Homeಅಂತರಾಷ್ಟ್ರೀಯಗಾಝಾ ಕದನ ವಿರಾಮ ಜಾರಿಯಾದರೂ ಆಕ್ರಮಣ ಮುಂದುವರಿಸಿದ ಇಸ್ರೇಲ್ : ಪ್ಯಾಲೆಸ್ತೀನಿಯರ ಹತ್ಯೆ, ಬಂಧನ

ಗಾಝಾ ಕದನ ವಿರಾಮ ಜಾರಿಯಾದರೂ ಆಕ್ರಮಣ ಮುಂದುವರಿಸಿದ ಇಸ್ರೇಲ್ : ಪ್ಯಾಲೆಸ್ತೀನಿಯರ ಹತ್ಯೆ, ಬಂಧನ

- Advertisement -
- Advertisement -

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿದೆ ಎಂದು ಇಡೀ ಜಗತ್ತು ಮಾತನಾಡಿಕೊಳ್ಳುತ್ತಿದೆ. ತಾನೇ ಬಾಂಬ್ ಕೊಟ್ಟು ಕಂದಮ್ಮಗಳ ಸಾವಿಗೆ ಕಾರಣರಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈಗ ಯುದ್ಧ ನಿಲ್ಲಿಸಿದ ಶಾಂತಿಯ ರಾಯಭಾರಿಯಾಗಿ ಹೊರ ಹೊಮ್ಮಿದ್ದಾರೆ. ಮುಂದೆ ನಿಂತು ಕಂದಮ್ಮಗಳ ರಕ್ತ ಹರಿಸಿದ ಇಸ್ರೇಲ್ ಅಧ್ಯಕ್ಷ ನೆತನ್ಯಾಹು ನಿರಪರಾಧಿ ಎಂಬಂತೆ ಜಾಗತಿಕ ನಾಯಕರು ಕೈ ಕುಲುಕುತ್ತಿದ್ದಾರೆ.

ಈ ನಡುವೆ ಕದನ ವಿರಾಮದಿಂದ ಪ್ಯಾಲೆಸ್ತೀನಿಯರಿಗೆ ಕನಿಷ್ಠ ಬದುಕುವ ಅವಕಾಶ ಸಿಕ್ಕಿತಾ? ಎಂದು ನೋಡಿದರೆ, ಇಲ್ಲ ಎನ್ನುತ್ತವೆ ವರದಿಗಳು.

ಆಕ್ರಮಿತ ಜೆರುಸಲೆಮ್‌ನ ಉತ್ತರದಲ್ಲಿ ಓರ್ವ ಪ್ಯಾಲೆಸ್ತೀನಿಯ ಹತ್ಯೆ 

ಇತ್ತೀಚಿನ ವರದಿಗಳ ಪ್ರಕಾರ, ಆಕ್ರಮಿತ ಜೆರುಸಲೆಮ್‌ನ ಉತ್ತರಕ್ಕೆ ಇರುವ ಅರ್ರಾಮ್ ಪಟ್ಟಣದಲ್ಲಿ ಇಸ್ರೇಲಿ ಪಡೆಗಳು ನಡೆಸಿದ ದಾಳಿಯಲ್ಲಿ ಒಬ್ಬರು ಪ್ಯಾಲೆಸ್ತೀನಿ ವ್ಯಕ್ತಿ ಸಾವನ್ನಪ್ಪಿದ್ದಾರೆ. 57 ವರ್ಷದ ವ್ಯಕ್ತಿಯನ್ನು ಇಸ್ರೇಲಿ ಸೈನಿಕರು ಹೊಡೆದು ಕೊಂದಿದ್ದಾರೆ ಎಂದು ಭದ್ರತಾ ಮೂಲಗಳನ್ನು ಉಲ್ಲೇಖಿಸಿ ಪ್ಯಾಲೆಸ್ತೀನಿ ಸುದ್ದಿ ಸಂಸ್ಥೆ ವಫಾ ವರದಿ ಮಾಡಿದೆ.

