Homeಮುಖಪುಟಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ: 21 ಜನರು ಸಾವು

ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ: 21 ಜನರು ಸಾವು

ಅಲ್ ಅಕ್ಸಾ ಪ್ರವೇಶಕ್ಕೆ ಇಸ್ರೇಲ್ ಪಡೆಗಳಿಂದ ತಡೆ ಆರೋಪ, 30 ಸಾವಿರ ದಾಟಿದ ಪ್ಯಾಲೆಸ್ತೀನಿಯರ ಸಾವಿನ ಸಂಖ್ಯೆ

- Advertisement -
- Advertisement -

ಅಮಾಯಕ ಪ್ಯಾಲೆಸ್ತೀನ್ ನಾಗರಿಕರ ಮೇಲಿನ ಇಸ್ರೇಲ್ ಆಕ್ರಮಣ ಮುಂದುವರೆದಿದೆ. ಕಳೆದ ಗುರುವಾರ ಅಗತ್ಯ ಸಾಮಗ್ರಿಗಳಿಗಾಗಿ ಕಾಯುತ್ತಿದ್ದ ಜನರ ಗುಂಪಿನ ಮೇಲೆ ಇಸ್ರೇಲಿ ಪಡೆಗಳು ಗುಂಡಿನ ದಾಳಿ ನಡೆಸಿದ್ದು, ಕನಿಷ್ಠ 21 ಜನರು ಮೃತಪಟ್ಟಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಬುಧವಾರ ದಾಳಿ ನಡೆಸಿದ ಅದೇ ಜಾಗದಲ್ಲಿ ಗುರುವಾರ ಮತ್ತೆ ದಾಳಿ ನಡೆಸಲಾಗಿದೆ. ಗಾಝಾದ ಆರೋಗ್ಯ ಸಚಿವಾಲಯವು ಗುರುವಾರದ ದಾಳಿಯನ್ನು “ಹೊಸ, ಪೂರ್ವಯೋಜಿತ ಹತ್ಯಾಕಾಂಡ” ಎಂದು ಬಣ್ಣಿಸಿದ್ದು, ಘಟನೆಯಲ್ಲಿ 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

ಬುಧವಾರ ಗಾಝಾದ ಕುವೈತ್ ರೌಂಡ್‌ಬೌಟ್‌ನಲ್ಲಿ ಆಹಾರಕ್ಕಾಗಿ ಕಾಯುತ್ತಿದ್ದ ಜನರ ಗುಂಪಿನ ಮೇಲೆ ಇಸ್ರೇಲಿ ಪಡೆಗಳು ದಾಳಿ ನಡೆಸಿದ್ದವು. ಇದರಲ್ಲಿ ಆರು ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ. ಕುವೈತ್ ರೌಂಡ್‌ಬೌಟ್‌ನಲ್ಲಿ ಆಹಾರಕ್ಕಾಗಿ ಕಾಯುವ ಜನರ ಮೇಲೆ ಇಸ್ರೇಲಿ ಪಡೆಗಳು ನಿರಂತರವಾಗಿ ದಾಳಿ ನಡೆಸುತ್ತಿವೆ. ಇದುವರೆಗೆ 400 ಜನರನ್ನು ಇಸ್ರೇಲಿ ಸೈನಿಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಆಹಾರಕ್ಕಾಗಿ ಕಾಯುತ್ತಿರುವ ಜನರನ್ನು ಗುರಿಯಾಗಿಸಿ ದಾಳಿ ಮಾಡಲು ಇಸ್ರೇಲಿ ಪಡೆಗಳು ಹೆಲಿಕಾಪ್ಟರ್‌, ಟ್ಯಾಂಕ್‌ ಮತ್ತು ಡ್ರೋನ್‌ಗಳನ್ನು ಬಳಸುತ್ತಿವೆ ಎಂದು ಪ್ರತ್ಯಕ್ಷದರ್ಶಿಯೊಬ್ಬರನ್ನು ಉಲ್ಲೇಖಿಸಿ ಅಲ್‌ ಜಝೀರಾ ವರದಿ ಮಾಡಿದೆ.

ಇಸ್ರೇಲಿ ಪಡೆಗಳು ಆಹಾರಕ್ಕಾಗಿ ಕಾಯುತ್ತಿರುವ ಜನರ ಮೇಲೆ ದಾಳಿ ಮಾಡಿರುವ ಆರೋಪವನ್ನು ಅಲ್ಲಗಳೆದಿವೆ. ಶಸ್ತ್ರ ಸಜ್ಜಿತ ಪ್ಯಾಲೆಸ್ತೀನಿಯರು ಜನರ ಸಾವಿಗೆ ಕಾರಣ ಎಂದು ಹೇಳಿದೆ.

