Homeಅಂತರಾಷ್ಟ್ರೀಯಇಸ್ರೇಲ್‌-ಗಾಝಾ ಯುದ್ಧದ ವೇಳೆ ಅತ್ಯಧಿಕ ಪತ್ರಕರ್ತರ ಹತ್ಯೆ: ಸಿಪಿಜೆ ವರದಿ

ಇಸ್ರೇಲ್‌-ಗಾಝಾ ಯುದ್ಧದ ವೇಳೆ ಅತ್ಯಧಿಕ ಪತ್ರಕರ್ತರ ಹತ್ಯೆ: ಸಿಪಿಜೆ ವರದಿ

- Advertisement -
- Advertisement -

2023ರಲ್ಲಿ ವಿಶ್ವದಾದ್ಯಂತ ಕೊಲ್ಲಲ್ಪಟ್ಟ 99 ಪತ್ರಕರ್ತರು ಮತ್ತು ಮಾದ್ಯಮ ಕಾರ್ಯಕರ್ತರಲ್ಲಿ ಮುಕ್ಕಾಲು ಭಾಗದಷ್ಟು ಜನರು ಇಸ್ರೇಲ್-ಗಾಝಾ ಯುದ್ಧದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪತ್ರಕರ್ತರನ್ನು ರಕ್ಷಿಸುವ ಸಮಿತಿ (ಸಿಪಿಜೆ) ತಿಳಿಸಿದ್ದು, ಇಸ್ರೇಲ್‌ ಗಾಝಾದಲ್ಲಿ ನಡೆಸಿರುವ ಹತ್ಯಾಕಾಂಡದಲ್ಲಿ ಪತ್ರಕರ್ತರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಸಂತ್ರಸ್ತರಾಗಿದ್ದಾರೆ ಎಂಬವುದನ್ನು ವರದಿಯು ಬಹಿರಂಗಪಡಿಸಿದೆ.

ಇದಲ್ಲದೆ 2023ರ ಇಡೀ ವರ್ಷದಲ್ಲಿ ಹತ್ಯೆಗೀಡಾದ ಪತ್ರಕರ್ತರಿಗಿಂತ ಮೂರು ತಿಂಗಳಲ್ಲಿ ಸಂಘರ್ಷವು ಗಾಝಾದಲ್ಲಿ ಹೆಚ್ಚು ಪತ್ರಕರ್ತರನ್ನು ಬಲಿ ತೆಗೆದುಕೊಂಡಿದೆ ಎಂದು CPJ ವರದಿ ಹೇಳಿದೆ. ಗಾಝಾದಲ್ಲಿ ನಾಗರಿಕರಲ್ಲದೆ ಅನೇಕ ಪತ್ರಕರ್ತರನ್ನು ಮತ್ತು ಅವರ ಕುಟುಂಬಸ್ಥರನ್ನು ಕೊಲ್ಲಲಾಯಿತು, ಆದರೆ ಇಸ್ರೇಲ್‌ ಮಿಲಿಟರಿ ಅಧಿಕಾರಿಗಳು ಪತ್ರಕರ್ತರನ್ನು ಗುರಿಯಾಗಿಸಿಕೊಂಡಿರುವುದನ್ನು ನಿರಾಕರಿಸಿದ್ದಾರೆ ಮತ್ತು ಪತ್ರಕರ್ತರ ಹತ್ಯೆಗಳ ಬಗ್ಗೆ ಪ್ರಶ್ನಿಸಿದಾಗ ಅಲ್ಪ ಮಾಹಿತಿಯನ್ನು ಮಾತ್ರ ನೀಡಿದ್ದಾರೆ ಎಂದು ಹೇಳಿದ್ದಾರೆ.

1997ರಿಂದ 2023ರವರೆಗೆ ಪತ್ರಕರ್ತರ ಹತ್ಯೆಗಳು ವರದಿಯಾದ ದೇಶಗಳಲ್ಲಿ ಭಾರತವು ಸೇರಿದೆ. ಪಟ್ಟಿಯಲ್ಲಿರುವ ಇತರ ದೇಶಗಳಲ್ಲಿ ಇರಾಕ್, ಫಿಲಿಪೈನ್ಸ್, ಮೆಕ್ಸಿಕೊ, ಪಾಕಿಸ್ತಾನ ಮತ್ತು ಸೊಮಾಲಿಯಾ ಸೇರಿವೆ ಎಂದು ವರದಿ ಉಲ್ಲೇಖಿಸಿದೆ.

