Homeಅಂತರಾಷ್ಟ್ರೀಯಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಇಸ್ರೇಲ್

ಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಇಸ್ರೇಲ್

- Advertisement -
- Advertisement -

ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್ ಮೇಲೆ ಒತ್ತಡ ಹೇರುವ ಸಲುವಾಗಿ ಗಾಝಾಗೆ ವಿದ್ಯುತ್ ಸರಬರಾಜನ್ನು ಇಸ್ರೇಲ್ ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ.

ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಹಮಾಸ್ ಮೇಲೆ ಇಸ್ರೇಲ್ ಒತ್ತಡ ಹೇರುತ್ತಲೇ ಇದೆ. ಅದಕ್ಕೆ ಹಮಾಸ್ ಬಗ್ಗದಿದ್ದಾಗ ಅಮೆರಿಕ ಜೊತೆಗೂಡಿ ಗಾಝಾವನ್ನು ನರಕ ಮಾಡುವುದಾಗಿ ಬೆದರಿಕೆ ಹಾಕಿದೆ.

ಯಾವುದೇ ಬೆದರಿಕೆಗೂ ಹಮಾಸ್ ತಲೆಬಾಗದ ಹಿನ್ನೆಲೆ, ಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಕಡಿತಗೊಳಿಸುವಂತೆ ಇಸ್ರೇಲ್ ಇಂಧನ ಸಚಿವ ಎಲಿ ಕೋಹೆನ್ ಅವರು ಇಸ್ರೇಲ್ ಎಲೆಕ್ಟ್ರಿಕ್ ಕಾರ್ಪೊರೇಷನ್‌ಗೆ (ಐಇಸಿ) ಭಾನುವಾರ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಟೈಮ್ಸ್ ಆಫ್ ಇಸ್ರೇಲ್ ವರದಿಯ ಪ್ರಕಾರ, ಸುಮಾರು 24 ಜನರು ಇನ್ನೂ ಹಮಾಸ್ ವಶದಲ್ಲಿ ಒತ್ತೆಯಾಳುಗಳಾಗಿ ಇದ್ದಾರೆ. ಸುಮಾರು 35 ಒತ್ತೆಯಾಳುಗಳ ಮೃತದೇಹಗಳೂ ಹಮಾಸ್ ಬಳಿಯಿದೆ. ಜೀವಂತ ಇರುವವರು ಮತ್ತು ಮೃತರ ದೇಹಗಳನ್ನು ಹಸ್ತಾಂತರಿಸುವಂತೆ ಇಸ್ರೇಲ್ ಹಮಾಸ್‌ಗೆ ಬೇಡಿಕೆ ಇಟ್ಟಿದೆ.

ಸಣ್ಣ ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಸಚಿವ ಎಲಿ ಕೋಹೆನ್, ” ಎಲ್ಲಾ ಒತ್ತೆಯಾಳುಗಳ ಬಿಡುಗಡೆ ಆಗುವವರೆಗೆ ನಾವು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತೇವೆ. ಎಲ್ಲರೂ ಸುರಕ್ಷಿತವಾಗಿ ಬಿಡುಗಡೆಯಾದ ಮರುದಿನ ಗಾಝಾದಲ್ಲಿ ಹಮಾಸ್ ಇರುವುದಿಲ್ಲ” ಎಂದಿದ್ದಾರೆ.

