Homeಅಂತರಾಷ್ಟ್ರೀಯಗಾಝಾ ಕದನ ವಿರಾಮ ಜಾರಿಯಾದರೂ ಆಕ್ರಮಣ ಮುಂದುವರಿಸಿದ ಇಸ್ರೇಲ್ : ಪ್ಯಾಲೆಸ್ತೀನಿಯರ ಹತ್ಯೆ, ಬಂಧನ

ಗಾಝಾ ಕದನ ವಿರಾಮ ಜಾರಿಯಾದರೂ ಆಕ್ರಮಣ ಮುಂದುವರಿಸಿದ ಇಸ್ರೇಲ್ : ಪ್ಯಾಲೆಸ್ತೀನಿಯರ ಹತ್ಯೆ, ಬಂಧನ

- Advertisement -
- Advertisement -

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿದೆ ಎಂದು ಇಡೀ ಜಗತ್ತು ಮಾತನಾಡಿಕೊಳ್ಳುತ್ತಿದೆ. ತಾನೇ ಬಾಂಬ್ ಕೊಟ್ಟು ಕಂದಮ್ಮಗಳ ಸಾವಿಗೆ ಕಾರಣರಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈಗ ಯುದ್ಧ ನಿಲ್ಲಿಸಿದ ಶಾಂತಿಯ ರಾಯಭಾರಿಯಾಗಿ ಹೊರ ಹೊಮ್ಮಿದ್ದಾರೆ. ಮುಂದೆ ನಿಂತು ಕಂದಮ್ಮಗಳ ರಕ್ತ ಹರಿಸಿದ ಇಸ್ರೇಲ್ ಅಧ್ಯಕ್ಷ ನೆತನ್ಯಾಹು ನಿರಪರಾಧಿ ಎಂಬಂತೆ ಜಾಗತಿಕ ನಾಯಕರು ಕೈ ಕುಲುಕುತ್ತಿದ್ದಾರೆ.

ಈ ನಡುವೆ ಕದನ ವಿರಾಮದಿಂದ ಪ್ಯಾಲೆಸ್ತೀನಿಯರಿಗೆ ಕನಿಷ್ಠ ಬದುಕುವ ಅವಕಾಶ ಸಿಕ್ಕಿತಾ? ಎಂದು ನೋಡಿದರೆ, ಇಲ್ಲ ಎನ್ನುತ್ತವೆ ವರದಿಗಳು.

ಆಕ್ರಮಿತ ಜೆರುಸಲೆಮ್‌ನ ಉತ್ತರದಲ್ಲಿ ಓರ್ವ ಪ್ಯಾಲೆಸ್ತೀನಿಯ ಹತ್ಯೆ 

ಇತ್ತೀಚಿನ ವರದಿಗಳ ಪ್ರಕಾರ, ಆಕ್ರಮಿತ ಜೆರುಸಲೆಮ್‌ನ ಉತ್ತರಕ್ಕೆ ಇರುವ ಅರ್ರಾಮ್ ಪಟ್ಟಣದಲ್ಲಿ ಇಸ್ರೇಲಿ ಪಡೆಗಳು ನಡೆಸಿದ ದಾಳಿಯಲ್ಲಿ ಒಬ್ಬರು ಪ್ಯಾಲೆಸ್ತೀನಿ ವ್ಯಕ್ತಿ ಸಾವನ್ನಪ್ಪಿದ್ದಾರೆ. 57 ವರ್ಷದ ವ್ಯಕ್ತಿಯನ್ನು ಇಸ್ರೇಲಿ ಸೈನಿಕರು ಹೊಡೆದು ಕೊಂದಿದ್ದಾರೆ ಎಂದು ಭದ್ರತಾ ಮೂಲಗಳನ್ನು ಉಲ್ಲೇಖಿಸಿ ಪ್ಯಾಲೆಸ್ತೀನಿ ಸುದ್ದಿ ಸಂಸ್ಥೆ ವಫಾ ವರದಿ ಮಾಡಿದೆ.

ನಮ್ಮ ಸಿಬ್ಬಂದಿ ಮೃತ ವ್ಯಕ್ತಿಯ ದೇಹವನ್ನು ಕಲಾಂಡಿಯಾ ಚೆಕ್‌ಪಾಯಿಂಟ್‌ನಲ್ಲಿ ಸ್ವೀಕರಿಸಿ ಪ್ಯಾಲೆಸ್ತೀನ್ ವೈದ್ಯಕೀಯ ಸಂಕೀರ್ಣಕ್ಕೆ ಸಾಗಿಸಿದ್ದಾರೆ ಪ್ಯಾಲೆಸ್ತೀನ್ ರೆಡ್ ಕ್ರೆಸೆಂಟ್ ಖಚಿತಪಡಿಸಿದೆ.

