Homeಅಂತರಾಷ್ಟ್ರೀಯಇಸ್ರೇಲ್‌-ಗಾಝಾ ಯುದ್ಧದ ವೇಳೆ ಅತ್ಯಧಿಕ ಪತ್ರಕರ್ತರ ಹತ್ಯೆ: ಸಿಪಿಜೆ ವರದಿ

ಇಸ್ರೇಲ್‌-ಗಾಝಾ ಯುದ್ಧದ ವೇಳೆ ಅತ್ಯಧಿಕ ಪತ್ರಕರ್ತರ ಹತ್ಯೆ: ಸಿಪಿಜೆ ವರದಿ

- Advertisement -
- Advertisement -

2023ರಲ್ಲಿ ವಿಶ್ವದಾದ್ಯಂತ ಕೊಲ್ಲಲ್ಪಟ್ಟ 99 ಪತ್ರಕರ್ತರು ಮತ್ತು ಮಾದ್ಯಮ ಕಾರ್ಯಕರ್ತರಲ್ಲಿ ಮುಕ್ಕಾಲು ಭಾಗದಷ್ಟು ಜನರು ಇಸ್ರೇಲ್-ಗಾಝಾ ಯುದ್ಧದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪತ್ರಕರ್ತರನ್ನು ರಕ್ಷಿಸುವ ಸಮಿತಿ (ಸಿಪಿಜೆ) ತಿಳಿಸಿದ್ದು, ಇಸ್ರೇಲ್‌ ಗಾಝಾದಲ್ಲಿ ನಡೆಸಿರುವ ಹತ್ಯಾಕಾಂಡದಲ್ಲಿ ಪತ್ರಕರ್ತರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಸಂತ್ರಸ್ತರಾಗಿದ್ದಾರೆ ಎಂಬವುದನ್ನು ವರದಿಯು ಬಹಿರಂಗಪಡಿಸಿದೆ.

ಇದಲ್ಲದೆ 2023ರ ಇಡೀ ವರ್ಷದಲ್ಲಿ ಹತ್ಯೆಗೀಡಾದ ಪತ್ರಕರ್ತರಿಗಿಂತ ಮೂರು ತಿಂಗಳಲ್ಲಿ ಸಂಘರ್ಷವು ಗಾಝಾದಲ್ಲಿ ಹೆಚ್ಚು ಪತ್ರಕರ್ತರನ್ನು ಬಲಿ ತೆಗೆದುಕೊಂಡಿದೆ ಎಂದು CPJ ವರದಿ ಹೇಳಿದೆ. ಗಾಝಾದಲ್ಲಿ ನಾಗರಿಕರಲ್ಲದೆ ಅನೇಕ ಪತ್ರಕರ್ತರನ್ನು ಮತ್ತು ಅವರ ಕುಟುಂಬಸ್ಥರನ್ನು ಕೊಲ್ಲಲಾಯಿತು, ಆದರೆ ಇಸ್ರೇಲ್‌ ಮಿಲಿಟರಿ ಅಧಿಕಾರಿಗಳು ಪತ್ರಕರ್ತರನ್ನು ಗುರಿಯಾಗಿಸಿಕೊಂಡಿರುವುದನ್ನು ನಿರಾಕರಿಸಿದ್ದಾರೆ ಮತ್ತು ಪತ್ರಕರ್ತರ ಹತ್ಯೆಗಳ ಬಗ್ಗೆ ಪ್ರಶ್ನಿಸಿದಾಗ ಅಲ್ಪ ಮಾಹಿತಿಯನ್ನು ಮಾತ್ರ ನೀಡಿದ್ದಾರೆ ಎಂದು ಹೇಳಿದ್ದಾರೆ.

1997ರಿಂದ 2023ರವರೆಗೆ ಪತ್ರಕರ್ತರ ಹತ್ಯೆಗಳು ವರದಿಯಾದ ದೇಶಗಳಲ್ಲಿ ಭಾರತವು ಸೇರಿದೆ. ಪಟ್ಟಿಯಲ್ಲಿರುವ ಇತರ ದೇಶಗಳಲ್ಲಿ ಇರಾಕ್, ಫಿಲಿಪೈನ್ಸ್, ಮೆಕ್ಸಿಕೊ, ಪಾಕಿಸ್ತಾನ ಮತ್ತು ಸೊಮಾಲಿಯಾ ಸೇರಿವೆ ಎಂದು ವರದಿ ಉಲ್ಲೇಖಿಸಿದೆ.

