Homeಅಂತರಾಷ್ಟ್ರೀಯಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಇಸ್ರೇಲ್

ಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಇಸ್ರೇಲ್

- Advertisement -
- Advertisement -

ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್ ಮೇಲೆ ಒತ್ತಡ ಹೇರುವ ಸಲುವಾಗಿ ಗಾಝಾಗೆ ವಿದ್ಯುತ್ ಸರಬರಾಜನ್ನು ಇಸ್ರೇಲ್ ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ.

ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಹಮಾಸ್ ಮೇಲೆ ಇಸ್ರೇಲ್ ಒತ್ತಡ ಹೇರುತ್ತಲೇ ಇದೆ. ಅದಕ್ಕೆ ಹಮಾಸ್ ಬಗ್ಗದಿದ್ದಾಗ ಅಮೆರಿಕ ಜೊತೆಗೂಡಿ ಗಾಝಾವನ್ನು ನರಕ ಮಾಡುವುದಾಗಿ ಬೆದರಿಕೆ ಹಾಕಿದೆ.

ಯಾವುದೇ ಬೆದರಿಕೆಗೂ ಹಮಾಸ್ ತಲೆಬಾಗದ ಹಿನ್ನೆಲೆ, ಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಕಡಿತಗೊಳಿಸುವಂತೆ ಇಸ್ರೇಲ್ ಇಂಧನ ಸಚಿವ ಎಲಿ ಕೋಹೆನ್ ಅವರು ಇಸ್ರೇಲ್ ಎಲೆಕ್ಟ್ರಿಕ್ ಕಾರ್ಪೊರೇಷನ್‌ಗೆ (ಐಇಸಿ) ಭಾನುವಾರ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಟೈಮ್ಸ್ ಆಫ್ ಇಸ್ರೇಲ್ ವರದಿಯ ಪ್ರಕಾರ, ಸುಮಾರು 24 ಜನರು ಇನ್ನೂ ಹಮಾಸ್ ವಶದಲ್ಲಿ ಒತ್ತೆಯಾಳುಗಳಾಗಿ ಇದ್ದಾರೆ. ಸುಮಾರು 35 ಒತ್ತೆಯಾಳುಗಳ ಮೃತದೇಹಗಳೂ ಹಮಾಸ್ ಬಳಿಯಿದೆ. ಜೀವಂತ ಇರುವವರು ಮತ್ತು ಮೃತರ ದೇಹಗಳನ್ನು ಹಸ್ತಾಂತರಿಸುವಂತೆ ಇಸ್ರೇಲ್ ಹಮಾಸ್‌ಗೆ ಬೇಡಿಕೆ ಇಟ್ಟಿದೆ.

ಸಣ್ಣ ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಸಚಿವ ಎಲಿ ಕೋಹೆನ್, ” ಎಲ್ಲಾ ಒತ್ತೆಯಾಳುಗಳ ಬಿಡುಗಡೆ ಆಗುವವರೆಗೆ ನಾವು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತೇವೆ. ಎಲ್ಲರೂ ಸುರಕ್ಷಿತವಾಗಿ ಬಿಡುಗಡೆಯಾದ ಮರುದಿನ ಗಾಝಾದಲ್ಲಿ ಹಮಾಸ್ ಇರುವುದಿಲ್ಲ” ಎಂದಿದ್ದಾರೆ.

ಟೈಮ್ಸ್ ಆಫ್ ಇಸ್ರೇಲ್ ಜೊತೆ ಮಾತನಾಡಿರುವ ಇಸ್ರೇಲ್ ಅಧಿಕಾರಿಯೊಬ್ಬರು ಸಚಿವ ಕೋಹೆನ್ ಅವರ ಹೇಳಿಕೆ ನಾಟಕೀಯವಾದದ್ದು ಎಂದಿದ್ದಾರೆ. “ಅಕ್ಟೋಬರ್ 7, 2023ರಂದು ಇಸ್ರೇಲ್ ಮೇಲ್ ಹಮಾಸ್ ದಾಳಿ ನಡೆಸಿದ ದಿನದಿಂದ ಗಾಝಾಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಅದಾಗ್ಯೂ, ನವೆಂಬರ್‌ನಲ್ಲಿ ಮಧ್ಯ ಗಾಝಾದ ದೈರ್ ಅಲ್-ಬಲಾಹ್ ಬಳಿಯ ಉಪ್ಪುನೀರಿನ ಸಂಸ್ಕರಣಾ ಘಟಕಕ್ಕೆ ವಿದ್ಯುತ್ ಪೂರೈಕೆ ಮಾಡುವುದಾಗಿ ಇಸ್ರೇಲ್ ಹೇಳಿತ್ತು. ಅಸಲಿಗೆ ಆ ಘಟಕಕ್ಕೆ ವಿದ್ಯುತ್ ಪೂರೈಕೆ ಕಡಿತಗೊಳಿಸಲಾಗಿದೆ” ಎಂದಿದ್ದಾರೆ.