ನಮ್ಮ ಸಿಬ್ಬಂದಿ ಮೃತ ವ್ಯಕ್ತಿಯ ದೇಹವನ್ನು ಕಲಾಂಡಿಯಾ ಚೆಕ್‌ಪಾಯಿಂಟ್‌ನಲ್ಲಿ ಸ್ವೀಕರಿಸಿ ಪ್ಯಾಲೆಸ್ತೀನ್ ವೈದ್ಯಕೀಯ ಸಂಕೀರ್ಣಕ್ಕೆ ಸಾಗಿಸಿದ್ದಾರೆ ಪ್ಯಾಲೆಸ್ತೀನ್ ರೆಡ್ ಕ್ರೆಸೆಂಟ್ ಖಚಿತಪಡಿಸಿದೆ.

ಇಸ್ರೇಲಿ ಪಡೆಗಳು ಇಂದು (ಅ.15) ಬೆಳಿಗ್ಗೆಯಿಂದ ಆಕ್ರಮಿತ ಪಶ್ಚಿಮ ದಂಡೆಯ ವಿವಿಧ ಪ್ರದೇಶಗಳ ಮೇಲೆ ಸರಣಿ ದಾಳಿ ಮತ್ತು ಅತಿಕ್ರಮಣಗಳನ್ನು ನಡೆಸಿವೆ. ಸೈನಿಕರು ಬಿಡುಗಡೆಯಾದ ಕೈದಿಗಳ ಮನೆಗಳ ಮೇಲೂ ದಾಳಿ ನಡೆಸಿದ್ದಾರೆ ಮತ್ತು ಇಸ್ರೇಲಿ ಜೈಲುಗಳಿಂದ ಬಿಡುಗಡೆಯಾದ ಕೈದಿಗಳನ್ನು ಬೆಂಬಲಿಸಿ ಯಾವುದೇ ಸಂಭ್ರಮಾಚರಣೆ ನಡೆಸದಂತೆ ಅವರ ಕುಟುಂಬಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಗಳು ಹೇಳಿವೆ.

ಬೆತ್ಲಹೆಮ್ ಗವರ್ನರೇಟ್‌ನಲ್ಲಿ ನಾಲ್ವರು ಬಂಧಿಸಿದ ಇಸ್ರೇಲಿ ಪಡೆಗಳು

ಬೆತ್ಲಹೆಮ್ ಗವರ್ನರೇಟ್‌ನಲ್ಲಿ ಪ್ಯಾಲೆಸ್ತೀನಿಯರ ಮನೆಗಳ ಮೇಲೆ ದಾಳಿ ನಡೆಸಿದ ಇಸ್ರೇಲಿ ಪಡೆಗಳು ಶೋಧ ಕಾರ್ಯ ಕೈಗೊಂಡಿವೆ. ಕನಿಷ್ಠ ನಾಲ್ವರನ್ನು ಬಂಧಿಸಿವೆ ಎಂದು ಭದ್ರತಾ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ವಫಾ ವರದಿ ಮಾಡಿದೆ.

ಜಬಲ್ ಅಲ್-ಮವಾಲೆಹ್ ಪ್ರದೇಶದಿಂದ ಕರೆದೊಯ್ಯಲ್ಪಟ್ಟ ಮುಸ್ತಫಾ ಮೂಸಾ ನವವ್ರಾ, ಅಲ್-ಕರ್ಕಫಾದ ಮುಹಮ್ಮದ್ ರಈದ್ ಜವಾಹರಾ, ಕ್ಯಾರಿಟಾಸ್ ಪ್ರದೇಶದ ರಈದ್ ಅಬ್ದುಲ್ ಕರೀಮ್ ಅಲ್-ಮದ್ಬೌಹ್ ಮತ್ತು ಬೆತ್ಲೆಹೆಮ್ ನಗರದ ಪೂರ್ವದಲ್ಲಿರುವ ಹಿಂಡಾಜಾದ ಝಕಾರಿಯಾ ಜಮಾಲ್ ಅವಿದಾ ಬಂಧಿತರು ಎಂದು ತಿಳಿದು ಬಂದಿದೆ.

