Homeಅಂತರಾಷ್ಟ್ರೀಯಗಾಝಾ: ಆಹಾರ ಪೂರೈಕೆಗೆ ಇಸ್ರೇಲ್ ಅಡ್ಡಿ: ಹಸಿವಿನಿಂದ ಸಾಯುತ್ತಿರುವ ಜನರು

ಗಾಝಾ: ಆಹಾರ ಪೂರೈಕೆಗೆ ಇಸ್ರೇಲ್ ಅಡ್ಡಿ: ಹಸಿವಿನಿಂದ ಸಾಯುತ್ತಿರುವ ಜನರು

- Advertisement -
- Advertisement -

ಯುದ್ಧ ಪೀಡಿತ ಗಾಝಾದಲ್ಲಿ ಆಹಾರ ವಸ್ತುಗಳು ಸೇರಿದಂತೆ ಅಗತ್ಯ ಸಾಮಗ್ರಿಗಳ ಸರಬರಾಜಿಗೆ ಇಸ್ರೇಲ್ ವಿಧಿಸಿರುವ ನಿರ್ಬಂಧ ಮುಂದುವರಿದಿದೆ. ಪರಿಣಾಮ ಹಸಿವಿನಿಂದ ಜನರು ಸಾಯುತ್ತಿದ್ದಾರೆ.

ಮತ್ತೊಂದೆಡೆ ಮಾನವ ಹಕ್ಕುಗಳ ಸಂಸ್ಥೆಗಳು ವಿತರಿಸುತ್ತಿರುವ ಆಹಾರ ಪಡೆಯಲು ನಿಂತವರನ್ನೇ ಗುರಿಯಾಗಿಸಿ ಇಸ್ರೇಲ್ ಪಡೆಗಳು ದಾಳಿ ಮಾಡುತ್ತಿವೆ.

ಗಾಜಾ ನಗರದ ಅಲ್-ಶಿಫಾ ಆಸ್ಪತ್ರೆಯಲ್ಲಿ 35 ದಿನಗಳ ಮಗು ಆಹಾರ ಸಿಗದೆ, ಅಪೌಷ್ಟಿಕತೆಯಿಂದ ಸಾವನ್ನಪ್ಪಿದೆ ಎಂದು ಆಸ್ಪತ್ರೆಯ ನಿರ್ದೇಶಕ ಮುಹಮ್ಮದ್ ಅಬು ಸಲ್ಮಿಯಾ ಅಲ್ ಜಝೀರಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಶನಿವಾರ ಆಸ್ಪತ್ರೆಯಲ್ಲಿ ಹಸಿವಿನಿಂದ ಸಾವನ್ನಪ್ಪಿದ ಇಬ್ಬರಲ್ಲಿ ಈ ಮಗು ಕೂಡ ಸೇರಿದೆ.

ಹಸಿವಿನಿಂದ ಜೀವನ್ಮರಣ ಹೋರಾಟ ನಡೆಸುತ್ತಿರುವ ಜನರಿಂದ ಆಸ್ಪತ್ರೆಯ ತುರ್ತು ವಾರ್ಡ್‌ಗಳು ತುಂಬಿ ತುಳುಕುತ್ತಿವೆ. ಪ್ರತಿನಿತ್ಯ ಹಲವು ಸಾವುಗಳು ಸಂಭವಿಸುತ್ತಿವೆ. 17,000 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ಹೇಳಿದೆ.

ಈ ನಡುವೆ ಇಸ್ರೇಲಿ ಪಡೆಗಳು ದಾಳಿ ಮುಂದುವರಿಸಿವೆ. ಶನಿವಾರ ಬೆಳಗಿನ ಜಾವದಿಂದ ಸಂಜೆಯವರೆಗೆ ಕನಿಷ್ಠ 116 ಜನರು ಇಸ್ರೇಲ್ ದಾಳಿಗೆ ಸಾವನ್ನಪ್ಪಿದ್ದಾರೆ. ಈ ಪೈಕಿ 38 ಜನರನ್ನು ಅಮೆರಿಕ ಬೆಂಬಲಿತ ಗಾಝಾ ಹ್ಯುಮಾನಿಟೇರಿಯನ್ ಫೌಂಡೇಶನ್‌ನ (ಜಿಹೆಚ್‌ಎಫ್‌) ಸಹಾಯ ಕೇಂದ್ರಗಳಲ್ಲಿ ಆಹಾರ ಪಡೆಯಲು ನಿಂತಿದ್ದಾಗ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ವರದಿಗಳು ಹೇಳಿವೆ.

