Homeಅಂತರಾಷ್ಟ್ರೀಯಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಇಸ್ರೇಲ್

ಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಇಸ್ರೇಲ್

- Advertisement -
- Advertisement -

ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್ ಮೇಲೆ ಒತ್ತಡ ಹೇರುವ ಸಲುವಾಗಿ ಗಾಝಾಗೆ ವಿದ್ಯುತ್ ಸರಬರಾಜನ್ನು ಇಸ್ರೇಲ್ ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ.

ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಹಮಾಸ್ ಮೇಲೆ ಇಸ್ರೇಲ್ ಒತ್ತಡ ಹೇರುತ್ತಲೇ ಇದೆ. ಅದಕ್ಕೆ ಹಮಾಸ್ ಬಗ್ಗದಿದ್ದಾಗ ಅಮೆರಿಕ ಜೊತೆಗೂಡಿ ಗಾಝಾವನ್ನು ನರಕ ಮಾಡುವುದಾಗಿ ಬೆದರಿಕೆ ಹಾಕಿದೆ.

ಯಾವುದೇ ಬೆದರಿಕೆಗೂ ಹಮಾಸ್ ತಲೆಬಾಗದ ಹಿನ್ನೆಲೆ, ಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಕಡಿತಗೊಳಿಸುವಂತೆ ಇಸ್ರೇಲ್ ಇಂಧನ ಸಚಿವ ಎಲಿ ಕೋಹೆನ್ ಅವರು ಇಸ್ರೇಲ್ ಎಲೆಕ್ಟ್ರಿಕ್ ಕಾರ್ಪೊರೇಷನ್‌ಗೆ (ಐಇಸಿ) ಭಾನುವಾರ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಟೈಮ್ಸ್ ಆಫ್ ಇಸ್ರೇಲ್ ವರದಿಯ ಪ್ರಕಾರ, ಸುಮಾರು 24 ಜನರು ಇನ್ನೂ ಹಮಾಸ್ ವಶದಲ್ಲಿ ಒತ್ತೆಯಾಳುಗಳಾಗಿ ಇದ್ದಾರೆ. ಸುಮಾರು 35 ಒತ್ತೆಯಾಳುಗಳ ಮೃತದೇಹಗಳೂ ಹಮಾಸ್ ಬಳಿಯಿದೆ. ಜೀವಂತ ಇರುವವರು ಮತ್ತು ಮೃತರ ದೇಹಗಳನ್ನು ಹಸ್ತಾಂತರಿಸುವಂತೆ ಇಸ್ರೇಲ್ ಹಮಾಸ್‌ಗೆ ಬೇಡಿಕೆ ಇಟ್ಟಿದೆ.

ಸಣ್ಣ ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಸಚಿವ ಎಲಿ ಕೋಹೆನ್, ” ಎಲ್ಲಾ ಒತ್ತೆಯಾಳುಗಳ ಬಿಡುಗಡೆ ಆಗುವವರೆಗೆ ನಾವು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತೇವೆ. ಎಲ್ಲರೂ ಸುರಕ್ಷಿತವಾಗಿ ಬಿಡುಗಡೆಯಾದ ಮರುದಿನ ಗಾಝಾದಲ್ಲಿ ಹಮಾಸ್ ಇರುವುದಿಲ್ಲ” ಎಂದಿದ್ದಾರೆ.

