Homeಅಂತರಾಷ್ಟ್ರೀಯಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

ಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

ಶಾಂತಿ ಒಪ್ಪಂದದ ಬಳಿಕವೂ ಇಸ್ರೇಲ್‌ನಿಂದ ಗಾಝಾ ಮೇಲೆ ವಾಯುದಾಳಿ-ವರದಿ

- Advertisement -
- Advertisement -

ಬರೋಬ್ಬರಿ 67 ಸಾವಿರಕ್ಕೂ ಹೆಚ್ಚು ಅಮಾಯಕರ ಹತ್ಯೆ ಹಾಗೂ ಸುಂದರ ಗಾಝಾವನ್ನು ನರಕವಾಗಿಸಿದ ಬಳಿಕ ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.

ಇಸ್ರೇಲ್ ಗಾಝಾ ಮೇಲೆ ಆಕ್ರಮಣ ಮಾಡಲು ಪ್ರಾರಂಭಿಸಿ ಅಕ್ಟೋಬರ್ 8, 2025ಕ್ಕೆ ಎರಡು ವರ್ಷ ಪೂರ್ಣಗೊಂಡಿದೆ. ಇದರ ಮರುದಿನ, ಅಂದರೆ ಅಕ್ಟೋಬರ್ 9, 2025ರಂದು ಈಜಿಫ್ಟ್‌ನಲ್ಲಿ ನಡೆದ ಗಾಝಾ ಶಾಂತಿ ಮಾತುಕತೆ ಫಲಪ್ರದವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 20 ಅಂಶಗಳ ಶಾಂತಿ ಯೋಜನೆಗೆ ಉಭಯ ಪಕ್ಷಗಳು ಸಹಿ ಹಾಕಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಈ ಹಿಂದೆ ಅನೇಕ ಬಾರಿ ಕದನ ವಿರಾಮ ಜಾರಿಗೆ ಬಂದು ಬಳಿಕ ಅದು ವಿಫಲಗೊಂಡಿತ್ತು. ಆದರೆ, ಈ ಬಾರಿಯ ಶಾಂತಿ ಒಪ್ಪಂದ ಹಿಂದಿಗಿಂತ ಆಶಾದಾಯಕವಾಗಿದೆ. ಇದು ಕೇವಲ ಇಸ್ರೇಲ್-ಪ್ಯಾಲೆಸ್ತೀನ್ ಮಾತ್ರವಲ್ಲದೆ, ಯೆಮನ್, ಲೆಬನಾನ್ ಸೇರಿದಂತೆ ಎಲ್ಲಾ ದೇಶಗಳ ಮೇಲಿನ ಆಕ್ರಮಣ ಕೊನೆಗೊಳಿಸುವ ಒಪ್ಪಂದವಾಗಿದೆ. ಈ ಮೂಲಕ ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಶಮನವಾಗುವ ನಿರೀಕ್ಷೆಯಿದೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

ಮತ್ತೊಂದೆಡೆ, ಬುಧವಾರ (ಅ.8) ರಾತ್ರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಕದನ ವಿರಾಮ ಒಪ್ಪಂದವು ಸಾಕಷ್ಟು ವಿವರಗಳನ್ನು ಒಳಗೊಂಡಿಲ್ಲ, ಅಂದರೆ ಅದರಲ್ಲಿ ಸ್ಪಷ್ಟವಾದ ಮಾಹಿತಿ ಅಥವಾ ಯೋಜನೆಯ ಕೊರತೆಯಿದೆ. ಜೊತೆಗೆ, ಇದು ಹಲವು ಪ್ರಶ್ನೆಗಳಿಗೆ ಉತ್ತರಿಸದೆ ಉಳಿಸಿದೆ. ಇವು ಇನ್ನೂ ಪರಿಹಾರವಾಗದಿರುವ ಸಮಸ್ಯೆಗಳಾಗಿವೆ. ಈ ಕಾರಣಗಳಿಂದಾಗಿ, ಈ ಒಪ್ಪಂದವು ಹಿಂದಿನ ಶಾಂತಿ ಪ್ರಯತ್ನಗಳಂತೆ ವಿಫಲಗೊಳ್ಳುವ ಸಾಧ್ಯತೆಯೂ ಇದೆ ಎಂದು ವರದಿ ಅಭಿಪ್ರಾಯಪಟ್ಟಿದೆ.