ಗವರ್ನರೇಟ್‌ನ ವಿವಿಧ ಪ್ರದೇಶಗಳಲ್ಲಿ ಅನೇಕ ಮನೆಗಳ ಮೇಲೆ ಇಸ್ರೇಲಿ ಪಡೆಗಳು ದಾಳಿ ನಡೆಸಿವೆ. ಆದರೆ, ನಾಲ್ವರು ಹೊರತು ಇತರ ಯಾವುದೇ ಬಂಧನಗಳು ವರದಿಯಾಗಿಲ್ಲ ಎಂದು ವರದಿಗಳು ಹೇಳಿವೆ.

ಪಶ್ಚಿಮ ದಂಡೆಯ ಅಲ್-ಮುಗಯೀರ್ ಗ್ರಾಮದ ಪ್ರವೇಶದ್ವಾರ ಮುಚ್ಚಿದ ಇಸ್ರೇಲಿ ಸೈನಿಕರು

ಇಸ್ರೇಲಿ ಸೈನಿಕರು ಆಕ್ರಮಿತ ಪಶ್ಚಿಮ ದಂಡೆಯ ಅಲ್-ಮುಗಯೀರ್ ಗ್ರಾಮದ ಪಶ್ಚಿಮ ದ್ವಾರವನ್ನು ಮುಚ್ಚಿ ಪ್ಯಾಲೆಸ್ತೀನಿರು ಗ್ರಾಮ ಪ್ರವೇಶಿಸದಂತೆ ಮತ್ತು ಹೊರ ಹೋಗದಂತೆ ತಡೆಯುತ್ತಿದ್ದಾರೆ ಎಂದು ಅಲ್-ಮುಘಯ್ಯಿರ್ ಗ್ರಾಮ ಮಂಡಳಿಯ ಮುಖ್ಯಸ್ಥ ಅಮೀನ್ ಅಬು ಅಲಿಯಾ ಅವರನ್ನು ಉಲ್ಲೇಖಿಸಿ ವಫಾ ವರದಿ ಮಾಡಿದೆ.

ಅಕ್ಟೋಬರ್ 7, 2023ರಂದು ಗಾಝಾದಲ್ಲಿ ಆಕ್ರಮಣ ಪ್ರಾರಂಭವಾದಾಗಿನಿಂದ ಇಸ್ರೇಲಿ ಪಡೆಗಳು ಗ್ರಾಮದ ಪೂರ್ವ ದ್ವಾರವನ್ನು ಮುಚ್ಚಿತ್ತು. ಹಾಗಾಗಿ, ಪಶ್ಚಿಮ ದ್ವಾರ ಗ್ರಾಮದ ಏಕೈಕ ಪ್ರವೇಶ ಮಾರ್ಗವಾಗಿತ್ತು.

ಇಸ್ರೇಲಿ ಸೈನಿಕರು ಪ್ರವೇಶದ್ವಾರವನ್ನು ಮುಚ್ಚುತ್ತಿರುವ ದೃಶ್ಯಗಳನ್ನು ಸುದ್ದಿ ಸಂಸ್ಥೆ ಅಲ್ ಜಝೀರಾ ಪ್ರಕಟಿಸಿದೆ.

