Homeಮುಖಪುಟಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ: 21 ಜನರು ಸಾವು

ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ: 21 ಜನರು ಸಾವು

ಅಲ್ ಅಕ್ಸಾ ಪ್ರವೇಶಕ್ಕೆ ಇಸ್ರೇಲ್ ಪಡೆಗಳಿಂದ ತಡೆ ಆರೋಪ, 30 ಸಾವಿರ ದಾಟಿದ ಪ್ಯಾಲೆಸ್ತೀನಿಯರ ಸಾವಿನ ಸಂಖ್ಯೆ

- Advertisement -
- Advertisement -

ಅಮಾಯಕ ಪ್ಯಾಲೆಸ್ತೀನ್ ನಾಗರಿಕರ ಮೇಲಿನ ಇಸ್ರೇಲ್ ಆಕ್ರಮಣ ಮುಂದುವರೆದಿದೆ. ಕಳೆದ ಗುರುವಾರ ಅಗತ್ಯ ಸಾಮಗ್ರಿಗಳಿಗಾಗಿ ಕಾಯುತ್ತಿದ್ದ ಜನರ ಗುಂಪಿನ ಮೇಲೆ ಇಸ್ರೇಲಿ ಪಡೆಗಳು ಗುಂಡಿನ ದಾಳಿ ನಡೆಸಿದ್ದು, ಕನಿಷ್ಠ 21 ಜನರು ಮೃತಪಟ್ಟಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಬುಧವಾರ ದಾಳಿ ನಡೆಸಿದ ಅದೇ ಜಾಗದಲ್ಲಿ ಗುರುವಾರ ಮತ್ತೆ ದಾಳಿ ನಡೆಸಲಾಗಿದೆ. ಗಾಝಾದ ಆರೋಗ್ಯ ಸಚಿವಾಲಯವು ಗುರುವಾರದ ದಾಳಿಯನ್ನು “ಹೊಸ, ಪೂರ್ವಯೋಜಿತ ಹತ್ಯಾಕಾಂಡ” ಎಂದು ಬಣ್ಣಿಸಿದ್ದು, ಘಟನೆಯಲ್ಲಿ 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

ಬುಧವಾರ ಗಾಝಾದ ಕುವೈತ್ ರೌಂಡ್‌ಬೌಟ್‌ನಲ್ಲಿ ಆಹಾರಕ್ಕಾಗಿ ಕಾಯುತ್ತಿದ್ದ ಜನರ ಗುಂಪಿನ ಮೇಲೆ ಇಸ್ರೇಲಿ ಪಡೆಗಳು ದಾಳಿ ನಡೆಸಿದ್ದವು. ಇದರಲ್ಲಿ ಆರು ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ. ಕುವೈತ್ ರೌಂಡ್‌ಬೌಟ್‌ನಲ್ಲಿ ಆಹಾರಕ್ಕಾಗಿ ಕಾಯುವ ಜನರ ಮೇಲೆ ಇಸ್ರೇಲಿ ಪಡೆಗಳು ನಿರಂತರವಾಗಿ ದಾಳಿ ನಡೆಸುತ್ತಿವೆ. ಇದುವರೆಗೆ 400 ಜನರನ್ನು ಇಸ್ರೇಲಿ ಸೈನಿಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಆಹಾರಕ್ಕಾಗಿ ಕಾಯುತ್ತಿರುವ ಜನರನ್ನು ಗುರಿಯಾಗಿಸಿ ದಾಳಿ ಮಾಡಲು ಇಸ್ರೇಲಿ ಪಡೆಗಳು ಹೆಲಿಕಾಪ್ಟರ್‌, ಟ್ಯಾಂಕ್‌ ಮತ್ತು ಡ್ರೋನ್‌ಗಳನ್ನು ಬಳಸುತ್ತಿವೆ ಎಂದು ಪ್ರತ್ಯಕ್ಷದರ್ಶಿಯೊಬ್ಬರನ್ನು ಉಲ್ಲೇಖಿಸಿ ಅಲ್‌ ಜಝೀರಾ ವರದಿ ಮಾಡಿದೆ.

ಇಸ್ರೇಲಿ ಪಡೆಗಳು ಆಹಾರಕ್ಕಾಗಿ ಕಾಯುತ್ತಿರುವ ಜನರ ಮೇಲೆ ದಾಳಿ ಮಾಡಿರುವ ಆರೋಪವನ್ನು ಅಲ್ಲಗಳೆದಿವೆ. ಶಸ್ತ್ರ ಸಜ್ಜಿತ ಪ್ಯಾಲೆಸ್ತೀನಿಯರು ಜನರ ಸಾವಿಗೆ ಕಾರಣ ಎಂದು ಹೇಳಿದೆ.

