Homeಅಂತರಾಷ್ಟ್ರೀಯಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಇಸ್ರೇಲ್

ಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಇಸ್ರೇಲ್

- Advertisement -
- Advertisement -

ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್ ಮೇಲೆ ಒತ್ತಡ ಹೇರುವ ಸಲುವಾಗಿ ಗಾಝಾಗೆ ವಿದ್ಯುತ್ ಸರಬರಾಜನ್ನು ಇಸ್ರೇಲ್ ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ.

ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಹಮಾಸ್ ಮೇಲೆ ಇಸ್ರೇಲ್ ಒತ್ತಡ ಹೇರುತ್ತಲೇ ಇದೆ. ಅದಕ್ಕೆ ಹಮಾಸ್ ಬಗ್ಗದಿದ್ದಾಗ ಅಮೆರಿಕ ಜೊತೆಗೂಡಿ ಗಾಝಾವನ್ನು ನರಕ ಮಾಡುವುದಾಗಿ ಬೆದರಿಕೆ ಹಾಕಿದೆ.

ಯಾವುದೇ ಬೆದರಿಕೆಗೂ ಹಮಾಸ್ ತಲೆಬಾಗದ ಹಿನ್ನೆಲೆ, ಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಕಡಿತಗೊಳಿಸುವಂತೆ ಇಸ್ರೇಲ್ ಇಂಧನ ಸಚಿವ ಎಲಿ ಕೋಹೆನ್ ಅವರು ಇಸ್ರೇಲ್ ಎಲೆಕ್ಟ್ರಿಕ್ ಕಾರ್ಪೊರೇಷನ್‌ಗೆ (ಐಇಸಿ) ಭಾನುವಾರ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಟೈಮ್ಸ್ ಆಫ್ ಇಸ್ರೇಲ್ ವರದಿಯ ಪ್ರಕಾರ, ಸುಮಾರು 24 ಜನರು ಇನ್ನೂ ಹಮಾಸ್ ವಶದಲ್ಲಿ ಒತ್ತೆಯಾಳುಗಳಾಗಿ ಇದ್ದಾರೆ. ಸುಮಾರು 35 ಒತ್ತೆಯಾಳುಗಳ ಮೃತದೇಹಗಳೂ ಹಮಾಸ್ ಬಳಿಯಿದೆ. ಜೀವಂತ ಇರುವವರು ಮತ್ತು ಮೃತರ ದೇಹಗಳನ್ನು ಹಸ್ತಾಂತರಿಸುವಂತೆ ಇಸ್ರೇಲ್ ಹಮಾಸ್‌ಗೆ ಬೇಡಿಕೆ ಇಟ್ಟಿದೆ.

ಸಣ್ಣ ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಸಚಿವ ಎಲಿ ಕೋಹೆನ್, ” ಎಲ್ಲಾ ಒತ್ತೆಯಾಳುಗಳ ಬಿಡುಗಡೆ ಆಗುವವರೆಗೆ ನಾವು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತೇವೆ. ಎಲ್ಲರೂ ಸುರಕ್ಷಿತವಾಗಿ ಬಿಡುಗಡೆಯಾದ ಮರುದಿನ ಗಾಝಾದಲ್ಲಿ ಹಮಾಸ್ ಇರುವುದಿಲ್ಲ” ಎಂದಿದ್ದಾರೆ.

