Homeಅಂತರಾಷ್ಟ್ರೀಯಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಇಸ್ರೇಲ್

ಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಇಸ್ರೇಲ್

- Advertisement -
- Advertisement -

ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್ ಮೇಲೆ ಒತ್ತಡ ಹೇರುವ ಸಲುವಾಗಿ ಗಾಝಾಗೆ ವಿದ್ಯುತ್ ಸರಬರಾಜನ್ನು ಇಸ್ರೇಲ್ ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ.

ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಹಮಾಸ್ ಮೇಲೆ ಇಸ್ರೇಲ್ ಒತ್ತಡ ಹೇರುತ್ತಲೇ ಇದೆ. ಅದಕ್ಕೆ ಹಮಾಸ್ ಬಗ್ಗದಿದ್ದಾಗ ಅಮೆರಿಕ ಜೊತೆಗೂಡಿ ಗಾಝಾವನ್ನು ನರಕ ಮಾಡುವುದಾಗಿ ಬೆದರಿಕೆ ಹಾಕಿದೆ.

ಯಾವುದೇ ಬೆದರಿಕೆಗೂ ಹಮಾಸ್ ತಲೆಬಾಗದ ಹಿನ್ನೆಲೆ, ಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಕಡಿತಗೊಳಿಸುವಂತೆ ಇಸ್ರೇಲ್ ಇಂಧನ ಸಚಿವ ಎಲಿ ಕೋಹೆನ್ ಅವರು ಇಸ್ರೇಲ್ ಎಲೆಕ್ಟ್ರಿಕ್ ಕಾರ್ಪೊರೇಷನ್‌ಗೆ (ಐಇಸಿ) ಭಾನುವಾರ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಟೈಮ್ಸ್ ಆಫ್ ಇಸ್ರೇಲ್ ವರದಿಯ ಪ್ರಕಾರ, ಸುಮಾರು 24 ಜನರು ಇನ್ನೂ ಹಮಾಸ್ ವಶದಲ್ಲಿ ಒತ್ತೆಯಾಳುಗಳಾಗಿ ಇದ್ದಾರೆ. ಸುಮಾರು 35 ಒತ್ತೆಯಾಳುಗಳ ಮೃತದೇಹಗಳೂ ಹಮಾಸ್ ಬಳಿಯಿದೆ. ಜೀವಂತ ಇರುವವರು ಮತ್ತು ಮೃತರ ದೇಹಗಳನ್ನು ಹಸ್ತಾಂತರಿಸುವಂತೆ ಇಸ್ರೇಲ್ ಹಮಾಸ್‌ಗೆ ಬೇಡಿಕೆ ಇಟ್ಟಿದೆ.

ಸಣ್ಣ ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಸಚಿವ ಎಲಿ ಕೋಹೆನ್, ” ಎಲ್ಲಾ ಒತ್ತೆಯಾಳುಗಳ ಬಿಡುಗಡೆ ಆಗುವವರೆಗೆ ನಾವು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತೇವೆ. ಎಲ್ಲರೂ ಸುರಕ್ಷಿತವಾಗಿ ಬಿಡುಗಡೆಯಾದ ಮರುದಿನ ಗಾಝಾದಲ್ಲಿ ಹಮಾಸ್ ಇರುವುದಿಲ್ಲ” ಎಂದಿದ್ದಾರೆ.