ಗುರುವಾರ ಗಾಝಾ ನಗರದಲ್ಲಿ ನಾಗರಿಕರು ಆಹಾರಕ್ಕಾಗಿ ಕಾಯುತ್ತಿರುವಾಗ ಶಸ್ತ್ರ ಸಜ್ಜಿತ ಪ್ಯಾಲೆಸ್ತೀನಿಯರು ಜನರ ಗುಂಪಿನ ಮೇಲೆ ದಾಳಿ ಮಾಡಿ ಟ್ರಕ್‌ಗಳಿಂದ ಆಹಾರ ಲೂಟಿ ಮಾಡಿದ್ದಾರೆ ಎಂದು ಇಸ್ರೇಲ್ ಆರೋಪಿಸಿದೆ.

ಆಹಾರ ಟ್ರಕ್‌ಗಳು ಬಂದಾಗ ಜನರು ಅವುಗಳ ಹಿಂದೆ ಓಡುವುದು, ನೂಕು ನುಗ್ಗಲು ನಡೆಸುವುದರಿಂದ ಸಾವುಗಳು ಸಂಭವಿಸುತ್ತಿವೆ. ನಾವು ಹೆಲಿಕಾಫ್ಟರ್, ಟ್ಯಾಂಕರ್, ಡ್ರೋನ್ ಬಳಸಿ ದಾಳಿ ನಡೆಸಿಲ್ಲ ಎಂದು ಹೇಳಿದೆ.

ಅಲ್‌ ಅಕ್ಸಾ ಪ್ರವೇಶಕ್ಕೆ ನಿರಾಕರಣೆ:

ಇಸ್ರೇಲ್‌ ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಜೆರುಸಲೇಂನ ಅಲ್‌ ಅಕ್ಸಾ ಮಸೀದಿಯಲ್ಲಿ ನಮಾಝ್‌ ನಿರ್ವಹಿಸಲು ಪ್ಯಾಲೆಸ್ತೀನ್ ಮುಸ್ಲಿಮರಿಗೆ ಇಸ್ರೇಲ್‌ ಸೈನಿಕರು ತಡೆಯೊಡ್ಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮುಸ್ಲಿಮರ ಪವಿತ್ರ ತಿಂಗಳು ರಂಝಾನ್ ಹಿನ್ನೆಲೆ ಸಾವಿರಾರು ಪ್ಯಾಲೆಸ್ತೀನಿರು ಅಲ್‌ ಅಕ್ಸಾ ಮಸೀದಿಯಲ್ಲಿ ನಮಾಝ್‌ಗೆ ತೆರಳಿದ್ದರು. ಈ ವೇಳೆ ಇಸ್ರೇಲಿ ಪಡೆ ಅವರನ್ನು ತಡೆದಿದೆ ಎಂದು ಅಲ್‌ ಜಝೀರಾ ವರದಿ ಮಾಡಿದೆ.

ಇಸ್ರೇಲಿ ಪಡೆಗಳ ನಿರ್ಬಂಧದ ಹೊರತಾಗಿಯೂ ಮುಸ್ಲಿಮರ ಮೂರನೇ ಅತೀ ಪವಿತ್ರ ಮಸೀದಿಯಾದ ಅಲ್‌ ಅಕ್ಸಾದಲ್ಲಿ ರಂಝಾನಿನ ಮೊದಲ ಶುಕ್ರವಾರ ಬರೋಬ್ಬರಿ 80 ಸಾವಿರ ಜನರು ಜುಮಾ ನಮಾಝ್ ನಿರ್ವಹಿಸಿದ್ದಾರೆ ಎಂದು ಮಸೀದಿಯನ್ನು ನಿಯಂತ್ರಿಸುವ ಇಸ್ಲಾಮಿಕ್ ವಕ್ಫ್ ಸಂಸ್ಥೆಯನ್ನು ಉಲ್ಲೇಖಿಸಿ ಕುದ್ಸ್ ನ್ಯೂಸ್ ನೆಟ್‌ವರ್ಕ್ ವರದಿ ಮಾಡಿದೆ.

30 ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವು:

ಅಕ್ಟೋಬರ್ 7 ರಂದು ಪ್ರಾರಂಭಗೊಂಡ ಇಸ್ರೇಲ್‌-ಹಮಾಸ್ ನಡುವಿನ ಸಂಘರ್ಷದಲ್ಲಿ ಇದುವರೆಗೆ 30 ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ. 72 ಸಾವಿರಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

Photo Courtesy : Al Jazeera

ಇದನ್ನೂ ಓದಿ : ಚುನಾವಣಾ ಬಾಂಡ್‌: ಒಟ್ಟು ನಿಧಿಯ 50% ಸ್ವೀಕರಿಸಿದ್ದು ಬಿಜೆಪಿ: ಅಂಕಿಅಂಶ ಬಯಲು ಮಾಡಿದ ADR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...