Homeಅಂತರಾಷ್ಟ್ರೀಯಗಾಝಾ: ಆಹಾರ ಪೂರೈಕೆಗೆ ಇಸ್ರೇಲ್ ಅಡ್ಡಿ: ಹಸಿವಿನಿಂದ ಸಾಯುತ್ತಿರುವ ಜನರು

ಗಾಝಾ: ಆಹಾರ ಪೂರೈಕೆಗೆ ಇಸ್ರೇಲ್ ಅಡ್ಡಿ: ಹಸಿವಿನಿಂದ ಸಾಯುತ್ತಿರುವ ಜನರು

- Advertisement -
- Advertisement -

ಯುದ್ಧ ಪೀಡಿತ ಗಾಝಾದಲ್ಲಿ ಆಹಾರ ವಸ್ತುಗಳು ಸೇರಿದಂತೆ ಅಗತ್ಯ ಸಾಮಗ್ರಿಗಳ ಸರಬರಾಜಿಗೆ ಇಸ್ರೇಲ್ ವಿಧಿಸಿರುವ ನಿರ್ಬಂಧ ಮುಂದುವರಿದಿದೆ. ಪರಿಣಾಮ ಹಸಿವಿನಿಂದ ಜನರು ಸಾಯುತ್ತಿದ್ದಾರೆ.

ಮತ್ತೊಂದೆಡೆ ಮಾನವ ಹಕ್ಕುಗಳ ಸಂಸ್ಥೆಗಳು ವಿತರಿಸುತ್ತಿರುವ ಆಹಾರ ಪಡೆಯಲು ನಿಂತವರನ್ನೇ ಗುರಿಯಾಗಿಸಿ ಇಸ್ರೇಲ್ ಪಡೆಗಳು ದಾಳಿ ಮಾಡುತ್ತಿವೆ.

ಗಾಜಾ ನಗರದ ಅಲ್-ಶಿಫಾ ಆಸ್ಪತ್ರೆಯಲ್ಲಿ 35 ದಿನಗಳ ಮಗು ಆಹಾರ ಸಿಗದೆ, ಅಪೌಷ್ಟಿಕತೆಯಿಂದ ಸಾವನ್ನಪ್ಪಿದೆ ಎಂದು ಆಸ್ಪತ್ರೆಯ ನಿರ್ದೇಶಕ ಮುಹಮ್ಮದ್ ಅಬು ಸಲ್ಮಿಯಾ ಅಲ್ ಜಝೀರಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಶನಿವಾರ ಆಸ್ಪತ್ರೆಯಲ್ಲಿ ಹಸಿವಿನಿಂದ ಸಾವನ್ನಪ್ಪಿದ ಇಬ್ಬರಲ್ಲಿ ಈ ಮಗು ಕೂಡ ಸೇರಿದೆ.

ಹಸಿವಿನಿಂದ ಜೀವನ್ಮರಣ ಹೋರಾಟ ನಡೆಸುತ್ತಿರುವ ಜನರಿಂದ ಆಸ್ಪತ್ರೆಯ ತುರ್ತು ವಾರ್ಡ್‌ಗಳು ತುಂಬಿ ತುಳುಕುತ್ತಿವೆ. ಪ್ರತಿನಿತ್ಯ ಹಲವು ಸಾವುಗಳು ಸಂಭವಿಸುತ್ತಿವೆ. 17,000 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ಹೇಳಿದೆ.

ಈ ನಡುವೆ ಇಸ್ರೇಲಿ ಪಡೆಗಳು ದಾಳಿ ಮುಂದುವರಿಸಿವೆ. ಶನಿವಾರ ಬೆಳಗಿನ ಜಾವದಿಂದ ಸಂಜೆಯವರೆಗೆ ಕನಿಷ್ಠ 116 ಜನರು ಇಸ್ರೇಲ್ ದಾಳಿಗೆ ಸಾವನ್ನಪ್ಪಿದ್ದಾರೆ. ಈ ಪೈಕಿ 38 ಜನರನ್ನು ಅಮೆರಿಕ ಬೆಂಬಲಿತ ಗಾಝಾ ಹ್ಯುಮಾನಿಟೇರಿಯನ್ ಫೌಂಡೇಶನ್‌ನ (ಜಿಹೆಚ್‌ಎಫ್‌) ಸಹಾಯ ಕೇಂದ್ರಗಳಲ್ಲಿ ಆಹಾರ ಪಡೆಯಲು ನಿಂತಿದ್ದಾಗ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ವರದಿಗಳು ಹೇಳಿವೆ.