ಟೈಮ್ಸ್ ಆಫ್ ಇಸ್ರೇಲ್ ಜೊತೆ ಮಾತನಾಡಿರುವ ಇಸ್ರೇಲ್ ಅಧಿಕಾರಿಯೊಬ್ಬರು ಸಚಿವ ಕೋಹೆನ್ ಅವರ ಹೇಳಿಕೆ ನಾಟಕೀಯವಾದದ್ದು ಎಂದಿದ್ದಾರೆ. “ಅಕ್ಟೋಬರ್ 7, 2023ರಂದು ಇಸ್ರೇಲ್ ಮೇಲ್ ಹಮಾಸ್ ದಾಳಿ ನಡೆಸಿದ ದಿನದಿಂದ ಗಾಝಾಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಅದಾಗ್ಯೂ, ನವೆಂಬರ್‌ನಲ್ಲಿ ಮಧ್ಯ ಗಾಝಾದ ದೈರ್ ಅಲ್-ಬಲಾಹ್ ಬಳಿಯ ಉಪ್ಪುನೀರಿನ ಸಂಸ್ಕರಣಾ ಘಟಕಕ್ಕೆ ವಿದ್ಯುತ್ ಪೂರೈಕೆ ಮಾಡುವುದಾಗಿ ಇಸ್ರೇಲ್ ಹೇಳಿತ್ತು. ಅಸಲಿಗೆ ಆ ಘಟಕಕ್ಕೆ ವಿದ್ಯುತ್ ಪೂರೈಕೆ ಕಡಿತಗೊಳಿಸಲಾಗಿದೆ” ಎಂದಿದ್ದಾರೆ.

ದೈರ್ ಅಲ್-ಬಲಾಹ್ ಉಪ್ಪು ನೀರು ಸಂಸ್ಕರಣಾ ಘಟಕವು ಟ್ಯಾಂಕರ್‌ಗಳ ಮೂಲಕ ಹಾಗೂ ಮಧ್ಯ ಮತ್ತು ದಕ್ಷಿಣ ಗಾಝಾದಲ್ಲಿರುವ ದೈರ್ ಅಲ್-ಬಲಾಹ್ ಮತ್ತು ಖಾನ್ ಯೂನುಸ್ ಗವರ್ನರೇಟ್‌ಗಳ ಜಾಲಗಳ ಮೂಲಕ ಗಾಝಾದಲ್ಲಿ 600,000 ಕ್ಕೂ ಹೆಚ್ಚು ಜನರಿಗೆ ಸೇವೆ ಸಲ್ಲಿಸುತ್ತದೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಪ್ರಾರಂಭವಾಗುವ ಮೊದಲು 2 ಮಿಲಿಯನ್‌ಗಿಂತಲೂ ಹೆಚ್ಚು ಜನರ ನೀರಿನ ಅಗತ್ಯದಲ್ಲಿ ಸುಮಾರು 15 ಪ್ರತಿಶತವನ್ನು ಪೂರೈಸಿದ ಗಾಝಾ ಪಟ್ಟಿಯಲ್ಲಿರುವ ಮೂರು ಸಮುದ್ರ ನೀರು ಸಂಸ್ಕರಣಾ ಸೌಲಭ್ಯಗಳಲ್ಲಿ ಇದು ಒಂದಾಗಿದೆ.

ಗಾಝಾ ಪಟ್ಟಿಗೆ ಆಹಾರ ಸರಬರಾಜುಗೆ ತಡೆಯೊಡ್ಡಿದ ಬಳಿಕ ವಿದ್ಯುತ್ ಸರಬರಾಜನ್ನು ಇಸ್ರೇಲ್ ಕಡಿತಗೊಳಿಸಿದೆ.

ಇಸ್ರೇಲ್-ಹಮಾಸ್ ನಡುವಿನ ಕದನ ವಿರಾಮದ ಎರಡನೇ ಹಂತವನ್ನು ಜಾರಿಗೊಳಿಸಲು ಹಮಾಸ್ ನಿರಾಕರಿಸಿದ ಹಿನ್ನೆಲೆ ಆಹಾರ ಮತ್ತು ವಿದ್ಯುತ್ ಸರಬರಾಜು ಕಡಿತಗೊಳಿಸಲಾಗಿದೆ ಎಂದು ಇಸ್ರೇಲ್ ಸಮರ್ಥಿಸಿಕೊಂಡಿದೆ.

