Homeಅಂತರಾಷ್ಟ್ರೀಯಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಇಸ್ರೇಲ್

ಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಇಸ್ರೇಲ್

- Advertisement -
- Advertisement -

ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್ ಮೇಲೆ ಒತ್ತಡ ಹೇರುವ ಸಲುವಾಗಿ ಗಾಝಾಗೆ ವಿದ್ಯುತ್ ಸರಬರಾಜನ್ನು ಇಸ್ರೇಲ್ ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ.

ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಹಮಾಸ್ ಮೇಲೆ ಇಸ್ರೇಲ್ ಒತ್ತಡ ಹೇರುತ್ತಲೇ ಇದೆ. ಅದಕ್ಕೆ ಹಮಾಸ್ ಬಗ್ಗದಿದ್ದಾಗ ಅಮೆರಿಕ ಜೊತೆಗೂಡಿ ಗಾಝಾವನ್ನು ನರಕ ಮಾಡುವುದಾಗಿ ಬೆದರಿಕೆ ಹಾಕಿದೆ.

ಯಾವುದೇ ಬೆದರಿಕೆಗೂ ಹಮಾಸ್ ತಲೆಬಾಗದ ಹಿನ್ನೆಲೆ, ಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಕಡಿತಗೊಳಿಸುವಂತೆ ಇಸ್ರೇಲ್ ಇಂಧನ ಸಚಿವ ಎಲಿ ಕೋಹೆನ್ ಅವರು ಇಸ್ರೇಲ್ ಎಲೆಕ್ಟ್ರಿಕ್ ಕಾರ್ಪೊರೇಷನ್‌ಗೆ (ಐಇಸಿ) ಭಾನುವಾರ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಟೈಮ್ಸ್ ಆಫ್ ಇಸ್ರೇಲ್ ವರದಿಯ ಪ್ರಕಾರ, ಸುಮಾರು 24 ಜನರು ಇನ್ನೂ ಹಮಾಸ್ ವಶದಲ್ಲಿ ಒತ್ತೆಯಾಳುಗಳಾಗಿ ಇದ್ದಾರೆ. ಸುಮಾರು 35 ಒತ್ತೆಯಾಳುಗಳ ಮೃತದೇಹಗಳೂ ಹಮಾಸ್ ಬಳಿಯಿದೆ. ಜೀವಂತ ಇರುವವರು ಮತ್ತು ಮೃತರ ದೇಹಗಳನ್ನು ಹಸ್ತಾಂತರಿಸುವಂತೆ ಇಸ್ರೇಲ್ ಹಮಾಸ್‌ಗೆ ಬೇಡಿಕೆ ಇಟ್ಟಿದೆ.

ಸಣ್ಣ ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಸಚಿವ ಎಲಿ ಕೋಹೆನ್, ” ಎಲ್ಲಾ ಒತ್ತೆಯಾಳುಗಳ ಬಿಡುಗಡೆ ಆಗುವವರೆಗೆ ನಾವು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತೇವೆ. ಎಲ್ಲರೂ ಸುರಕ್ಷಿತವಾಗಿ ಬಿಡುಗಡೆಯಾದ ಮರುದಿನ ಗಾಝಾದಲ್ಲಿ ಹಮಾಸ್ ಇರುವುದಿಲ್ಲ” ಎಂದಿದ್ದಾರೆ.

