Homeಅಂತರಾಷ್ಟ್ರೀಯಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

ಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

ಶಾಂತಿ ಒಪ್ಪಂದದ ಬಳಿಕವೂ ಇಸ್ರೇಲ್‌ನಿಂದ ಗಾಝಾ ಮೇಲೆ ವಾಯುದಾಳಿ-ವರದಿ

- Advertisement -
- Advertisement -

ಬರೋಬ್ಬರಿ 67 ಸಾವಿರಕ್ಕೂ ಹೆಚ್ಚು ಅಮಾಯಕರ ಹತ್ಯೆ ಹಾಗೂ ಸುಂದರ ಗಾಝಾವನ್ನು ನರಕವಾಗಿಸಿದ ಬಳಿಕ ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.

ಇಸ್ರೇಲ್ ಗಾಝಾ ಮೇಲೆ ಆಕ್ರಮಣ ಮಾಡಲು ಪ್ರಾರಂಭಿಸಿ ಅಕ್ಟೋಬರ್ 8, 2025ಕ್ಕೆ ಎರಡು ವರ್ಷ ಪೂರ್ಣಗೊಂಡಿದೆ. ಇದರ ಮರುದಿನ, ಅಂದರೆ ಅಕ್ಟೋಬರ್ 9, 2025ರಂದು ಈಜಿಫ್ಟ್‌ನಲ್ಲಿ ನಡೆದ ಗಾಝಾ ಶಾಂತಿ ಮಾತುಕತೆ ಫಲಪ್ರದವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 20 ಅಂಶಗಳ ಶಾಂತಿ ಯೋಜನೆಗೆ ಉಭಯ ಪಕ್ಷಗಳು ಸಹಿ ಹಾಕಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಈ ಹಿಂದೆ ಅನೇಕ ಬಾರಿ ಕದನ ವಿರಾಮ ಜಾರಿಗೆ ಬಂದು ಬಳಿಕ ಅದು ವಿಫಲಗೊಂಡಿತ್ತು. ಆದರೆ, ಈ ಬಾರಿಯ ಶಾಂತಿ ಒಪ್ಪಂದ ಹಿಂದಿಗಿಂತ ಆಶಾದಾಯಕವಾಗಿದೆ. ಇದು ಕೇವಲ ಇಸ್ರೇಲ್-ಪ್ಯಾಲೆಸ್ತೀನ್ ಮಾತ್ರವಲ್ಲದೆ, ಯೆಮನ್, ಲೆಬನಾನ್ ಸೇರಿದಂತೆ ಎಲ್ಲಾ ದೇಶಗಳ ಮೇಲಿನ ಆಕ್ರಮಣ ಕೊನೆಗೊಳಿಸುವ ಒಪ್ಪಂದವಾಗಿದೆ. ಈ ಮೂಲಕ ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಶಮನವಾಗುವ ನಿರೀಕ್ಷೆಯಿದೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

ಮತ್ತೊಂದೆಡೆ, ಬುಧವಾರ (ಅ.8) ರಾತ್ರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಕದನ ವಿರಾಮ ಒಪ್ಪಂದವು ಸಾಕಷ್ಟು ವಿವರಗಳನ್ನು ಒಳಗೊಂಡಿಲ್ಲ, ಅಂದರೆ ಅದರಲ್ಲಿ ಸ್ಪಷ್ಟವಾದ ಮಾಹಿತಿ ಅಥವಾ ಯೋಜನೆಯ ಕೊರತೆಯಿದೆ. ಜೊತೆಗೆ, ಇದು ಹಲವು ಪ್ರಶ್ನೆಗಳಿಗೆ ಉತ್ತರಿಸದೆ ಉಳಿಸಿದೆ. ಇವು ಇನ್ನೂ ಪರಿಹಾರವಾಗದಿರುವ ಸಮಸ್ಯೆಗಳಾಗಿವೆ. ಈ ಕಾರಣಗಳಿಂದಾಗಿ, ಈ ಒಪ್ಪಂದವು ಹಿಂದಿನ ಶಾಂತಿ ಪ್ರಯತ್ನಗಳಂತೆ ವಿಫಲಗೊಳ್ಳುವ ಸಾಧ್ಯತೆಯೂ ಇದೆ ಎಂದು ವರದಿ ಅಭಿಪ್ರಾಯಪಟ್ಟಿದೆ.