ದಕ್ಷಿಣ ಗಾಝಾದಲ್ಲಿರುವ ಖಾನ್ ಯೂನಿಸ್‌ನ ನೈಋತ್ಯಕ್ಕೆ ಮತ್ತು ರಫಾದ ವಾಯುವ್ಯಕ್ಕೆ ಇರುವ ಆಹಾರ ವಿತರಣಾ ಕೇಂದ್ರದ ಬಳಿ ಈ ಸಾವುಗಳು ಸಂಭವಿಸಿವೆ ಎಂದು ನಾಗರಿಕ ರಕ್ಷಣಾ ಸಂಸ್ಥೆಯ ವಕ್ತಾರ ಮಹ್ಮದ್ ಬಸ್ಸಲ್ ಹೇಳಿದ್ದಾರೆ.

ಮೇ ಅಂತ್ಯದಲ್ಲಿ ಜಿಹೆಚ್‌ಎಫ್‌ ತನ್ನ ಕೇಂದ್ರಗಳನ್ನುನ ತೆರೆದು ಆಹಾರ ವಿತರಿಸಲು ಪ್ರಾರಂಭಿಸಿದೆ. ಅಂದಿನಿಂದ ಇಂದಿನವರೆಗೆ ಆಹಾರಕ್ಕೆ ಕಾಯುತ್ತಿದ್ದ ಸುಮಾರು 900 ಜನರನ್ನು ಇಸ್ರೇಲಿ ಪಡೆಗಳು ಮತ್ತು ಖಾಸಗಿ ಮಿಲಿಟರಿ ಗುತ್ತಿಗೆದಾರರು ಹತ್ಯೆ ಮಾಡಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ತಿಳಿಸಿದೆ.

ಶನಿವಾರ ಜಿಹೆಚ್‌ಎಫ್‌ ಕೇಂದ್ರಗಳ ಬಳಿ ದಾಳಿ ನಡೆದಿವೆ ಎಂಬುವುದನ್ನು ಜಿಹೆಚ್‌ಎಫ್‌ ನಿರಾಕರಿಸಿದೆ. ನಮ್ಮ ಕೇಂದ್ರದ ತುಂಬಾ ದೂರದಲ್ಲಿ, ಅದೂ ನಮ್ಮ ಕೇಂದ್ರ ತೆರೆಯುವ ಮೊದಲೇ ದಾಳಿ ನಡೆದಿದೆ ಎಂದು ಹೇಳಿದೆ. ಘಟನೆಯನ್ನು ಪರಿಶೀಲಿಸುತ್ತಿರುವುದಾಗಿ ಇಸ್ರೇಲಿ ಸೇನೆ ತಿಳಿಸಿದೆ.

ಗಾಝಾದಲ್ಲಿರುವ ಪ್ಯಾಲೆಸ್ತೀನಿಯರು ‘ತೀವ್ರ ಕ್ಷಾಮದ ಅಪಾಯವನ್ನು ಎದುರಿಸುತ್ತಿದ್ದಾರೆ’ ಎಂದು ಅಂತಾರಾಷ್ಟ್ರೀಯ ರೆಡ್‌ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಸೊಸೈಟಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಗನ್ ಚಾಪಗೈನ್ ಎಚ್ಚರಿಸಿದ್ದಾರೆ.

“ಮೂಲಭೂತ ಮಾನವೀಯ ನೆರವು ಪಡೆಯಲು ಯಾರೂ ತಮ್ಮ ಪ್ರಾಣವನ್ನೇ ಪಣಕ್ಕಿಡಬೇಕಾಗಿಲ್ಲ” ಎಂದು ಅವರು ಹೇಳಿದ್ದಾರೆ.

ಮಾರುಕಟ್ಟೆಗಳಲ್ಲಿ ಅಥವಾ ವಿತರಣಾ ಕೇಂದ್ರಗಳಲ್ಲಿ ಮೂಲಭೂತ ವಸ್ತುಗಳು ಲಭ್ಯವಿಲ್ಲ. ಹಿಟ್ಟಿನಂತಹ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರಿಂದಾಗಿ 2.3 ಮಿಲಿಯನ್ ಜನರು ತಮ್ಮ ದೈನಂದಿನ ಪೌಷ್ಠಿಕಾಂಶದ ಅಗತ್ಯಗಳನ್ನು ಪೂರೈಸುವುದು ಅಸಾಧ್ಯವಾಗಿದೆ ಎಂದಿದ್ದಾರೆ.

ಸರಣಿ ದಾಳಿಗಳು, 116 ಜನರು ಸಾವು 

ಶನಿವಾರ ಗಾಝಾದಲ್ಲಿ ಇಸ್ರೇಲ್ ತನ್ನ ಕ್ರೂರ ದಾಳಿಯನ್ನು ಮುಂದುವರೆಸಿತ್ತು. ಸ್ಥಳಾಂತರಗೊಂಡವರ ಡೇರೆಗಳು ಮತ್ತು ಆ ಪ್ರದೇಶಾದ್ಯಂತ ಮನೆಗಳ ಮೇಲೆ ಬಾಂಬ್ ದಾಳಿ ಮಾಡಿದೆ. ಇದರಿಂದ ಕನಿಷ್ಠ 116 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ.

