Homeಅಂತರಾಷ್ಟ್ರೀಯಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

ಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

ಶಾಂತಿ ಒಪ್ಪಂದದ ಬಳಿಕವೂ ಇಸ್ರೇಲ್‌ನಿಂದ ಗಾಝಾ ಮೇಲೆ ವಾಯುದಾಳಿ-ವರದಿ

- Advertisement -
- Advertisement -

ಬರೋಬ್ಬರಿ 67 ಸಾವಿರಕ್ಕೂ ಹೆಚ್ಚು ಅಮಾಯಕರ ಹತ್ಯೆ ಹಾಗೂ ಸುಂದರ ಗಾಝಾವನ್ನು ನರಕವಾಗಿಸಿದ ಬಳಿಕ ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.

ಇಸ್ರೇಲ್ ಗಾಝಾ ಮೇಲೆ ಆಕ್ರಮಣ ಮಾಡಲು ಪ್ರಾರಂಭಿಸಿ ಅಕ್ಟೋಬರ್ 8, 2025ಕ್ಕೆ ಎರಡು ವರ್ಷ ಪೂರ್ಣಗೊಂಡಿದೆ. ಇದರ ಮರುದಿನ, ಅಂದರೆ ಅಕ್ಟೋಬರ್ 9, 2025ರಂದು ಈಜಿಫ್ಟ್‌ನಲ್ಲಿ ನಡೆದ ಗಾಝಾ ಶಾಂತಿ ಮಾತುಕತೆ ಫಲಪ್ರದವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 20 ಅಂಶಗಳ ಶಾಂತಿ ಯೋಜನೆಗೆ ಉಭಯ ಪಕ್ಷಗಳು ಸಹಿ ಹಾಕಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಈ ಹಿಂದೆ ಅನೇಕ ಬಾರಿ ಕದನ ವಿರಾಮ ಜಾರಿಗೆ ಬಂದು ಬಳಿಕ ಅದು ವಿಫಲಗೊಂಡಿತ್ತು. ಆದರೆ, ಈ ಬಾರಿಯ ಶಾಂತಿ ಒಪ್ಪಂದ ಹಿಂದಿಗಿಂತ ಆಶಾದಾಯಕವಾಗಿದೆ. ಇದು ಕೇವಲ ಇಸ್ರೇಲ್-ಪ್ಯಾಲೆಸ್ತೀನ್ ಮಾತ್ರವಲ್ಲದೆ, ಯೆಮನ್, ಲೆಬನಾನ್ ಸೇರಿದಂತೆ ಎಲ್ಲಾ ದೇಶಗಳ ಮೇಲಿನ ಆಕ್ರಮಣ ಕೊನೆಗೊಳಿಸುವ ಒಪ್ಪಂದವಾಗಿದೆ. ಈ ಮೂಲಕ ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಶಮನವಾಗುವ ನಿರೀಕ್ಷೆಯಿದೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

ಮತ್ತೊಂದೆಡೆ, ಬುಧವಾರ (ಅ.8) ರಾತ್ರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಕದನ ವಿರಾಮ ಒಪ್ಪಂದವು ಸಾಕಷ್ಟು ವಿವರಗಳನ್ನು ಒಳಗೊಂಡಿಲ್ಲ, ಅಂದರೆ ಅದರಲ್ಲಿ ಸ್ಪಷ್ಟವಾದ ಮಾಹಿತಿ ಅಥವಾ ಯೋಜನೆಯ ಕೊರತೆಯಿದೆ. ಜೊತೆಗೆ, ಇದು ಹಲವು ಪ್ರಶ್ನೆಗಳಿಗೆ ಉತ್ತರಿಸದೆ ಉಳಿಸಿದೆ. ಇವು ಇನ್ನೂ ಪರಿಹಾರವಾಗದಿರುವ ಸಮಸ್ಯೆಗಳಾಗಿವೆ. ಈ ಕಾರಣಗಳಿಂದಾಗಿ, ಈ ಒಪ್ಪಂದವು ಹಿಂದಿನ ಶಾಂತಿ ಪ್ರಯತ್ನಗಳಂತೆ ವಿಫಲಗೊಳ್ಳುವ ಸಾಧ್ಯತೆಯೂ ಇದೆ ಎಂದು ವರದಿ ಅಭಿಪ್ರಾಯಪಟ್ಟಿದೆ.

