Homeಅಂತರಾಷ್ಟ್ರೀಯಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

ಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

ಶಾಂತಿ ಒಪ್ಪಂದದ ಬಳಿಕವೂ ಇಸ್ರೇಲ್‌ನಿಂದ ಗಾಝಾ ಮೇಲೆ ವಾಯುದಾಳಿ-ವರದಿ

- Advertisement -
- Advertisement -

ಬರೋಬ್ಬರಿ 67 ಸಾವಿರಕ್ಕೂ ಹೆಚ್ಚು ಅಮಾಯಕರ ಹತ್ಯೆ ಹಾಗೂ ಸುಂದರ ಗಾಝಾವನ್ನು ನರಕವಾಗಿಸಿದ ಬಳಿಕ ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.

ಇಸ್ರೇಲ್ ಗಾಝಾ ಮೇಲೆ ಆಕ್ರಮಣ ಮಾಡಲು ಪ್ರಾರಂಭಿಸಿ ಅಕ್ಟೋಬರ್ 8, 2025ಕ್ಕೆ ಎರಡು ವರ್ಷ ಪೂರ್ಣಗೊಂಡಿದೆ. ಇದರ ಮರುದಿನ, ಅಂದರೆ ಅಕ್ಟೋಬರ್ 9, 2025ರಂದು ಈಜಿಫ್ಟ್‌ನಲ್ಲಿ ನಡೆದ ಗಾಝಾ ಶಾಂತಿ ಮಾತುಕತೆ ಫಲಪ್ರದವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 20 ಅಂಶಗಳ ಶಾಂತಿ ಯೋಜನೆಗೆ ಉಭಯ ಪಕ್ಷಗಳು ಸಹಿ ಹಾಕಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಈ ಹಿಂದೆ ಅನೇಕ ಬಾರಿ ಕದನ ವಿರಾಮ ಜಾರಿಗೆ ಬಂದು ಬಳಿಕ ಅದು ವಿಫಲಗೊಂಡಿತ್ತು. ಆದರೆ, ಈ ಬಾರಿಯ ಶಾಂತಿ ಒಪ್ಪಂದ ಹಿಂದಿಗಿಂತ ಆಶಾದಾಯಕವಾಗಿದೆ. ಇದು ಕೇವಲ ಇಸ್ರೇಲ್-ಪ್ಯಾಲೆಸ್ತೀನ್ ಮಾತ್ರವಲ್ಲದೆ, ಯೆಮನ್, ಲೆಬನಾನ್ ಸೇರಿದಂತೆ ಎಲ್ಲಾ ದೇಶಗಳ ಮೇಲಿನ ಆಕ್ರಮಣ ಕೊನೆಗೊಳಿಸುವ ಒಪ್ಪಂದವಾಗಿದೆ. ಈ ಮೂಲಕ ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಶಮನವಾಗುವ ನಿರೀಕ್ಷೆಯಿದೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

ಮತ್ತೊಂದೆಡೆ, ಬುಧವಾರ (ಅ.8) ರಾತ್ರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಕದನ ವಿರಾಮ ಒಪ್ಪಂದವು ಸಾಕಷ್ಟು ವಿವರಗಳನ್ನು ಒಳಗೊಂಡಿಲ್ಲ, ಅಂದರೆ ಅದರಲ್ಲಿ ಸ್ಪಷ್ಟವಾದ ಮಾಹಿತಿ ಅಥವಾ ಯೋಜನೆಯ ಕೊರತೆಯಿದೆ. ಜೊತೆಗೆ, ಇದು ಹಲವು ಪ್ರಶ್ನೆಗಳಿಗೆ ಉತ್ತರಿಸದೆ ಉಳಿಸಿದೆ. ಇವು ಇನ್ನೂ ಪರಿಹಾರವಾಗದಿರುವ ಸಮಸ್ಯೆಗಳಾಗಿವೆ. ಈ ಕಾರಣಗಳಿಂದಾಗಿ, ಈ ಒಪ್ಪಂದವು ಹಿಂದಿನ ಶಾಂತಿ ಪ್ರಯತ್ನಗಳಂತೆ ವಿಫಲಗೊಳ್ಳುವ ಸಾಧ್ಯತೆಯೂ ಇದೆ ಎಂದು ವರದಿ ಅಭಿಪ್ರಾಯಪಟ್ಟಿದೆ.