ಟೈಮ್ಸ್ ಆಫ್ ಇಸ್ರೇಲ್ ಜೊತೆ ಮಾತನಾಡಿರುವ ಇಸ್ರೇಲ್ ಅಧಿಕಾರಿಯೊಬ್ಬರು ಸಚಿವ ಕೋಹೆನ್ ಅವರ ಹೇಳಿಕೆ ನಾಟಕೀಯವಾದದ್ದು ಎಂದಿದ್ದಾರೆ. “ಅಕ್ಟೋಬರ್ 7, 2023ರಂದು ಇಸ್ರೇಲ್ ಮೇಲ್ ಹಮಾಸ್ ದಾಳಿ ನಡೆಸಿದ ದಿನದಿಂದ ಗಾಝಾಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಅದಾಗ್ಯೂ, ನವೆಂಬರ್‌ನಲ್ಲಿ ಮಧ್ಯ ಗಾಝಾದ ದೈರ್ ಅಲ್-ಬಲಾಹ್ ಬಳಿಯ ಉಪ್ಪುನೀರಿನ ಸಂಸ್ಕರಣಾ ಘಟಕಕ್ಕೆ ವಿದ್ಯುತ್ ಪೂರೈಕೆ ಮಾಡುವುದಾಗಿ ಇಸ್ರೇಲ್ ಹೇಳಿತ್ತು. ಅಸಲಿಗೆ ಆ ಘಟಕಕ್ಕೆ ವಿದ್ಯುತ್ ಪೂರೈಕೆ ಕಡಿತಗೊಳಿಸಲಾಗಿದೆ” ಎಂದಿದ್ದಾರೆ.

ದೈರ್ ಅಲ್-ಬಲಾಹ್ ಉಪ್ಪು ನೀರು ಸಂಸ್ಕರಣಾ ಘಟಕವು ಟ್ಯಾಂಕರ್‌ಗಳ ಮೂಲಕ ಹಾಗೂ ಮಧ್ಯ ಮತ್ತು ದಕ್ಷಿಣ ಗಾಝಾದಲ್ಲಿರುವ ದೈರ್ ಅಲ್-ಬಲಾಹ್ ಮತ್ತು ಖಾನ್ ಯೂನುಸ್ ಗವರ್ನರೇಟ್‌ಗಳ ಜಾಲಗಳ ಮೂಲಕ ಗಾಝಾದಲ್ಲಿ 600,000 ಕ್ಕೂ ಹೆಚ್ಚು ಜನರಿಗೆ ಸೇವೆ ಸಲ್ಲಿಸುತ್ತದೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಪ್ರಾರಂಭವಾಗುವ ಮೊದಲು 2 ಮಿಲಿಯನ್‌ಗಿಂತಲೂ ಹೆಚ್ಚು ಜನರ ನೀರಿನ ಅಗತ್ಯದಲ್ಲಿ ಸುಮಾರು 15 ಪ್ರತಿಶತವನ್ನು ಪೂರೈಸಿದ ಗಾಝಾ ಪಟ್ಟಿಯಲ್ಲಿರುವ ಮೂರು ಸಮುದ್ರ ನೀರು ಸಂಸ್ಕರಣಾ ಸೌಲಭ್ಯಗಳಲ್ಲಿ ಇದು ಒಂದಾಗಿದೆ.

ಗಾಝಾ ಪಟ್ಟಿಗೆ ಆಹಾರ ಸರಬರಾಜುಗೆ ತಡೆಯೊಡ್ಡಿದ ಬಳಿಕ ವಿದ್ಯುತ್ ಸರಬರಾಜನ್ನು ಇಸ್ರೇಲ್ ಕಡಿತಗೊಳಿಸಿದೆ.

ಇಸ್ರೇಲ್-ಹಮಾಸ್ ನಡುವಿನ ಕದನ ವಿರಾಮದ ಎರಡನೇ ಹಂತವನ್ನು ಜಾರಿಗೊಳಿಸಲು ಹಮಾಸ್ ನಿರಾಕರಿಸಿದ ಹಿನ್ನೆಲೆ ಆಹಾರ ಮತ್ತು ವಿದ್ಯುತ್ ಸರಬರಾಜು ಕಡಿತಗೊಳಿಸಲಾಗಿದೆ ಎಂದು ಇಸ್ರೇಲ್ ಸಮರ್ಥಿಸಿಕೊಂಡಿದೆ.

