Homeಅಂತರಾಷ್ಟ್ರೀಯಗಾಝಾ: ಆಹಾರ ಪೂರೈಕೆಗೆ ಇಸ್ರೇಲ್ ಅಡ್ಡಿ: ಹಸಿವಿನಿಂದ ಸಾಯುತ್ತಿರುವ ಜನರು

ಗಾಝಾ: ಆಹಾರ ಪೂರೈಕೆಗೆ ಇಸ್ರೇಲ್ ಅಡ್ಡಿ: ಹಸಿವಿನಿಂದ ಸಾಯುತ್ತಿರುವ ಜನರು

- Advertisement -
- Advertisement -

ಯುದ್ಧ ಪೀಡಿತ ಗಾಝಾದಲ್ಲಿ ಆಹಾರ ವಸ್ತುಗಳು ಸೇರಿದಂತೆ ಅಗತ್ಯ ಸಾಮಗ್ರಿಗಳ ಸರಬರಾಜಿಗೆ ಇಸ್ರೇಲ್ ವಿಧಿಸಿರುವ ನಿರ್ಬಂಧ ಮುಂದುವರಿದಿದೆ. ಪರಿಣಾಮ ಹಸಿವಿನಿಂದ ಜನರು ಸಾಯುತ್ತಿದ್ದಾರೆ.

ಮತ್ತೊಂದೆಡೆ ಮಾನವ ಹಕ್ಕುಗಳ ಸಂಸ್ಥೆಗಳು ವಿತರಿಸುತ್ತಿರುವ ಆಹಾರ ಪಡೆಯಲು ನಿಂತವರನ್ನೇ ಗುರಿಯಾಗಿಸಿ ಇಸ್ರೇಲ್ ಪಡೆಗಳು ದಾಳಿ ಮಾಡುತ್ತಿವೆ.

ಗಾಜಾ ನಗರದ ಅಲ್-ಶಿಫಾ ಆಸ್ಪತ್ರೆಯಲ್ಲಿ 35 ದಿನಗಳ ಮಗು ಆಹಾರ ಸಿಗದೆ, ಅಪೌಷ್ಟಿಕತೆಯಿಂದ ಸಾವನ್ನಪ್ಪಿದೆ ಎಂದು ಆಸ್ಪತ್ರೆಯ ನಿರ್ದೇಶಕ ಮುಹಮ್ಮದ್ ಅಬು ಸಲ್ಮಿಯಾ ಅಲ್ ಜಝೀರಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಶನಿವಾರ ಆಸ್ಪತ್ರೆಯಲ್ಲಿ ಹಸಿವಿನಿಂದ ಸಾವನ್ನಪ್ಪಿದ ಇಬ್ಬರಲ್ಲಿ ಈ ಮಗು ಕೂಡ ಸೇರಿದೆ.

ಹಸಿವಿನಿಂದ ಜೀವನ್ಮರಣ ಹೋರಾಟ ನಡೆಸುತ್ತಿರುವ ಜನರಿಂದ ಆಸ್ಪತ್ರೆಯ ತುರ್ತು ವಾರ್ಡ್‌ಗಳು ತುಂಬಿ ತುಳುಕುತ್ತಿವೆ. ಪ್ರತಿನಿತ್ಯ ಹಲವು ಸಾವುಗಳು ಸಂಭವಿಸುತ್ತಿವೆ. 17,000 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ಹೇಳಿದೆ.

ಈ ನಡುವೆ ಇಸ್ರೇಲಿ ಪಡೆಗಳು ದಾಳಿ ಮುಂದುವರಿಸಿವೆ. ಶನಿವಾರ ಬೆಳಗಿನ ಜಾವದಿಂದ ಸಂಜೆಯವರೆಗೆ ಕನಿಷ್ಠ 116 ಜನರು ಇಸ್ರೇಲ್ ದಾಳಿಗೆ ಸಾವನ್ನಪ್ಪಿದ್ದಾರೆ. ಈ ಪೈಕಿ 38 ಜನರನ್ನು ಅಮೆರಿಕ ಬೆಂಬಲಿತ ಗಾಝಾ ಹ್ಯುಮಾನಿಟೇರಿಯನ್ ಫೌಂಡೇಶನ್‌ನ (ಜಿಹೆಚ್‌ಎಫ್‌) ಸಹಾಯ ಕೇಂದ್ರಗಳಲ್ಲಿ ಆಹಾರ ಪಡೆಯಲು ನಿಂತಿದ್ದಾಗ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ವರದಿಗಳು ಹೇಳಿವೆ.

