Homeಮುಖಪುಟಗಾಝಾದಲ್ಲಿ ನರಮೇಧ ಮುಂದುವರೆಸಿದ ಇಸ್ರೇಲ್ : ಆಸ್ಪತ್ರೆ ಮುಚ್ಚಲು ಆದೇಶ

ಗಾಝಾದಲ್ಲಿ ನರಮೇಧ ಮುಂದುವರೆಸಿದ ಇಸ್ರೇಲ್ : ಆಸ್ಪತ್ರೆ ಮುಚ್ಚಲು ಆದೇಶ

- Advertisement -
- Advertisement -

ಗಾಝಾದ ಮೇಲಿನ ಆಕ್ರಮಣವನ್ನು ಇಸ್ರೇಲ್ ಮುಂದುವರೆಸಿದ್ದು, ಭಾನುವಾರ (ಡಿ. 22) ರಾತ್ರಿ ನಿರಾಶ್ರಿತರ ಕ್ಯಾಂಪ್, ಶಾಲೆ ಸೇರಿದಂತೆ ವಿವಿಧ ಜನವಸತಿ ಪ್ರದೇಶಗಳ ಮೇಲೆ ದಾಳಿ ನಡೆಸಿ ಹಲವರನ್ನು ಹತ್ಯೆ ಮಾಡಿದೆ.

ದಕ್ಷಿಣ ಗಾಝಾದ ಸುರಕ್ಷಿತ ಜಾಗ ಎನ್ನಲಾದ ಅಲ್-ಮವಾಸಿಯ ನಿರಾಶ್ರಿತರ ಕ್ಯಾಂಪ್ ಮೇಲೆ ಡ್ರೋನ್ ದಾಳಿ ನಡೆಸಿದ ಇಸ್ರೇಲ್ ಸೇನೆ ಏಳು ಜನರನ್ನು ಹತ್ಯೆ ಮಾಡಿದೆ. ಅದೇ ಪ್ರದೇಶದಲ್ಲಿ ನಾಗರಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಮತ್ತು ಭದ್ರತಾ ಸಿಬ್ಬಂದಿ ಸಂಚರಿಸುತ್ತಿದ್ದ ವಾಹನವೊಂದರ ಮೇಲೆ ಪ್ರತ್ಯೇಕ ದಾಳಿನ ನಡೆಸಿದೆ. ಈ ಮೂಲಕ ಒಟ್ಟು ನಾಲ್ವರನ್ನು ಕೊಂದು ಹಾಕಿದೆ.

ಕೇಂದ್ರ ಗಾಝಾದಲ್ಲಿ ಇಂದು (ಡಿ.23) ನಸುಕಿನಲ್ಲಿ ಶಾಲೆ ಮತ್ತು ಸುರಕ್ಷಿತ ಪ್ರದೇಶ ಎನ್ನಲಾದ ನುಸೈರತ್‌ನ ನಿರಾಶ್ರಿತರ ಕ್ಯಾಂಪ್‌ ಮೇಲೆ ಪ್ರತ್ಯೇಕ ದಾಳಿ ನಡೆಸಿದೆ. ಇದರಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ. ಇದೇ ನುಸೈರತ್‌ ಪ್ರದೇಶಲ್ಲಿ ಇಸ್ರೇಲ್‌ ಸೇನೆ ಇನ್ನೂ ನಾಲ್ವರನ್ನು ಕೊಂದಿದೆ.

ಭಾನುವಾರ ಮುಂಜಾನೆಯಿಂದ ಸೋಮವಾರ ಮುಂಜಾನೆಯವರೆಗೆ 24 ಗಂಟೆಗಳ ಅವಧಿಯಲ್ಲಿ ವಿವಿಧ ದಾಳಿಗಳ ಮೂಲಕ ಇಸ್ರೇಲ್ ಸೇನೆ ಒಟ್ಟು 50 ಅಮಾಯಕರನ್ನು ಹತ್ಯೆ ಮಾಡಿದೆ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ನಿರಂತರ ದಾಳಿಯ ನಡುವೆ ಉತ್ತರ ಗಾಝಾದ ಬೈತ್ ಲಾಹಿಯಾದಲ್ಲಿರುವ ಕಮಲ್ ಅದ್ವಾನ್ ಎಂಬ ಆಸ್ಪತ್ರೆಯನ್ನು ಮುಚ್ಚಲು ಇಸ್ರೇಲ್ ಸೇನೆ ಸೂಚಿಸಿದೆ. ಇದರಿಂದ ಸುಮಾರು 400 ನಾಗರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದು ಈ ಭಾಗದಲ್ಲಿ ಭಾಗಶಃ ಕಾರ್ಯನಿರ್ವಹಿಸುತ್ತಿದ್ದ ಕೊನೆಯ ಆಸ್ಪತ್ರೆಎ ಎಂದು ಕೆಲ ವರದಿಗಳು ಹೇಳಿವೆ.

