಹೆಮ್ ಗವರ್ನರೇಟ್‌ನಲ್ಲಿ ಪ್ಯಾಲೆಸ್ತೀನಿಯರ ಮನೆಗಳ ಮೇಲೆ ದಾಳಿ ನಡೆಸಿದ ಇಸ್ರೇಲಿ ಪಡೆಗಳು ಶೋಧ ಕಾರ್ಯ ಕೈಗೊಂಡಿವೆ. ಕನಿಷ್ಠ ನಾಲ್ವರನ್ನು ಬಂಧಿಸಿವೆ ಎಂದು ಭದ್ರತಾ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ವಫಾ ವರದಿ ಮಾಡಿದೆ.

ಜಬಲ್ ಅಲ್-ಮವಾಲೆಹ್ ಪ್ರದೇಶದಿಂದ ಕರೆದೊಯ್ಯಲ್ಪಟ್ಟ ಮುಸ್ತಫಾ ಮೂಸಾ ನವವ್ರಾ, ಅಲ್-ಕರ್ಕಫಾದ ಮುಹಮ್ಮದ್ ರಈದ್ ಜವಾಹರಾ, ಕ್ಯಾರಿಟಾಸ್ ಪ್ರದೇಶದ ರಈದ್ ಅಬ್ದುಲ್ ಕರೀಮ್ ಅಲ್-ಮದ್ಬೌಹ್ ಮತ್ತು ಬೆತ್ಲೆಹೆಮ್ ನಗರದ ಪೂರ್ವದಲ್ಲಿರುವ ಹಿಂಡಾಜಾದ ಝಕಾರಿಯಾ ಜಮಾಲ್ ಅವಿದಾ ಬಂಧಿತರು ಎಂದು ತಿಳಿದು ಬಂದಿದೆ.

ಗವರ್ನರೇಟ್‌ನ ವಿವಿಧ ಪ್ರದೇಶಗಳಲ್ಲಿ ಅನೇಕ ಮನೆಗಳ ಮೇಲೆ ಇಸ್ರೇಲಿ ಪಡೆಗಳು ದಾಳಿ ನಡೆಸಿವೆ. ಆದರೆ, ನಾಲ್ವರು ಹೊರತು ಇತರ ಯಾವುದೇ ಬಂಧನಗಳು ವರದಿಯಾಗಿಲ್ಲ ಎಂದು ವರದಿಗಳು ಹೇಳಿವೆ.

ಪಶ್ಚಿಮ ದಂಡೆಯ ಅಲ್-ಮುಗಯೀರ್ ಗ್ರಾಮದ ಪ್ರವೇಶದ್ವಾರ ಮುಚ್ಚಿದ ಇಸ್ರೇಲಿ ಸೈನಿಕರು

ಇಸ್ರೇಲಿ ಸೈನಿಕರು ಆಕ್ರಮಿತ ಪಶ್ಚಿಮ ದಂಡೆಯ ಅಲ್-ಮುಗಯೀರ್ ಗ್ರಾಮದ ಪಶ್ಚಿಮ ದ್ವಾರವನ್ನು ಮುಚ್ಚಿ ಪ್ಯಾಲೆಸ್ತೀನಿರು ಗ್ರಾಮ ಪ್ರವೇಶಿಸದಂತೆ ಮತ್ತು ಹೊರ ಹೋಗದಂತೆ ತಡೆಯುತ್ತಿದ್ದಾರೆ ಎಂದು ಅಲ್-ಮುಘಯ್ಯಿರ್ ಗ್ರಾಮ ಮಂಡಳಿಯ ಮುಖ್ಯಸ್ಥ ಅಮೀನ್ ಅಬು ಅಲಿಯಾ ಅವರನ್ನು ಉಲ್ಲೇಖಿಸಿ ವಫಾ ವರದಿ ಮಾಡಿದೆ.