2023ರ ಜಾಗತಿಕವಾಗಿ ಪತ್ರಕರ್ತರ ಒಟ್ಟು ಸಾವಿನ ಅಂಕಿ-ಅಂಶಗಳು 2015ರಿಂದ ಅತ್ಯಧಿಕವಾಗಿದೆ ಮತ್ತು 2022ರಿಂದ ಸುಮಾರು 44% ಏರಿಕೆಯಾಗಿದೆ. ವರದಿಯ ಪ್ರಕಾರ, ಈ ಸಾವುಗಳು ಪತ್ರಕರ್ತರ ಕರ್ತವ್ಯಕ್ಕೆ ಸಂಬಂಧಿಸಿದೆ, ಪ್ರಸ್ತುತ 8 ಹೆಚ್ಚುವರಿ ಪ್ರಕರಣಗಳು ತನಿಖೆಯಲ್ಲಿವೆ ಎಂದು ವರದಿ ಉಲ್ಲೇಖಿಸಿದೆ.

ಗಾಝಾ, ಇಸ್ರೇಲ್ ಮತ್ತು ಲೆಬನಾನ್‌ನಲ್ಲಿನ ಸಾವುಗಳನ್ನು ಹೊರತುಪಡಿಸಿದರೆ, 2022ಕ್ಕೆ ಹೋಲಿಸಿದರೆ ಪತ್ರಕರ್ತರ ಹತ್ಯೆಗಳು ಗಮನಾರ್ಹವಾಗಿ ಕಡಿಮೆಯಾಗಿದೆ. 2022ರಲ್ಲಿ CPJ ಒಟ್ಟು 69 ಸಾವುಗಳನ್ನು ಪತ್ತೆಹಚ್ಚಿದೆ. ಅದರಲ್ಲಿ 43 ವೃತ್ತಿಗೆ ಸಂಬಂಧಿಸಿದ ಹತ್ಯೆ ನಡೆದಿದೆ ಎಂದು ವರದಿ ಉಲ್ಲೇಖಿಸಿದೆ.

ಆದರೆ, ಇಳಿಮುಖವಾಗುತ್ತಿರುವ ಪತ್ರಕರ್ತರ ಸಾವಿನ ಸಂಖ್ಯೆಯು ಪ್ರಪಂಚದ ಇತರ ಭಾಗಗಳಲ್ಲಿ ಪತ್ರಿಕೋದ್ಯಮವು ಸುರಕ್ಷಿತವಾಗಿದೆ ಎಂಬುವುದರ ಸೂಚನೆಯಲ್ಲ. ವಾಸ್ತವವಾಗಿ ಪತ್ರಕರ್ತರ ವಾರ್ಷಿಕ ಜೈಲು ಜನಗಣತಿ, ಪತ್ರಿಕಾ ಸ್ವಾತಂತ್ರ್ಯದ ಪರಿಸ್ಥಿತಿಗಳ ಬಗೆಗಿನ ಪ್ರಮುಖ ಸೂಚಕ 2022ರ ದಾಖಲೆಯ ಗರಿಷ್ಠ ಮಟ್ಟಕ್ಕೆ ಹತ್ತಿರದಲ್ಲಿದೆ ಎಂದು ವರದಿಯು ತಿಳಿಸಿದೆ.

ಏಷ್ಯಾದಲ್ಲಿ ಅತಿಹೆಚ್ಚು ಸಂಖ್ಯೆಯಲ್ಲಿ ಪತ್ರಕರ್ತರು ಜೈಲಿನಲ್ಲಿದ್ದಾರೆ ಎಂದು ವರದಿಯು ತಿಳಿಸಿದೆ. ಸಿಪಿಜೆ 2023ರ ಜೈಲು ಜನಗಣತಿಯಲ್ಲಿ ಭಾರತದಲ್ಲಿ 7 ಪತ್ರಕರ್ತರನ್ನು ಮೌನಗೊಳಿಸಲು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ (UAPA) ಮತ್ತು ಜಮ್ಮು ಮತ್ತು ಕಾಶ್ಮೀರ ಸಾರ್ವಜನಿಕ ಸುರಕ್ಷತಾ ಕಾಯಿದೆಗಳನ್ನು ಬಳಸಲಾಗಿದೆ ಎಂದು ಸೂಚಿಸುತ್ತದೆ.

ಇದನ್ನು ಓದಿ: ರಾರಾಜಿಸಿದ ಮೋದಿ: ನಿರಾಶೆಗೊಳಿಸಿದ ಬಿಜೆಪಿ ಪ್ರಣಾಳಿಕೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...