Homeಮುಖಪುಟಗಾಝಾದಲ್ಲಿ ನರಮೇಧ ಮುಂದುವರೆಸಿದ ಇಸ್ರೇಲ್ : ಆಸ್ಪತ್ರೆ ಮುಚ್ಚಲು ಆದೇಶ

ಗಾಝಾದಲ್ಲಿ ನರಮೇಧ ಮುಂದುವರೆಸಿದ ಇಸ್ರೇಲ್ : ಆಸ್ಪತ್ರೆ ಮುಚ್ಚಲು ಆದೇಶ

- Advertisement -
- Advertisement -

ಗಾಝಾದ ಮೇಲಿನ ಆಕ್ರಮಣವನ್ನು ಇಸ್ರೇಲ್ ಮುಂದುವರೆಸಿದ್ದು, ಭಾನುವಾರ (ಡಿ. 22) ರಾತ್ರಿ ನಿರಾಶ್ರಿತರ ಕ್ಯಾಂಪ್, ಶಾಲೆ ಸೇರಿದಂತೆ ವಿವಿಧ ಜನವಸತಿ ಪ್ರದೇಶಗಳ ಮೇಲೆ ದಾಳಿ ನಡೆಸಿ ಹಲವರನ್ನು ಹತ್ಯೆ ಮಾಡಿದೆ.

ದಕ್ಷಿಣ ಗಾಝಾದ ಸುರಕ್ಷಿತ ಜಾಗ ಎನ್ನಲಾದ ಅಲ್-ಮವಾಸಿಯ ನಿರಾಶ್ರಿತರ ಕ್ಯಾಂಪ್ ಮೇಲೆ ಡ್ರೋನ್ ದಾಳಿ ನಡೆಸಿದ ಇಸ್ರೇಲ್ ಸೇನೆ ಏಳು ಜನರನ್ನು ಹತ್ಯೆ ಮಾಡಿದೆ. ಅದೇ ಪ್ರದೇಶದಲ್ಲಿ ನಾಗರಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಮತ್ತು ಭದ್ರತಾ ಸಿಬ್ಬಂದಿ ಸಂಚರಿಸುತ್ತಿದ್ದ ವಾಹನವೊಂದರ ಮೇಲೆ ಪ್ರತ್ಯೇಕ ದಾಳಿನ ನಡೆಸಿದೆ. ಈ ಮೂಲಕ ಒಟ್ಟು ನಾಲ್ವರನ್ನು ಕೊಂದು ಹಾಕಿದೆ.

ಕೇಂದ್ರ ಗಾಝಾದಲ್ಲಿ ಇಂದು (ಡಿ.23) ನಸುಕಿನಲ್ಲಿ ಶಾಲೆ ಮತ್ತು ಸುರಕ್ಷಿತ ಪ್ರದೇಶ ಎನ್ನಲಾದ ನುಸೈರತ್‌ನ ನಿರಾಶ್ರಿತರ ಕ್ಯಾಂಪ್‌ ಮೇಲೆ ಪ್ರತ್ಯೇಕ ದಾಳಿ ನಡೆಸಿದೆ. ಇದರಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ. ಇದೇ ನುಸೈರತ್‌ ಪ್ರದೇಶಲ್ಲಿ ಇಸ್ರೇಲ್‌ ಸೇನೆ ಇನ್ನೂ ನಾಲ್ವರನ್ನು ಕೊಂದಿದೆ.

ಭಾನುವಾರ ಮುಂಜಾನೆಯಿಂದ ಸೋಮವಾರ ಮುಂಜಾನೆಯವರೆಗೆ 24 ಗಂಟೆಗಳ ಅವಧಿಯಲ್ಲಿ ವಿವಿಧ ದಾಳಿಗಳ ಮೂಲಕ ಇಸ್ರೇಲ್ ಸೇನೆ ಒಟ್ಟು 50 ಅಮಾಯಕರನ್ನು ಹತ್ಯೆ ಮಾಡಿದೆ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ನಿರಂತರ ದಾಳಿಯ ನಡುವೆ ಉತ್ತರ ಗಾಝಾದ ಬೈತ್ ಲಾಹಿಯಾದಲ್ಲಿರುವ ಕಮಲ್ ಅದ್ವಾನ್ ಎಂಬ ಆಸ್ಪತ್ರೆಯನ್ನು ಮುಚ್ಚಲು ಇಸ್ರೇಲ್ ಸೇನೆ ಸೂಚಿಸಿದೆ. ಇದರಿಂದ ಸುಮಾರು 400 ನಾಗರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದು ಈ ಭಾಗದಲ್ಲಿ ಭಾಗಶಃ ಕಾರ್ಯನಿರ್ವಹಿಸುತ್ತಿದ್ದ ಕೊನೆಯ ಆಸ್ಪತ್ರೆಎ ಎಂದು ಕೆಲ ವರದಿಗಳು ಹೇಳಿವೆ.