ಟೈಮ್ಸ್ ಆಫ್ ಇಸ್ರೇಲ್ ಜೊತೆ ಮಾತನಾಡಿರುವ ಇಸ್ರೇಲ್ ಅಧಿಕಾರಿಯೊಬ್ಬರು ಸಚಿವ ಕೋಹೆನ್ ಅವರ ಹೇಳಿಕೆ ನಾಟಕೀಯವಾದದ್ದು ಎಂದಿದ್ದಾರೆ. “ಅಕ್ಟೋಬರ್ 7, 2023ರಂದು ಇಸ್ರೇಲ್ ಮೇಲ್ ಹಮಾಸ್ ದಾಳಿ ನಡೆಸಿದ ದಿನದಿಂದ ಗಾಝಾಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಅದಾಗ್ಯೂ, ನವೆಂಬರ್‌ನಲ್ಲಿ ಮಧ್ಯ ಗಾಝಾದ ದೈರ್ ಅಲ್-ಬಲಾಹ್ ಬಳಿಯ ಉಪ್ಪುನೀರಿನ ಸಂಸ್ಕರಣಾ ಘಟಕಕ್ಕೆ ವಿದ್ಯುತ್ ಪೂರೈಕೆ ಮಾಡುವುದಾಗಿ ಇಸ್ರೇಲ್ ಹೇಳಿತ್ತು. ಅಸಲಿಗೆ ಆ ಘಟಕಕ್ಕೆ ವಿದ್ಯುತ್ ಪೂರೈಕೆ ಕಡಿತಗೊಳಿಸಲಾಗಿದೆ” ಎಂದಿದ್ದಾರೆ.

ದೈರ್ ಅಲ್-ಬಲಾಹ್ ಉಪ್ಪು ನೀರು ಸಂಸ್ಕರಣಾ ಘಟಕವು ಟ್ಯಾಂಕರ್‌ಗಳ ಮೂಲಕ ಹಾಗೂ ಮಧ್ಯ ಮತ್ತು ದಕ್ಷಿಣ ಗಾಝಾದಲ್ಲಿರುವ ದೈರ್ ಅಲ್-ಬಲಾಹ್ ಮತ್ತು ಖಾನ್ ಯೂನುಸ್ ಗವರ್ನರೇಟ್‌ಗಳ ಜಾಲಗಳ ಮೂಲಕ ಗಾಝಾದಲ್ಲಿ 600,000 ಕ್ಕೂ ಹೆಚ್ಚು ಜನರಿಗೆ ಸೇವೆ ಸಲ್ಲಿಸುತ್ತದೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಪ್ರಾರಂಭವಾಗುವ ಮೊದಲು 2 ಮಿಲಿಯನ್‌ಗಿಂತಲೂ ಹೆಚ್ಚು ಜನರ ನೀರಿನ ಅಗತ್ಯದಲ್ಲಿ ಸುಮಾರು 15 ಪ್ರತಿಶತವನ್ನು ಪೂರೈಸಿದ ಗಾಝಾ ಪಟ್ಟಿಯಲ್ಲಿರುವ ಮೂರು ಸಮುದ್ರ ನೀರು ಸಂಸ್ಕರಣಾ ಸೌಲಭ್ಯಗಳಲ್ಲಿ ಇದು ಒಂದಾಗಿದೆ.

ಗಾಝಾ ಪಟ್ಟಿಗೆ ಆಹಾರ ಸರಬರಾಜುಗೆ ತಡೆಯೊಡ್ಡಿದ ಬಳಿಕ ವಿದ್ಯುತ್ ಸರಬರಾಜನ್ನು ಇಸ್ರೇಲ್ ಕಡಿತಗೊಳಿಸಿದೆ.

ಇಸ್ರೇಲ್-ಹಮಾಸ್ ನಡುವಿನ ಕದನ ವಿರಾಮದ ಎರಡನೇ ಹಂತವನ್ನು ಜಾರಿಗೊಳಿಸಲು ಹಮಾಸ್ ನಿರಾಕರಿಸಿದ ಹಿನ್ನೆಲೆ ಆಹಾರ ಮತ್ತು ವಿದ್ಯುತ್ ಸರಬರಾಜು ಕಡಿತಗೊಳಿಸಲಾಗಿದೆ ಎಂದು ಇಸ್ರೇಲ್ ಸಮರ್ಥಿಸಿಕೊಂಡಿದೆ.