ಉತ್ತರ ಗಾಝಾದಲ್ಲಿ ಕೆಲ ಆಸ್ಪತ್ರೆಗಳು ಇನ್ನೂ ಕಾರ್ಯಾಚರಿಸುತ್ತಿವೆ. ಅಲ್ಲಿ ಸಾವಿರಾರು ನಾಗರಿಕರು ಸಿಲುಕಿಕೊಂಡಿದ್ದಾರೆ. ಇಸ್ರೇಲ್ ಸೇನೆ ಆಸ್ಪತ್ರೆಗಳಲ್ಲಿರುವ ಜನರಿಗೆ ಕಳೆದ ಮೂರು ತಿಂಗಳಿನಿಂದ ದಿಗ್ಬಂಧನ ವಿಧಿಸಿದೆ.

ಕಮಲ್ ಅದ್ವಾನ್ ಆಸ್ಪತ್ರೆಯ ಮೇಲೆ ಬಾಂಬ್, ಶೆಲ್‌ಗಳಿಂದ ಇಸ್ರೇಲ್ ಸೇನೆ ಭಾನುವಾರ ದಾಳಿ ನಡೆಸಿದೆ. ನಿರ್ದಿಷ್ಟವಾಗಿ ಮಹಿಳೆಯರು, ಹೆರಿಗೆ ಮತ್ತು ನವಜಾತ ಶಿಶುಗಳ ವಾರ್ಡ್‌ಗಳನ್ನು ಗುರಿಯಾಗಿಸಿ ದಾಳಿ ಮಾಡಿದೆ. ಇದರಿಂದ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ.

“ಇಸ್ರೇಲ್ ಸೇನೆ ದೊಡ್ಡ ದೊಡ್ಡ ಯುದ್ದ ಟ್ಯಾಂಕರ್‌ಗಳ ಮೂಲಕ ಆಸ್ಪತ್ರೆಯನ್ನು ನೇರವಾಗಿ ಗುರಿಯಾಗಿಸಿದೆ. ಇದರಿಂದ ಹೆಚ್ಚಿನ ಸಾವು-ನೋವು ಸಂಭವಿಸುವ ಸಾಧ್ಯತೆ ಇದೆ. ಆಸ್ಪತ್ರೆಯನ್ನು ಮುಚ್ಚುವಂತೆ ಆದೇಶಿಸಿದ್ದಾರೆ. ಆದರೆ, ನಮ್ಮಲ್ಲಿ ಬೇಕಾದಷ್ಟು ಆಂಬ್ಯುಲೆನ್ಸ್ ಇಲ್ಲದ ಕಾರಣ ರೋಗಿಗಳನ್ನು ಸ್ಥಳಾಂತರಿಸುವುದು ಅಸಾಧ್ಯ” ಎಂದು ಆಸ್ಪತ್ರೆಯ ಮುಖ್ಯಸ್ಥ ಹುಸ್ಸಾಮ್ ಅಬು ಸಫಿಯಾ ತಿಳಿಸಿದ್ದಾಗಿ ವರದಿಗಳು ಹೇಳಿವೆ.

ಕಮಲ್ ಅದ್ವಾನ್ ಆಸ್ಪತ್ರೆಯ ಮೇಲೆ ದಾಳಿ ನಡೆಸಿ ಜನರನ್ನು ಬಲವಂತಾಗಿ ಹೊರ ಕಳಿಸುವುದು ‘ಜನಾಂಗೀಯ ಹತ್ಯೆಯಾಗಿದೆ. ಇದು ಅಪರಾಧ ಎಂದು ಹಮಾಸ್ ಹೇಳಿದೆ.

ಇದನ್ನೂ ಓದಿ : ಪರ್ಭಾನಿಯಲ್ಲಿ ಪೊಲೀಸರಿಂದ ದಲಿತ ವ್ಯಕ್ತಿ ಹತ್ಯೆ, ಸಿಎಂ ಸುಳ್ಳು ಹೇಳಿದ್ದಾರೆ: ರಾಹುಲ್ ಗಾಂಧಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...