ಉತ್ತರ ಗಾಝಾದಲ್ಲಿ ಕೆಲ ಆಸ್ಪತ್ರೆಗಳು ಇನ್ನೂ ಕಾರ್ಯಾಚರಿಸುತ್ತಿವೆ. ಅಲ್ಲಿ ಸಾವಿರಾರು ನಾಗರಿಕರು ಸಿಲುಕಿಕೊಂಡಿದ್ದಾರೆ. ಇಸ್ರೇಲ್ ಸೇನೆ ಆಸ್ಪತ್ರೆಗಳಲ್ಲಿರುವ ಜನರಿಗೆ ಕಳೆದ ಮೂರು ತಿಂಗಳಿನಿಂದ ದಿಗ್ಬಂಧನ ವಿಧಿಸಿದೆ.

ಕಮಲ್ ಅದ್ವಾನ್ ಆಸ್ಪತ್ರೆಯ ಮೇಲೆ ಬಾಂಬ್, ಶೆಲ್‌ಗಳಿಂದ ಇಸ್ರೇಲ್ ಸೇನೆ ಭಾನುವಾರ ದಾಳಿ ನಡೆಸಿದೆ. ನಿರ್ದಿಷ್ಟವಾಗಿ ಮಹಿಳೆಯರು, ಹೆರಿಗೆ ಮತ್ತು ನವಜಾತ ಶಿಶುಗಳ ವಾರ್ಡ್‌ಗಳನ್ನು ಗುರಿಯಾಗಿಸಿ ದಾಳಿ ಮಾಡಿದೆ. ಇದರಿಂದ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ.

“ಇಸ್ರೇಲ್ ಸೇನೆ ದೊಡ್ಡ ದೊಡ್ಡ ಯುದ್ದ ಟ್ಯಾಂಕರ್‌ಗಳ ಮೂಲಕ ಆಸ್ಪತ್ರೆಯನ್ನು ನೇರವಾಗಿ ಗುರಿಯಾಗಿಸಿದೆ. ಇದರಿಂದ ಹೆಚ್ಚಿನ ಸಾವು-ನೋವು ಸಂಭವಿಸುವ ಸಾಧ್ಯತೆ ಇದೆ. ಆಸ್ಪತ್ರೆಯನ್ನು ಮುಚ್ಚುವಂತೆ ಆದೇಶಿಸಿದ್ದಾರೆ. ಆದರೆ, ನಮ್ಮಲ್ಲಿ ಬೇಕಾದಷ್ಟು ಆಂಬ್ಯುಲೆನ್ಸ್ ಇಲ್ಲದ ಕಾರಣ ರೋಗಿಗಳನ್ನು ಸ್ಥಳಾಂತರಿಸುವುದು ಅಸಾಧ್ಯ” ಎಂದು ಆಸ್ಪತ್ರೆಯ ಮುಖ್ಯಸ್ಥ ಹುಸ್ಸಾಮ್ ಅಬು ಸಫಿಯಾ ತಿಳಿಸಿದ್ದಾಗಿ ವರದಿಗಳು ಹೇಳಿವೆ.

ಕಮಲ್ ಅದ್ವಾನ್ ಆಸ್ಪತ್ರೆಯ ಮೇಲೆ ದಾಳಿ ನಡೆಸಿ ಜನರನ್ನು ಬಲವಂತಾಗಿ ಹೊರ ಕಳಿಸುವುದು ‘ಜನಾಂಗೀಯ ಹತ್ಯೆಯಾಗಿದೆ. ಇದು ಅಪರಾಧ ಎಂದು ಹಮಾಸ್ ಹೇಳಿದೆ.

ಇದನ್ನೂ ಓದಿ : ಪರ್ಭಾನಿಯಲ್ಲಿ ಪೊಲೀಸರಿಂದ ದಲಿತ ವ್ಯಕ್ತಿ ಹತ್ಯೆ, ಸಿಎಂ ಸುಳ್ಳು ಹೇಳಿದ್ದಾರೆ: ರಾಹುಲ್ ಗಾಂಧಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...