ಗುರುವಾರ ಗಾಝಾ ನಗರದಲ್ಲಿ ನಾಗರಿಕರು ಆಹಾರಕ್ಕಾಗಿ ಕಾಯುತ್ತಿರುವಾಗ ಶಸ್ತ್ರ ಸಜ್ಜಿತ ಪ್ಯಾಲೆಸ್ತೀನಿಯರು ಜನರ ಗುಂಪಿನ ಮೇಲೆ ದಾಳಿ ಮಾಡಿ ಟ್ರಕ್‌ಗಳಿಂದ ಆಹಾರ ಲೂಟಿ ಮಾಡಿದ್ದಾರೆ ಎಂದು ಇಸ್ರೇಲ್ ಆರೋಪಿಸಿದೆ.

ಆಹಾರ ಟ್ರಕ್‌ಗಳು ಬಂದಾಗ ಜನರು ಅವುಗಳ ಹಿಂದೆ ಓಡುವುದು, ನೂಕು ನುಗ್ಗಲು ನಡೆಸುವುದರಿಂದ ಸಾವುಗಳು ಸಂಭವಿಸುತ್ತಿವೆ. ನಾವು ಹೆಲಿಕಾಫ್ಟರ್, ಟ್ಯಾಂಕರ್, ಡ್ರೋನ್ ಬಳಸಿ ದಾಳಿ ನಡೆಸಿಲ್ಲ ಎಂದು ಹೇಳಿದೆ.

ಅಲ್‌ ಅಕ್ಸಾ ಪ್ರವೇಶಕ್ಕೆ ನಿರಾಕರಣೆ:

ಇಸ್ರೇಲ್‌ ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಜೆರುಸಲೇಂನ ಅಲ್‌ ಅಕ್ಸಾ ಮಸೀದಿಯಲ್ಲಿ ನಮಾಝ್‌ ನಿರ್ವಹಿಸಲು ಪ್ಯಾಲೆಸ್ತೀನ್ ಮುಸ್ಲಿಮರಿಗೆ ಇಸ್ರೇಲ್‌ ಸೈನಿಕರು ತಡೆಯೊಡ್ಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮುಸ್ಲಿಮರ ಪವಿತ್ರ ತಿಂಗಳು ರಂಝಾನ್ ಹಿನ್ನೆಲೆ ಸಾವಿರಾರು ಪ್ಯಾಲೆಸ್ತೀನಿರು ಅಲ್‌ ಅಕ್ಸಾ ಮಸೀದಿಯಲ್ಲಿ ನಮಾಝ್‌ಗೆ ತೆರಳಿದ್ದರು. ಈ ವೇಳೆ ಇಸ್ರೇಲಿ ಪಡೆ ಅವರನ್ನು ತಡೆದಿದೆ ಎಂದು ಅಲ್‌ ಜಝೀರಾ ವರದಿ ಮಾಡಿದೆ.

ಇಸ್ರೇಲಿ ಪಡೆಗಳ ನಿರ್ಬಂಧದ ಹೊರತಾಗಿಯೂ ಮುಸ್ಲಿಮರ ಮೂರನೇ ಅತೀ ಪವಿತ್ರ ಮಸೀದಿಯಾದ ಅಲ್‌ ಅಕ್ಸಾದಲ್ಲಿ ರಂಝಾನಿನ ಮೊದಲ ಶುಕ್ರವಾರ ಬರೋಬ್ಬರಿ 80 ಸಾವಿರ ಜನರು ಜುಮಾ ನಮಾಝ್ ನಿರ್ವಹಿಸಿದ್ದಾರೆ ಎಂದು ಮಸೀದಿಯನ್ನು ನಿಯಂತ್ರಿಸುವ ಇಸ್ಲಾಮಿಕ್ ವಕ್ಫ್ ಸಂಸ್ಥೆಯನ್ನು ಉಲ್ಲೇಖಿಸಿ ಕುದ್ಸ್ ನ್ಯೂಸ್ ನೆಟ್‌ವರ್ಕ್ ವರದಿ ಮಾಡಿದೆ.

30 ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವು:

ಅಕ್ಟೋಬರ್ 7 ರಂದು ಪ್ರಾರಂಭಗೊಂಡ ಇಸ್ರೇಲ್‌-ಹಮಾಸ್ ನಡುವಿನ ಸಂಘರ್ಷದಲ್ಲಿ ಇದುವರೆಗೆ 30 ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ. 72 ಸಾವಿರಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

Photo Courtesy : Al Jazeera

ಇದನ್ನೂ ಓದಿ : ಚುನಾವಣಾ ಬಾಂಡ್‌: ಒಟ್ಟು ನಿಧಿಯ 50% ಸ್ವೀಕರಿಸಿದ್ದು ಬಿಜೆಪಿ: ಅಂಕಿಅಂಶ ಬಯಲು ಮಾಡಿದ ADR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...