ಟೈಮ್ಸ್ ಆಫ್ ಇಸ್ರೇಲ್ ಜೊತೆ ಮಾತನಾಡಿರುವ ಇಸ್ರೇಲ್ ಅಧಿಕಾರಿಯೊಬ್ಬರು ಸಚಿವ ಕೋಹೆನ್ ಅವರ ಹೇಳಿಕೆ ನಾಟಕೀಯವಾದದ್ದು ಎಂದಿದ್ದಾರೆ. “ಅಕ್ಟೋಬರ್ 7, 2023ರಂದು ಇಸ್ರೇಲ್ ಮೇಲ್ ಹಮಾಸ್ ದಾಳಿ ನಡೆಸಿದ ದಿನದಿಂದ ಗಾಝಾಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಅದಾಗ್ಯೂ, ನವೆಂಬರ್‌ನಲ್ಲಿ ಮಧ್ಯ ಗಾಝಾದ ದೈರ್ ಅಲ್-ಬಲಾಹ್ ಬಳಿಯ ಉಪ್ಪುನೀರಿನ ಸಂಸ್ಕರಣಾ ಘಟಕಕ್ಕೆ ವಿದ್ಯುತ್ ಪೂರೈಕೆ ಮಾಡುವುದಾಗಿ ಇಸ್ರೇಲ್ ಹೇಳಿತ್ತು. ಅಸಲಿಗೆ ಆ ಘಟಕಕ್ಕೆ ವಿದ್ಯುತ್ ಪೂರೈಕೆ ಕಡಿತಗೊಳಿಸಲಾಗಿದೆ” ಎಂದಿದ್ದಾರೆ.

ದೈರ್ ಅಲ್-ಬಲಾಹ್ ಉಪ್ಪು ನೀರು ಸಂಸ್ಕರಣಾ ಘಟಕವು ಟ್ಯಾಂಕರ್‌ಗಳ ಮೂಲಕ ಹಾಗೂ ಮಧ್ಯ ಮತ್ತು ದಕ್ಷಿಣ ಗಾಝಾದಲ್ಲಿರುವ ದೈರ್ ಅಲ್-ಬಲಾಹ್ ಮತ್ತು ಖಾನ್ ಯೂನುಸ್ ಗವರ್ನರೇಟ್‌ಗಳ ಜಾಲಗಳ ಮೂಲಕ ಗಾಝಾದಲ್ಲಿ 600,000 ಕ್ಕೂ ಹೆಚ್ಚು ಜನರಿಗೆ ಸೇವೆ ಸಲ್ಲಿಸುತ್ತದೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಪ್ರಾರಂಭವಾಗುವ ಮೊದಲು 2 ಮಿಲಿಯನ್‌ಗಿಂತಲೂ ಹೆಚ್ಚು ಜನರ ನೀರಿನ ಅಗತ್ಯದಲ್ಲಿ ಸುಮಾರು 15 ಪ್ರತಿಶತವನ್ನು ಪೂರೈಸಿದ ಗಾಝಾ ಪಟ್ಟಿಯಲ್ಲಿರುವ ಮೂರು ಸಮುದ್ರ ನೀರು ಸಂಸ್ಕರಣಾ ಸೌಲಭ್ಯಗಳಲ್ಲಿ ಇದು ಒಂದಾಗಿದೆ.

ಗಾಝಾ ಪಟ್ಟಿಗೆ ಆಹಾರ ಸರಬರಾಜುಗೆ ತಡೆಯೊಡ್ಡಿದ ಬಳಿಕ ವಿದ್ಯುತ್ ಸರಬರಾಜನ್ನು ಇಸ್ರೇಲ್ ಕಡಿತಗೊಳಿಸಿದೆ.

ಇಸ್ರೇಲ್-ಹಮಾಸ್ ನಡುವಿನ ಕದನ ವಿರಾಮದ ಎರಡನೇ ಹಂತವನ್ನು ಜಾರಿಗೊಳಿಸಲು ಹಮಾಸ್ ನಿರಾಕರಿಸಿದ ಹಿನ್ನೆಲೆ ಆಹಾರ ಮತ್ತು ವಿದ್ಯುತ್ ಸರಬರಾಜು ಕಡಿತಗೊಳಿಸಲಾಗಿದೆ ಎಂದು ಇಸ್ರೇಲ್ ಸಮರ್ಥಿಸಿಕೊಂಡಿದೆ.