“ನಮ್ಮ ಶಾಂತಿ ಯೋಜನೆಯ ಮೊದಲ ಹಂತಕ್ಕೆ ಇಸ್ರೇಲ್ ಮತ್ತು ಹಮಾಸ್ ಎರಡೂ ಸಹಿ ಹಾಕಿವೆ ಎಂದು ಘೋಷಿಸಲು ನನಗೆ ತುಂಬಾ ಹೆಮ್ಮೆಯಾಗುತ್ತಿದೆ” ಎಂದು ಟ್ರಂಪ್ ತಮ್ಮ ಟ್ರುಥ್ ಸೋಶಿಯಲ್‌ನಲ್ಲಿ ಬುಧವಾರ ಹೇಳಿದ್ದಾರೆ.

“ಇದರರ್ಥ ಎಲ್ಲಾ ಒತ್ತೆಯಾಳುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಮತ್ತು ಇಸ್ರೇಲ್ ಬಲವಾದ, ಬಾಳಿಕೆ ಬರುವ ಮತ್ತು ಶಾಶ್ವತ ಶಾಂತಿಯತ್ತ ಮೊದಲ ಹೆಜ್ಜೆಯಾಗಿ ತಮ್ಮ ಸೈನಿಕರನ್ನು ನಿರ್ದಿಷ್ಟ ಗಡಿ ರೇಖೆಗೆ ಹಿಂತೆಗೆದುಕೊಳ್ಳುತ್ತದೆ” ಎಂದು ಟ್ರಂಪ್ ತಿಳಿಸಿದ್ದಾರೆ.

ಗುರುವಾರ ತಮ್ಮ ಸರ್ಕಾರದ ಸಭೆ ಕರೆದು ಒಪ್ಪಂದಕ್ಕೆ ಅನುಮೋದನೆ ಪಡೆಯುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

“ಶಾಂತಿ ಯೋಜನೆಯ ಮೊದಲ ಹಂತದ ಅನುಮೋದನೆಯೊಂದಿಗೆ, ನಮ್ಮ ಎಲ್ಲಾ ಒತ್ತೆಯಾಳುಗಳನ್ನು ಮನೆಗೆ ಕರೆತರಲಾಗುವುದು” ಎಂದು ನೆತನ್ಯಾಹು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಇದು ಇಸ್ರೇಲ್‌ನ ರಾಜತಾಂತ್ರಿಕ ಯಶಸ್ಸು ಮತ್ತು ರಾಷ್ಟ್ರೀಯ ಮತ್ತು ನೈತಿಕ ಗೆಲುವು” ಎಂದಿದ್ದಾರೆ.

ಯುದ್ಧವನ್ನು ಕೊನೆಗೊಳಿಸಲು ಒಪ್ಪಂದಕ್ಕೆ ಬಂದಿರುವುದನ್ನು ಹಮಾಸ್ ಕೂಡ ದೃಢಪಡಿಸಿದೆ. ಒಪ್ಪಂದವು ಗಾಝಾ ಪ್ರದೇಶದಿಂದ ಇಸ್ರೇಲಿ ಪಡೆಗಳನ್ನು ಹಿಂತೆಗೆದುಕೊಳ್ಳುವುದು ಮತ್ತು ಒತ್ತೆಯಾಳು-ಕೈದಿಗಳ ವಿನಿಮಯವನ್ನು ಒಳಗೊಂಡಿದೆ ಎಂದಿದೆ.

“ನಮ್ಮ ಜನರ ತ್ಯಾಗಗಳು ವ್ಯರ್ಥವಾಗುವುದಿಲ್ಲ ಎಂದು ನಾವು ದೃಢೀಕರಿಸುತ್ತೇವೆ. ನಮ್ಮ ಜನರ ರಾಷ್ಟ್ರೀಯ ಹಕ್ಕುಗಳನ್ನು ಎಂದಿಗೂ ಕೈಬಿಡದಿರುವ ನಮ್ಮ ಪ್ರತಿಜ್ಞೆಗೆ ನಾವು ನಿಷ್ಠರಾಗಿರುತ್ತೇವೆ, ಸ್ವಾತಂತ್ರ್ಯ, ಸ್ವತಂತ್ರತೆ ಮತ್ತು ಸ್ವಯಂ-ನಿರ್ಧಾರದ ಹಕ್ಕು ಸಾಧಿಸುವವರೆಗೆ” ಎಂದು ಹಮಾಸ್ ಹೇಳಿದೆ.

