Homeಅಂತರಾಷ್ಟ್ರೀಯಬೈರುತ್ ದಕ್ಷಿಣ ಉಪನಗರಗಳ ಮೇಲೆ ದಾಳಿ ಹೆಚ್ಚಿಸಿದ ಇಸ್ರೇಲ್; ಲೆಬನಾನ್ ಮಾಧ್ಯಮಗಳಿಂದ ವರದಿ

ಬೈರುತ್ ದಕ್ಷಿಣ ಉಪನಗರಗಳ ಮೇಲೆ ದಾಳಿ ಹೆಚ್ಚಿಸಿದ ಇಸ್ರೇಲ್; ಲೆಬನಾನ್ ಮಾಧ್ಯಮಗಳಿಂದ ವರದಿ

- Advertisement -
- Advertisement -

ಇಸ್ರೇಲ್ ಸೇನಾ ದಾಳಿಯು ಬೈರುತ್‌ನ ದಕ್ಷಿಣ ಉಪನಗರಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಲೆಬನಾನಿನ ಅಧಿಕೃತ ಮಾಧ್ಯಮಗಳು ಬುಧವಾರ ವರದಿ ಮಾಡಿವೆ.

“ಇಸ್ರೇಲಿ ವಿಮಾನವು ದಕ್ಷಿಣದ ಉಪನಗರಗಳನ್ನು ದಾಳಿಗೆ ಗುರಿಯಾಗಿಸಿದೆ” ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ. ಆದರೆ, ಎರಫ್‌ಪಿ ಛಾಯಾಗ್ರಾಹಕರೊಬ್ಬರು ಈ ಪ್ರದೇಶದಿಂದ ಹೆಚ್ಚಿನ ಹೊಗೆ ಏರುತ್ತಿರುವುದನ್ನು ಕಂಡಿರುವುದಾಗು ವರದಿ ಮಾಡಿದ್ದಾರೆ.

ಸಂಯಮಕ್ಕೆ ಕರೆ ನೀಡಿದ ಭಾರತ

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆಯ ಹೊಸ ಉಲ್ಬಣಕ್ಕೆ ಭಾರತವು ತನ್ನ ಮೊದಲ ಪ್ರತಿಕ್ರಿಯೆಯಾಗಿ, ಉಭಯ ಪಕ್ಷಗಳು ಸಂಯಮ ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದೆ. “ಸಂಘರ್ಷವು ವಿಶಾಲವಾದ ಪ್ರಾದೇಶಿಕ ಆಯಾಮವನ್ನು ತೆಗೆದುಕೊಳ್ಳಬಾರದು” ಎಂದು ಹೇಳಿದೆ.

ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಮತ್ತು ಉಗ್ರಗಾಮಿ ಸಂಘಟನೆಯ ಇತರ ಕಮಾಂಡರ್‌ಗಳನ್ನು ಇಸ್ರೇಲ್ ಕೊಂದಿದ್ದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಇಸ್ರೇಲ್ ಮೇಲೆ ಸುಮಾರು 200 ಕ್ಷಿಪಣಿಗಳನ್ನು ಹಾರಿಸಿದ ಒಂದು ದಿನದ ಬಳಿಕ ಭಾರತದ ಸಲಹೆ ಬಂದಿವೆ.

ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಭದ್ರತಾ ಪರಿಸ್ಥಿತಿಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದ್ದು, “ಸಂವಾದ ಮತ್ತು ರಾಜತಾಂತ್ರಿಕತೆ” ಮೂಲಕ ಎಲ್ಲ ಸಮಸ್ಯೆಗಳನ್ನು ಪರಿಹರಿಸುವಂತೆ ಕರೆ ನೀಡಿದೆ.

“ಪಶ್ಚಿಮ ಏಷ್ಯಾದಲ್ಲಿ ಭದ್ರತಾ ಪರಿಸ್ಥಿತಿಯು ಉಲ್ಬಣಗೊಳ್ಳುತ್ತಿರುವ ಬಗ್ಗೆ ನಾವು ತೀವ್ರ ಕಳವಳ ಹೊಂದಿದ್ದೇವೆ. ಸಂಬಂಧಪಟ್ಟ ಎಲ್ಲರಿಂದ ಸಂಯಮ ಮತ್ತು ನಾಗರಿಕರ ರಕ್ಷಣೆಗಾಗಿ ನಮ್ಮ ಕರೆಯನ್ನು ಪುನರುಚ್ಚರಿಸುತ್ತೇವೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಹೇಳಿದೆ.

“ಘರ್ಷಣೆಯು ವಿಶಾಲವಾದ ಪ್ರಾದೇಶಿಕ ಆಯಾಮವನ್ನು ತೆಗೆದುಕೊಳ್ಳದಿರುವುದು ಮುಖ್ಯವಾಗಿದೆ. ಎಲ್ಲ ಸಮಸ್ಯೆಗಳನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಪರಿಹರಿಸಬೇಕೆಂದು ನಾವು ಒತ್ತಾಯಿಸುತ್ತೇವೆ” ಕೇಂದ್ರ ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ; ‘ಪ್ಯಾಲೆಸ್ತೀನ್ ಮಕ್ಕಳಿಗಾಗಿ’: ಅಮೆರಿಕ ಬೆಂಬಲಿತ ಪ್ರಶಸ್ತಿ ತಿರಸ್ಕರಿಸಿದ ಆದಿವಾಸಿ ಕವಿ ಜೆಸಿಂತಾ ಕೆರ್ಕಟ್ಟಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...