ಆದರೆ, ಇಸ್ರೇಲ್ ಕದನ ವಿರಾಮ ಉಲ್ಲಂಘಿಸಿದೆ. ಗಾಝಾದಲ್ಲಿ ಅಲ್ಲಲ್ಲಿ ದಾಳಿ ನಡೆಸಿದೆ. ಪಶ್ಚಿಮ ದಂಡೆಯಲ್ಲಿ ಪ್ಯಾಲೆಸ್ತೀನಿಯರ ಮೇಲೆ ಆಕ್ರಮಣ ನಡೆಸುತ್ತಿದೆ. ಕದನ ವಿರಾಮದ ಒಪ್ಪಂದಂತೆ ಆರಂಭದಲ್ಲಿ ಒತ್ತೆಯಾಳುಗಳಿಗೆ ಬದಲಾಗಿ ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಿತ್ತು. ಟ್ರಂಪ್ ಅವರನ್ನು ನೆತನ್ಯಾಹು ಭೇಟಿಯಾದ ಬಳಿಕ, ಕದನ ವಿರಾಮದ ಒಪ್ಪಂದ ಉಲ್ಲಂಘಿಸಿ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಅಮೆರಿಕ ಮತ್ತು ಇಸ್ರೇಲ್ ಒಟ್ಟಿಗೆ ನಮ್ಮನ್ನು ಬೆದರಿಸುತ್ತದೆ ಎಂದು ಹಮಾಸ್ ಆರೋಪಿಸಿದೆ.

ಒಪ್ಪಂದಂತೆ ಮೊದಲ ಹಂತದಲ್ಲಿ ಪರಸ್ಪರ ಒತ್ತೆಯಾಳುಗಳ ಬಿಡುಗಡೆಯಾಗಬೇಕು. ನಂತರ ಎರಡನೇ ಹಂತದಲ್ಲಿ ಇಸ್ರೇಲ್ ಸೇನೆ ಗಾಝಾ ಬಿಟ್ಟು ತೆರಳಬೇಕು. ಎಲ್ಲವೂ ಆರಂಭದ ಮಾತುಕತೆಯಂತೆಯೇ ಆಗಬೇಕು ಎಂದು ಹಮಾಸ್ ಪಟ್ಟು ಹಿಡಿದಿದೆ.

ಗಾಝಾಗೆ ನೆರವು ನೀಡುವುದಕ್ಕೆ ತಡೆಯೊಡ್ಡಿರುವ ಇಸ್ರೇಲ್ ಕ್ರಮವನ್ನು ಪಾಶ್ಚಿಮಾತ್ಯ ಸರ್ಕಾರಗಳು ಮತ್ತು ಅರಬ್ ರಾಷ್ಟ್ರಗಳು ಖಂಡಿಸಿವೆ. ಆದಾಗ್ಯೂ, ಅಮೆರಿಕ ಇಸ್ರೇಲ್‌ನ ನಿರ್ಧಾರವನ್ನು ಬೆಂಬಲಿಸಿದೆ. ಗಾಝಾ ನಿವಾಸಿಗಳ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಸರಕುಗಳು ಲಭ್ಯವಿದೆ. ಹಮಾಸ್ ಆ ಸರಕುಗಳ ಪೂರೈಕೆಯನ್ನು ಬಳಸಿಕೊಂಡು ಗಾಝಾ ಮೇಲಿನ ತನ್ನ ನಿಯಂತ್ರಣವನ್ನು ಹೆಚ್ಚಿಸುತ್ತಿದೆ. ಇಸ್ರೇಲ್ ಮೇಲಿನ ದಾಳಿಗೆ ಹಣಕಾಸು ಒದಗಿಸುತ್ತಿದೆ ಎಂದು ಇಸ್ರೇಲ್ ಹೇಳಿದೆ.

ಕೆನಡಾದ ಮುಂದಿನ ಪ್ರಧಾನಿಯಾಗಿ ಮಾಜಿ ಕೇಂದ್ರ ಬ್ಯಾಂಕರ್ ಮಾರ್ಕ್ ಕಾರ್ನಿ ನೇಮಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...