Homeಅಂತರಾಷ್ಟ್ರೀಯಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

ಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

ಶಾಂತಿ ಒಪ್ಪಂದದ ಬಳಿಕವೂ ಇಸ್ರೇಲ್‌ನಿಂದ ಗಾಝಾ ಮೇಲೆ ವಾಯುದಾಳಿ-ವರದಿ

- Advertisement -
- Advertisement -

ಬರೋಬ್ಬರಿ 67 ಸಾವಿರಕ್ಕೂ ಹೆಚ್ಚು ಅಮಾಯಕರ ಹತ್ಯೆ ಹಾಗೂ ಸುಂದರ ಗಾಝಾವನ್ನು ನರಕವಾಗಿಸಿದ ಬಳಿಕ ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.

ಇಸ್ರೇಲ್ ಗಾಝಾ ಮೇಲೆ ಆಕ್ರಮಣ ಮಾಡಲು ಪ್ರಾರಂಭಿಸಿ ಅಕ್ಟೋಬರ್ 8, 2025ಕ್ಕೆ ಎರಡು ವರ್ಷ ಪೂರ್ಣಗೊಂಡಿದೆ. ಇದರ ಮರುದಿನ, ಅಂದರೆ ಅಕ್ಟೋಬರ್ 9, 2025ರಂದು ಈಜಿಫ್ಟ್‌ನಲ್ಲಿ ನಡೆದ ಗಾಝಾ ಶಾಂತಿ ಮಾತುಕತೆ ಫಲಪ್ರದವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 20 ಅಂಶಗಳ ಶಾಂತಿ ಯೋಜನೆಗೆ ಉಭಯ ಪಕ್ಷಗಳು ಸಹಿ ಹಾಕಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಈ ಹಿಂದೆ ಅನೇಕ ಬಾರಿ ಕದನ ವಿರಾಮ ಜಾರಿಗೆ ಬಂದು ಬಳಿಕ ಅದು ವಿಫಲಗೊಂಡಿತ್ತು. ಆದರೆ, ಈ ಬಾರಿಯ ಶಾಂತಿ ಒಪ್ಪಂದ ಹಿಂದಿಗಿಂತ ಆಶಾದಾಯಕವಾಗಿದೆ. ಇದು ಕೇವಲ ಇಸ್ರೇಲ್-ಪ್ಯಾಲೆಸ್ತೀನ್ ಮಾತ್ರವಲ್ಲದೆ, ಯೆಮನ್, ಲೆಬನಾನ್ ಸೇರಿದಂತೆ ಎಲ್ಲಾ ದೇಶಗಳ ಮೇಲಿನ ಆಕ್ರಮಣ ಕೊನೆಗೊಳಿಸುವ ಒಪ್ಪಂದವಾಗಿದೆ. ಈ ಮೂಲಕ ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಶಮನವಾಗುವ ನಿರೀಕ್ಷೆಯಿದೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

ಮತ್ತೊಂದೆಡೆ, ಬುಧವಾರ (ಅ.8) ರಾತ್ರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಕದನ ವಿರಾಮ ಒಪ್ಪಂದವು ಸಾಕಷ್ಟು ವಿವರಗಳನ್ನು ಒಳಗೊಂಡಿಲ್ಲ, ಅಂದರೆ ಅದರಲ್ಲಿ ಸ್ಪಷ್ಟವಾದ ಮಾಹಿತಿ ಅಥವಾ ಯೋಜನೆಯ ಕೊರತೆಯಿದೆ. ಜೊತೆಗೆ, ಇದು ಹಲವು ಪ್ರಶ್ನೆಗಳಿಗೆ ಉತ್ತರಿಸದೆ ಉಳಿಸಿದೆ. ಇವು ಇನ್ನೂ ಪರಿಹಾರವಾಗದಿರುವ ಸಮಸ್ಯೆಗಳಾಗಿವೆ. ಈ ಕಾರಣಗಳಿಂದಾಗಿ, ಈ ಒಪ್ಪಂದವು ಹಿಂದಿನ ಶಾಂತಿ ಪ್ರಯತ್ನಗಳಂತೆ ವಿಫಲಗೊಳ್ಳುವ ಸಾಧ್ಯತೆಯೂ ಇದೆ ಎಂದು ವರದಿ ಅಭಿಪ್ರಾಯಪಟ್ಟಿದೆ.

