Homeಮುಖಪುಟಗಾಝಾದಲ್ಲಿ ನರಮೇಧ ಮುಂದುವರೆಸಿದ ಇಸ್ರೇಲ್ : ಆಸ್ಪತ್ರೆ ಮುಚ್ಚಲು ಆದೇಶ

ಗಾಝಾದಲ್ಲಿ ನರಮೇಧ ಮುಂದುವರೆಸಿದ ಇಸ್ರೇಲ್ : ಆಸ್ಪತ್ರೆ ಮುಚ್ಚಲು ಆದೇಶ

- Advertisement -
- Advertisement -

ಗಾಝಾದ ಮೇಲಿನ ಆಕ್ರಮಣವನ್ನು ಇಸ್ರೇಲ್ ಮುಂದುವರೆಸಿದ್ದು, ಭಾನುವಾರ (ಡಿ. 22) ರಾತ್ರಿ ನಿರಾಶ್ರಿತರ ಕ್ಯಾಂಪ್, ಶಾಲೆ ಸೇರಿದಂತೆ ವಿವಿಧ ಜನವಸತಿ ಪ್ರದೇಶಗಳ ಮೇಲೆ ದಾಳಿ ನಡೆಸಿ ಹಲವರನ್ನು ಹತ್ಯೆ ಮಾಡಿದೆ.

ದಕ್ಷಿಣ ಗಾಝಾದ ಸುರಕ್ಷಿತ ಜಾಗ ಎನ್ನಲಾದ ಅಲ್-ಮವಾಸಿಯ ನಿರಾಶ್ರಿತರ ಕ್ಯಾಂಪ್ ಮೇಲೆ ಡ್ರೋನ್ ದಾಳಿ ನಡೆಸಿದ ಇಸ್ರೇಲ್ ಸೇನೆ ಏಳು ಜನರನ್ನು ಹತ್ಯೆ ಮಾಡಿದೆ. ಅದೇ ಪ್ರದೇಶದಲ್ಲಿ ನಾಗರಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಮತ್ತು ಭದ್ರತಾ ಸಿಬ್ಬಂದಿ ಸಂಚರಿಸುತ್ತಿದ್ದ ವಾಹನವೊಂದರ ಮೇಲೆ ಪ್ರತ್ಯೇಕ ದಾಳಿನ ನಡೆಸಿದೆ. ಈ ಮೂಲಕ ಒಟ್ಟು ನಾಲ್ವರನ್ನು ಕೊಂದು ಹಾಕಿದೆ.

ಕೇಂದ್ರ ಗಾಝಾದಲ್ಲಿ ಇಂದು (ಡಿ.23) ನಸುಕಿನಲ್ಲಿ ಶಾಲೆ ಮತ್ತು ಸುರಕ್ಷಿತ ಪ್ರದೇಶ ಎನ್ನಲಾದ ನುಸೈರತ್‌ನ ನಿರಾಶ್ರಿತರ ಕ್ಯಾಂಪ್‌ ಮೇಲೆ ಪ್ರತ್ಯೇಕ ದಾಳಿ ನಡೆಸಿದೆ. ಇದರಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ. ಇದೇ ನುಸೈರತ್‌ ಪ್ರದೇಶಲ್ಲಿ ಇಸ್ರೇಲ್‌ ಸೇನೆ ಇನ್ನೂ ನಾಲ್ವರನ್ನು ಕೊಂದಿದೆ.

ಭಾನುವಾರ ಮುಂಜಾನೆಯಿಂದ ಸೋಮವಾರ ಮುಂಜಾನೆಯವರೆಗೆ 24 ಗಂಟೆಗಳ ಅವಧಿಯಲ್ಲಿ ವಿವಿಧ ದಾಳಿಗಳ ಮೂಲಕ ಇಸ್ರೇಲ್ ಸೇನೆ ಒಟ್ಟು 50 ಅಮಾಯಕರನ್ನು ಹತ್ಯೆ ಮಾಡಿದೆ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ನಿರಂತರ ದಾಳಿಯ ನಡುವೆ ಉತ್ತರ ಗಾಝಾದ ಬೈತ್ ಲಾಹಿಯಾದಲ್ಲಿರುವ ಕಮಲ್ ಅದ್ವಾನ್ ಎಂಬ ಆಸ್ಪತ್ರೆಯನ್ನು ಮುಚ್ಚಲು ಇಸ್ರೇಲ್ ಸೇನೆ ಸೂಚಿಸಿದೆ. ಇದರಿಂದ ಸುಮಾರು 400 ನಾಗರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದು ಈ ಭಾಗದಲ್ಲಿ ಭಾಗಶಃ ಕಾರ್ಯನಿರ್ವಹಿಸುತ್ತಿದ್ದ ಕೊನೆಯ ಆಸ್ಪತ್ರೆಎ ಎಂದು ಕೆಲ ವರದಿಗಳು ಹೇಳಿವೆ.

