Homeಮುಖಪುಟಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ: 21 ಜನರು ಸಾವು

ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ: 21 ಜನರು ಸಾವು

ಅಲ್ ಅಕ್ಸಾ ಪ್ರವೇಶಕ್ಕೆ ಇಸ್ರೇಲ್ ಪಡೆಗಳಿಂದ ತಡೆ ಆರೋಪ, 30 ಸಾವಿರ ದಾಟಿದ ಪ್ಯಾಲೆಸ್ತೀನಿಯರ ಸಾವಿನ ಸಂಖ್ಯೆ

- Advertisement -
- Advertisement -

ಅಮಾಯಕ ಪ್ಯಾಲೆಸ್ತೀನ್ ನಾಗರಿಕರ ಮೇಲಿನ ಇಸ್ರೇಲ್ ಆಕ್ರಮಣ ಮುಂದುವರೆದಿದೆ. ಕಳೆದ ಗುರುವಾರ ಅಗತ್ಯ ಸಾಮಗ್ರಿಗಳಿಗಾಗಿ ಕಾಯುತ್ತಿದ್ದ ಜನರ ಗುಂಪಿನ ಮೇಲೆ ಇಸ್ರೇಲಿ ಪಡೆಗಳು ಗುಂಡಿನ ದಾಳಿ ನಡೆಸಿದ್ದು, ಕನಿಷ್ಠ 21 ಜನರು ಮೃತಪಟ್ಟಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಬುಧವಾರ ದಾಳಿ ನಡೆಸಿದ ಅದೇ ಜಾಗದಲ್ಲಿ ಗುರುವಾರ ಮತ್ತೆ ದಾಳಿ ನಡೆಸಲಾಗಿದೆ. ಗಾಝಾದ ಆರೋಗ್ಯ ಸಚಿವಾಲಯವು ಗುರುವಾರದ ದಾಳಿಯನ್ನು “ಹೊಸ, ಪೂರ್ವಯೋಜಿತ ಹತ್ಯಾಕಾಂಡ” ಎಂದು ಬಣ್ಣಿಸಿದ್ದು, ಘಟನೆಯಲ್ಲಿ 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

ಬುಧವಾರ ಗಾಝಾದ ಕುವೈತ್ ರೌಂಡ್‌ಬೌಟ್‌ನಲ್ಲಿ ಆಹಾರಕ್ಕಾಗಿ ಕಾಯುತ್ತಿದ್ದ ಜನರ ಗುಂಪಿನ ಮೇಲೆ ಇಸ್ರೇಲಿ ಪಡೆಗಳು ದಾಳಿ ನಡೆಸಿದ್ದವು. ಇದರಲ್ಲಿ ಆರು ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ. ಕುವೈತ್ ರೌಂಡ್‌ಬೌಟ್‌ನಲ್ಲಿ ಆಹಾರಕ್ಕಾಗಿ ಕಾಯುವ ಜನರ ಮೇಲೆ ಇಸ್ರೇಲಿ ಪಡೆಗಳು ನಿರಂತರವಾಗಿ ದಾಳಿ ನಡೆಸುತ್ತಿವೆ. ಇದುವರೆಗೆ 400 ಜನರನ್ನು ಇಸ್ರೇಲಿ ಸೈನಿಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಆಹಾರಕ್ಕಾಗಿ ಕಾಯುತ್ತಿರುವ ಜನರನ್ನು ಗುರಿಯಾಗಿಸಿ ದಾಳಿ ಮಾಡಲು ಇಸ್ರೇಲಿ ಪಡೆಗಳು ಹೆಲಿಕಾಪ್ಟರ್‌, ಟ್ಯಾಂಕ್‌ ಮತ್ತು ಡ್ರೋನ್‌ಗಳನ್ನು ಬಳಸುತ್ತಿವೆ ಎಂದು ಪ್ರತ್ಯಕ್ಷದರ್ಶಿಯೊಬ್ಬರನ್ನು ಉಲ್ಲೇಖಿಸಿ ಅಲ್‌ ಜಝೀರಾ ವರದಿ ಮಾಡಿದೆ.

ಇಸ್ರೇಲಿ ಪಡೆಗಳು ಆಹಾರಕ್ಕಾಗಿ ಕಾಯುತ್ತಿರುವ ಜನರ ಮೇಲೆ ದಾಳಿ ಮಾಡಿರುವ ಆರೋಪವನ್ನು ಅಲ್ಲಗಳೆದಿವೆ. ಶಸ್ತ್ರ ಸಜ್ಜಿತ ಪ್ಯಾಲೆಸ್ತೀನಿಯರು ಜನರ ಸಾವಿಗೆ ಕಾರಣ ಎಂದು ಹೇಳಿದೆ.

