Homeಮುಖಪುಟಗಾಝಾದಲ್ಲಿ ನರಮೇಧ ಮುಂದುವರೆಸಿದ ಇಸ್ರೇಲ್ : ಆಸ್ಪತ್ರೆ ಮುಚ್ಚಲು ಆದೇಶ

ಗಾಝಾದಲ್ಲಿ ನರಮೇಧ ಮುಂದುವರೆಸಿದ ಇಸ್ರೇಲ್ : ಆಸ್ಪತ್ರೆ ಮುಚ್ಚಲು ಆದೇಶ

- Advertisement -
- Advertisement -

ಗಾಝಾದ ಮೇಲಿನ ಆಕ್ರಮಣವನ್ನು ಇಸ್ರೇಲ್ ಮುಂದುವರೆಸಿದ್ದು, ಭಾನುವಾರ (ಡಿ. 22) ರಾತ್ರಿ ನಿರಾಶ್ರಿತರ ಕ್ಯಾಂಪ್, ಶಾಲೆ ಸೇರಿದಂತೆ ವಿವಿಧ ಜನವಸತಿ ಪ್ರದೇಶಗಳ ಮೇಲೆ ದಾಳಿ ನಡೆಸಿ ಹಲವರನ್ನು ಹತ್ಯೆ ಮಾಡಿದೆ.

ದಕ್ಷಿಣ ಗಾಝಾದ ಸುರಕ್ಷಿತ ಜಾಗ ಎನ್ನಲಾದ ಅಲ್-ಮವಾಸಿಯ ನಿರಾಶ್ರಿತರ ಕ್ಯಾಂಪ್ ಮೇಲೆ ಡ್ರೋನ್ ದಾಳಿ ನಡೆಸಿದ ಇಸ್ರೇಲ್ ಸೇನೆ ಏಳು ಜನರನ್ನು ಹತ್ಯೆ ಮಾಡಿದೆ. ಅದೇ ಪ್ರದೇಶದಲ್ಲಿ ನಾಗರಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಮತ್ತು ಭದ್ರತಾ ಸಿಬ್ಬಂದಿ ಸಂಚರಿಸುತ್ತಿದ್ದ ವಾಹನವೊಂದರ ಮೇಲೆ ಪ್ರತ್ಯೇಕ ದಾಳಿನ ನಡೆಸಿದೆ. ಈ ಮೂಲಕ ಒಟ್ಟು ನಾಲ್ವರನ್ನು ಕೊಂದು ಹಾಕಿದೆ.

ಕೇಂದ್ರ ಗಾಝಾದಲ್ಲಿ ಇಂದು (ಡಿ.23) ನಸುಕಿನಲ್ಲಿ ಶಾಲೆ ಮತ್ತು ಸುರಕ್ಷಿತ ಪ್ರದೇಶ ಎನ್ನಲಾದ ನುಸೈರತ್‌ನ ನಿರಾಶ್ರಿತರ ಕ್ಯಾಂಪ್‌ ಮೇಲೆ ಪ್ರತ್ಯೇಕ ದಾಳಿ ನಡೆಸಿದೆ. ಇದರಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ. ಇದೇ ನುಸೈರತ್‌ ಪ್ರದೇಶಲ್ಲಿ ಇಸ್ರೇಲ್‌ ಸೇನೆ ಇನ್ನೂ ನಾಲ್ವರನ್ನು ಕೊಂದಿದೆ.

ಭಾನುವಾರ ಮುಂಜಾನೆಯಿಂದ ಸೋಮವಾರ ಮುಂಜಾನೆಯವರೆಗೆ 24 ಗಂಟೆಗಳ ಅವಧಿಯಲ್ಲಿ ವಿವಿಧ ದಾಳಿಗಳ ಮೂಲಕ ಇಸ್ರೇಲ್ ಸೇನೆ ಒಟ್ಟು 50 ಅಮಾಯಕರನ್ನು ಹತ್ಯೆ ಮಾಡಿದೆ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ನಿರಂತರ ದಾಳಿಯ ನಡುವೆ ಉತ್ತರ ಗಾಝಾದ ಬೈತ್ ಲಾಹಿಯಾದಲ್ಲಿರುವ ಕಮಲ್ ಅದ್ವಾನ್ ಎಂಬ ಆಸ್ಪತ್ರೆಯನ್ನು ಮುಚ್ಚಲು ಇಸ್ರೇಲ್ ಸೇನೆ ಸೂಚಿಸಿದೆ. ಇದರಿಂದ ಸುಮಾರು 400 ನಾಗರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದು ಈ ಭಾಗದಲ್ಲಿ ಭಾಗಶಃ ಕಾರ್ಯನಿರ್ವಹಿಸುತ್ತಿದ್ದ ಕೊನೆಯ ಆಸ್ಪತ್ರೆಎ ಎಂದು ಕೆಲ ವರದಿಗಳು ಹೇಳಿವೆ.