ದಕ್ಷಿಣ ಗಾಝಾದಲ್ಲಿರುವ ಖಾನ್ ಯೂನಿಸ್‌ನ ನೈಋತ್ಯಕ್ಕೆ ಮತ್ತು ರಫಾದ ವಾಯುವ್ಯಕ್ಕೆ ಇರುವ ಆಹಾರ ವಿತರಣಾ ಕೇಂದ್ರದ ಬಳಿ ಈ ಸಾವುಗಳು ಸಂಭವಿಸಿವೆ ಎಂದು ನಾಗರಿಕ ರಕ್ಷಣಾ ಸಂಸ್ಥೆಯ ವಕ್ತಾರ ಮಹ್ಮದ್ ಬಸ್ಸಲ್ ಹೇಳಿದ್ದಾರೆ.

ಮೇ ಅಂತ್ಯದಲ್ಲಿ ಜಿಹೆಚ್‌ಎಫ್‌ ತನ್ನ ಕೇಂದ್ರಗಳನ್ನುನ ತೆರೆದು ಆಹಾರ ವಿತರಿಸಲು ಪ್ರಾರಂಭಿಸಿದೆ. ಅಂದಿನಿಂದ ಇಂದಿನವರೆಗೆ ಆಹಾರಕ್ಕೆ ಕಾಯುತ್ತಿದ್ದ ಸುಮಾರು 900 ಜನರನ್ನು ಇಸ್ರೇಲಿ ಪಡೆಗಳು ಮತ್ತು ಖಾಸಗಿ ಮಿಲಿಟರಿ ಗುತ್ತಿಗೆದಾರರು ಹತ್ಯೆ ಮಾಡಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ತಿಳಿಸಿದೆ.

ಶನಿವಾರ ಜಿಹೆಚ್‌ಎಫ್‌ ಕೇಂದ್ರಗಳ ಬಳಿ ದಾಳಿ ನಡೆದಿವೆ ಎಂಬುವುದನ್ನು ಜಿಹೆಚ್‌ಎಫ್‌ ನಿರಾಕರಿಸಿದೆ. ನಮ್ಮ ಕೇಂದ್ರದ ತುಂಬಾ ದೂರದಲ್ಲಿ, ಅದೂ ನಮ್ಮ ಕೇಂದ್ರ ತೆರೆಯುವ ಮೊದಲೇ ದಾಳಿ ನಡೆದಿದೆ ಎಂದು ಹೇಳಿದೆ. ಘಟನೆಯನ್ನು ಪರಿಶೀಲಿಸುತ್ತಿರುವುದಾಗಿ ಇಸ್ರೇಲಿ ಸೇನೆ ತಿಳಿಸಿದೆ.

ಗಾಝಾದಲ್ಲಿರುವ ಪ್ಯಾಲೆಸ್ತೀನಿಯರು ‘ತೀವ್ರ ಕ್ಷಾಮದ ಅಪಾಯವನ್ನು ಎದುರಿಸುತ್ತಿದ್ದಾರೆ’ ಎಂದು ಅಂತಾರಾಷ್ಟ್ರೀಯ ರೆಡ್‌ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಸೊಸೈಟಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಗನ್ ಚಾಪಗೈನ್ ಎಚ್ಚರಿಸಿದ್ದಾರೆ.

“ಮೂಲಭೂತ ಮಾನವೀಯ ನೆರವು ಪಡೆಯಲು ಯಾರೂ ತಮ್ಮ ಪ್ರಾಣವನ್ನೇ ಪಣಕ್ಕಿಡಬೇಕಾಗಿಲ್ಲ” ಎಂದು ಅವರು ಹೇಳಿದ್ದಾರೆ.

ಮಾರುಕಟ್ಟೆಗಳಲ್ಲಿ ಅಥವಾ ವಿತರಣಾ ಕೇಂದ್ರಗಳಲ್ಲಿ ಮೂಲಭೂತ ವಸ್ತುಗಳು ಲಭ್ಯವಿಲ್ಲ. ಹಿಟ್ಟಿನಂತಹ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರಿಂದಾಗಿ 2.3 ಮಿಲಿಯನ್ ಜನರು ತಮ್ಮ ದೈನಂದಿನ ಪೌಷ್ಠಿಕಾಂಶದ ಅಗತ್ಯಗಳನ್ನು ಪೂರೈಸುವುದು ಅಸಾಧ್ಯವಾಗಿದೆ ಎಂದಿದ್ದಾರೆ.

ಸರಣಿ ದಾಳಿಗಳು, 116 ಜನರು ಸಾವು 

ಶನಿವಾರ ಗಾಝಾದಲ್ಲಿ ಇಸ್ರೇಲ್ ತನ್ನ ಕ್ರೂರ ದಾಳಿಯನ್ನು ಮುಂದುವರೆಸಿತ್ತು. ಸ್ಥಳಾಂತರಗೊಂಡವರ ಡೇರೆಗಳು ಮತ್ತು ಆ ಪ್ರದೇಶಾದ್ಯಂತ ಮನೆಗಳ ಮೇಲೆ ಬಾಂಬ್ ದಾಳಿ ಮಾಡಿದೆ. ಇದರಿಂದ ಕನಿಷ್ಠ 116 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ.