ಒತ್ತೆಯಾಳುಗಳ ಮೃತದೇಹ ಹಸ್ತಾಂತರಿಸಿದ ಹಮಾಸ್ 

ಅಲ್‌-ಜಝೀರಾ ವರದಿಯ ಪ್ರಕಾರ, ಬುಧವಾರ ಹಮಾಸ್ ನಾಲ್ವರು ಇಸ್ರೇಲಿ ಒತ್ತೆಯಾಳುಗಳ ಮೃತದೇಹವನ್ನು ಹಸ್ತಾಂತರಿಸಿದೆ. ಈ ಮೂಲಕ ಕದನ ವಿರಾಮದ ಬಳಿಕ ಹಸ್ತಾಂತರಿಸಿದ ಮೃತದೇಹಗಳ ಸಂಖ್ಯೆ 8ಕ್ಕೆ ಏರಿದೆ. ಇನ್ನೂ 20 ಒತ್ತೆಯಾಳುಗಳ ಮೃತದೇಹ ಹಮಾಸ್ ಬಳಿ ಇವೆ.

ಒಪ್ಪಂದ ಮುರಿದ ಇಸ್ರೇಲ್

ವರದಿಗಳ ಪ್ರಕಾರ, ಇಸ್ರೇಲ್ ಒಪ್ಪಿಕೊಂಡ ಸಂಖ್ಯೆಯ ಅರ್ಧದಷ್ಟು ನೆರವು ಟ್ರಕ್‌ಗಳನ್ನು ಗಾಝಾಕ್ಕೆ ಅನುಮತಿಸುವುದಾಗಿ ಹೇಳುತ್ತಿದೆ. ಒತ್ತೆಯಾಳುಗಳ ಮೃತದೇಹ ಹಸ್ತಾಂತರಿಸುವಲ್ಲಿ ವಿಳಂಬವನ್ನು ಉಲ್ಲೇಖಿಸಿ ರಫಾ ಕ್ರಾಸಿಂಗ್ ತೆರೆಯುವುದನ್ನು ತಡ ಮಾಡಿದೆ.

ಕದನ ವಿರಾಮ ಒಪ್ಪಂದದಲ್ಲಿ ಹೇಳಿದಷ್ಟು ನೆರವು ಟ್ರಕ್‌ಗಳನ್ನು ಮೊದಲ ದಿನ ಇಸ್ರೇಲ್‌ ಗಾಝದೊಳಗೆ ಬಿಟ್ಟಿಲ್ಲ. ವಿಶ್ವ ಆಹಾರ ಕಾರ್ಯಕ್ರಮದ ಮೂಲಕ 137 ನೆರವು ಟ್ರಕ್‌ಗಳು ಗಾಝಾ ಪಟ್ಟಿ ತಲುಪಿವೆ. ಆ ಟ್ರಕ್‌ಗಳಲ್ಲಿ ಹೆಚ್ಚಿನವು ಹಿಟ್ಟು ಮತ್ತು ಅತ್ಯಂತ ಅಗತ್ಯವಾದ ಸಾಮಗ್ರಿಗಳಿಂದ ತುಂಬಿದ್ದವು. ಇದರಿಂದ ಕನಿಷ್ಠ ಮೂರು ತಿಂಗಳ ಕಾಲ ಪ್ಯಾಲೆಸ್ತೀನಿಯರು ಜೀವಿಸಬಹುದು ಎಂದು ವರದಿಗಳು ಹೇಳಿವೆ.

ಪ್ರಸ್ತುತ, ಗಾಝಾದ ನೆಲದ ಮೇಲಿನ ಪರಿಸ್ಥಿತಿ ಶಾಂತವಾಗಿದೆ. ಒಪ್ಪಂದಂತೆ ಇಸ್ರೇಲ್ ಎಲ್ಲಾ ನೆರವು ಟ್ರಕ್‌ಗಳನ್ನು ಗಾಝಾದ ಒಳಗೆ ಬಿಡಬೇಕು ಎಂದು ಪ್ಯಾಲೆಸ್ತೀನಿಯರು ನಿರೀಕ್ಷಿಸುತ್ತಿದ್ದಾರೆ. ಆದರೆ, ಒತ್ತೆಯಾಳುಗಳ ಎಲ್ಲಾ ಮೃತದೇಹಗಳನ್ನು ಹಸ್ತಾಂತರಿಸಿದ ಬಳಿಕ ಇಸ್ರೇಲ್ ಬದ್ದತೆ ಬದಲಾಯಿಸುವ ಆತಂಕವಿದೆ.

