Homeಅಂತರಾಷ್ಟ್ರೀಯಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಇಸ್ರೇಲ್

ಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಇಸ್ರೇಲ್

- Advertisement -
- Advertisement -

ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್ ಮೇಲೆ ಒತ್ತಡ ಹೇರುವ ಸಲುವಾಗಿ ಗಾಝಾಗೆ ವಿದ್ಯುತ್ ಸರಬರಾಜನ್ನು ಇಸ್ರೇಲ್ ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ.

ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಹಮಾಸ್ ಮೇಲೆ ಇಸ್ರೇಲ್ ಒತ್ತಡ ಹೇರುತ್ತಲೇ ಇದೆ. ಅದಕ್ಕೆ ಹಮಾಸ್ ಬಗ್ಗದಿದ್ದಾಗ ಅಮೆರಿಕ ಜೊತೆಗೂಡಿ ಗಾಝಾವನ್ನು ನರಕ ಮಾಡುವುದಾಗಿ ಬೆದರಿಕೆ ಹಾಕಿದೆ.

ಯಾವುದೇ ಬೆದರಿಕೆಗೂ ಹಮಾಸ್ ತಲೆಬಾಗದ ಹಿನ್ನೆಲೆ, ಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಕಡಿತಗೊಳಿಸುವಂತೆ ಇಸ್ರೇಲ್ ಇಂಧನ ಸಚಿವ ಎಲಿ ಕೋಹೆನ್ ಅವರು ಇಸ್ರೇಲ್ ಎಲೆಕ್ಟ್ರಿಕ್ ಕಾರ್ಪೊರೇಷನ್‌ಗೆ (ಐಇಸಿ) ಭಾನುವಾರ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಟೈಮ್ಸ್ ಆಫ್ ಇಸ್ರೇಲ್ ವರದಿಯ ಪ್ರಕಾರ, ಸುಮಾರು 24 ಜನರು ಇನ್ನೂ ಹಮಾಸ್ ವಶದಲ್ಲಿ ಒತ್ತೆಯಾಳುಗಳಾಗಿ ಇದ್ದಾರೆ. ಸುಮಾರು 35 ಒತ್ತೆಯಾಳುಗಳ ಮೃತದೇಹಗಳೂ ಹಮಾಸ್ ಬಳಿಯಿದೆ. ಜೀವಂತ ಇರುವವರು ಮತ್ತು ಮೃತರ ದೇಹಗಳನ್ನು ಹಸ್ತಾಂತರಿಸುವಂತೆ ಇಸ್ರೇಲ್ ಹಮಾಸ್‌ಗೆ ಬೇಡಿಕೆ ಇಟ್ಟಿದೆ.

ಸಣ್ಣ ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಸಚಿವ ಎಲಿ ಕೋಹೆನ್, ” ಎಲ್ಲಾ ಒತ್ತೆಯಾಳುಗಳ ಬಿಡುಗಡೆ ಆಗುವವರೆಗೆ ನಾವು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತೇವೆ. ಎಲ್ಲರೂ ಸುರಕ್ಷಿತವಾಗಿ ಬಿಡುಗಡೆಯಾದ ಮರುದಿನ ಗಾಝಾದಲ್ಲಿ ಹಮಾಸ್ ಇರುವುದಿಲ್ಲ” ಎಂದಿದ್ದಾರೆ.