ದಕ್ಷಿಣ ಖಾನ್ ಯೂನಿಸ್ ಬಳಿಯ ಬನಿ ಸುಹೇಲಾ ಮೇಲೆ ಇಸ್ರೇಲಿ ದಾಳಿ ನಡೆಸಿದ ಸ್ಥಳದಿಂದ ನಾಲ್ಕು ಶವಗಳನ್ನು ಹೊರ ತೆಗೆಯಲಾಗಿದೆ ಎಂದು ನಾಸರ್ ಆಸ್ಪತ್ರೆಯ ಮೂಲಗಳು ತಿಳಿಸಿದ್ದಾಗಿ ಅಲ್ ಜಝೀರಾ ವರದಿ ಮಾಡಿದೆ.

ಖಾನ್ ಯೂನಿಸ್‌ನಲ್ಲಿ ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯರು ಇದ್ದ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಿಂದ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ.

ಮಧ್ಯ ಗಾಝಾದ ಅಜ್-ಜವಾಯ್ದಾ ಪಟ್ಟಣದಲ್ಲಿದ್ದ ಮನೆಯ ಮೇಲೆ ದಾಳಿ ಇಸ್ರೇಲ್ ದಾಳಿ ಮಾಡಿದ್ದು, ನುಸೇರತ್ ಪೊಲೀಸ್ ನಿರ್ದೇಶಕ ಕರ್ನಲ್ ಒಮರ್ ಸಯೀದ್ ಅಕ್ಲ್ ಮತ್ತು ಅವರ 11 ಕುಟುಂಬ ಸದಸ್ಯರನ್ನು ಹತ್ಯೆ ಮಾಡಿವೆ ಎಂದು ಗಾಝಾದ ಆಂತರಿಕ ಸಚಿವಾಲಯ ತಿಳಿಸಿದೆ.

ಗಾಝಾ ನಗರದ ಜೈಟೌನ್ ಸಮೀಪ ಇಸ್ರೇಲಿ ನಡೆಸಿದ ಎರಡು ವೈಮಾನಿಕ ದಾಳಿಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಲ್-ಅಹ್ಲಿ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.

ಪ್ಯಾಲೆಸ್ತೀನಿಯನ್ ರೆಡ್ ಕ್ರೆಸೆಂಟ್ ಪ್ರಕಾರ, ಗಾಝಾ ನಗರದ ತಾಲ್ ಅಲ್-ಹವಾ ಸಮೀಪ ಇಸ್ರೇಲಿ ನಡೆಸಿದ ವಾಯುದಾಳಿಯಲ್ಲಿ ಐವರು ಸಾವನ್ನಪ್ಪಿದ್ದಾರೆ.

ಉತ್ತರ ಗಾಝಾದ ಜಬಾಲಿಯಾ ಆನ್-ನಜ್ಲಾ ಸಮೀಪ ಇಸ್ರೇಲ್ ನಡೆಸಿದ ಶೆಲ್ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಪ್ಯಾಲೆಸ್ತೀನಿಯನ್ ಕೈದಿಗಳ ಮಾಧ್ಯಮ ಕಚೇರಿಯ ಪ್ರಕಾರ, ಇಸ್ರೇಲಿ ಪಡೆಗಳು ಗಾಝಾ ಕರಾವಳಿಯಲ್ಲಿ ಮೂವರು ಪ್ಯಾಲೆಸ್ತೀನಿಯನ್ ಮೀನುಗಾರರ ಮೇಲೆ ಗುಂಡು ಹಾರಿಸಿ ಬಂಧಿಸಿವೆ.

2007ರಲ್ಲಿ ಹಮಾಸ್ ಗಾಝಾವನ್ನು ವಶಪಡಿಸಿಕೊಂಡಾಗಿನಿಂದ ಇಸ್ರೇಲಿ ಸೇನೆಯು ಗಾಝಾದ ಮೇಲೆ ನೌಕಾ ದಿಗ್ಬಂಧನವನ್ನು ಕಾಯ್ದುಕೊಂಡಿದೆ. ಅಕ್ಟೋಬರ್ 2023ರಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಇದು ಬಿಗಿಗೊಂಡಿವೆ.

ನೈಋತ್ಯ ನೈಜರ್‌ನಲ್ಲಿ ಭಯೋತ್ಪಾದಕ ದಾಳಿ; ಇಬ್ಬರು ಭಾರತೀಯರು ಬಲಿ, ಓರ್ವನ ಅಪಹರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...