HomeUncategorizedಗಾಜಾದ 'ವಿಶಾಲ ಪ್ರದೇಶಗಳ' ವಶಕ್ಕೆ ಮಿಲಿಟರಿ ಕಾರ್ಯಾಚರಣೆ ವಿಸ್ತರಣೆ: ನಿವಾಸಿಗಳು ಹೊರಹೋಗಲು ಆದೇಶಿಸಿದ ಇಸ್ರೇಲ್

ಗಾಜಾದ ‘ವಿಶಾಲ ಪ್ರದೇಶಗಳ’ ವಶಕ್ಕೆ ಮಿಲಿಟರಿ ಕಾರ್ಯಾಚರಣೆ ವಿಸ್ತರಣೆ: ನಿವಾಸಿಗಳು ಹೊರಹೋಗಲು ಆದೇಶಿಸಿದ ಇಸ್ರೇಲ್

- Advertisement -
- Advertisement -

ಗಾಜಾದ ‘ವಿಶಾಲ ಪ್ರದೇಶಗಳ’ನ್ನು ವಶಪಡಿಸಿಕೊಳ್ಳಲು ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ವಿಸ್ತರಣೆಗೊಳಿಸುತ್ತೇವೆ. ಇದಕ್ಕಾಗಿ ಗಾಜಾ ನಿವಾಸಿಗಳು ಹೊರಹೋಗುವಂತೆ ಆದೇಶಿಸುತ್ತೇವೆ ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಘೋಷಿಸಿದ್ದಾರೆ.

ಈ ಕುರಿತು ವಿವರಗಳನ್ನು ನಿರ್ದಿಷ್ಟಪಡಿಸದೆ, ಕಾರ್ಯಾಚರಣೆಯು “ಯುದ್ಧ ವಲಯಗಳಿಂದ ಗಾಜಾದ ಜನಸಂಖ್ಯೆಯನ್ನು ದೊಡ್ಡ ಪ್ರಮಾಣದಲ್ಲಿ ಸ್ಥಳಾಂತರಿಸುವುದು” ಒಳಗೊಂಡಿರುತ್ತದೆ ಎಂದು ಕ್ಯಾಟ್ಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಸ್ರೇಲ್ ನ ವೈಮಾನಿಕ ದಾಳಿಗಳಿಂದ ಕಳೆದ 24 ಗಂಟೆಗಳಲ್ಲಿ ಇದುವರೆಗೆ ಡಜನ್ಗಟ್ಟಲೆ ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ವಿಶ್ವಸಂಸ್ಥೆಯ ಆಶ್ರಯ ತಾಣಕ್ಕೆ ದಾಳಿಯಾದಾಗ ಕನಿಷ್ಠ ಒಂಬತ್ತು ಮಕ್ಕಳು ಸೇರಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಮಿಲಿಟರಿ ಕಾರ್ಯಾಚರಣೆಯು “ಭಯೋತ್ಪಾದಕರು ಮತ್ತು ಭಯೋತ್ಪಾದಕ ಮೂಲಸೌಕರ್ಯಗಳ ಪ್ರದೇಶವನ್ನು ಪುಡಿಮಾಡಿ ತೆರವುಗೊಳಿಸಲಾಗುತ್ತದೆ. ಮಂಗಳವಾರ ತಡರಾತ್ರಿ ನಮ್ಮ ಇಸ್ರೇಲಿ ಮಿಲಿಟರಿಯ ಅರೇಬಿಕ್ ಮಾಧ್ಯಮದ ವಕ್ತಾರರು ಗಾಜಾದ ದಕ್ಷಿಣ ರಫಾ ಪ್ರದೇಶದ ನಿವಾಸಿಗಳಿಗೆ ತಮ್ಮ ಮನೆಗಳನ್ನು ತೊರೆದು ಉತ್ತರಕ್ಕೆ ತೆರಳುವಂತೆ ಆದೇಶಿಸಿದ್ದಾರೆ ಎಂದು ರಕ್ಷಣಾ ಸಚಿವರ ಹೇಳಿಕೆ ತಿಳಿಸಿದೆ.

ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬುಧವಾರ ವೀಡಿಯೊ ಭಾಷಣದಲ್ಲಿ ಗಾಜಾದಲ್ಲಿ ಮಿಲಿಟರಿ ವಿಸ್ತರಣೆಯನ್ನು ಘೋಷಿಸಿದರು ಮತ್ತು ಅಲ್ಲಿ ಬಂಧಿಸಲ್ಪಟ್ಟ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವವರೆಗೆ ಗಾಜಾ ಪಟ್ಟಿಯ ಮೇಲೆ ಒತ್ತಡವನ್ನು ಹೆಚ್ಚಿಸುವುದಾಗಿ ಪ್ರತಿಜ್ಞೆ ಮಾಡಿದರು.

“ನಾವು ಮೊರಾಗ್ ಕಾರಿಡಾರ್ ಅನ್ನು ವಶಪಡಿಸಿಕೊಳ್ಳುತ್ತಿದ್ದೇವೆ. ಇದು ಎರಡನೇ ಫಿಲಡೆಲ್ಫಿ, ಹೆಚ್ಚುವರಿ ಫಿಲಡೆಲ್ಫಿ ಕಾರಿಡಾರ್ ಆಗಿರುತ್ತದೆ” ಎಂದು ಅವರು ಹೇಳಿದರು.

ಮೊರಾಗ್ ಕಾರಿಡಾರ್ ದಕ್ಷಿಣ ಗಾಜಾದಲ್ಲಿ ಖಾನ್ ಯೂನಿಸ್ ಮತ್ತು ರಫಾ ನಡುವೆ ಒಮ್ಮೆ ಇದ್ದ ಮೊರಾಗ್ ವಸಾಹತುವನ್ನು ಸೂಚಿಸುತ್ತದೆ. ಫಿಲಡೆಲ್ಫಿ ಕಾರಿಡಾರ್ ಈಜಿಪ್ಟ್‌ನ ಗಡಿಯಲ್ಲಿ ದಕ್ಷಿಣ ಗಾಜಾದಲ್ಲಿ 14-ಕಿಲೋಮೀಟರ್ (8.7-ಮೈಲಿ) ಭೂಪ್ರದೇಶವಾಗಿದೆ. ನಾವು ಈಗ ಗಾಜಾ ಪಟ್ಟಿಯನ್ನು ವಿಭಜಿಸುತ್ತಿದ್ದೇವೆ ಮತ್ತು ಒತ್ತಡವನ್ನು ಹಂತ ಹಂತವಾಗಿ ಹೆಚ್ಚಿಸುತ್ತಿದ್ದೇವೆ. ಇದರಿಂದ ಅವರು ನಮಗೆ ನಮ್ಮ ಒತ್ತೆಯಾಳುಗಳನ್ನು ನೀಡುತ್ತಾರೆ ಮತ್ತು ಅವರು ಅರನ್ನು ನಮಗೆ ನೀಡದಿದ್ದರೆ, ಅವರು ನೀಡುವವರೆಗೆ ಒತ್ತಡ ಹೆಚ್ಚಾಗುತ್ತದೆ” ಎಂದು ನೆತನ್ಯಾಹು ಹೇಳಿದರು.

ಗಾಜಾದಲ್ಲಿ 59 ಇಸ್ರೇಲಿ ಒತ್ತೆಯಾಳುಗಳನ್ನು ಬಂಧಿಸಲಾಗಿದ್ದು, 24 ಜನರು ಜೀವಂತವಾಗಿದ್ದಾರೆಂದು ನಂಬಲಾಗಿದೆ, 35 ಜನರು ಸತ್ತಿದ್ದಾರೆಂದು ನಂಬಲಾಗಿದೆ.

ಗಾಜಾದಲ್ಲಿ ಸಂಭಾವ್ಯ ಪ್ರಮುಖ ನೆಲದ ದಾಳಿಗೆ ಯೋಜನೆಗಳನ್ನು ರೂಪಿಸುತ್ತಿದೆ. ಇದರಲ್ಲಿ ಹತ್ತಾರು ಸಾವಿರ ಸೈನಿಕರನ್ನು ಯುದ್ಧಕ್ಕೆ ಕಳುಹಿಸಲಾಗುವುದು, ಇದರಲ್ಲಿ ಹೆಚ್ಚಿನ ಪ್ರದೇಶವನ್ನು ತೆರವುಗೊಳಿಸಲಾಗುವುದು ಎಂದು ಕಾಟ್ಜ್ ಬುಧವಾರ ಹೇಳಿಕೆಯಲ್ಲಿ ಹೇಳಿದ್ದಾರೆ.