ಟೈಮ್ಸ್ ಆಫ್ ಇಸ್ರೇಲ್ ಜೊತೆ ಮಾತನಾಡಿರುವ ಇಸ್ರೇಲ್ ಅಧಿಕಾರಿಯೊಬ್ಬರು ಸಚಿವ ಕೋಹೆನ್ ಅವರ ಹೇಳಿಕೆ ನಾಟಕೀಯವಾದದ್ದು ಎಂದಿದ್ದಾರೆ. “ಅಕ್ಟೋಬರ್ 7, 2023ರಂದು ಇಸ್ರೇಲ್ ಮೇಲ್ ಹಮಾಸ್ ದಾಳಿ ನಡೆಸಿದ ದಿನದಿಂದ ಗಾಝಾಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಅದಾಗ್ಯೂ, ನವೆಂಬರ್‌ನಲ್ಲಿ ಮಧ್ಯ ಗಾಝಾದ ದೈರ್ ಅಲ್-ಬಲಾಹ್ ಬಳಿಯ ಉಪ್ಪುನೀರಿನ ಸಂಸ್ಕರಣಾ ಘಟಕಕ್ಕೆ ವಿದ್ಯುತ್ ಪೂರೈಕೆ ಮಾಡುವುದಾಗಿ ಇಸ್ರೇಲ್ ಹೇಳಿತ್ತು. ಅಸಲಿಗೆ ಆ ಘಟಕಕ್ಕೆ ವಿದ್ಯುತ್ ಪೂರೈಕೆ ಕಡಿತಗೊಳಿಸಲಾಗಿದೆ” ಎಂದಿದ್ದಾರೆ.

ದೈರ್ ಅಲ್-ಬಲಾಹ್ ಉಪ್ಪು ನೀರು ಸಂಸ್ಕರಣಾ ಘಟಕವು ಟ್ಯಾಂಕರ್‌ಗಳ ಮೂಲಕ ಹಾಗೂ ಮಧ್ಯ ಮತ್ತು ದಕ್ಷಿಣ ಗಾಝಾದಲ್ಲಿರುವ ದೈರ್ ಅಲ್-ಬಲಾಹ್ ಮತ್ತು ಖಾನ್ ಯೂನುಸ್ ಗವರ್ನರೇಟ್‌ಗಳ ಜಾಲಗಳ ಮೂಲಕ ಗಾಝಾದಲ್ಲಿ 600,000 ಕ್ಕೂ ಹೆಚ್ಚು ಜನರಿಗೆ ಸೇವೆ ಸಲ್ಲಿಸುತ್ತದೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಪ್ರಾರಂಭವಾಗುವ ಮೊದಲು 2 ಮಿಲಿಯನ್‌ಗಿಂತಲೂ ಹೆಚ್ಚು ಜನರ ನೀರಿನ ಅಗತ್ಯದಲ್ಲಿ ಸುಮಾರು 15 ಪ್ರತಿಶತವನ್ನು ಪೂರೈಸಿದ ಗಾಝಾ ಪಟ್ಟಿಯಲ್ಲಿರುವ ಮೂರು ಸಮುದ್ರ ನೀರು ಸಂಸ್ಕರಣಾ ಸೌಲಭ್ಯಗಳಲ್ಲಿ ಇದು ಒಂದಾಗಿದೆ.

ಗಾಝಾ ಪಟ್ಟಿಗೆ ಆಹಾರ ಸರಬರಾಜುಗೆ ತಡೆಯೊಡ್ಡಿದ ಬಳಿಕ ವಿದ್ಯುತ್ ಸರಬರಾಜನ್ನು ಇಸ್ರೇಲ್ ಕಡಿತಗೊಳಿಸಿದೆ.

ಇಸ್ರೇಲ್-ಹಮಾಸ್ ನಡುವಿನ ಕದನ ವಿರಾಮದ ಎರಡನೇ ಹಂತವನ್ನು ಜಾರಿಗೊಳಿಸಲು ಹಮಾಸ್ ನಿರಾಕರಿಸಿದ ಹಿನ್ನೆಲೆ ಆಹಾರ ಮತ್ತು ವಿದ್ಯುತ್ ಸರಬರಾಜು ಕಡಿತಗೊಳಿಸಲಾಗಿದೆ ಎಂದು ಇಸ್ರೇಲ್ ಸಮರ್ಥಿಸಿಕೊಂಡಿದೆ.