ಆದರೆ, ಇಸ್ರೇಲ್ ಕದನ ವಿರಾಮ ಉಲ್ಲಂಘಿಸಿದೆ. ಗಾಝಾದಲ್ಲಿ ಅಲ್ಲಲ್ಲಿ ದಾಳಿ ನಡೆಸಿದೆ. ಪಶ್ಚಿಮ ದಂಡೆಯಲ್ಲಿ ಪ್ಯಾಲೆಸ್ತೀನಿಯರ ಮೇಲೆ ಆಕ್ರಮಣ ನಡೆಸುತ್ತಿದೆ. ಕದನ ವಿರಾಮದ ಒಪ್ಪಂದಂತೆ ಆರಂಭದಲ್ಲಿ ಒತ್ತೆಯಾಳುಗಳಿಗೆ ಬದಲಾಗಿ ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಿತ್ತು. ಟ್ರಂಪ್ ಅವರನ್ನು ನೆತನ್ಯಾಹು ಭೇಟಿಯಾದ ಬಳಿಕ, ಕದನ ವಿರಾಮದ ಒಪ್ಪಂದ ಉಲ್ಲಂಘಿಸಿ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಅಮೆರಿಕ ಮತ್ತು ಇಸ್ರೇಲ್ ಒಟ್ಟಿಗೆ ನಮ್ಮನ್ನು ಬೆದರಿಸುತ್ತದೆ ಎಂದು ಹಮಾಸ್ ಆರೋಪಿಸಿದೆ.

ಒಪ್ಪಂದಂತೆ ಮೊದಲ ಹಂತದಲ್ಲಿ ಪರಸ್ಪರ ಒತ್ತೆಯಾಳುಗಳ ಬಿಡುಗಡೆಯಾಗಬೇಕು. ನಂತರ ಎರಡನೇ ಹಂತದಲ್ಲಿ ಇಸ್ರೇಲ್ ಸೇನೆ ಗಾಝಾ ಬಿಟ್ಟು ತೆರಳಬೇಕು. ಎಲ್ಲವೂ ಆರಂಭದ ಮಾತುಕತೆಯಂತೆಯೇ ಆಗಬೇಕು ಎಂದು ಹಮಾಸ್ ಪಟ್ಟು ಹಿಡಿದಿದೆ.

ಗಾಝಾಗೆ ನೆರವು ನೀಡುವುದಕ್ಕೆ ತಡೆಯೊಡ್ಡಿರುವ ಇಸ್ರೇಲ್ ಕ್ರಮವನ್ನು ಪಾಶ್ಚಿಮಾತ್ಯ ಸರ್ಕಾರಗಳು ಮತ್ತು ಅರಬ್ ರಾಷ್ಟ್ರಗಳು ಖಂಡಿಸಿವೆ. ಆದಾಗ್ಯೂ, ಅಮೆರಿಕ ಇಸ್ರೇಲ್‌ನ ನಿರ್ಧಾರವನ್ನು ಬೆಂಬಲಿಸಿದೆ. ಗಾಝಾ ನಿವಾಸಿಗಳ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಸರಕುಗಳು ಲಭ್ಯವಿದೆ. ಹಮಾಸ್ ಆ ಸರಕುಗಳ ಪೂರೈಕೆಯನ್ನು ಬಳಸಿಕೊಂಡು ಗಾಝಾ ಮೇಲಿನ ತನ್ನ ನಿಯಂತ್ರಣವನ್ನು ಹೆಚ್ಚಿಸುತ್ತಿದೆ. ಇಸ್ರೇಲ್ ಮೇಲಿನ ದಾಳಿಗೆ ಹಣಕಾಸು ಒದಗಿಸುತ್ತಿದೆ ಎಂದು ಇಸ್ರೇಲ್ ಹೇಳಿದೆ.

ಕೆನಡಾದ ಮುಂದಿನ ಪ್ರಧಾನಿಯಾಗಿ ಮಾಜಿ ಕೇಂದ್ರ ಬ್ಯಾಂಕರ್ ಮಾರ್ಕ್ ಕಾರ್ನಿ ನೇಮಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...