“ನಮ್ಮ ಶಾಂತಿ ಯೋಜನೆಯ ಮೊದಲ ಹಂತಕ್ಕೆ ಇಸ್ರೇಲ್ ಮತ್ತು ಹಮಾಸ್ ಎರಡೂ ಸಹಿ ಹಾಕಿವೆ ಎಂದು ಘೋಷಿಸಲು ನನಗೆ ತುಂಬಾ ಹೆಮ್ಮೆಯಾಗುತ್ತಿದೆ” ಎಂದು ಟ್ರಂಪ್ ತಮ್ಮ ಟ್ರುಥ್ ಸೋಶಿಯಲ್‌ನಲ್ಲಿ ಬುಧವಾರ ಹೇಳಿದ್ದಾರೆ.

“ಇದರರ್ಥ ಎಲ್ಲಾ ಒತ್ತೆಯಾಳುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಮತ್ತು ಇಸ್ರೇಲ್ ಬಲವಾದ, ಬಾಳಿಕೆ ಬರುವ ಮತ್ತು ಶಾಶ್ವತ ಶಾಂತಿಯತ್ತ ಮೊದಲ ಹೆಜ್ಜೆಯಾಗಿ ತಮ್ಮ ಸೈನಿಕರನ್ನು ನಿರ್ದಿಷ್ಟ ಗಡಿ ರೇಖೆಗೆ ಹಿಂತೆಗೆದುಕೊಳ್ಳುತ್ತದೆ” ಎಂದು ಟ್ರಂಪ್ ತಿಳಿಸಿದ್ದಾರೆ.

ಗುರುವಾರ ತಮ್ಮ ಸರ್ಕಾರದ ಸಭೆ ಕರೆದು ಒಪ್ಪಂದಕ್ಕೆ ಅನುಮೋದನೆ ಪಡೆಯುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

“ಶಾಂತಿ ಯೋಜನೆಯ ಮೊದಲ ಹಂತದ ಅನುಮೋದನೆಯೊಂದಿಗೆ, ನಮ್ಮ ಎಲ್ಲಾ ಒತ್ತೆಯಾಳುಗಳನ್ನು ಮನೆಗೆ ಕರೆತರಲಾಗುವುದು” ಎಂದು ನೆತನ್ಯಾಹು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಇದು ಇಸ್ರೇಲ್‌ನ ರಾಜತಾಂತ್ರಿಕ ಯಶಸ್ಸು ಮತ್ತು ರಾಷ್ಟ್ರೀಯ ಮತ್ತು ನೈತಿಕ ಗೆಲುವು” ಎಂದಿದ್ದಾರೆ.

ಯುದ್ಧವನ್ನು ಕೊನೆಗೊಳಿಸಲು ಒಪ್ಪಂದಕ್ಕೆ ಬಂದಿರುವುದನ್ನು ಹಮಾಸ್ ಕೂಡ ದೃಢಪಡಿಸಿದೆ. ಒಪ್ಪಂದವು ಗಾಝಾ ಪ್ರದೇಶದಿಂದ ಇಸ್ರೇಲಿ ಪಡೆಗಳನ್ನು ಹಿಂತೆಗೆದುಕೊಳ್ಳುವುದು ಮತ್ತು ಒತ್ತೆಯಾಳು-ಕೈದಿಗಳ ವಿನಿಮಯವನ್ನು ಒಳಗೊಂಡಿದೆ ಎಂದಿದೆ.

“ನಮ್ಮ ಜನರ ತ್ಯಾಗಗಳು ವ್ಯರ್ಥವಾಗುವುದಿಲ್ಲ ಎಂದು ನಾವು ದೃಢೀಕರಿಸುತ್ತೇವೆ. ನಮ್ಮ ಜನರ ರಾಷ್ಟ್ರೀಯ ಹಕ್ಕುಗಳನ್ನು ಎಂದಿಗೂ ಕೈಬಿಡದಿರುವ ನಮ್ಮ ಪ್ರತಿಜ್ಞೆಗೆ ನಾವು ನಿಷ್ಠರಾಗಿರುತ್ತೇವೆ, ಸ್ವಾತಂತ್ರ್ಯ, ಸ್ವತಂತ್ರತೆ ಮತ್ತು ಸ್ವಯಂ-ನಿರ್ಧಾರದ ಹಕ್ಕು ಸಾಧಿಸುವವರೆಗೆ” ಎಂದು ಹಮಾಸ್ ಹೇಳಿದೆ.