ಇಸ್ರೇಲಿ ಪಡೆಗಳು ಇಂದು (ಅ.15) ಬೆಳಿಗ್ಗೆಯಿಂದ ಆಕ್ರಮಿತ ಪಶ್ಚಿಮ ದಂಡೆಯ ವಿವಿಧ ಪ್ರದೇಶಗಳ ಮೇಲೆ ಸರಣಿ ದಾಳಿ ಮತ್ತು ಅತಿಕ್ರಮಣಗಳನ್ನು ನಡೆಸಿವೆ. ಸೈನಿಕರು ಬಿಡುಗಡೆಯಾದ ಕೈದಿಗಳ ಮನೆಗಳ ಮೇಲೂ ದಾಳಿ ನಡೆಸಿದ್ದಾರೆ ಮತ್ತು ಇಸ್ರೇಲಿ ಜೈಲುಗಳಿಂದ ಬಿಡುಗಡೆಯಾದ ಕೈದಿಗಳನ್ನು ಬೆಂಬಲಿಸಿ ಯಾವುದೇ ಸಂಭ್ರಮಾಚರಣೆ ನಡೆಸದಂತೆ ಅವರ ಕುಟುಂಬಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಗಳು ಹೇಳಿವೆ.

ಬೆತ್ಲಹೆಮ್ ಗವರ್ನರೇಟ್‌ನಲ್ಲಿ ನಾಲ್ವರು ಬಂಧಿಸಿದ ಇಸ್ರೇಲಿ ಪಡೆಗಳು

ಬೆತ್ಲಹೆಮ್ ಗವರ್ನರೇಟ್‌ನಲ್ಲಿ ಪ್ಯಾಲೆಸ್ತೀನಿಯರ ಮನೆಗಳ ಮೇಲೆ ದಾಳಿ ನಡೆಸಿದ ಇಸ್ರೇಲಿ ಪಡೆಗಳು ಶೋಧ ಕಾರ್ಯ ಕೈಗೊಂಡಿವೆ. ಕನಿಷ್ಠ ನಾಲ್ವರನ್ನು ಬಂಧಿಸಿವೆ ಎಂದು ಭದ್ರತಾ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ವಫಾ ವರದಿ ಮಾಡಿದೆ.

ಜಬಲ್ ಅಲ್-ಮವಾಲೆಹ್ ಪ್ರದೇಶದಿಂದ ಕರೆದೊಯ್ಯಲ್ಪಟ್ಟ ಮುಸ್ತಫಾ ಮೂಸಾ ನವವ್ರಾ, ಅಲ್-ಕರ್ಕಫಾದ ಮುಹಮ್ಮದ್ ರಈದ್ ಜವಾಹರಾ, ಕ್ಯಾರಿಟಾಸ್ ಪ್ರದೇಶದ ರಈದ್ ಅಬ್ದುಲ್ ಕರೀಮ್ ಅಲ್-ಮದ್ಬೌಹ್ ಮತ್ತು ಬೆತ್ಲೆಹೆಮ್ ನಗರದ ಪೂರ್ವದಲ್ಲಿರುವ ಹಿಂಡಾಜಾದ ಝಕಾರಿಯಾ ಜಮಾಲ್ ಅವಿದಾ ಬಂಧಿತರು ಎಂದು ತಿಳಿದು ಬಂದಿದೆ.

ಗವರ್ನರೇಟ್‌ನ ವಿವಿಧ ಪ್ರದೇಶಗಳಲ್ಲಿ ಅನೇಕ ಮನೆಗಳ ಮೇಲೆ ಇಸ್ರೇಲಿ ಪಡೆಗಳು ದಾಳಿ ನಡೆಸಿವೆ. ಆದರೆ, ನಾಲ್ವರು ಹೊರತು ಇತರ ಯಾವುದೇ ಬಂಧನಗಳು ವರದಿಯಾಗಿಲ್ಲ ಎಂದು ವರದಿಗಳು ಹೇಳಿವೆ.