ಗಾಜಾದ ಮೇಲೆ ಇಸ್ರೇಲ್ ಮೇಲೆ ತನ್ನ ವೈಮಾನಿಕ ಬಾಂಬ್ ದಾಳಿಯನ್ನು ಮುಂದುವರಿಸುತ್ತಿರುವ ನಡುವೆ ಈ ಘೋಷಣೆ ಬಂದಿದೆ. ದಕ್ಷಿಣ ಗಾಜಾದಲ್ಲಿ ರಾತ್ರಿಯಿಡೀ ಇಸ್ರೇಲಿ ದಾಳಿಯಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆಗಳು ತಿಳಿಸಿವೆ.

ಸಾವಿಗೀಡಾದವರಲ್ಲಿ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 13 ಜನರು  ರಫಾ ಪ್ರದೇಶದಿಂದ ಸ್ಥಳಾಂತರಗೊಂಡ ನಂತರ ವಸತಿ ಮನೆಯಲ್ಲಿ ಆಶ್ರಯ ಪಡೆದಿದ್ದರು ಎಂದು ನಾಸರ್ ಆಸ್ಪತ್ರೆ ತಿಳಿಸಿದೆ. ಮಧ್ಯ ಗಾಜಾದಲ್ಲಿ ನಡೆದ ಪ್ರತ್ಯೇಕ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅವರ ಶವಗಳನ್ನು ಸ್ವೀಕರಿಸಿದ ಅಲ್ ಅವ್ಡಾ ಆಸ್ಪತ್ರೆ ತಿಳಿಸಿದೆ.

ಬುಧವಾರದಂದು ಉತ್ತರ ಗಾಜಾದ ಜಬಲ್ಯ ನಿರಾಶ್ರಿತರ ಶಿಬಿರದಲ್ಲಿ ಸ್ಥಳಾಂತರಗೊಂಡ ಜನರಿಗೆ ಆಶ್ರಯವಾಗಿ ಕಾರ್ಯನಿರ್ವಹಿಸುತ್ತಿದ್ದ ಯುಎನ್‌ಆರ್‌ಡಬ್ಲ್ಯೂಎ ಚಿಕಿತ್ಸಾಲಯದ ಮೇಲೆ ಇಸ್ರೇಲಿ ವೈಮಾನಿಕ ದಾಳಿಯ ನಂತರ ಒಂಬತ್ತು ಮಕ್ಕಳ ಶವಗಳು ಸೇರಿದಂತೆ 19 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗಾಜಾದ ನಾಗರಿಕ ರಕ್ಷಣಾ ಇಲಾಖೆ ತಿಳಿಸಿದೆ.

ಕಳೆದ ವಾರ ಸಾವಿರಾರು ಪ್ಯಾಲೆಸ್ಟೀನಿಯನ್ನರು ಗಾಜಾದಲ್ಲಿ ಹಮಾಸ್ ಮತ್ತು ಇಸ್ರೇಲ್‌ನ ಯುದ್ಧದ ವಿರುದ್ಧ ಪ್ರತಿಭಟಿಸಿದ ನಂತರ ಕ್ಯಾಟ್ಜ್ ಅವರ ಘೋಷಣೆಯೂ ಬಂದಿದೆ. ಪ್ರತಿಭಟನೆಗಳಿಂದ ಉತ್ತೇಜಿತರಾದ ರಕ್ಷಣಾ ಸಚಿವರು, ಹಮಾಸ್ ಎನ್‌ಕ್ಲೇವ್‌ನಲ್ಲಿರುವ ಪ್ಯಾಲೆಸ್ಟೀನಿಯನ್ನರ ಜೀವಕ್ಕೆ “ಅಪಾಯವನ್ನುಂಟುಮಾಡುತ್ತಿದೆ” ಎಂದು ಹೇಳುವ ಮೂಲಕ ಗಾಜಾದ ಜನರು ಬೀದಿಗಿಳಿಯುವಂತೆ ಕರೆ ನೀಡಿದ್ದಾರೆ.

