Homeಮುಖಪುಟಗಾಝಾದಲ್ಲಿ ನರಮೇಧ ಮುಂದುವರೆಸಿದ ಇಸ್ರೇಲ್ : ಆಸ್ಪತ್ರೆ ಮುಚ್ಚಲು ಆದೇಶ

ಗಾಝಾದಲ್ಲಿ ನರಮೇಧ ಮುಂದುವರೆಸಿದ ಇಸ್ರೇಲ್ : ಆಸ್ಪತ್ರೆ ಮುಚ್ಚಲು ಆದೇಶ

- Advertisement -
- Advertisement -

ಗಾಝಾದ ಮೇಲಿನ ಆಕ್ರಮಣವನ್ನು ಇಸ್ರೇಲ್ ಮುಂದುವರೆಸಿದ್ದು, ಭಾನುವಾರ (ಡಿ. 22) ರಾತ್ರಿ ನಿರಾಶ್ರಿತರ ಕ್ಯಾಂಪ್, ಶಾಲೆ ಸೇರಿದಂತೆ ವಿವಿಧ ಜನವಸತಿ ಪ್ರದೇಶಗಳ ಮೇಲೆ ದಾಳಿ ನಡೆಸಿ ಹಲವರನ್ನು ಹತ್ಯೆ ಮಾಡಿದೆ.

ದಕ್ಷಿಣ ಗಾಝಾದ ಸುರಕ್ಷಿತ ಜಾಗ ಎನ್ನಲಾದ ಅಲ್-ಮವಾಸಿಯ ನಿರಾಶ್ರಿತರ ಕ್ಯಾಂಪ್ ಮೇಲೆ ಡ್ರೋನ್ ದಾಳಿ ನಡೆಸಿದ ಇಸ್ರೇಲ್ ಸೇನೆ ಏಳು ಜನರನ್ನು ಹತ್ಯೆ ಮಾಡಿದೆ. ಅದೇ ಪ್ರದೇಶದಲ್ಲಿ ನಾಗರಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಮತ್ತು ಭದ್ರತಾ ಸಿಬ್ಬಂದಿ ಸಂಚರಿಸುತ್ತಿದ್ದ ವಾಹನವೊಂದರ ಮೇಲೆ ಪ್ರತ್ಯೇಕ ದಾಳಿನ ನಡೆಸಿದೆ. ಈ ಮೂಲಕ ಒಟ್ಟು ನಾಲ್ವರನ್ನು ಕೊಂದು ಹಾಕಿದೆ.

ಕೇಂದ್ರ ಗಾಝಾದಲ್ಲಿ ಇಂದು (ಡಿ.23) ನಸುಕಿನಲ್ಲಿ ಶಾಲೆ ಮತ್ತು ಸುರಕ್ಷಿತ ಪ್ರದೇಶ ಎನ್ನಲಾದ ನುಸೈರತ್‌ನ ನಿರಾಶ್ರಿತರ ಕ್ಯಾಂಪ್‌ ಮೇಲೆ ಪ್ರತ್ಯೇಕ ದಾಳಿ ನಡೆಸಿದೆ. ಇದರಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ. ಇದೇ ನುಸೈರತ್‌ ಪ್ರದೇಶಲ್ಲಿ ಇಸ್ರೇಲ್‌ ಸೇನೆ ಇನ್ನೂ ನಾಲ್ವರನ್ನು ಕೊಂದಿದೆ.

ಭಾನುವಾರ ಮುಂಜಾನೆಯಿಂದ ಸೋಮವಾರ ಮುಂಜಾನೆಯವರೆಗೆ 24 ಗಂಟೆಗಳ ಅವಧಿಯಲ್ಲಿ ವಿವಿಧ ದಾಳಿಗಳ ಮೂಲಕ ಇಸ್ರೇಲ್ ಸೇನೆ ಒಟ್ಟು 50 ಅಮಾಯಕರನ್ನು ಹತ್ಯೆ ಮಾಡಿದೆ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ನಿರಂತರ ದಾಳಿಯ ನಡುವೆ ಉತ್ತರ ಗಾಝಾದ ಬೈತ್ ಲಾಹಿಯಾದಲ್ಲಿರುವ ಕಮಲ್ ಅದ್ವಾನ್ ಎಂಬ ಆಸ್ಪತ್ರೆಯನ್ನು ಮುಚ್ಚಲು ಇಸ್ರೇಲ್ ಸೇನೆ ಸೂಚಿಸಿದೆ. ಇದರಿಂದ ಸುಮಾರು 400 ನಾಗರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದು ಈ ಭಾಗದಲ್ಲಿ ಭಾಗಶಃ ಕಾರ್ಯನಿರ್ವಹಿಸುತ್ತಿದ್ದ ಕೊನೆಯ ಆಸ್ಪತ್ರೆಎ ಎಂದು ಕೆಲ ವರದಿಗಳು ಹೇಳಿವೆ.