ಪಶ್ಚಿಮ ದಂಡೆಯ ಅಲ್-ಮುಗಯೀರ್ ಗ್ರಾಮದ ಪ್ರವೇಶದ್ವಾರ ಮುಚ್ಚಿದ ಇಸ್ರೇಲಿ ಸೈನಿಕರು

ಇಸ್ರೇಲಿ ಸೈನಿಕರು ಆಕ್ರಮಿತ ಪಶ್ಚಿಮ ದಂಡೆಯ ಅಲ್-ಮುಗಯೀರ್ ಗ್ರಾಮದ ಪಶ್ಚಿಮ ದ್ವಾರವನ್ನು ಮುಚ್ಚಿ ಪ್ಯಾಲೆಸ್ತೀನಿರು ಗ್ರಾಮ ಪ್ರವೇಶಿಸದಂತೆ ಮತ್ತು ಹೊರ ಹೋಗದಂತೆ ತಡೆಯುತ್ತಿದ್ದಾರೆ ಎಂದು ಅಲ್-ಮುಘಯ್ಯಿರ್ ಗ್ರಾಮ ಮಂಡಳಿಯ ಮುಖ್ಯಸ್ಥ ಅಮೀನ್ ಅಬು ಅಲಿಯಾ ಅವರನ್ನು ಉಲ್ಲೇಖಿಸಿ ವಫಾ ವರದಿ ಮಾಡಿದೆ.

ಅಕ್ಟೋಬರ್ 7, 2023ರಂದು ಗಾಝಾದಲ್ಲಿ ಆಕ್ರಮಣ ಪ್ರಾರಂಭವಾದಾಗಿನಿಂದ ಇಸ್ರೇಲಿ ಪಡೆಗಳು ಗ್ರಾಮದ ಪೂರ್ವ ದ್ವಾರವನ್ನು ಮುಚ್ಚಿತ್ತು. ಹಾಗಾಗಿ, ಪಶ್ಚಿಮ ದ್ವಾರ ಗ್ರಾಮದ ಏಕೈಕ ಪ್ರವೇಶ ಮಾರ್ಗವಾಗಿತ್ತು.

ಇಸ್ರೇಲಿ ಸೈನಿಕರು ಪ್ರವೇಶದ್ವಾರವನ್ನು ಮುಚ್ಚುತ್ತಿರುವ ದೃಶ್ಯಗಳನ್ನು ಸುದ್ದಿ ಸಂಸ್ಥೆ ಅಲ್ ಜಝೀರಾ ಪ್ರಕಟಿಸಿದೆ.

ಒತ್ತೆಯಾಳುಗಳ ಮೃತದೇಹ ಹಸ್ತಾಂತರಿಸಿದ ಹಮಾಸ್ 

ಅಲ್‌-ಜಝೀರಾ ವರದಿಯ ಪ್ರಕಾರ, ಬುಧವಾರ ಹಮಾಸ್ ನಾಲ್ವರು ಇಸ್ರೇಲಿ ಒತ್ತೆಯಾಳುಗಳ ಮೃತದೇಹವನ್ನು ಹಸ್ತಾಂತರಿಸಿದೆ. ಈ ಮೂಲಕ ಕದನ ವಿರಾಮದ ಬಳಿಕ ಹಸ್ತಾಂತರಿಸಿದ ಮೃತದೇಹಗಳ ಸಂಖ್ಯೆ 8ಕ್ಕೆ ಏರಿದೆ. ಇನ್ನೂ 20 ಒತ್ತೆಯಾಳುಗಳ ಮೃತದೇಹ ಹಮಾಸ್ ಬಳಿ ಇವೆ.

ಒಪ್ಪಂದ ಮುರಿದ ಇಸ್ರೇಲ್

ವರದಿಗಳ ಪ್ರಕಾರ, ಇಸ್ರೇಲ್ ಒಪ್ಪಿಕೊಂಡ ಸಂಖ್ಯೆಯ ಅರ್ಧದಷ್ಟು ನೆರವು ಟ್ರಕ್‌ಗಳನ್ನು ಗಾಝಾಕ್ಕೆ ಅನುಮತಿಸುವುದಾಗಿ ಹೇಳುತ್ತಿದೆ. ಒತ್ತೆಯಾಳುಗಳ ಮೃತದೇಹ ಹಸ್ತಾಂತರಿಸುವಲ್ಲಿ ವಿಳಂಬವನ್ನು ಉಲ್ಲೇಖಿಸಿ ರಫಾ ಕ್ರಾಸಿಂಗ್ ತೆರೆಯುವುದನ್ನು ತಡ ಮಾಡಿದೆ.