ದಕ್ಷಿಣ ಖಾನ್ ಯೂನಿಸ್ ಬಳಿಯ ಬನಿ ಸುಹೇಲಾ ಮೇಲೆ ಇಸ್ರೇಲಿ ದಾಳಿ ನಡೆಸಿದ ಸ್ಥಳದಿಂದ ನಾಲ್ಕು ಶವಗಳನ್ನು ಹೊರ ತೆಗೆಯಲಾಗಿದೆ ಎಂದು ನಾಸರ್ ಆಸ್ಪತ್ರೆಯ ಮೂಲಗಳು ತಿಳಿಸಿದ್ದಾಗಿ ಅಲ್ ಜಝೀರಾ ವರದಿ ಮಾಡಿದೆ.

ಖಾನ್ ಯೂನಿಸ್‌ನಲ್ಲಿ ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯರು ಇದ್ದ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಿಂದ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ.

ಮಧ್ಯ ಗಾಝಾದ ಅಜ್-ಜವಾಯ್ದಾ ಪಟ್ಟಣದಲ್ಲಿದ್ದ ಮನೆಯ ಮೇಲೆ ದಾಳಿ ಇಸ್ರೇಲ್ ದಾಳಿ ಮಾಡಿದ್ದು, ನುಸೇರತ್ ಪೊಲೀಸ್ ನಿರ್ದೇಶಕ ಕರ್ನಲ್ ಒಮರ್ ಸಯೀದ್ ಅಕ್ಲ್ ಮತ್ತು ಅವರ 11 ಕುಟುಂಬ ಸದಸ್ಯರನ್ನು ಹತ್ಯೆ ಮಾಡಿವೆ ಎಂದು ಗಾಝಾದ ಆಂತರಿಕ ಸಚಿವಾಲಯ ತಿಳಿಸಿದೆ.

ಗಾಝಾ ನಗರದ ಜೈಟೌನ್ ಸಮೀಪ ಇಸ್ರೇಲಿ ನಡೆಸಿದ ಎರಡು ವೈಮಾನಿಕ ದಾಳಿಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಲ್-ಅಹ್ಲಿ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.

ಪ್ಯಾಲೆಸ್ತೀನಿಯನ್ ರೆಡ್ ಕ್ರೆಸೆಂಟ್ ಪ್ರಕಾರ, ಗಾಝಾ ನಗರದ ತಾಲ್ ಅಲ್-ಹವಾ ಸಮೀಪ ಇಸ್ರೇಲಿ ನಡೆಸಿದ ವಾಯುದಾಳಿಯಲ್ಲಿ ಐವರು ಸಾವನ್ನಪ್ಪಿದ್ದಾರೆ.

ಉತ್ತರ ಗಾಝಾದ ಜಬಾಲಿಯಾ ಆನ್-ನಜ್ಲಾ ಸಮೀಪ ಇಸ್ರೇಲ್ ನಡೆಸಿದ ಶೆಲ್ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಪ್ಯಾಲೆಸ್ತೀನಿಯನ್ ಕೈದಿಗಳ ಮಾಧ್ಯಮ ಕಚೇರಿಯ ಪ್ರಕಾರ, ಇಸ್ರೇಲಿ ಪಡೆಗಳು ಗಾಝಾ ಕರಾವಳಿಯಲ್ಲಿ ಮೂವರು ಪ್ಯಾಲೆಸ್ತೀನಿಯನ್ ಮೀನುಗಾರರ ಮೇಲೆ ಗುಂಡು ಹಾರಿಸಿ ಬಂಧಿಸಿವೆ.

2007ರಲ್ಲಿ ಹಮಾಸ್ ಗಾಝಾವನ್ನು ವಶಪಡಿಸಿಕೊಂಡಾಗಿನಿಂದ ಇಸ್ರೇಲಿ ಸೇನೆಯು ಗಾಝಾದ ಮೇಲೆ ನೌಕಾ ದಿಗ್ಬಂಧನವನ್ನು ಕಾಯ್ದುಕೊಂಡಿದೆ. ಅಕ್ಟೋಬರ್ 2023ರಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಇದು ಬಿಗಿಗೊಂಡಿವೆ.

ನೈಋತ್ಯ ನೈಜರ್‌ನಲ್ಲಿ ಭಯೋತ್ಪಾದಕ ದಾಳಿ; ಇಬ್ಬರು ಭಾರತೀಯರು ಬಲಿ, ಓರ್ವನ ಅಪಹರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...