2023ರ ಜಾಗತಿಕವಾಗಿ ಪತ್ರಕರ್ತರ ಒಟ್ಟು ಸಾವಿನ ಅಂಕಿ-ಅಂಶಗಳು 2015ರಿಂದ ಅತ್ಯಧಿಕವಾಗಿದೆ ಮತ್ತು 2022ರಿಂದ ಸುಮಾರು 44% ಏರಿಕೆಯಾಗಿದೆ. ವರದಿಯ ಪ್ರಕಾರ, ಈ ಸಾವುಗಳು ಪತ್ರಕರ್ತರ ಕರ್ತವ್ಯಕ್ಕೆ ಸಂಬಂಧಿಸಿದೆ, ಪ್ರಸ್ತುತ 8 ಹೆಚ್ಚುವರಿ ಪ್ರಕರಣಗಳು ತನಿಖೆಯಲ್ಲಿವೆ ಎಂದು ವರದಿ ಉಲ್ಲೇಖಿಸಿದೆ.

ಗಾಝಾ, ಇಸ್ರೇಲ್ ಮತ್ತು ಲೆಬನಾನ್‌ನಲ್ಲಿನ ಸಾವುಗಳನ್ನು ಹೊರತುಪಡಿಸಿದರೆ, 2022ಕ್ಕೆ ಹೋಲಿಸಿದರೆ ಪತ್ರಕರ್ತರ ಹತ್ಯೆಗಳು ಗಮನಾರ್ಹವಾಗಿ ಕಡಿಮೆಯಾಗಿದೆ. 2022ರಲ್ಲಿ CPJ ಒಟ್ಟು 69 ಸಾವುಗಳನ್ನು ಪತ್ತೆಹಚ್ಚಿದೆ. ಅದರಲ್ಲಿ 43 ವೃತ್ತಿಗೆ ಸಂಬಂಧಿಸಿದ ಹತ್ಯೆ ನಡೆದಿದೆ ಎಂದು ವರದಿ ಉಲ್ಲೇಖಿಸಿದೆ.

ಆದರೆ, ಇಳಿಮುಖವಾಗುತ್ತಿರುವ ಪತ್ರಕರ್ತರ ಸಾವಿನ ಸಂಖ್ಯೆಯು ಪ್ರಪಂಚದ ಇತರ ಭಾಗಗಳಲ್ಲಿ ಪತ್ರಿಕೋದ್ಯಮವು ಸುರಕ್ಷಿತವಾಗಿದೆ ಎಂಬುವುದರ ಸೂಚನೆಯಲ್ಲ. ವಾಸ್ತವವಾಗಿ ಪತ್ರಕರ್ತರ ವಾರ್ಷಿಕ ಜೈಲು ಜನಗಣತಿ, ಪತ್ರಿಕಾ ಸ್ವಾತಂತ್ರ್ಯದ ಪರಿಸ್ಥಿತಿಗಳ ಬಗೆಗಿನ ಪ್ರಮುಖ ಸೂಚಕ 2022ರ ದಾಖಲೆಯ ಗರಿಷ್ಠ ಮಟ್ಟಕ್ಕೆ ಹತ್ತಿರದಲ್ಲಿದೆ ಎಂದು ವರದಿಯು ತಿಳಿಸಿದೆ.

ಏಷ್ಯಾದಲ್ಲಿ ಅತಿಹೆಚ್ಚು ಸಂಖ್ಯೆಯಲ್ಲಿ ಪತ್ರಕರ್ತರು ಜೈಲಿನಲ್ಲಿದ್ದಾರೆ ಎಂದು ವರದಿಯು ತಿಳಿಸಿದೆ. ಸಿಪಿಜೆ 2023ರ ಜೈಲು ಜನಗಣತಿಯಲ್ಲಿ ಭಾರತದಲ್ಲಿ 7 ಪತ್ರಕರ್ತರನ್ನು ಮೌನಗೊಳಿಸಲು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ (UAPA) ಮತ್ತು ಜಮ್ಮು ಮತ್ತು ಕಾಶ್ಮೀರ ಸಾರ್ವಜನಿಕ ಸುರಕ್ಷತಾ ಕಾಯಿದೆಗಳನ್ನು ಬಳಸಲಾಗಿದೆ ಎಂದು ಸೂಚಿಸುತ್ತದೆ.

ಇದನ್ನು ಓದಿ: ರಾರಾಜಿಸಿದ ಮೋದಿ: ನಿರಾಶೆಗೊಳಿಸಿದ ಬಿಜೆಪಿ ಪ್ರಣಾಳಿಕೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...