ಉತ್ತರ ಗಾಝಾದಲ್ಲಿ ಕೆಲ ಆಸ್ಪತ್ರೆಗಳು ಇನ್ನೂ ಕಾರ್ಯಾಚರಿಸುತ್ತಿವೆ. ಅಲ್ಲಿ ಸಾವಿರಾರು ನಾಗರಿಕರು ಸಿಲುಕಿಕೊಂಡಿದ್ದಾರೆ. ಇಸ್ರೇಲ್ ಸೇನೆ ಆಸ್ಪತ್ರೆಗಳಲ್ಲಿರುವ ಜನರಿಗೆ ಕಳೆದ ಮೂರು ತಿಂಗಳಿನಿಂದ ದಿಗ್ಬಂಧನ ವಿಧಿಸಿದೆ.

ಕಮಲ್ ಅದ್ವಾನ್ ಆಸ್ಪತ್ರೆಯ ಮೇಲೆ ಬಾಂಬ್, ಶೆಲ್‌ಗಳಿಂದ ಇಸ್ರೇಲ್ ಸೇನೆ ಭಾನುವಾರ ದಾಳಿ ನಡೆಸಿದೆ. ನಿರ್ದಿಷ್ಟವಾಗಿ ಮಹಿಳೆಯರು, ಹೆರಿಗೆ ಮತ್ತು ನವಜಾತ ಶಿಶುಗಳ ವಾರ್ಡ್‌ಗಳನ್ನು ಗುರಿಯಾಗಿಸಿ ದಾಳಿ ಮಾಡಿದೆ. ಇದರಿಂದ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ.

“ಇಸ್ರೇಲ್ ಸೇನೆ ದೊಡ್ಡ ದೊಡ್ಡ ಯುದ್ದ ಟ್ಯಾಂಕರ್‌ಗಳ ಮೂಲಕ ಆಸ್ಪತ್ರೆಯನ್ನು ನೇರವಾಗಿ ಗುರಿಯಾಗಿಸಿದೆ. ಇದರಿಂದ ಹೆಚ್ಚಿನ ಸಾವು-ನೋವು ಸಂಭವಿಸುವ ಸಾಧ್ಯತೆ ಇದೆ. ಆಸ್ಪತ್ರೆಯನ್ನು ಮುಚ್ಚುವಂತೆ ಆದೇಶಿಸಿದ್ದಾರೆ. ಆದರೆ, ನಮ್ಮಲ್ಲಿ ಬೇಕಾದಷ್ಟು ಆಂಬ್ಯುಲೆನ್ಸ್ ಇಲ್ಲದ ಕಾರಣ ರೋಗಿಗಳನ್ನು ಸ್ಥಳಾಂತರಿಸುವುದು ಅಸಾಧ್ಯ” ಎಂದು ಆಸ್ಪತ್ರೆಯ ಮುಖ್ಯಸ್ಥ ಹುಸ್ಸಾಮ್ ಅಬು ಸಫಿಯಾ ತಿಳಿಸಿದ್ದಾಗಿ ವರದಿಗಳು ಹೇಳಿವೆ.

ಕಮಲ್ ಅದ್ವಾನ್ ಆಸ್ಪತ್ರೆಯ ಮೇಲೆ ದಾಳಿ ನಡೆಸಿ ಜನರನ್ನು ಬಲವಂತಾಗಿ ಹೊರ ಕಳಿಸುವುದು ‘ಜನಾಂಗೀಯ ಹತ್ಯೆಯಾಗಿದೆ. ಇದು ಅಪರಾಧ ಎಂದು ಹಮಾಸ್ ಹೇಳಿದೆ.

ಇದನ್ನೂ ಓದಿ : ಪರ್ಭಾನಿಯಲ್ಲಿ ಪೊಲೀಸರಿಂದ ದಲಿತ ವ್ಯಕ್ತಿ ಹತ್ಯೆ, ಸಿಎಂ ಸುಳ್ಳು ಹೇಳಿದ್ದಾರೆ: ರಾಹುಲ್ ಗಾಂಧಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...