ದೈರ್ ಅಲ್-ಬಲಾಹ್ ಉಪ್ಪು ನೀರು ಸಂಸ್ಕರಣಾ ಘಟಕವು ಟ್ಯಾಂಕರ್‌ಗಳ ಮೂಲಕ ಹಾಗೂ ಮಧ್ಯ ಮತ್ತು ದಕ್ಷಿಣ ಗಾಝಾದಲ್ಲಿರುವ ದೈರ್ ಅಲ್-ಬಲಾಹ್ ಮತ್ತು ಖಾನ್ ಯೂನುಸ್ ಗವರ್ನರೇಟ್‌ಗಳ ಜಾಲಗಳ ಮೂಲಕ ಗಾಝಾದಲ್ಲಿ 600,000 ಕ್ಕೂ ಹೆಚ್ಚು ಜನರಿಗೆ ಸೇವೆ ಸಲ್ಲಿಸುತ್ತದೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಪ್ರಾರಂಭವಾಗುವ ಮೊದಲು 2 ಮಿಲಿಯನ್‌ಗಿಂತಲೂ ಹೆಚ್ಚು ಜನರ ನೀರಿನ ಅಗತ್ಯದಲ್ಲಿ ಸುಮಾರು 15 ಪ್ರತಿಶತವನ್ನು ಪೂರೈಸಿದ ಗಾಝಾ ಪಟ್ಟಿಯಲ್ಲಿರುವ ಮೂರು ಸಮುದ್ರ ನೀರು ಸಂಸ್ಕರಣಾ ಸೌಲಭ್ಯಗಳಲ್ಲಿ ಇದು ಒಂದಾಗಿದೆ.

ಗಾಝಾ ಪಟ್ಟಿಗೆ ಆಹಾರ ಸರಬರಾಜುಗೆ ತಡೆಯೊಡ್ಡಿದ ಬಳಿಕ ವಿದ್ಯುತ್ ಸರಬರಾಜನ್ನು ಇಸ್ರೇಲ್ ಕಡಿತಗೊಳಿಸಿದೆ.

ಇಸ್ರೇಲ್-ಹಮಾಸ್ ನಡುವಿನ ಕದನ ವಿರಾಮದ ಎರಡನೇ ಹಂತವನ್ನು ಜಾರಿಗೊಳಿಸಲು ಹಮಾಸ್ ನಿರಾಕರಿಸಿದ ಹಿನ್ನೆಲೆ ಆಹಾರ ಮತ್ತು ವಿದ್ಯುತ್ ಸರಬರಾಜು ಕಡಿತಗೊಳಿಸಲಾಗಿದೆ ಎಂದು ಇಸ್ರೇಲ್ ಸಮರ್ಥಿಸಿಕೊಂಡಿದೆ.

ಆದರೆ, ಇಸ್ರೇಲ್ ಕದನ ವಿರಾಮ ಉಲ್ಲಂಘಿಸಿದೆ. ಗಾಝಾದಲ್ಲಿ ಅಲ್ಲಲ್ಲಿ ದಾಳಿ ನಡೆಸಿದೆ. ಪಶ್ಚಿಮ ದಂಡೆಯಲ್ಲಿ ಪ್ಯಾಲೆಸ್ತೀನಿಯರ ಮೇಲೆ ಆಕ್ರಮಣ ನಡೆಸುತ್ತಿದೆ. ಕದನ ವಿರಾಮದ ಒಪ್ಪಂದಂತೆ ಆರಂಭದಲ್ಲಿ ಒತ್ತೆಯಾಳುಗಳಿಗೆ ಬದಲಾಗಿ ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಿತ್ತು. ಟ್ರಂಪ್ ಅವರನ್ನು ನೆತನ್ಯಾಹು ಭೇಟಿಯಾದ ಬಳಿಕ, ಕದನ ವಿರಾಮದ ಒಪ್ಪಂದ ಉಲ್ಲಂಘಿಸಿ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಅಮೆರಿಕ ಮತ್ತು ಇಸ್ರೇಲ್ ಒಟ್ಟಿಗೆ ನಮ್ಮನ್ನು ಬೆದರಿಸುತ್ತದೆ ಎಂದು ಹಮಾಸ್ ಆರೋಪಿಸಿದೆ.

ಒಪ್ಪಂದಂತೆ ಮೊದಲ ಹಂತದಲ್ಲಿ ಪರಸ್ಪರ ಒತ್ತೆಯಾಳುಗಳ ಬಿಡುಗಡೆಯಾಗಬೇಕು. ನಂತರ ಎರಡನೇ ಹಂತದಲ್ಲಿ ಇಸ್ರೇಲ್ ಸೇನೆ ಗಾಝಾ ಬಿಟ್ಟು ತೆರಳಬೇಕು. ಎಲ್ಲವೂ ಆರಂಭದ ಮಾತುಕತೆಯಂತೆಯೇ ಆಗಬೇಕು ಎಂದು ಹಮಾಸ್ ಪಟ್ಟು ಹಿಡಿದಿದೆ.