“ನಮ್ಮ ಶಾಂತಿ ಯೋಜನೆಯ ಮೊದಲ ಹಂತಕ್ಕೆ ಇಸ್ರೇಲ್ ಮತ್ತು ಹಮಾಸ್ ಎರಡೂ ಸಹಿ ಹಾಕಿವೆ ಎಂದು ಘೋಷಿಸಲು ನನಗೆ ತುಂಬಾ ಹೆಮ್ಮೆಯಾಗುತ್ತಿದೆ” ಎಂದು ಟ್ರಂಪ್ ತಮ್ಮ ಟ್ರುಥ್ ಸೋಶಿಯಲ್‌ನಲ್ಲಿ ಬುಧವಾರ ಹೇಳಿದ್ದಾರೆ.

“ಇದರರ್ಥ ಎಲ್ಲಾ ಒತ್ತೆಯಾಳುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಮತ್ತು ಇಸ್ರೇಲ್ ಬಲವಾದ, ಬಾಳಿಕೆ ಬರುವ ಮತ್ತು ಶಾಶ್ವತ ಶಾಂತಿಯತ್ತ ಮೊದಲ ಹೆಜ್ಜೆಯಾಗಿ ತಮ್ಮ ಸೈನಿಕರನ್ನು ನಿರ್ದಿಷ್ಟ ಗಡಿ ರೇಖೆಗೆ ಹಿಂತೆಗೆದುಕೊಳ್ಳುತ್ತದೆ” ಎಂದು ಟ್ರಂಪ್ ತಿಳಿಸಿದ್ದಾರೆ.

ಗುರುವಾರ ತಮ್ಮ ಸರ್ಕಾರದ ಸಭೆ ಕರೆದು ಒಪ್ಪಂದಕ್ಕೆ ಅನುಮೋದನೆ ಪಡೆಯುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

“ಶಾಂತಿ ಯೋಜನೆಯ ಮೊದಲ ಹಂತದ ಅನುಮೋದನೆಯೊಂದಿಗೆ, ನಮ್ಮ ಎಲ್ಲಾ ಒತ್ತೆಯಾಳುಗಳನ್ನು ಮನೆಗೆ ಕರೆತರಲಾಗುವುದು” ಎಂದು ನೆತನ್ಯಾಹು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಇದು ಇಸ್ರೇಲ್‌ನ ರಾಜತಾಂತ್ರಿಕ ಯಶಸ್ಸು ಮತ್ತು ರಾಷ್ಟ್ರೀಯ ಮತ್ತು ನೈತಿಕ ಗೆಲುವು” ಎಂದಿದ್ದಾರೆ.

ಯುದ್ಧವನ್ನು ಕೊನೆಗೊಳಿಸಲು ಒಪ್ಪಂದಕ್ಕೆ ಬಂದಿರುವುದನ್ನು ಹಮಾಸ್ ಕೂಡ ದೃಢಪಡಿಸಿದೆ. ಒಪ್ಪಂದವು ಗಾಝಾ ಪ್ರದೇಶದಿಂದ ಇಸ್ರೇಲಿ ಪಡೆಗಳನ್ನು ಹಿಂತೆಗೆದುಕೊಳ್ಳುವುದು ಮತ್ತು ಒತ್ತೆಯಾಳು-ಕೈದಿಗಳ ವಿನಿಮಯವನ್ನು ಒಳಗೊಂಡಿದೆ ಎಂದಿದೆ.

“ನಮ್ಮ ಜನರ ತ್ಯಾಗಗಳು ವ್ಯರ್ಥವಾಗುವುದಿಲ್ಲ ಎಂದು ನಾವು ದೃಢೀಕರಿಸುತ್ತೇವೆ. ನಮ್ಮ ಜನರ ರಾಷ್ಟ್ರೀಯ ಹಕ್ಕುಗಳನ್ನು ಎಂದಿಗೂ ಕೈಬಿಡದಿರುವ ನಮ್ಮ ಪ್ರತಿಜ್ಞೆಗೆ ನಾವು ನಿಷ್ಠರಾಗಿರುತ್ತೇವೆ, ಸ್ವಾತಂತ್ರ್ಯ, ಸ್ವತಂತ್ರತೆ ಮತ್ತು ಸ್ವಯಂ-ನಿರ್ಧಾರದ ಹಕ್ಕು ಸಾಧಿಸುವವರೆಗೆ” ಎಂದು ಹಮಾಸ್ ಹೇಳಿದೆ.