ಆದರೆ, ಇಸ್ರೇಲ್ ಕದನ ವಿರಾಮ ಉಲ್ಲಂಘಿಸಿದೆ. ಗಾಝಾದಲ್ಲಿ ಅಲ್ಲಲ್ಲಿ ದಾಳಿ ನಡೆಸಿದೆ. ಪಶ್ಚಿಮ ದಂಡೆಯಲ್ಲಿ ಪ್ಯಾಲೆಸ್ತೀನಿಯರ ಮೇಲೆ ಆಕ್ರಮಣ ನಡೆಸುತ್ತಿದೆ. ಕದನ ವಿರಾಮದ ಒಪ್ಪಂದಂತೆ ಆರಂಭದಲ್ಲಿ ಒತ್ತೆಯಾಳುಗಳಿಗೆ ಬದಲಾಗಿ ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಿತ್ತು. ಟ್ರಂಪ್ ಅವರನ್ನು ನೆತನ್ಯಾಹು ಭೇಟಿಯಾದ ಬಳಿಕ, ಕದನ ವಿರಾಮದ ಒಪ್ಪಂದ ಉಲ್ಲಂಘಿಸಿ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಅಮೆರಿಕ ಮತ್ತು ಇಸ್ರೇಲ್ ಒಟ್ಟಿಗೆ ನಮ್ಮನ್ನು ಬೆದರಿಸುತ್ತದೆ ಎಂದು ಹಮಾಸ್ ಆರೋಪಿಸಿದೆ.

ಒಪ್ಪಂದಂತೆ ಮೊದಲ ಹಂತದಲ್ಲಿ ಪರಸ್ಪರ ಒತ್ತೆಯಾಳುಗಳ ಬಿಡುಗಡೆಯಾಗಬೇಕು. ನಂತರ ಎರಡನೇ ಹಂತದಲ್ಲಿ ಇಸ್ರೇಲ್ ಸೇನೆ ಗಾಝಾ ಬಿಟ್ಟು ತೆರಳಬೇಕು. ಎಲ್ಲವೂ ಆರಂಭದ ಮಾತುಕತೆಯಂತೆಯೇ ಆಗಬೇಕು ಎಂದು ಹಮಾಸ್ ಪಟ್ಟು ಹಿಡಿದಿದೆ.

ಗಾಝಾಗೆ ನೆರವು ನೀಡುವುದಕ್ಕೆ ತಡೆಯೊಡ್ಡಿರುವ ಇಸ್ರೇಲ್ ಕ್ರಮವನ್ನು ಪಾಶ್ಚಿಮಾತ್ಯ ಸರ್ಕಾರಗಳು ಮತ್ತು ಅರಬ್ ರಾಷ್ಟ್ರಗಳು ಖಂಡಿಸಿವೆ. ಆದಾಗ್ಯೂ, ಅಮೆರಿಕ ಇಸ್ರೇಲ್‌ನ ನಿರ್ಧಾರವನ್ನು ಬೆಂಬಲಿಸಿದೆ. ಗಾಝಾ ನಿವಾಸಿಗಳ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಸರಕುಗಳು ಲಭ್ಯವಿದೆ. ಹಮಾಸ್ ಆ ಸರಕುಗಳ ಪೂರೈಕೆಯನ್ನು ಬಳಸಿಕೊಂಡು ಗಾಝಾ ಮೇಲಿನ ತನ್ನ ನಿಯಂತ್ರಣವನ್ನು ಹೆಚ್ಚಿಸುತ್ತಿದೆ. ಇಸ್ರೇಲ್ ಮೇಲಿನ ದಾಳಿಗೆ ಹಣಕಾಸು ಒದಗಿಸುತ್ತಿದೆ ಎಂದು ಇಸ್ರೇಲ್ ಹೇಳಿದೆ.

ಕೆನಡಾದ ಮುಂದಿನ ಪ್ರಧಾನಿಯಾಗಿ ಮಾಜಿ ಕೇಂದ್ರ ಬ್ಯಾಂಕರ್ ಮಾರ್ಕ್ ಕಾರ್ನಿ ನೇಮಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...