ಉತ್ತರ ಗಾಝಾದಲ್ಲಿ ಕೆಲ ಆಸ್ಪತ್ರೆಗಳು ಇನ್ನೂ ಕಾರ್ಯಾಚರಿಸುತ್ತಿವೆ. ಅಲ್ಲಿ ಸಾವಿರಾರು ನಾಗರಿಕರು ಸಿಲುಕಿಕೊಂಡಿದ್ದಾರೆ. ಇಸ್ರೇಲ್ ಸೇನೆ ಆಸ್ಪತ್ರೆಗಳಲ್ಲಿರುವ ಜನರಿಗೆ ಕಳೆದ ಮೂರು ತಿಂಗಳಿನಿಂದ ದಿಗ್ಬಂಧನ ವಿಧಿಸಿದೆ.

ಕಮಲ್ ಅದ್ವಾನ್ ಆಸ್ಪತ್ರೆಯ ಮೇಲೆ ಬಾಂಬ್, ಶೆಲ್‌ಗಳಿಂದ ಇಸ್ರೇಲ್ ಸೇನೆ ಭಾನುವಾರ ದಾಳಿ ನಡೆಸಿದೆ. ನಿರ್ದಿಷ್ಟವಾಗಿ ಮಹಿಳೆಯರು, ಹೆರಿಗೆ ಮತ್ತು ನವಜಾತ ಶಿಶುಗಳ ವಾರ್ಡ್‌ಗಳನ್ನು ಗುರಿಯಾಗಿಸಿ ದಾಳಿ ಮಾಡಿದೆ. ಇದರಿಂದ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ.

“ಇಸ್ರೇಲ್ ಸೇನೆ ದೊಡ್ಡ ದೊಡ್ಡ ಯುದ್ದ ಟ್ಯಾಂಕರ್‌ಗಳ ಮೂಲಕ ಆಸ್ಪತ್ರೆಯನ್ನು ನೇರವಾಗಿ ಗುರಿಯಾಗಿಸಿದೆ. ಇದರಿಂದ ಹೆಚ್ಚಿನ ಸಾವು-ನೋವು ಸಂಭವಿಸುವ ಸಾಧ್ಯತೆ ಇದೆ. ಆಸ್ಪತ್ರೆಯನ್ನು ಮುಚ್ಚುವಂತೆ ಆದೇಶಿಸಿದ್ದಾರೆ. ಆದರೆ, ನಮ್ಮಲ್ಲಿ ಬೇಕಾದಷ್ಟು ಆಂಬ್ಯುಲೆನ್ಸ್ ಇಲ್ಲದ ಕಾರಣ ರೋಗಿಗಳನ್ನು ಸ್ಥಳಾಂತರಿಸುವುದು ಅಸಾಧ್ಯ” ಎಂದು ಆಸ್ಪತ್ರೆಯ ಮುಖ್ಯಸ್ಥ ಹುಸ್ಸಾಮ್ ಅಬು ಸಫಿಯಾ ತಿಳಿಸಿದ್ದಾಗಿ ವರದಿಗಳು ಹೇಳಿವೆ.

ಕಮಲ್ ಅದ್ವಾನ್ ಆಸ್ಪತ್ರೆಯ ಮೇಲೆ ದಾಳಿ ನಡೆಸಿ ಜನರನ್ನು ಬಲವಂತಾಗಿ ಹೊರ ಕಳಿಸುವುದು ‘ಜನಾಂಗೀಯ ಹತ್ಯೆಯಾಗಿದೆ. ಇದು ಅಪರಾಧ ಎಂದು ಹಮಾಸ್ ಹೇಳಿದೆ.

ಇದನ್ನೂ ಓದಿ : ಪರ್ಭಾನಿಯಲ್ಲಿ ಪೊಲೀಸರಿಂದ ದಲಿತ ವ್ಯಕ್ತಿ ಹತ್ಯೆ, ಸಿಎಂ ಸುಳ್ಳು ಹೇಳಿದ್ದಾರೆ: ರಾಹುಲ್ ಗಾಂಧಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...