ಹಮಾಸ್‌ಗೆ ಎಚ್ಚರಿಕೆ ಕೊಟ್ಟ ಟ್ರಂಪ್ 

ಶಸ್ತ್ರಾಸ್ತ್ರ ತ್ಯಜಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಮಾಸ್ ಕರೆ ಕೊಟ್ಟಿದ್ದಾರೆ. ನೀವು ತ್ಯಜಿಸದಿದ್ದರೆ, ನಾನು ತ್ಯಜಿಸುವಂತೆ ಮಾಡುತ್ತೇವೆ, ಅದೂ ಕೂಡ ತ್ವರಿತವಾಗಿ, ಬಹುಶಃ ಹಿಂಸಾತ್ಮಕವಾಗಿ ಎಂದು ಟ್ರಂಪ್ ಎಚ್ಚರಿಸಿದ್ದಾರೆ.

9 ಜನರನ್ನು ಹತ್ಯೆಗೈದ ಇಸ್ರೇಲ್ 

ಕದನ ವಿರಾಮ ಸಂಪೂರ್ಣ ಜಾರಿಯಾಗಿ ಒತ್ತೆಯಾಳುಗಳು, ಬಂಧಿತರ ಹಸ್ತಾಂತರ ಬಹುತೇಕ ಪೂರ್ಣಗೊಳ್ಳುತ್ತಿದ್ದರೂ, ಇಸ್ರೇಲ್ ಮಂಗಳವಾರ 9 ಪ್ಯಾಲೆಸ್ತೀನಿಯರನ್ನು ಹತ್ಯೆ ಮಾಡಿದೆ ಎಂದು ವರದಿಗಳು ಹೇಳಿವೆ. ಹಾಗಾಗಿ, ಇಸ್ರೇಲ್ ಮತ್ತೆ ಕದನ ವಿರಾಮ ಮುರಿದಿದೆ ಎನ್ನಲಾಗಿದೆ. ಹಮಾಸ್ ಒತ್ತೆಯಾಳುಗಳ ಮೃತದೇಹಗಳನ್ನು ಸಂಪೂರ್ಣವಾಗಿ ಹಸ್ತಾಂತರಿಸಿದ ಬಳಿಕ ಇಸ್ರೇಲ್ ಕದನ ವಿರಾಮ ಒಪ್ಪಂದಕ್ಕೆ ಬದ್ದವಾಗಿ ಇರುತ್ತದೆಯೇ? ಎಂಬ ಪ್ರಶ್ನೆ ಈಗ ಮೂಡಿದೆ.

ಗಾಝಾ ಕದನ ವಿರಾಮ: ಚಿವುಟಿ ತೊಟ್ಟಿಲು ತೂಗಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ’: ಪ್ರಿಯಾಂಕ್ ಖರ್ಗೆ

ಬೆಂಗಳೂರು: ‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ’ ಎಂದು ಆರ್.ಎಸ್.ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಗುಡುಗಿದ್ದಾರೆ.  ರಾಜ್ಯದ ಗಮನ‌ ಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ...

“ಮಾಸ್ಕ್ ಧರಿಸಿದರೂ ಪ್ರಯೋಜನವಿಲ್ಲ”: ದೆಹಲಿ ವಾಯುಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ದೆಹಲಿಯ ವಾಯುಮಾಲಿನ್ಯ 'ಗಂಭೀರ ಮಟ್ಟ' ತಲುಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಮಾಸ್ಕ್‌ ಧರಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ವಕೀಲರು ವರ್ಚುವಲ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರೆ ಸಾಕು ಎಂದು ಹೇಳಿದೆ. ವಿವಿಧ ಪ್ರಕರಣಗಳಲ್ಲಿ...