ಇಸ್ರೇಲಿ ಮಿಲಿಟರಿ ಶೀಘ್ರದಲ್ಲೇ “ಗಾಜಾದ ಹೆಚ್ಚುವರಿ ಪ್ರದೇಶಗಳಲ್ಲಿ ಬಲವಂತವಾಗಿ” ಕಾರ್ಯನಿರ್ವಹಿಸಲಿದೆ ಎಂದು ಅವರು ಹೇಳಿದರು ಮತ್ತು ಹಮಾಸ್ ಅನ್ನು ಅಧಿಕಾರದಿಂದ ತೆಗೆದುಹಾಕಲು ಮತ್ತು ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಪ್ಯಾಲೆಸ್ಟೀನಿಯನ್ನರನ್ನು ಒತ್ತಾಯಿಸಿದ್ದಾರೆ. ಇದು ಯುದ್ಧವನ್ನು ನಿಲ್ಲಿಸಲು ಇದು ಏಕೈಕ ಮಾರ್ಗವಾಗಿದೆ” ಎಂದು ಅವರು ಹೇಳಿದ್ದಾರೆ.

ಇಸ್ರೇಲ್ ಎರಡು ವಾರಗಳ ಹಿಂದೆ ಗಾಜಾದ ಮೇಲೆ ತನ್ನ ದಾಳಿಯನ್ನು ಪುನರಾರಂಭಿಸಿದೆ. ಎನ್‌ಕ್ಲೇವ್‌ಗೆ ಪ್ರವೇಶಿಸುವ ಮಾನವೀಯ ನೆರವಿನ ಸಂಪೂರ್ಣ ದಿಗ್ಬಂಧನವನ್ನು ವಿಧಿಸಿದ ವಾರಗಳ ನಂತರ, ಹಮಾಸ್‌ನೊಂದಿಗಿನ ಎರಡು ತಿಂಗಳ ಹಳೆಯ ಕದನ ವಿರಾಮವನ್ನು ಮುರಿದುಹಾಕಿದೆ. ಉಳಿದ 24 ಒತ್ತೆಯಾಳುಗಳನ್ನು ಇನ್ನೂ ಜೀವಂತವಾಗಿ ಇರಿಸಲಾಗಿದೆ ಎಂದು ನಂಬಲಾದವರನ್ನು ಬಿಡುಗಡೆ ಮಾಡುವವರೆಗೆ ತನ್ನ ಪಡೆಗಳು ಗಾಜಾದ ಕೆಲವು ಭಾಗಗಳಲ್ಲಿ ಶಾಶ್ವತ ಉಪಸ್ಥಿತಿಯನ್ನು ಕಾಯ್ದುಕೊಳ್ಳುತ್ತದೆ ಎಂದು ಅದು ಎಚ್ಚರಿಸಿದೆ.

ಅಂದಿನಿಂದ ನೂರಾರು ಪ್ಯಾಲೆಸ್ಟೀನಿಯನ್ನರು ಈ ಪ್ರದೇಶದಲ್ಲಿ ಸಾವನ್ನಪ್ಪಿದ್ದಾರೆ ಮತ್ತು ಆಹಾರ ಸರಬರಾಜು ಖಾಲಿಯಾಗುತ್ತಿದೆ ಎಂದು ವಿಶ್ವಸಂಸ್ಥೆ ಎಚ್ಚರಿಸಿದೆ.

ಇಂಧನ ಮತ್ತು ಹಿಟ್ಟಿನ ತೀವ್ರ ಕೊರತೆಯಿಂದಾಗಿ ಗಾಜಾದಲ್ಲಿನ ಎಲ್ಲಾ ಬೇಕರಿಗಳು ಮುಚ್ಚಲ್ಪಟ್ಟಿವೆ ಎಂದು ಸ್ಥಳೀಯ ಅಧಿಕಾರಿಗಳು ಮತ್ತು ವಿಶ್ವಸಂಸ್ಥೆ ತಿಳಿಸಿವೆ.

ಒತ್ತೆಯಾಳು ಕುಟುಂಬಗಳು ‘ಭಯಭೀತರಾಗಿದ್ದಾರೆ’