“ನಮ್ಮ ಶಾಂತಿ ಯೋಜನೆಯ ಮೊದಲ ಹಂತಕ್ಕೆ ಇಸ್ರೇಲ್ ಮತ್ತು ಹಮಾಸ್ ಎರಡೂ ಸಹಿ ಹಾಕಿವೆ ಎಂದು ಘೋಷಿಸಲು ನನಗೆ ತುಂಬಾ ಹೆಮ್ಮೆಯಾಗುತ್ತಿದೆ” ಎಂದು ಟ್ರಂಪ್ ತಮ್ಮ ಟ್ರುಥ್ ಸೋಶಿಯಲ್‌ನಲ್ಲಿ ಬುಧವಾರ ಹೇಳಿದ್ದಾರೆ.

“ಇದರರ್ಥ ಎಲ್ಲಾ ಒತ್ತೆಯಾಳುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಮತ್ತು ಇಸ್ರೇಲ್ ಬಲವಾದ, ಬಾಳಿಕೆ ಬರುವ ಮತ್ತು ಶಾಶ್ವತ ಶಾಂತಿಯತ್ತ ಮೊದಲ ಹೆಜ್ಜೆಯಾಗಿ ತಮ್ಮ ಸೈನಿಕರನ್ನು ನಿರ್ದಿಷ್ಟ ಗಡಿ ರೇಖೆಗೆ ಹಿಂತೆಗೆದುಕೊಳ್ಳುತ್ತದೆ” ಎಂದು ಟ್ರಂಪ್ ತಿಳಿಸಿದ್ದಾರೆ.

ಗುರುವಾರ ತಮ್ಮ ಸರ್ಕಾರದ ಸಭೆ ಕರೆದು ಒಪ್ಪಂದಕ್ಕೆ ಅನುಮೋದನೆ ಪಡೆಯುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

“ಶಾಂತಿ ಯೋಜನೆಯ ಮೊದಲ ಹಂತದ ಅನುಮೋದನೆಯೊಂದಿಗೆ, ನಮ್ಮ ಎಲ್ಲಾ ಒತ್ತೆಯಾಳುಗಳನ್ನು ಮನೆಗೆ ಕರೆತರಲಾಗುವುದು” ಎಂದು ನೆತನ್ಯಾಹು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಇದು ಇಸ್ರೇಲ್‌ನ ರಾಜತಾಂತ್ರಿಕ ಯಶಸ್ಸು ಮತ್ತು ರಾಷ್ಟ್ರೀಯ ಮತ್ತು ನೈತಿಕ ಗೆಲುವು” ಎಂದಿದ್ದಾರೆ.

ಯುದ್ಧವನ್ನು ಕೊನೆಗೊಳಿಸಲು ಒಪ್ಪಂದಕ್ಕೆ ಬಂದಿರುವುದನ್ನು ಹಮಾಸ್ ಕೂಡ ದೃಢಪಡಿಸಿದೆ. ಒಪ್ಪಂದವು ಗಾಝಾ ಪ್ರದೇಶದಿಂದ ಇಸ್ರೇಲಿ ಪಡೆಗಳನ್ನು ಹಿಂತೆಗೆದುಕೊಳ್ಳುವುದು ಮತ್ತು ಒತ್ತೆಯಾಳು-ಕೈದಿಗಳ ವಿನಿಮಯವನ್ನು ಒಳಗೊಂಡಿದೆ ಎಂದಿದೆ.

“ನಮ್ಮ ಜನರ ತ್ಯಾಗಗಳು ವ್ಯರ್ಥವಾಗುವುದಿಲ್ಲ ಎಂದು ನಾವು ದೃಢೀಕರಿಸುತ್ತೇವೆ. ನಮ್ಮ ಜನರ ರಾಷ್ಟ್ರೀಯ ಹಕ್ಕುಗಳನ್ನು ಎಂದಿಗೂ ಕೈಬಿಡದಿರುವ ನಮ್ಮ ಪ್ರತಿಜ್ಞೆಗೆ ನಾವು ನಿಷ್ಠರಾಗಿರುತ್ತೇವೆ, ಸ್ವಾತಂತ್ರ್ಯ, ಸ್ವತಂತ್ರತೆ ಮತ್ತು ಸ್ವಯಂ-ನಿರ್ಧಾರದ ಹಕ್ಕು ಸಾಧಿಸುವವರೆಗೆ” ಎಂದು ಹಮಾಸ್ ಹೇಳಿದೆ.