ಛತ್ತೀಸ್‌ಗಢ| ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿದಂತೆ ಆರು ಜನ ಮಾವೋವಾದಿಗಳ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನವೆಂಬರ್ 11 ರಂದು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಆರು ಮಾವೋವಾದಿಗಳಲ್ಲಿ ಮಾವೋವಾದಿ ನಾಯಕಿ, ಹಿರಿಯ ಕಾರ್ಯಕರ್ತ ಪಾಪಾ ರಾವ್ ಅವರ ಪತ್ನಿ ಊರ್ಮಿಳಾ ಮತ್ತು ಬುಚಣ್ಣ...

ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಲುಧಿಯಾನ ಕಮಿಷನರೇಟ್ ಪೊಲೀಸರು, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೆಂಬಲಿತ ಗ್ರೆನೇಡ್ ದಾಳಿ ಘಟಕದ 10 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಅವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆದಿದ್ದಾರೆ.  ನವೆಂಬರ್...

ಗಾಜಾದಲ್ಲಿ ಮುಂದುವರೆದ ಪ್ಯಾಲೆಸ್ತೀನಿಯನ್ ಮಕ್ಕಳ ಕಾಣೆ ಪ್ರಕರಣ: ಮಕ್ಕಳ ಹಕ್ಕುಗಳ ಗುಂಪು

ಬುಧವಾರ ಪ್ಯಾಲೆಸ್ತೀನಿಯನ್ ಹಕ್ಕುಗಳ ಗುಂಪಿನ ವರದಿಯ ಪ್ರಕಾರ, ಇತ್ತೀಚಿನ ತಿಂಗಳುಗಳಲ್ಲಿ ಗಾಜಾದಿಂದ ಕನಿಷ್ಠ ಆರು ಮಕ್ಕಳು ಕಣ್ಮರೆಯಾಗಿದ್ದಾರೆ ಎಂದು 'ಮಕ್ತೂಬ್‌ ಮೀಡಿಯಾ' ವರದಿ ಮಾಡಿದೆ. ಕಾಣೆಯಾದ ಮಕ್ಕಳ ಕುಟುಂಬಗಳು ಈ ಪ್ರದೇಶದಲ್ಲಿನ ತನ್ನ ಮಿಲಿಟರಿ...

ರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ ಅರೆಸ್ಟ್

ವಾಣಿಜ್ಯ ಮೊಕದ್ದಮೆಯೊಂದರಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಜಗಾಂವ್ ಸಿವಿಲ್ ಮತ್ತು ಸೆಷನ್ಸ್...

ಅಲಿಘರ್| ಶಾಲೆಯಲ್ಲಿ ‘ವಂದೇ ಮಾತರಂ’ ಹಾಡುವುದಕ್ಕೆ ಆಕ್ಷೇಪಿಸಿದ ಶಿಕ್ಷಕನ ಅಮಾನತು

ಉತ್ತರ ಪ್ರದೇಶದ ಶಾಹಪುರ್ ಕುತುಬ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 'ವಂದೇ ಮಾತರಂ' ಹಾಡುವುದನ್ನು ಆಕ್ಷೇಪಿಸಿದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ರಾಷ್ಟ್ರಗೀತೆಯ ನಂತರ ವಂದೇಮಾತರಂ...

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ದಿನಾಂಕ ನಿಗದಿಯಾಗಿದೆ. ನವೆಂಬರ್ 16ರ‌ ಭಾನುವಾರ...

ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ನ್ಯಾಯಮೂರ್ತಿ ಎಂ.ಐ ಅರುಣ್ ಅವರು, ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ...

ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

ಗುಜರಾತ್‌ನ ಅಮ್ರೇಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು, ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಗೋ ಕುಟುಂಬಕ್ಕೆ ಸೇರಿದ ಪ್ರಾಣಿಗಳ ಹತ್ಯೆಯನ್ನು ಕಾನೂನು...