ಅಕ್ಟೋಬರ್ 7, 2023ರಂದು ಗಾಝಾದಲ್ಲಿ ಆಕ್ರಮಣ ಪ್ರಾರಂಭವಾದಾಗಿನಿಂದ ಇಸ್ರೇಲಿ ಪಡೆಗಳು ಗ್ರಾಮದ ಪೂರ್ವ ದ್ವಾರವನ್ನು ಮುಚ್ಚಿತ್ತು. ಹಾಗಾಗಿ, ಪಶ್ಚಿಮ ದ್ವಾರ ಗ್ರಾಮದ ಏಕೈಕ ಪ್ರವೇಶ ಮಾರ್ಗವಾಗಿತ್ತು.

ಇಸ್ರೇಲಿ ಸೈನಿಕರು ಪ್ರವೇಶದ್ವಾರವನ್ನು ಮುಚ್ಚುತ್ತಿರುವ ದೃಶ್ಯಗಳನ್ನು ಸುದ್ದಿ ಸಂಸ್ಥೆ ಅಲ್ ಜಝೀರಾ ಪ್ರಕಟಿಸಿದೆ.

ಒತ್ತೆಯಾಳುಗಳ ಮೃತದೇಹ ಹಸ್ತಾಂತರಿಸಿದ ಹಮಾಸ್ 

ಅಲ್‌-ಜಝೀರಾ ವರದಿಯ ಪ್ರಕಾರ, ಬುಧವಾರ ಹಮಾಸ್ ನಾಲ್ವರು ಇಸ್ರೇಲಿ ಒತ್ತೆಯಾಳುಗಳ ಮೃತದೇಹವನ್ನು ಹಸ್ತಾಂತರಿಸಿದೆ. ಈ ಮೂಲಕ ಕದನ ವಿರಾಮದ ಬಳಿಕ ಹಸ್ತಾಂತರಿಸಿದ ಮೃತದೇಹಗಳ ಸಂಖ್ಯೆ 8ಕ್ಕೆ ಏರಿದೆ. ಇನ್ನೂ 20 ಒತ್ತೆಯಾಳುಗಳ ಮೃತದೇಹ ಹಮಾಸ್ ಬಳಿ ಇವೆ.

ಒಪ್ಪಂದ ಮುರಿದ ಇಸ್ರೇಲ್

ವರದಿಗಳ ಪ್ರಕಾರ, ಇಸ್ರೇಲ್ ಒಪ್ಪಿಕೊಂಡ ಸಂಖ್ಯೆಯ ಅರ್ಧದಷ್ಟು ನೆರವು ಟ್ರಕ್‌ಗಳನ್ನು ಗಾಝಾಕ್ಕೆ ಅನುಮತಿಸುವುದಾಗಿ ಹೇಳುತ್ತಿದೆ. ಒತ್ತೆಯಾಳುಗಳ ಮೃತದೇಹ ಹಸ್ತಾಂತರಿಸುವಲ್ಲಿ ವಿಳಂಬವನ್ನು ಉಲ್ಲೇಖಿಸಿ ರಫಾ ಕ್ರಾಸಿಂಗ್ ತೆರೆಯುವುದನ್ನು ತಡ ಮಾಡಿದೆ.

ಕದನ ವಿರಾಮ ಒಪ್ಪಂದದಲ್ಲಿ ಹೇಳಿದಷ್ಟು ನೆರವು ಟ್ರಕ್‌ಗಳನ್ನು ಮೊದಲ ದಿನ ಇಸ್ರೇಲ್‌ ಗಾಝದೊಳಗೆ ಬಿಟ್ಟಿಲ್ಲ. ವಿಶ್ವ ಆಹಾರ ಕಾರ್ಯಕ್ರಮದ ಮೂಲಕ 137 ನೆರವು ಟ್ರಕ್‌ಗಳು ಗಾಝಾ ಪಟ್ಟಿ ತಲುಪಿವೆ. ಆ ಟ್ರಕ್‌ಗಳಲ್ಲಿ ಹೆಚ್ಚಿನವು ಹಿಟ್ಟು ಮತ್ತು ಅತ್ಯಂತ ಅಗತ್ಯವಾದ ಸಾಮಗ್ರಿಗಳಿಂದ ತುಂಬಿದ್ದವು. ಇದರಿಂದ ಕನಿಷ್ಠ ಮೂರು ತಿಂಗಳ ಕಾಲ ಪ್ಯಾಲೆಸ್ತೀನಿಯರು ಜೀವಿಸಬಹುದು ಎಂದು ವರದಿಗಳು ಹೇಳಿವೆ.