ಕದನ ವಿರಾಮ ಒಪ್ಪಂದದಲ್ಲಿ ಹೇಳಿದಷ್ಟು ನೆರವು ಟ್ರಕ್‌ಗಳನ್ನು ಮೊದಲ ದಿನ ಇಸ್ರೇಲ್‌ ಗಾಝದೊಳಗೆ ಬಿಟ್ಟಿಲ್ಲ. ವಿಶ್ವ ಆಹಾರ ಕಾರ್ಯಕ್ರಮದ ಮೂಲಕ 137 ನೆರವು ಟ್ರಕ್‌ಗಳು ಗಾಝಾ ಪಟ್ಟಿ ತಲುಪಿವೆ. ಆ ಟ್ರಕ್‌ಗಳಲ್ಲಿ ಹೆಚ್ಚಿನವು ಹಿಟ್ಟು ಮತ್ತು ಅತ್ಯಂತ ಅಗತ್ಯವಾದ ಸಾಮಗ್ರಿಗಳಿಂದ ತುಂಬಿದ್ದವು. ಇದರಿಂದ ಕನಿಷ್ಠ ಮೂರು ತಿಂಗಳ ಕಾಲ ಪ್ಯಾಲೆಸ್ತೀನಿಯರು ಜೀವಿಸಬಹುದು ಎಂದು ವರದಿಗಳು ಹೇಳಿವೆ.

ಪ್ರಸ್ತುತ, ಗಾಝಾದ ನೆಲದ ಮೇಲಿನ ಪರಿಸ್ಥಿತಿ ಶಾಂತವಾಗಿದೆ. ಒಪ್ಪಂದಂತೆ ಇಸ್ರೇಲ್ ಎಲ್ಲಾ ನೆರವು ಟ್ರಕ್‌ಗಳನ್ನು ಗಾಝಾದ ಒಳಗೆ ಬಿಡಬೇಕು ಎಂದು ಪ್ಯಾಲೆಸ್ತೀನಿಯರು ನಿರೀಕ್ಷಿಸುತ್ತಿದ್ದಾರೆ. ಆದರೆ, ಒತ್ತೆಯಾಳುಗಳ ಎಲ್ಲಾ ಮೃತದೇಹಗಳನ್ನು ಹಸ್ತಾಂತರಿಸಿದ ಬಳಿಕ ಇಸ್ರೇಲ್ ಬದ್ದತೆ ಬದಲಾಯಿಸುವ ಆತಂಕವಿದೆ.

ಹಮಾಸ್‌ಗೆ ಎಚ್ಚರಿಕೆ ಕೊಟ್ಟ ಟ್ರಂಪ್ 

ಶಸ್ತ್ರಾಸ್ತ್ರ ತ್ಯಜಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಮಾಸ್ ಕರೆ ಕೊಟ್ಟಿದ್ದಾರೆ. ನೀವು ತ್ಯಜಿಸದಿದ್ದರೆ, ನಾನು ತ್ಯಜಿಸುವಂತೆ ಮಾಡುತ್ತೇವೆ, ಅದೂ ಕೂಡ ತ್ವರಿತವಾಗಿ, ಬಹುಶಃ ಹಿಂಸಾತ್ಮಕವಾಗಿ ಎಂದು ಟ್ರಂಪ್ ಎಚ್ಚರಿಸಿದ್ದಾರೆ.

9 ಜನರನ್ನು ಹತ್ಯೆಗೈದ ಇಸ್ರೇಲ್ 

ಕದನ ವಿರಾಮ ಸಂಪೂರ್ಣ ಜಾರಿಯಾಗಿ ಒತ್ತೆಯಾಳುಗಳು, ಬಂಧಿತರ ಹಸ್ತಾಂತರ ಬಹುತೇಕ ಪೂರ್ಣಗೊಳ್ಳುತ್ತಿದ್ದರೂ, ಇಸ್ರೇಲ್ ಮಂಗಳವಾರ 9 ಪ್ಯಾಲೆಸ್ತೀನಿಯರನ್ನು ಹತ್ಯೆ ಮಾಡಿದೆ ಎಂದು ವರದಿಗಳು ಹೇಳಿವೆ. ಹಾಗಾಗಿ, ಇಸ್ರೇಲ್ ಮತ್ತೆ ಕದನ ವಿರಾಮ ಮುರಿದಿದೆ ಎನ್ನಲಾಗಿದೆ. ಹಮಾಸ್ ಒತ್ತೆಯಾಳುಗಳ ಮೃತದೇಹಗಳನ್ನು ಸಂಪೂರ್ಣವಾಗಿ ಹಸ್ತಾಂತರಿಸಿದ ಬಳಿಕ ಇಸ್ರೇಲ್ ಕದನ ವಿರಾಮ ಒಪ್ಪಂದಕ್ಕೆ ಬದ್ದವಾಗಿ ಇರುತ್ತದೆಯೇ? ಎಂಬ ಪ್ರಶ್ನೆ ಈಗ ಮೂಡಿದೆ.

ಗಾಝಾ ಕದನ ವಿರಾಮ: ಚಿವುಟಿ ತೊಟ್ಟಿಲು ತೂಗಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...