ಉತ್ತರ ಗಾಝಾದಲ್ಲಿ ಕೆಲ ಆಸ್ಪತ್ರೆಗಳು ಇನ್ನೂ ಕಾರ್ಯಾಚರಿಸುತ್ತಿವೆ. ಅಲ್ಲಿ ಸಾವಿರಾರು ನಾಗರಿಕರು ಸಿಲುಕಿಕೊಂಡಿದ್ದಾರೆ. ಇಸ್ರೇಲ್ ಸೇನೆ ಆಸ್ಪತ್ರೆಗಳಲ್ಲಿರುವ ಜನರಿಗೆ ಕಳೆದ ಮೂರು ತಿಂಗಳಿನಿಂದ ದಿಗ್ಬಂಧನ ವಿಧಿಸಿದೆ.

ಕಮಲ್ ಅದ್ವಾನ್ ಆಸ್ಪತ್ರೆಯ ಮೇಲೆ ಬಾಂಬ್, ಶೆಲ್‌ಗಳಿಂದ ಇಸ್ರೇಲ್ ಸೇನೆ ಭಾನುವಾರ ದಾಳಿ ನಡೆಸಿದೆ. ನಿರ್ದಿಷ್ಟವಾಗಿ ಮಹಿಳೆಯರು, ಹೆರಿಗೆ ಮತ್ತು ನವಜಾತ ಶಿಶುಗಳ ವಾರ್ಡ್‌ಗಳನ್ನು ಗುರಿಯಾಗಿಸಿ ದಾಳಿ ಮಾಡಿದೆ. ಇದರಿಂದ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ.

“ಇಸ್ರೇಲ್ ಸೇನೆ ದೊಡ್ಡ ದೊಡ್ಡ ಯುದ್ದ ಟ್ಯಾಂಕರ್‌ಗಳ ಮೂಲಕ ಆಸ್ಪತ್ರೆಯನ್ನು ನೇರವಾಗಿ ಗುರಿಯಾಗಿಸಿದೆ. ಇದರಿಂದ ಹೆಚ್ಚಿನ ಸಾವು-ನೋವು ಸಂಭವಿಸುವ ಸಾಧ್ಯತೆ ಇದೆ. ಆಸ್ಪತ್ರೆಯನ್ನು ಮುಚ್ಚುವಂತೆ ಆದೇಶಿಸಿದ್ದಾರೆ. ಆದರೆ, ನಮ್ಮಲ್ಲಿ ಬೇಕಾದಷ್ಟು ಆಂಬ್ಯುಲೆನ್ಸ್ ಇಲ್ಲದ ಕಾರಣ ರೋಗಿಗಳನ್ನು ಸ್ಥಳಾಂತರಿಸುವುದು ಅಸಾಧ್ಯ” ಎಂದು ಆಸ್ಪತ್ರೆಯ ಮುಖ್ಯಸ್ಥ ಹುಸ್ಸಾಮ್ ಅಬು ಸಫಿಯಾ ತಿಳಿಸಿದ್ದಾಗಿ ವರದಿಗಳು ಹೇಳಿವೆ.

ಕಮಲ್ ಅದ್ವಾನ್ ಆಸ್ಪತ್ರೆಯ ಮೇಲೆ ದಾಳಿ ನಡೆಸಿ ಜನರನ್ನು ಬಲವಂತಾಗಿ ಹೊರ ಕಳಿಸುವುದು ‘ಜನಾಂಗೀಯ ಹತ್ಯೆಯಾಗಿದೆ. ಇದು ಅಪರಾಧ ಎಂದು ಹಮಾಸ್ ಹೇಳಿದೆ.

ಇದನ್ನೂ ಓದಿ : ಪರ್ಭಾನಿಯಲ್ಲಿ ಪೊಲೀಸರಿಂದ ದಲಿತ ವ್ಯಕ್ತಿ ಹತ್ಯೆ, ಸಿಎಂ ಸುಳ್ಳು ಹೇಳಿದ್ದಾರೆ: ರಾಹುಲ್ ಗಾಂಧಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...