ಗುರುವಾರ ಗಾಝಾ ನಗರದಲ್ಲಿ ನಾಗರಿಕರು ಆಹಾರಕ್ಕಾಗಿ ಕಾಯುತ್ತಿರುವಾಗ ಶಸ್ತ್ರ ಸಜ್ಜಿತ ಪ್ಯಾಲೆಸ್ತೀನಿಯರು ಜನರ ಗುಂಪಿನ ಮೇಲೆ ದಾಳಿ ಮಾಡಿ ಟ್ರಕ್‌ಗಳಿಂದ ಆಹಾರ ಲೂಟಿ ಮಾಡಿದ್ದಾರೆ ಎಂದು ಇಸ್ರೇಲ್ ಆರೋಪಿಸಿದೆ.

ಆಹಾರ ಟ್ರಕ್‌ಗಳು ಬಂದಾಗ ಜನರು ಅವುಗಳ ಹಿಂದೆ ಓಡುವುದು, ನೂಕು ನುಗ್ಗಲು ನಡೆಸುವುದರಿಂದ ಸಾವುಗಳು ಸಂಭವಿಸುತ್ತಿವೆ. ನಾವು ಹೆಲಿಕಾಫ್ಟರ್, ಟ್ಯಾಂಕರ್, ಡ್ರೋನ್ ಬಳಸಿ ದಾಳಿ ನಡೆಸಿಲ್ಲ ಎಂದು ಹೇಳಿದೆ.

ಅಲ್‌ ಅಕ್ಸಾ ಪ್ರವೇಶಕ್ಕೆ ನಿರಾಕರಣೆ:

ಇಸ್ರೇಲ್‌ ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಜೆರುಸಲೇಂನ ಅಲ್‌ ಅಕ್ಸಾ ಮಸೀದಿಯಲ್ಲಿ ನಮಾಝ್‌ ನಿರ್ವಹಿಸಲು ಪ್ಯಾಲೆಸ್ತೀನ್ ಮುಸ್ಲಿಮರಿಗೆ ಇಸ್ರೇಲ್‌ ಸೈನಿಕರು ತಡೆಯೊಡ್ಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮುಸ್ಲಿಮರ ಪವಿತ್ರ ತಿಂಗಳು ರಂಝಾನ್ ಹಿನ್ನೆಲೆ ಸಾವಿರಾರು ಪ್ಯಾಲೆಸ್ತೀನಿರು ಅಲ್‌ ಅಕ್ಸಾ ಮಸೀದಿಯಲ್ಲಿ ನಮಾಝ್‌ಗೆ ತೆರಳಿದ್ದರು. ಈ ವೇಳೆ ಇಸ್ರೇಲಿ ಪಡೆ ಅವರನ್ನು ತಡೆದಿದೆ ಎಂದು ಅಲ್‌ ಜಝೀರಾ ವರದಿ ಮಾಡಿದೆ.

ಇಸ್ರೇಲಿ ಪಡೆಗಳ ನಿರ್ಬಂಧದ ಹೊರತಾಗಿಯೂ ಮುಸ್ಲಿಮರ ಮೂರನೇ ಅತೀ ಪವಿತ್ರ ಮಸೀದಿಯಾದ ಅಲ್‌ ಅಕ್ಸಾದಲ್ಲಿ ರಂಝಾನಿನ ಮೊದಲ ಶುಕ್ರವಾರ ಬರೋಬ್ಬರಿ 80 ಸಾವಿರ ಜನರು ಜುಮಾ ನಮಾಝ್ ನಿರ್ವಹಿಸಿದ್ದಾರೆ ಎಂದು ಮಸೀದಿಯನ್ನು ನಿಯಂತ್ರಿಸುವ ಇಸ್ಲಾಮಿಕ್ ವಕ್ಫ್ ಸಂಸ್ಥೆಯನ್ನು ಉಲ್ಲೇಖಿಸಿ ಕುದ್ಸ್ ನ್ಯೂಸ್ ನೆಟ್‌ವರ್ಕ್ ವರದಿ ಮಾಡಿದೆ.

30 ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವು:

ಅಕ್ಟೋಬರ್ 7 ರಂದು ಪ್ರಾರಂಭಗೊಂಡ ಇಸ್ರೇಲ್‌-ಹಮಾಸ್ ನಡುವಿನ ಸಂಘರ್ಷದಲ್ಲಿ ಇದುವರೆಗೆ 30 ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ. 72 ಸಾವಿರಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

Photo Courtesy : Al Jazeera

ಇದನ್ನೂ ಓದಿ : ಚುನಾವಣಾ ಬಾಂಡ್‌: ಒಟ್ಟು ನಿಧಿಯ 50% ಸ್ವೀಕರಿಸಿದ್ದು ಬಿಜೆಪಿ: ಅಂಕಿಅಂಶ ಬಯಲು ಮಾಡಿದ ADR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...