ಟೈಮ್ಸ್ ಆಫ್ ಇಸ್ರೇಲ್ ಜೊತೆ ಮಾತನಾಡಿರುವ ಇಸ್ರೇಲ್ ಅಧಿಕಾರಿಯೊಬ್ಬರು ಸಚಿವ ಕೋಹೆನ್ ಅವರ ಹೇಳಿಕೆ ನಾಟಕೀಯವಾದದ್ದು ಎಂದಿದ್ದಾರೆ. “ಅಕ್ಟೋಬರ್ 7, 2023ರಂದು ಇಸ್ರೇಲ್ ಮೇಲ್ ಹಮಾಸ್ ದಾಳಿ ನಡೆಸಿದ ದಿನದಿಂದ ಗಾಝಾಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಅದಾಗ್ಯೂ, ನವೆಂಬರ್‌ನಲ್ಲಿ ಮಧ್ಯ ಗಾಝಾದ ದೈರ್ ಅಲ್-ಬಲಾಹ್ ಬಳಿಯ ಉಪ್ಪುನೀರಿನ ಸಂಸ್ಕರಣಾ ಘಟಕಕ್ಕೆ ವಿದ್ಯುತ್ ಪೂರೈಕೆ ಮಾಡುವುದಾಗಿ ಇಸ್ರೇಲ್ ಹೇಳಿತ್ತು. ಅಸಲಿಗೆ ಆ ಘಟಕಕ್ಕೆ ವಿದ್ಯುತ್ ಪೂರೈಕೆ ಕಡಿತಗೊಳಿಸಲಾಗಿದೆ” ಎಂದಿದ್ದಾರೆ.

ದೈರ್ ಅಲ್-ಬಲಾಹ್ ಉಪ್ಪು ನೀರು ಸಂಸ್ಕರಣಾ ಘಟಕವು ಟ್ಯಾಂಕರ್‌ಗಳ ಮೂಲಕ ಹಾಗೂ ಮಧ್ಯ ಮತ್ತು ದಕ್ಷಿಣ ಗಾಝಾದಲ್ಲಿರುವ ದೈರ್ ಅಲ್-ಬಲಾಹ್ ಮತ್ತು ಖಾನ್ ಯೂನುಸ್ ಗವರ್ನರೇಟ್‌ಗಳ ಜಾಲಗಳ ಮೂಲಕ ಗಾಝಾದಲ್ಲಿ 600,000 ಕ್ಕೂ ಹೆಚ್ಚು ಜನರಿಗೆ ಸೇವೆ ಸಲ್ಲಿಸುತ್ತದೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಪ್ರಾರಂಭವಾಗುವ ಮೊದಲು 2 ಮಿಲಿಯನ್‌ಗಿಂತಲೂ ಹೆಚ್ಚು ಜನರ ನೀರಿನ ಅಗತ್ಯದಲ್ಲಿ ಸುಮಾರು 15 ಪ್ರತಿಶತವನ್ನು ಪೂರೈಸಿದ ಗಾಝಾ ಪಟ್ಟಿಯಲ್ಲಿರುವ ಮೂರು ಸಮುದ್ರ ನೀರು ಸಂಸ್ಕರಣಾ ಸೌಲಭ್ಯಗಳಲ್ಲಿ ಇದು ಒಂದಾಗಿದೆ.

ಗಾಝಾ ಪಟ್ಟಿಗೆ ಆಹಾರ ಸರಬರಾಜುಗೆ ತಡೆಯೊಡ್ಡಿದ ಬಳಿಕ ವಿದ್ಯುತ್ ಸರಬರಾಜನ್ನು ಇಸ್ರೇಲ್ ಕಡಿತಗೊಳಿಸಿದೆ.

ಇಸ್ರೇಲ್-ಹಮಾಸ್ ನಡುವಿನ ಕದನ ವಿರಾಮದ ಎರಡನೇ ಹಂತವನ್ನು ಜಾರಿಗೊಳಿಸಲು ಹಮಾಸ್ ನಿರಾಕರಿಸಿದ ಹಿನ್ನೆಲೆ ಆಹಾರ ಮತ್ತು ವಿದ್ಯುತ್ ಸರಬರಾಜು ಕಡಿತಗೊಳಿಸಲಾಗಿದೆ ಎಂದು ಇಸ್ರೇಲ್ ಸಮರ್ಥಿಸಿಕೊಂಡಿದೆ.