ಅಕ್ಟೊಬರ್ 8, 2023ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಲ್ಲಿ ಇದುವರೆಗೆ 67 ಸಾವಿರ ಜನರು ಸಾವನ್ನಪ್ಪಿರುವ ಲೆಕ್ಕ ಸಿಕ್ಕಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಿದೆ ಎಂದು ಅಂದಾಜಿಸಲಾಗಿದೆ. ಏಕೆಂದರೆ, ಸಾವಿರಾರು ಜನರ ದೇಹಗಳು ಇಸ್ರೇಲ್ ಧ್ವಂಸಗೊಳಿಸಿದ ಕಟ್ಟಡಗಳ ಅವಶೇಷಗಳಡಿ ಹುದುಗಿ ಹೋಗಿರಬಹುದು ಎಂದು ನಂಬಲಾಗಿದೆ.

ಅಕ್ಟೋಬರ್ 7, 2023ರಂದು ಇಸ್ರೇಲ್‌ನ ಟೆಲ್ ಅವೀವ್ ಮೇಲೆ ಹಮಾಸ್ ನಡೆಸಿದ್ದ ದಾಳಿಯಲ್ಲಿ 1,200 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದಾಳಿಯ ವೇಳೆ ಸುಮಾರು 251 ಜನರನ್ನು ಹಮಾಸ್ ಒತ್ತೆಯಾಳಾಗಿ ಗಾಝಾಗೆ ಕರೆ ತಂದಿತ್ತು. ಈ ಪೈಕಿ ಹಲವರನ್ನು ಬಿಡುಗಡೆ ಮಾಡಲಾಗಿದೆ. ಪ್ರಸ್ತುತ 48 ಒತ್ತೆಯಾಳುಗಳು ಹಮಾಸ್ ವಶದಲ್ಲಿದ್ದಾರೆ. ಈ ಪೈಕಿ 20 ಜನರು ಇನ್ನೂ ಜೀವಂತ ಇದ್ದಾರೆ ಎಂದು ಅಂದಾಜಿಸಲಾಗಿದೆ.

ಕದನ ವಿರಾಮ ಒಪ್ಪಂದ ಬಳಿಕವೂ ಗಾಝಾ ಮೇಲೆ ದಾಳಿ

ಅಕ್ಟೋಬರ್ 8, 2025 ಬುಧವಾರ ರಾತ್ರಿ ಹಮಾಸ್-ಇಸ್ರೇಲ್ ನಡುವೆ ಕದನ ವಿರಾಮ ಒಪ್ಪಂದವಾಗಿದೆ ಎಂದು ಟ್ರಂಪ್ ಘೋಷಿಸಿದ್ದಾರೆ. ಇದರಿಂದ ಗಾಝಾ ಮೇಲಿನ ಬಾಂಬ್ ದಾಳಿ ಅಂತ್ಯಗೊಂಡಿದೆ ಎಂದು ಹೇಳಲಾಗಿತ್ತು. ಆದರೆ, ಅಕ್ಟೋಬರ್ 9, 2025 ಗುರುವಾರ ಇಸ್ರೇಲ್ ಗಾಝಾ ಮೇಲೆ ದಾಳಿ ಮಾಡಿದೆ ಎಂದು ವರದಿಯಾಗಿದೆ.

ಹೌದು, ನಿನ್ನೆ ಕದನ ವಿರಾಮ ಒಪ್ಪಂದವಾಗಿದ್ದರೂ, ಇಂದು ಗಾಝಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ ಎಂದು ಗಾಝಾದ ನಾಗರಿಕ ರಕ್ಷಣಾ ಅಧಿಕಾರಿ ಮೊಹಮ್ಮದ್ ಅಲ್-ಮುಘಯ್ಯಿರ್ ಅವರು ಹೇಳಿರುವುದಾಗಿ ಸುದ್ದಿ ಸಂಸ್ಥೆ ಅಲ್-ಜಝೀರಾ ವರದಿ ಮಾಡಿದೆ.

ಕದನ ವಿರಾಮ ಒಪ್ಪಂದದ ಬಳಿಕ ಉತ್ತರ ಗಾಝಾದ ಪ್ರದೇಶಗಳಲ್ಲಿ ಹಲವಾರು ಸ್ಫೋಟಗಳು ವರದಿಯಾಗಿವೆ ಎಂದು ಅಲ್-ಮುಘಯ್ಯಿರ್ ಹೇಳಿದ್ದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ವಿದ್ಯಾರ್ಥಿಯನ್ನು ಸೆರೆ ಹಿಡಿದ ಉಕ್ರೇನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...