ಲೆಫ್ಟಿನೆಂಟ್ ಜನರಲ್ ಇಯಾಲ್ ಜಮೀರ್ ನೇತೃತ್ವದ ಇಸ್ರೇಲಿ ಮಿಲಿಟರಿ, ವಾರಗಳಿಂದ ಗಾಜಾದಲ್ಲಿ ದೊಡ್ಡ ಪ್ರಮಾಣದ ಕಾರ್ಯಾಚರಣೆಗೆ ಯೋಜನೆಗಳನ್ನು ರೂಪಿಸುತ್ತಿದೆ. ಆದರೆ ಗಾಜಾದಲ್ಲಿ ದೀರ್ಘಾವಧಿಯ ಆಕ್ರಮಣವು ಇಸ್ರೇಲಿ ಸಾರ್ವಜನಿಕರಿಂದ ತೀವ್ರ ಪ್ರತಿರೋಧವನ್ನು ಉಂಟುಮಾಡಬಹುದು, ಅವರಲ್ಲಿ ಹೆಚ್ಚಿನವರು ಯುದ್ಧಕ್ಕೆ ಮರಳುವ ಬದಲು ಒತ್ತೆಯಾಳು ಬಿಡುಗಡೆ ಒಪ್ಪಂದಕ್ಕಾಗಿ ಕರೆ ನೀಡುತ್ತಿದ್ದಾರೆ.

ಒಪ್ಪಂದದ ಮೂಲಕ ಒತ್ತೆಯಾಳುಗಳ ಬಿಡುಗಡೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಯುದ್ಧವನ್ನು ಕೊನೆಗೊಳಿಸುವ ಬದಲು, ಇಸ್ರೇಲಿ ಸರ್ಕಾರವು ಗಾಜಾಕ್ಕೆ ಹೆಚ್ಚಿನ ಸೈನಿಕರನ್ನು ಕಳುಹಿಸುತ್ತಿದೆ” ಎಂದು ಇಸ್ರೇಲಿ ಒತ್ತೆಯಾಳುಗಳ ಕುಟುಂಬಗಳ ವೇದಿಕೆಯು ಹೇಳಿಕೆಯಲ್ಲಿ ತಿಳಿಸಿದೆ.

ಇತ್ತೀಚಿನ ದಿನಗಳಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮವನ್ನು ಪುನರುಜ್ಜೀವನಗೊಳಿಸಲು ಈಜಿಪ್ಟ್ ಮತ್ತು ಕತಾರ್ ಪ್ರಯತ್ನಗಳನ್ನು ತೀವ್ರಗೊಳಿಸಿವೆ. ಹಮಾಸ್ ಭಾನುವಾರ ಹೊಸ ಈಜಿಪ್ಟ್ ಪ್ರಸ್ತಾವನೆಗೆ ಒಪ್ಪಿಕೊಂಡಿದೆ ಮತ್ತು ಇಸ್ರೇಲ್ ಸೋಮವಾರ ಪ್ರತಿ-ಪ್ರಸ್ತಾಪದೊಂದಿಗೆ ಪ್ರತಿಕ್ರಿಯಿಸಿದೆ.

ಈಜಿಪ್ಟ್‌ನ ಪ್ರಸ್ತಾವನೆಯು ಹಮಾಸ್ ಐದು ಒತ್ತೆಯಾಳುಗಳನ್ನು ಬಿಡುಗಡೆ ಮಾಡುತ್ತದೆ, ಇದರಲ್ಲಿ ಅಮೆರಿಕನ್-ಇಸ್ರೇಲಿ ಎಡಾನ್ ಅಲೆಕ್ಸಾಂಡರ್ ಸೇರಿದ್ದಾರೆ. ಇದು ನವೀಕರಿಸಿದ ಕದನ ವಿರಾಮಕ್ಕೆ ಬದಲಾಗಿ ಎಂದು ಹಮಾಸ್ ಮೂಲವೊಂದು ತಿಳಿಸಿದೆ. ಇದು ಹಲವಾರು ವಾರಗಳ ಹಿಂದೆ ಅಮೆರಿಕದ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ಮಂಡಿಸಿದ ಪ್ರಸ್ತಾವನೆಗೆ ಹೋಲುತ್ತದೆ, ಆದರೂ ಇದು ಮೃತ ಒತ್ತೆಯಾಳುಗಳ ಹೆಚ್ಚುವರಿ ಶವಗಳ ಬಿಡುಗಡೆಯನ್ನು ಸಹ ಒಳಗೊಂಡಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

ನಕ್ಸಲರಿಂದ ಷರತ್ತುಬದ್ಧ ಮಾತುಕತೆಗೆ ಕರೆ; ಬೇಷರತ್ ಶಾಂತಿ ಮಾತುಕತೆಗೆ ಸಿದ್ಧ ಎಂದ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...