ಅಕ್ಟೊಬರ್ 8, 2023ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಲ್ಲಿ ಇದುವರೆಗೆ 67 ಸಾವಿರ ಜನರು ಸಾವನ್ನಪ್ಪಿರುವ ಲೆಕ್ಕ ಸಿಕ್ಕಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಿದೆ ಎಂದು ಅಂದಾಜಿಸಲಾಗಿದೆ. ಏಕೆಂದರೆ, ಸಾವಿರಾರು ಜನರ ದೇಹಗಳು ಇಸ್ರೇಲ್ ಧ್ವಂಸಗೊಳಿಸಿದ ಕಟ್ಟಡಗಳ ಅವಶೇಷಗಳಡಿ ಹುದುಗಿ ಹೋಗಿರಬಹುದು ಎಂದು ನಂಬಲಾಗಿದೆ.

ಅಕ್ಟೋಬರ್ 7, 2023ರಂದು ಇಸ್ರೇಲ್‌ನ ಟೆಲ್ ಅವೀವ್ ಮೇಲೆ ಹಮಾಸ್ ನಡೆಸಿದ್ದ ದಾಳಿಯಲ್ಲಿ 1,200 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದಾಳಿಯ ವೇಳೆ ಸುಮಾರು 251 ಜನರನ್ನು ಹಮಾಸ್ ಒತ್ತೆಯಾಳಾಗಿ ಗಾಝಾಗೆ ಕರೆ ತಂದಿತ್ತು. ಈ ಪೈಕಿ ಹಲವರನ್ನು ಬಿಡುಗಡೆ ಮಾಡಲಾಗಿದೆ. ಪ್ರಸ್ತುತ 48 ಒತ್ತೆಯಾಳುಗಳು ಹಮಾಸ್ ವಶದಲ್ಲಿದ್ದಾರೆ. ಈ ಪೈಕಿ 20 ಜನರು ಇನ್ನೂ ಜೀವಂತ ಇದ್ದಾರೆ ಎಂದು ಅಂದಾಜಿಸಲಾಗಿದೆ.

ಕದನ ವಿರಾಮ ಒಪ್ಪಂದ ಬಳಿಕವೂ ಗಾಝಾ ಮೇಲೆ ದಾಳಿ

ಅಕ್ಟೋಬರ್ 8, 2025 ಬುಧವಾರ ರಾತ್ರಿ ಹಮಾಸ್-ಇಸ್ರೇಲ್ ನಡುವೆ ಕದನ ವಿರಾಮ ಒಪ್ಪಂದವಾಗಿದೆ ಎಂದು ಟ್ರಂಪ್ ಘೋಷಿಸಿದ್ದಾರೆ. ಇದರಿಂದ ಗಾಝಾ ಮೇಲಿನ ಬಾಂಬ್ ದಾಳಿ ಅಂತ್ಯಗೊಂಡಿದೆ ಎಂದು ಹೇಳಲಾಗಿತ್ತು. ಆದರೆ, ಅಕ್ಟೋಬರ್ 9, 2025 ಗುರುವಾರ ಇಸ್ರೇಲ್ ಗಾಝಾ ಮೇಲೆ ದಾಳಿ ಮಾಡಿದೆ ಎಂದು ವರದಿಯಾಗಿದೆ.

ಹೌದು, ನಿನ್ನೆ ಕದನ ವಿರಾಮ ಒಪ್ಪಂದವಾಗಿದ್ದರೂ, ಇಂದು ಗಾಝಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ ಎಂದು ಗಾಝಾದ ನಾಗರಿಕ ರಕ್ಷಣಾ ಅಧಿಕಾರಿ ಮೊಹಮ್ಮದ್ ಅಲ್-ಮುಘಯ್ಯಿರ್ ಅವರು ಹೇಳಿರುವುದಾಗಿ ಸುದ್ದಿ ಸಂಸ್ಥೆ ಅಲ್-ಜಝೀರಾ ವರದಿ ಮಾಡಿದೆ.

ಕದನ ವಿರಾಮ ಒಪ್ಪಂದದ ಬಳಿಕ ಉತ್ತರ ಗಾಝಾದ ಪ್ರದೇಶಗಳಲ್ಲಿ ಹಲವಾರು ಸ್ಫೋಟಗಳು ವರದಿಯಾಗಿವೆ ಎಂದು ಅಲ್-ಮುಘಯ್ಯಿರ್ ಹೇಳಿದ್ದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ವಿದ್ಯಾರ್ಥಿಯನ್ನು ಸೆರೆ ಹಿಡಿದ ಉಕ್ರೇನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ’: ಪ್ರಿಯಾಂಕ್ ಖರ್ಗೆ

ಬೆಂಗಳೂರು: ‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ’ ಎಂದು ಆರ್.ಎಸ್.ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಗುಡುಗಿದ್ದಾರೆ.  ರಾಜ್ಯದ ಗಮನ‌ ಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ...