ದಕ್ಷಿಣ ಗಾಝಾದಲ್ಲಿರುವ ಖಾನ್ ಯೂನಿಸ್‌ನ ನೈಋತ್ಯಕ್ಕೆ ಮತ್ತು ರಫಾದ ವಾಯುವ್ಯಕ್ಕೆ ಇರುವ ಆಹಾರ ವಿತರಣಾ ಕೇಂದ್ರದ ಬಳಿ ಈ ಸಾವುಗಳು ಸಂಭವಿಸಿವೆ ಎಂದು ನಾಗರಿಕ ರಕ್ಷಣಾ ಸಂಸ್ಥೆಯ ವಕ್ತಾರ ಮಹ್ಮದ್ ಬಸ್ಸಲ್ ಹೇಳಿದ್ದಾರೆ.

ಮೇ ಅಂತ್ಯದಲ್ಲಿ ಜಿಹೆಚ್‌ಎಫ್‌ ತನ್ನ ಕೇಂದ್ರಗಳನ್ನುನ ತೆರೆದು ಆಹಾರ ವಿತರಿಸಲು ಪ್ರಾರಂಭಿಸಿದೆ. ಅಂದಿನಿಂದ ಇಂದಿನವರೆಗೆ ಆಹಾರಕ್ಕೆ ಕಾಯುತ್ತಿದ್ದ ಸುಮಾರು 900 ಜನರನ್ನು ಇಸ್ರೇಲಿ ಪಡೆಗಳು ಮತ್ತು ಖಾಸಗಿ ಮಿಲಿಟರಿ ಗುತ್ತಿಗೆದಾರರು ಹತ್ಯೆ ಮಾಡಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ತಿಳಿಸಿದೆ.

ಶನಿವಾರ ಜಿಹೆಚ್‌ಎಫ್‌ ಕೇಂದ್ರಗಳ ಬಳಿ ದಾಳಿ ನಡೆದಿವೆ ಎಂಬುವುದನ್ನು ಜಿಹೆಚ್‌ಎಫ್‌ ನಿರಾಕರಿಸಿದೆ. ನಮ್ಮ ಕೇಂದ್ರದ ತುಂಬಾ ದೂರದಲ್ಲಿ, ಅದೂ ನಮ್ಮ ಕೇಂದ್ರ ತೆರೆಯುವ ಮೊದಲೇ ದಾಳಿ ನಡೆದಿದೆ ಎಂದು ಹೇಳಿದೆ. ಘಟನೆಯನ್ನು ಪರಿಶೀಲಿಸುತ್ತಿರುವುದಾಗಿ ಇಸ್ರೇಲಿ ಸೇನೆ ತಿಳಿಸಿದೆ.

ಗಾಝಾದಲ್ಲಿರುವ ಪ್ಯಾಲೆಸ್ತೀನಿಯರು ‘ತೀವ್ರ ಕ್ಷಾಮದ ಅಪಾಯವನ್ನು ಎದುರಿಸುತ್ತಿದ್ದಾರೆ’ ಎಂದು ಅಂತಾರಾಷ್ಟ್ರೀಯ ರೆಡ್‌ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಸೊಸೈಟಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಗನ್ ಚಾಪಗೈನ್ ಎಚ್ಚರಿಸಿದ್ದಾರೆ.

“ಮೂಲಭೂತ ಮಾನವೀಯ ನೆರವು ಪಡೆಯಲು ಯಾರೂ ತಮ್ಮ ಪ್ರಾಣವನ್ನೇ ಪಣಕ್ಕಿಡಬೇಕಾಗಿಲ್ಲ” ಎಂದು ಅವರು ಹೇಳಿದ್ದಾರೆ.

ಮಾರುಕಟ್ಟೆಗಳಲ್ಲಿ ಅಥವಾ ವಿತರಣಾ ಕೇಂದ್ರಗಳಲ್ಲಿ ಮೂಲಭೂತ ವಸ್ತುಗಳು ಲಭ್ಯವಿಲ್ಲ. ಹಿಟ್ಟಿನಂತಹ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರಿಂದಾಗಿ 2.3 ಮಿಲಿಯನ್ ಜನರು ತಮ್ಮ ದೈನಂದಿನ ಪೌಷ್ಠಿಕಾಂಶದ ಅಗತ್ಯಗಳನ್ನು ಪೂರೈಸುವುದು ಅಸಾಧ್ಯವಾಗಿದೆ ಎಂದಿದ್ದಾರೆ.

ಸರಣಿ ದಾಳಿಗಳು, 116 ಜನರು ಸಾವು 

ಶನಿವಾರ ಗಾಝಾದಲ್ಲಿ ಇಸ್ರೇಲ್ ತನ್ನ ಕ್ರೂರ ದಾಳಿಯನ್ನು ಮುಂದುವರೆಸಿತ್ತು. ಸ್ಥಳಾಂತರಗೊಂಡವರ ಡೇರೆಗಳು ಮತ್ತು ಆ ಪ್ರದೇಶಾದ್ಯಂತ ಮನೆಗಳ ಮೇಲೆ ಬಾಂಬ್ ದಾಳಿ ಮಾಡಿದೆ. ಇದರಿಂದ ಕನಿಷ್ಠ 116 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ.