ಆದರೆ, ಇಸ್ರೇಲ್ ಕದನ ವಿರಾಮ ಉಲ್ಲಂಘಿಸಿದೆ. ಗಾಝಾದಲ್ಲಿ ಅಲ್ಲಲ್ಲಿ ದಾಳಿ ನಡೆಸಿದೆ. ಪಶ್ಚಿಮ ದಂಡೆಯಲ್ಲಿ ಪ್ಯಾಲೆಸ್ತೀನಿಯರ ಮೇಲೆ ಆಕ್ರಮಣ ನಡೆಸುತ್ತಿದೆ. ಕದನ ವಿರಾಮದ ಒಪ್ಪಂದಂತೆ ಆರಂಭದಲ್ಲಿ ಒತ್ತೆಯಾಳುಗಳಿಗೆ ಬದಲಾಗಿ ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಿತ್ತು. ಟ್ರಂಪ್ ಅವರನ್ನು ನೆತನ್ಯಾಹು ಭೇಟಿಯಾದ ಬಳಿಕ, ಕದನ ವಿರಾಮದ ಒಪ್ಪಂದ ಉಲ್ಲಂಘಿಸಿ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಅಮೆರಿಕ ಮತ್ತು ಇಸ್ರೇಲ್ ಒಟ್ಟಿಗೆ ನಮ್ಮನ್ನು ಬೆದರಿಸುತ್ತದೆ ಎಂದು ಹಮಾಸ್ ಆರೋಪಿಸಿದೆ.

ಒಪ್ಪಂದಂತೆ ಮೊದಲ ಹಂತದಲ್ಲಿ ಪರಸ್ಪರ ಒತ್ತೆಯಾಳುಗಳ ಬಿಡುಗಡೆಯಾಗಬೇಕು. ನಂತರ ಎರಡನೇ ಹಂತದಲ್ಲಿ ಇಸ್ರೇಲ್ ಸೇನೆ ಗಾಝಾ ಬಿಟ್ಟು ತೆರಳಬೇಕು. ಎಲ್ಲವೂ ಆರಂಭದ ಮಾತುಕತೆಯಂತೆಯೇ ಆಗಬೇಕು ಎಂದು ಹಮಾಸ್ ಪಟ್ಟು ಹಿಡಿದಿದೆ.

ಗಾಝಾಗೆ ನೆರವು ನೀಡುವುದಕ್ಕೆ ತಡೆಯೊಡ್ಡಿರುವ ಇಸ್ರೇಲ್ ಕ್ರಮವನ್ನು ಪಾಶ್ಚಿಮಾತ್ಯ ಸರ್ಕಾರಗಳು ಮತ್ತು ಅರಬ್ ರಾಷ್ಟ್ರಗಳು ಖಂಡಿಸಿವೆ. ಆದಾಗ್ಯೂ, ಅಮೆರಿಕ ಇಸ್ರೇಲ್‌ನ ನಿರ್ಧಾರವನ್ನು ಬೆಂಬಲಿಸಿದೆ. ಗಾಝಾ ನಿವಾಸಿಗಳ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಸರಕುಗಳು ಲಭ್ಯವಿದೆ. ಹಮಾಸ್ ಆ ಸರಕುಗಳ ಪೂರೈಕೆಯನ್ನು ಬಳಸಿಕೊಂಡು ಗಾಝಾ ಮೇಲಿನ ತನ್ನ ನಿಯಂತ್ರಣವನ್ನು ಹೆಚ್ಚಿಸುತ್ತಿದೆ. ಇಸ್ರೇಲ್ ಮೇಲಿನ ದಾಳಿಗೆ ಹಣಕಾಸು ಒದಗಿಸುತ್ತಿದೆ ಎಂದು ಇಸ್ರೇಲ್ ಹೇಳಿದೆ.

ಕೆನಡಾದ ಮುಂದಿನ ಪ್ರಧಾನಿಯಾಗಿ ಮಾಜಿ ಕೇಂದ್ರ ಬ್ಯಾಂಕರ್ ಮಾರ್ಕ್ ಕಾರ್ನಿ ನೇಮಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...