“ಮಾಸ್ಕ್ ಧರಿಸಿದರೂ ಪ್ರಯೋಜನವಿಲ್ಲ”: ದೆಹಲಿ ವಾಯುಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ದೆಹಲಿಯ ವಾಯುಮಾಲಿನ್ಯ 'ಗಂಭೀರ ಮಟ್ಟ' ತಲುಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಮಾಸ್ಕ್‌ ಧರಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ವಕೀಲರು ವರ್ಚುವಲ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರೆ ಸಾಕು ಎಂದು ಹೇಳಿದೆ. ವಿವಿಧ ಪ್ರಕರಣಗಳಲ್ಲಿ...

ಛತ್ತೀಸ್‌ಗಢ| ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿದಂತೆ ಆರು ಜನ ಮಾವೋವಾದಿಗಳ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನವೆಂಬರ್ 11 ರಂದು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಆರು ಮಾವೋವಾದಿಗಳಲ್ಲಿ ಮಾವೋವಾದಿ ನಾಯಕಿ, ಹಿರಿಯ ಕಾರ್ಯಕರ್ತ ಪಾಪಾ ರಾವ್ ಅವರ ಪತ್ನಿ ಊರ್ಮಿಳಾ ಮತ್ತು ಬುಚಣ್ಣ...

ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಲುಧಿಯಾನ ಕಮಿಷನರೇಟ್ ಪೊಲೀಸರು, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೆಂಬಲಿತ ಗ್ರೆನೇಡ್ ದಾಳಿ ಘಟಕದ 10 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಅವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆದಿದ್ದಾರೆ.  ನವೆಂಬರ್...

ಗಾಜಾದಲ್ಲಿ ಮುಂದುವರೆದ ಪ್ಯಾಲೆಸ್ತೀನಿಯನ್ ಮಕ್ಕಳ ಕಾಣೆ ಪ್ರಕರಣ: ಮಕ್ಕಳ ಹಕ್ಕುಗಳ ಗುಂಪು

ಬುಧವಾರ ಪ್ಯಾಲೆಸ್ತೀನಿಯನ್ ಹಕ್ಕುಗಳ ಗುಂಪಿನ ವರದಿಯ ಪ್ರಕಾರ, ಇತ್ತೀಚಿನ ತಿಂಗಳುಗಳಲ್ಲಿ ಗಾಜಾದಿಂದ ಕನಿಷ್ಠ ಆರು ಮಕ್ಕಳು ಕಣ್ಮರೆಯಾಗಿದ್ದಾರೆ ಎಂದು 'ಮಕ್ತೂಬ್‌ ಮೀಡಿಯಾ' ವರದಿ ಮಾಡಿದೆ. ಕಾಣೆಯಾದ ಮಕ್ಕಳ ಕುಟುಂಬಗಳು ಈ ಪ್ರದೇಶದಲ್ಲಿನ ತನ್ನ ಮಿಲಿಟರಿ...

ರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ ಅರೆಸ್ಟ್

ವಾಣಿಜ್ಯ ಮೊಕದ್ದಮೆಯೊಂದರಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಜಗಾಂವ್ ಸಿವಿಲ್ ಮತ್ತು ಸೆಷನ್ಸ್...

ಅಲಿಘರ್| ಶಾಲೆಯಲ್ಲಿ ‘ವಂದೇ ಮಾತರಂ’ ಹಾಡುವುದಕ್ಕೆ ಆಕ್ಷೇಪಿಸಿದ ಶಿಕ್ಷಕನ ಅಮಾನತು

ಉತ್ತರ ಪ್ರದೇಶದ ಶಾಹಪುರ್ ಕುತುಬ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 'ವಂದೇ ಮಾತರಂ' ಹಾಡುವುದನ್ನು ಆಕ್ಷೇಪಿಸಿದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ರಾಷ್ಟ್ರಗೀತೆಯ ನಂತರ ವಂದೇಮಾತರಂ...

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ದಿನಾಂಕ ನಿಗದಿಯಾಗಿದೆ. ನವೆಂಬರ್ 16ರ‌ ಭಾನುವಾರ...

ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ನ್ಯಾಯಮೂರ್ತಿ ಎಂ.ಐ ಅರುಣ್ ಅವರು, ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ...

ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

ಗುಜರಾತ್‌ನ ಅಮ್ರೇಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು, ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಗೋ ಕುಟುಂಬಕ್ಕೆ ಸೇರಿದ ಪ್ರಾಣಿಗಳ ಹತ್ಯೆಯನ್ನು ಕಾನೂನು...