ಗಾಝಾಗೆ ನೆರವು ನೀಡುವುದಕ್ಕೆ ತಡೆಯೊಡ್ಡಿರುವ ಇಸ್ರೇಲ್ ಕ್ರಮವನ್ನು ಪಾಶ್ಚಿಮಾತ್ಯ ಸರ್ಕಾರಗಳು ಮತ್ತು ಅರಬ್ ರಾಷ್ಟ್ರಗಳು ಖಂಡಿಸಿವೆ. ಆದಾಗ್ಯೂ, ಅಮೆರಿಕ ಇಸ್ರೇಲ್‌ನ ನಿರ್ಧಾರವನ್ನು ಬೆಂಬಲಿಸಿದೆ. ಗಾಝಾ ನಿವಾಸಿಗಳ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಸರಕುಗಳು ಲಭ್ಯವಿದೆ. ಹಮಾಸ್ ಆ ಸರಕುಗಳ ಪೂರೈಕೆಯನ್ನು ಬಳಸಿಕೊಂಡು ಗಾಝಾ ಮೇಲಿನ ತನ್ನ ನಿಯಂತ್ರಣವನ್ನು ಹೆಚ್ಚಿಸುತ್ತಿದೆ. ಇಸ್ರೇಲ್ ಮೇಲಿನ ದಾಳಿಗೆ ಹಣಕಾಸು ಒದಗಿಸುತ್ತಿದೆ ಎಂದು ಇಸ್ರೇಲ್ ಹೇಳಿದೆ.

ಕೆನಡಾದ ಮುಂದಿನ ಪ್ರಧಾನಿಯಾಗಿ ಮಾಜಿ ಕೇಂದ್ರ ಬ್ಯಾಂಕರ್ ಮಾರ್ಕ್ ಕಾರ್ನಿ ನೇಮಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಜನ್‌ಪುರ ಹತ್ಯೆ: ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮುಸ್ಲಿಂ ಯುವಕ ಸಾವು 

"ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮೊಹಮ್ಮದ್ ಆಸಿಫ್ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ" ಎಂದು ಭಜನ್‌ಪುರ ಹತ್ಯೆಯ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮುಂಜಾನೆ ಈಶಾನ್ಯ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ 18 ವರ್ಷದ ಯುವಕನೊಬ್ಬನನ್ನು...

ಹಿಂದೂ, ಬೌದ್ಧ, ಸಿಖ್ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ ಕೋರ್ಟ್

ಒಬ್ಬರು ವ್ಯಕ್ತಿಯು ಒಮ್ಮೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು, ಅದನ್ನೇ ಸಕ್ರಿಯವಾಗಿ ಪ್ರತಿಪಾದಿಸಿ, ಆಚರಿಸಿದರೆ, ಅವರನ್ನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ಸದಸ್ಯರು ಎಂಬುವುದಾಗಿ ಪರಿಗಣಿಸಲಾಗುವುದಿಲ್ಲ ಎಂದು ಆಂಧ್ರ ಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು...

ಮಹಿಳಾ ಸೇನಾಧಿಕಾರಿಗಳು ಶಾಶ್ವತ ಆಯೋಗಕ್ಕೆ ಅರ್ಹರು: ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಮಂಗಳವಾರ, ಅನಿಯಂತ್ರಿತ ಮೌಲ್ಯಮಾಪನದಿಂದಾಗಿ ಶಾಶ್ವತ ಆಯೋಗವನ್ನು ನಿರಾಕರಿಸಲಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮಹಿಳಾ ಕಿರು ಸೇವಾ ಆಯೋಗ (ಎಸ್‌ಎಸ್‌ಸಿ) ಅಧಿಕಾರಿಗಳು ಪೂರ್ಣ ಪಿಂಚಣಿ ಸೌಲಭ್ಯಗಳಿಗೆ ಅರ್ಹರು...

ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ (ಮಾ.23) ಬಿಜೆಪಿ ರಾಜ್ಯ ಘಟಕದ ಸೀಲ್ ಹೊಂದಿರುವ ಚುನಾವಣಾ ಆಯೋಗದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ....

ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿಯ ನ್ಯಾಯಾಲಯವು, ಅವರ ಮೇಲಿನ ಅಪರಾಧಗಳು ಗಂಭೀರ ಮತ್ತು ಜಾಮೀನು ರಹಿತವಾಗಿವೆ ಎಂದು ಹೇಳಿದೆ....

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ಯೂರ್ಟೊ...

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...