ಆದರೆ, ಇಸ್ರೇಲ್ ಕದನ ವಿರಾಮ ಉಲ್ಲಂಘಿಸಿದೆ. ಗಾಝಾದಲ್ಲಿ ಅಲ್ಲಲ್ಲಿ ದಾಳಿ ನಡೆಸಿದೆ. ಪಶ್ಚಿಮ ದಂಡೆಯಲ್ಲಿ ಪ್ಯಾಲೆಸ್ತೀನಿಯರ ಮೇಲೆ ಆಕ್ರಮಣ ನಡೆಸುತ್ತಿದೆ. ಕದನ ವಿರಾಮದ ಒಪ್ಪಂದಂತೆ ಆರಂಭದಲ್ಲಿ ಒತ್ತೆಯಾಳುಗಳಿಗೆ ಬದಲಾಗಿ ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಿತ್ತು. ಟ್ರಂಪ್ ಅವರನ್ನು ನೆತನ್ಯಾಹು ಭೇಟಿಯಾದ ಬಳಿಕ, ಕದನ ವಿರಾಮದ ಒಪ್ಪಂದ ಉಲ್ಲಂಘಿಸಿ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಅಮೆರಿಕ ಮತ್ತು ಇಸ್ರೇಲ್ ಒಟ್ಟಿಗೆ ನಮ್ಮನ್ನು ಬೆದರಿಸುತ್ತದೆ ಎಂದು ಹಮಾಸ್ ಆರೋಪಿಸಿದೆ.

ಒಪ್ಪಂದಂತೆ ಮೊದಲ ಹಂತದಲ್ಲಿ ಪರಸ್ಪರ ಒತ್ತೆಯಾಳುಗಳ ಬಿಡುಗಡೆಯಾಗಬೇಕು. ನಂತರ ಎರಡನೇ ಹಂತದಲ್ಲಿ ಇಸ್ರೇಲ್ ಸೇನೆ ಗಾಝಾ ಬಿಟ್ಟು ತೆರಳಬೇಕು. ಎಲ್ಲವೂ ಆರಂಭದ ಮಾತುಕತೆಯಂತೆಯೇ ಆಗಬೇಕು ಎಂದು ಹಮಾಸ್ ಪಟ್ಟು ಹಿಡಿದಿದೆ.

ಗಾಝಾಗೆ ನೆರವು ನೀಡುವುದಕ್ಕೆ ತಡೆಯೊಡ್ಡಿರುವ ಇಸ್ರೇಲ್ ಕ್ರಮವನ್ನು ಪಾಶ್ಚಿಮಾತ್ಯ ಸರ್ಕಾರಗಳು ಮತ್ತು ಅರಬ್ ರಾಷ್ಟ್ರಗಳು ಖಂಡಿಸಿವೆ. ಆದಾಗ್ಯೂ, ಅಮೆರಿಕ ಇಸ್ರೇಲ್‌ನ ನಿರ್ಧಾರವನ್ನು ಬೆಂಬಲಿಸಿದೆ. ಗಾಝಾ ನಿವಾಸಿಗಳ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಸರಕುಗಳು ಲಭ್ಯವಿದೆ. ಹಮಾಸ್ ಆ ಸರಕುಗಳ ಪೂರೈಕೆಯನ್ನು ಬಳಸಿಕೊಂಡು ಗಾಝಾ ಮೇಲಿನ ತನ್ನ ನಿಯಂತ್ರಣವನ್ನು ಹೆಚ್ಚಿಸುತ್ತಿದೆ. ಇಸ್ರೇಲ್ ಮೇಲಿನ ದಾಳಿಗೆ ಹಣಕಾಸು ಒದಗಿಸುತ್ತಿದೆ ಎಂದು ಇಸ್ರೇಲ್ ಹೇಳಿದೆ.

ಕೆನಡಾದ ಮುಂದಿನ ಪ್ರಧಾನಿಯಾಗಿ ಮಾಜಿ ಕೇಂದ್ರ ಬ್ಯಾಂಕರ್ ಮಾರ್ಕ್ ಕಾರ್ನಿ ನೇಮಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...