ಅಕ್ಟೊಬರ್ 8, 2023ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಲ್ಲಿ ಇದುವರೆಗೆ 67 ಸಾವಿರ ಜನರು ಸಾವನ್ನಪ್ಪಿರುವ ಲೆಕ್ಕ ಸಿಕ್ಕಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಿದೆ ಎಂದು ಅಂದಾಜಿಸಲಾಗಿದೆ. ಏಕೆಂದರೆ, ಸಾವಿರಾರು ಜನರ ದೇಹಗಳು ಇಸ್ರೇಲ್ ಧ್ವಂಸಗೊಳಿಸಿದ ಕಟ್ಟಡಗಳ ಅವಶೇಷಗಳಡಿ ಹುದುಗಿ ಹೋಗಿರಬಹುದು ಎಂದು ನಂಬಲಾಗಿದೆ.

ಅಕ್ಟೋಬರ್ 7, 2023ರಂದು ಇಸ್ರೇಲ್‌ನ ಟೆಲ್ ಅವೀವ್ ಮೇಲೆ ಹಮಾಸ್ ನಡೆಸಿದ್ದ ದಾಳಿಯಲ್ಲಿ 1,200 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದಾಳಿಯ ವೇಳೆ ಸುಮಾರು 251 ಜನರನ್ನು ಹಮಾಸ್ ಒತ್ತೆಯಾಳಾಗಿ ಗಾಝಾಗೆ ಕರೆ ತಂದಿತ್ತು. ಈ ಪೈಕಿ ಹಲವರನ್ನು ಬಿಡುಗಡೆ ಮಾಡಲಾಗಿದೆ. ಪ್ರಸ್ತುತ 48 ಒತ್ತೆಯಾಳುಗಳು ಹಮಾಸ್ ವಶದಲ್ಲಿದ್ದಾರೆ. ಈ ಪೈಕಿ 20 ಜನರು ಇನ್ನೂ ಜೀವಂತ ಇದ್ದಾರೆ ಎಂದು ಅಂದಾಜಿಸಲಾಗಿದೆ.

ಕದನ ವಿರಾಮ ಒಪ್ಪಂದ ಬಳಿಕವೂ ಗಾಝಾ ಮೇಲೆ ದಾಳಿ

ಅಕ್ಟೋಬರ್ 8, 2025 ಬುಧವಾರ ರಾತ್ರಿ ಹಮಾಸ್-ಇಸ್ರೇಲ್ ನಡುವೆ ಕದನ ವಿರಾಮ ಒಪ್ಪಂದವಾಗಿದೆ ಎಂದು ಟ್ರಂಪ್ ಘೋಷಿಸಿದ್ದಾರೆ. ಇದರಿಂದ ಗಾಝಾ ಮೇಲಿನ ಬಾಂಬ್ ದಾಳಿ ಅಂತ್ಯಗೊಂಡಿದೆ ಎಂದು ಹೇಳಲಾಗಿತ್ತು. ಆದರೆ, ಅಕ್ಟೋಬರ್ 9, 2025 ಗುರುವಾರ ಇಸ್ರೇಲ್ ಗಾಝಾ ಮೇಲೆ ದಾಳಿ ಮಾಡಿದೆ ಎಂದು ವರದಿಯಾಗಿದೆ.

ಹೌದು, ನಿನ್ನೆ ಕದನ ವಿರಾಮ ಒಪ್ಪಂದವಾಗಿದ್ದರೂ, ಇಂದು ಗಾಝಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ ಎಂದು ಗಾಝಾದ ನಾಗರಿಕ ರಕ್ಷಣಾ ಅಧಿಕಾರಿ ಮೊಹಮ್ಮದ್ ಅಲ್-ಮುಘಯ್ಯಿರ್ ಅವರು ಹೇಳಿರುವುದಾಗಿ ಸುದ್ದಿ ಸಂಸ್ಥೆ ಅಲ್-ಜಝೀರಾ ವರದಿ ಮಾಡಿದೆ.

ಕದನ ವಿರಾಮ ಒಪ್ಪಂದದ ಬಳಿಕ ಉತ್ತರ ಗಾಝಾದ ಪ್ರದೇಶಗಳಲ್ಲಿ ಹಲವಾರು ಸ್ಫೋಟಗಳು ವರದಿಯಾಗಿವೆ ಎಂದು ಅಲ್-ಮುಘಯ್ಯಿರ್ ಹೇಳಿದ್ದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ವಿದ್ಯಾರ್ಥಿಯನ್ನು ಸೆರೆ ಹಿಡಿದ ಉಕ್ರೇನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...