ಅಕ್ಟೊಬರ್ 8, 2023ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಲ್ಲಿ ಇದುವರೆಗೆ 67 ಸಾವಿರ ಜನರು ಸಾವನ್ನಪ್ಪಿರುವ ಲೆಕ್ಕ ಸಿಕ್ಕಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಿದೆ ಎಂದು ಅಂದಾಜಿಸಲಾಗಿದೆ. ಏಕೆಂದರೆ, ಸಾವಿರಾರು ಜನರ ದೇಹಗಳು ಇಸ್ರೇಲ್ ಧ್ವಂಸಗೊಳಿಸಿದ ಕಟ್ಟಡಗಳ ಅವಶೇಷಗಳಡಿ ಹುದುಗಿ ಹೋಗಿರಬಹುದು ಎಂದು ನಂಬಲಾಗಿದೆ.

ಅಕ್ಟೋಬರ್ 7, 2023ರಂದು ಇಸ್ರೇಲ್‌ನ ಟೆಲ್ ಅವೀವ್ ಮೇಲೆ ಹಮಾಸ್ ನಡೆಸಿದ್ದ ದಾಳಿಯಲ್ಲಿ 1,200 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದಾಳಿಯ ವೇಳೆ ಸುಮಾರು 251 ಜನರನ್ನು ಹಮಾಸ್ ಒತ್ತೆಯಾಳಾಗಿ ಗಾಝಾಗೆ ಕರೆ ತಂದಿತ್ತು. ಈ ಪೈಕಿ ಹಲವರನ್ನು ಬಿಡುಗಡೆ ಮಾಡಲಾಗಿದೆ. ಪ್ರಸ್ತುತ 48 ಒತ್ತೆಯಾಳುಗಳು ಹಮಾಸ್ ವಶದಲ್ಲಿದ್ದಾರೆ. ಈ ಪೈಕಿ 20 ಜನರು ಇನ್ನೂ ಜೀವಂತ ಇದ್ದಾರೆ ಎಂದು ಅಂದಾಜಿಸಲಾಗಿದೆ.

ಕದನ ವಿರಾಮ ಒಪ್ಪಂದ ಬಳಿಕವೂ ಗಾಝಾ ಮೇಲೆ ದಾಳಿ

ಅಕ್ಟೋಬರ್ 8, 2025 ಬುಧವಾರ ರಾತ್ರಿ ಹಮಾಸ್-ಇಸ್ರೇಲ್ ನಡುವೆ ಕದನ ವಿರಾಮ ಒಪ್ಪಂದವಾಗಿದೆ ಎಂದು ಟ್ರಂಪ್ ಘೋಷಿಸಿದ್ದಾರೆ. ಇದರಿಂದ ಗಾಝಾ ಮೇಲಿನ ಬಾಂಬ್ ದಾಳಿ ಅಂತ್ಯಗೊಂಡಿದೆ ಎಂದು ಹೇಳಲಾಗಿತ್ತು. ಆದರೆ, ಅಕ್ಟೋಬರ್ 9, 2025 ಗುರುವಾರ ಇಸ್ರೇಲ್ ಗಾಝಾ ಮೇಲೆ ದಾಳಿ ಮಾಡಿದೆ ಎಂದು ವರದಿಯಾಗಿದೆ.

ಹೌದು, ನಿನ್ನೆ ಕದನ ವಿರಾಮ ಒಪ್ಪಂದವಾಗಿದ್ದರೂ, ಇಂದು ಗಾಝಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ ಎಂದು ಗಾಝಾದ ನಾಗರಿಕ ರಕ್ಷಣಾ ಅಧಿಕಾರಿ ಮೊಹಮ್ಮದ್ ಅಲ್-ಮುಘಯ್ಯಿರ್ ಅವರು ಹೇಳಿರುವುದಾಗಿ ಸುದ್ದಿ ಸಂಸ್ಥೆ ಅಲ್-ಜಝೀರಾ ವರದಿ ಮಾಡಿದೆ.

ಕದನ ವಿರಾಮ ಒಪ್ಪಂದದ ಬಳಿಕ ಉತ್ತರ ಗಾಝಾದ ಪ್ರದೇಶಗಳಲ್ಲಿ ಹಲವಾರು ಸ್ಫೋಟಗಳು ವರದಿಯಾಗಿವೆ ಎಂದು ಅಲ್-ಮುಘಯ್ಯಿರ್ ಹೇಳಿದ್ದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ವಿದ್ಯಾರ್ಥಿಯನ್ನು ಸೆರೆ ಹಿಡಿದ ಉಕ್ರೇನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...