ದಕ್ಷಿಣ ಖಾನ್ ಯೂನಿಸ್ ಬಳಿಯ ಬನಿ ಸುಹೇಲಾ ಮೇಲೆ ಇಸ್ರೇಲಿ ದಾಳಿ ನಡೆಸಿದ ಸ್ಥಳದಿಂದ ನಾಲ್ಕು ಶವಗಳನ್ನು ಹೊರ ತೆಗೆಯಲಾಗಿದೆ ಎಂದು ನಾಸರ್ ಆಸ್ಪತ್ರೆಯ ಮೂಲಗಳು ತಿಳಿಸಿದ್ದಾಗಿ ಅಲ್ ಜಝೀರಾ ವರದಿ ಮಾಡಿದೆ.

ಖಾನ್ ಯೂನಿಸ್‌ನಲ್ಲಿ ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯರು ಇದ್ದ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಿಂದ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ.

ಮಧ್ಯ ಗಾಝಾದ ಅಜ್-ಜವಾಯ್ದಾ ಪಟ್ಟಣದಲ್ಲಿದ್ದ ಮನೆಯ ಮೇಲೆ ದಾಳಿ ಇಸ್ರೇಲ್ ದಾಳಿ ಮಾಡಿದ್ದು, ನುಸೇರತ್ ಪೊಲೀಸ್ ನಿರ್ದೇಶಕ ಕರ್ನಲ್ ಒಮರ್ ಸಯೀದ್ ಅಕ್ಲ್ ಮತ್ತು ಅವರ 11 ಕುಟುಂಬ ಸದಸ್ಯರನ್ನು ಹತ್ಯೆ ಮಾಡಿವೆ ಎಂದು ಗಾಝಾದ ಆಂತರಿಕ ಸಚಿವಾಲಯ ತಿಳಿಸಿದೆ.

ಗಾಝಾ ನಗರದ ಜೈಟೌನ್ ಸಮೀಪ ಇಸ್ರೇಲಿ ನಡೆಸಿದ ಎರಡು ವೈಮಾನಿಕ ದಾಳಿಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಲ್-ಅಹ್ಲಿ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.

ಪ್ಯಾಲೆಸ್ತೀನಿಯನ್ ರೆಡ್ ಕ್ರೆಸೆಂಟ್ ಪ್ರಕಾರ, ಗಾಝಾ ನಗರದ ತಾಲ್ ಅಲ್-ಹವಾ ಸಮೀಪ ಇಸ್ರೇಲಿ ನಡೆಸಿದ ವಾಯುದಾಳಿಯಲ್ಲಿ ಐವರು ಸಾವನ್ನಪ್ಪಿದ್ದಾರೆ.

ಉತ್ತರ ಗಾಝಾದ ಜಬಾಲಿಯಾ ಆನ್-ನಜ್ಲಾ ಸಮೀಪ ಇಸ್ರೇಲ್ ನಡೆಸಿದ ಶೆಲ್ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಪ್ಯಾಲೆಸ್ತೀನಿಯನ್ ಕೈದಿಗಳ ಮಾಧ್ಯಮ ಕಚೇರಿಯ ಪ್ರಕಾರ, ಇಸ್ರೇಲಿ ಪಡೆಗಳು ಗಾಝಾ ಕರಾವಳಿಯಲ್ಲಿ ಮೂವರು ಪ್ಯಾಲೆಸ್ತೀನಿಯನ್ ಮೀನುಗಾರರ ಮೇಲೆ ಗುಂಡು ಹಾರಿಸಿ ಬಂಧಿಸಿವೆ.

2007ರಲ್ಲಿ ಹಮಾಸ್ ಗಾಝಾವನ್ನು ವಶಪಡಿಸಿಕೊಂಡಾಗಿನಿಂದ ಇಸ್ರೇಲಿ ಸೇನೆಯು ಗಾಝಾದ ಮೇಲೆ ನೌಕಾ ದಿಗ್ಬಂಧನವನ್ನು ಕಾಯ್ದುಕೊಂಡಿದೆ. ಅಕ್ಟೋಬರ್ 2023ರಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಇದು ಬಿಗಿಗೊಂಡಿವೆ.

ನೈಋತ್ಯ ನೈಜರ್‌ನಲ್ಲಿ ಭಯೋತ್ಪಾದಕ ದಾಳಿ; ಇಬ್ಬರು ಭಾರತೀಯರು ಬಲಿ, ಓರ್ವನ ಅಪಹರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...