ಆದರೆ, ಇಸ್ರೇಲ್ ಕದನ ವಿರಾಮ ಉಲ್ಲಂಘಿಸಿದೆ. ಗಾಝಾದಲ್ಲಿ ಅಲ್ಲಲ್ಲಿ ದಾಳಿ ನಡೆಸಿದೆ. ಪಶ್ಚಿಮ ದಂಡೆಯಲ್ಲಿ ಪ್ಯಾಲೆಸ್ತೀನಿಯರ ಮೇಲೆ ಆಕ್ರಮಣ ನಡೆಸುತ್ತಿದೆ. ಕದನ ವಿರಾಮದ ಒಪ್ಪಂದಂತೆ ಆರಂಭದಲ್ಲಿ ಒತ್ತೆಯಾಳುಗಳಿಗೆ ಬದಲಾಗಿ ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಿತ್ತು. ಟ್ರಂಪ್ ಅವರನ್ನು ನೆತನ್ಯಾಹು ಭೇಟಿಯಾದ ಬಳಿಕ, ಕದನ ವಿರಾಮದ ಒಪ್ಪಂದ ಉಲ್ಲಂಘಿಸಿ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಅಮೆರಿಕ ಮತ್ತು ಇಸ್ರೇಲ್ ಒಟ್ಟಿಗೆ ನಮ್ಮನ್ನು ಬೆದರಿಸುತ್ತದೆ ಎಂದು ಹಮಾಸ್ ಆರೋಪಿಸಿದೆ.

ಒಪ್ಪಂದಂತೆ ಮೊದಲ ಹಂತದಲ್ಲಿ ಪರಸ್ಪರ ಒತ್ತೆಯಾಳುಗಳ ಬಿಡುಗಡೆಯಾಗಬೇಕು. ನಂತರ ಎರಡನೇ ಹಂತದಲ್ಲಿ ಇಸ್ರೇಲ್ ಸೇನೆ ಗಾಝಾ ಬಿಟ್ಟು ತೆರಳಬೇಕು. ಎಲ್ಲವೂ ಆರಂಭದ ಮಾತುಕತೆಯಂತೆಯೇ ಆಗಬೇಕು ಎಂದು ಹಮಾಸ್ ಪಟ್ಟು ಹಿಡಿದಿದೆ.

ಗಾಝಾಗೆ ನೆರವು ನೀಡುವುದಕ್ಕೆ ತಡೆಯೊಡ್ಡಿರುವ ಇಸ್ರೇಲ್ ಕ್ರಮವನ್ನು ಪಾಶ್ಚಿಮಾತ್ಯ ಸರ್ಕಾರಗಳು ಮತ್ತು ಅರಬ್ ರಾಷ್ಟ್ರಗಳು ಖಂಡಿಸಿವೆ. ಆದಾಗ್ಯೂ, ಅಮೆರಿಕ ಇಸ್ರೇಲ್‌ನ ನಿರ್ಧಾರವನ್ನು ಬೆಂಬಲಿಸಿದೆ. ಗಾಝಾ ನಿವಾಸಿಗಳ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಸರಕುಗಳು ಲಭ್ಯವಿದೆ. ಹಮಾಸ್ ಆ ಸರಕುಗಳ ಪೂರೈಕೆಯನ್ನು ಬಳಸಿಕೊಂಡು ಗಾಝಾ ಮೇಲಿನ ತನ್ನ ನಿಯಂತ್ರಣವನ್ನು ಹೆಚ್ಚಿಸುತ್ತಿದೆ. ಇಸ್ರೇಲ್ ಮೇಲಿನ ದಾಳಿಗೆ ಹಣಕಾಸು ಒದಗಿಸುತ್ತಿದೆ ಎಂದು ಇಸ್ರೇಲ್ ಹೇಳಿದೆ.

ಕೆನಡಾದ ಮುಂದಿನ ಪ್ರಧಾನಿಯಾಗಿ ಮಾಜಿ ಕೇಂದ್ರ ಬ್ಯಾಂಕರ್ ಮಾರ್ಕ್ ಕಾರ್ನಿ ನೇಮಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...