ಪ್ರಸ್ತುತ, ಗಾಝಾದ ನೆಲದ ಮೇಲಿನ ಪರಿಸ್ಥಿತಿ ಶಾಂತವಾಗಿದೆ. ಒಪ್ಪಂದಂತೆ ಇಸ್ರೇಲ್ ಎಲ್ಲಾ ನೆರವು ಟ್ರಕ್‌ಗಳನ್ನು ಗಾಝಾದ ಒಳಗೆ ಬಿಡಬೇಕು ಎಂದು ಪ್ಯಾಲೆಸ್ತೀನಿಯರು ನಿರೀಕ್ಷಿಸುತ್ತಿದ್ದಾರೆ. ಆದರೆ, ಒತ್ತೆಯಾಳುಗಳ ಎಲ್ಲಾ ಮೃತದೇಹಗಳನ್ನು ಹಸ್ತಾಂತರಿಸಿದ ಬಳಿಕ ಇಸ್ರೇಲ್ ಬದ್ದತೆ ಬದಲಾಯಿಸುವ ಆತಂಕವಿದೆ.

ಹಮಾಸ್‌ಗೆ ಎಚ್ಚರಿಕೆ ಕೊಟ್ಟ ಟ್ರಂಪ್ 

ಶಸ್ತ್ರಾಸ್ತ್ರ ತ್ಯಜಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಮಾಸ್ ಕರೆ ಕೊಟ್ಟಿದ್ದಾರೆ. ನೀವು ತ್ಯಜಿಸದಿದ್ದರೆ, ನಾನು ತ್ಯಜಿಸುವಂತೆ ಮಾಡುತ್ತೇವೆ, ಅದೂ ಕೂಡ ತ್ವರಿತವಾಗಿ, ಬಹುಶಃ ಹಿಂಸಾತ್ಮಕವಾಗಿ ಎಂದು ಟ್ರಂಪ್ ಎಚ್ಚರಿಸಿದ್ದಾರೆ.

9 ಜನರನ್ನು ಹತ್ಯೆಗೈದ ಇಸ್ರೇಲ್ 

ಕದನ ವಿರಾಮ ಸಂಪೂರ್ಣ ಜಾರಿಯಾಗಿ ಒತ್ತೆಯಾಳುಗಳು, ಬಂಧಿತರ ಹಸ್ತಾಂತರ ಬಹುತೇಕ ಪೂರ್ಣಗೊಳ್ಳುತ್ತಿದ್ದರೂ, ಇಸ್ರೇಲ್ ಮಂಗಳವಾರ 9 ಪ್ಯಾಲೆಸ್ತೀನಿಯರನ್ನು ಹತ್ಯೆ ಮಾಡಿದೆ ಎಂದು ವರದಿಗಳು ಹೇಳಿವೆ. ಹಾಗಾಗಿ, ಇಸ್ರೇಲ್ ಮತ್ತೆ ಕದನ ವಿರಾಮ ಮುರಿದಿದೆ ಎನ್ನಲಾಗಿದೆ. ಹಮಾಸ್ ಒತ್ತೆಯಾಳುಗಳ ಮೃತದೇಹಗಳನ್ನು ಸಂಪೂರ್ಣವಾಗಿ ಹಸ್ತಾಂತರಿಸಿದ ಬಳಿಕ ಇಸ್ರೇಲ್ ಕದನ ವಿರಾಮ ಒಪ್ಪಂದಕ್ಕೆ ಬದ್ದವಾಗಿ ಇರುತ್ತದೆಯೇ? ಎಂಬ ಪ್ರಶ್ನೆ ಈಗ ಮೂಡಿದೆ.

ಗಾಝಾ ಕದನ ವಿರಾಮ: ಚಿವುಟಿ ತೊಟ್ಟಿಲು ತೂಗಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...