“ನಮ್ಮ ಶಾಂತಿ ಯೋಜನೆಯ ಮೊದಲ ಹಂತಕ್ಕೆ ಇಸ್ರೇಲ್ ಮತ್ತು ಹಮಾಸ್ ಎರಡೂ ಸಹಿ ಹಾಕಿವೆ ಎಂದು ಘೋಷಿಸಲು ನನಗೆ ತುಂಬಾ ಹೆಮ್ಮೆಯಾಗುತ್ತಿದೆ” ಎಂದು ಟ್ರಂಪ್ ತಮ್ಮ ಟ್ರುಥ್ ಸೋಶಿಯಲ್‌ನಲ್ಲಿ ಬುಧವಾರ ಹೇಳಿದ್ದಾರೆ.

“ಇದರರ್ಥ ಎಲ್ಲಾ ಒತ್ತೆಯಾಳುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಮತ್ತು ಇಸ್ರೇಲ್ ಬಲವಾದ, ಬಾಳಿಕೆ ಬರುವ ಮತ್ತು ಶಾಶ್ವತ ಶಾಂತಿಯತ್ತ ಮೊದಲ ಹೆಜ್ಜೆಯಾಗಿ ತಮ್ಮ ಸೈನಿಕರನ್ನು ನಿರ್ದಿಷ್ಟ ಗಡಿ ರೇಖೆಗೆ ಹಿಂತೆಗೆದುಕೊಳ್ಳುತ್ತದೆ” ಎಂದು ಟ್ರಂಪ್ ತಿಳಿಸಿದ್ದಾರೆ.

ಗುರುವಾರ ತಮ್ಮ ಸರ್ಕಾರದ ಸಭೆ ಕರೆದು ಒಪ್ಪಂದಕ್ಕೆ ಅನುಮೋದನೆ ಪಡೆಯುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

“ಶಾಂತಿ ಯೋಜನೆಯ ಮೊದಲ ಹಂತದ ಅನುಮೋದನೆಯೊಂದಿಗೆ, ನಮ್ಮ ಎಲ್ಲಾ ಒತ್ತೆಯಾಳುಗಳನ್ನು ಮನೆಗೆ ಕರೆತರಲಾಗುವುದು” ಎಂದು ನೆತನ್ಯಾಹು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಇದು ಇಸ್ರೇಲ್‌ನ ರಾಜತಾಂತ್ರಿಕ ಯಶಸ್ಸು ಮತ್ತು ರಾಷ್ಟ್ರೀಯ ಮತ್ತು ನೈತಿಕ ಗೆಲುವು” ಎಂದಿದ್ದಾರೆ.

ಯುದ್ಧವನ್ನು ಕೊನೆಗೊಳಿಸಲು ಒಪ್ಪಂದಕ್ಕೆ ಬಂದಿರುವುದನ್ನು ಹಮಾಸ್ ಕೂಡ ದೃಢಪಡಿಸಿದೆ. ಒಪ್ಪಂದವು ಗಾಝಾ ಪ್ರದೇಶದಿಂದ ಇಸ್ರೇಲಿ ಪಡೆಗಳನ್ನು ಹಿಂತೆಗೆದುಕೊಳ್ಳುವುದು ಮತ್ತು ಒತ್ತೆಯಾಳು-ಕೈದಿಗಳ ವಿನಿಮಯವನ್ನು ಒಳಗೊಂಡಿದೆ ಎಂದಿದೆ.

“ನಮ್ಮ ಜನರ ತ್ಯಾಗಗಳು ವ್ಯರ್ಥವಾಗುವುದಿಲ್ಲ ಎಂದು ನಾವು ದೃಢೀಕರಿಸುತ್ತೇವೆ. ನಮ್ಮ ಜನರ ರಾಷ್ಟ್ರೀಯ ಹಕ್ಕುಗಳನ್ನು ಎಂದಿಗೂ ಕೈಬಿಡದಿರುವ ನಮ್ಮ ಪ್ರತಿಜ್ಞೆಗೆ ನಾವು ನಿಷ್ಠರಾಗಿರುತ್ತೇವೆ, ಸ್ವಾತಂತ್ರ್ಯ, ಸ್ವತಂತ್ರತೆ ಮತ್ತು ಸ್ವಯಂ-ನಿರ್ಧಾರದ ಹಕ್ಕು ಸಾಧಿಸುವವರೆಗೆ” ಎಂದು ಹಮಾಸ್ ಹೇಳಿದೆ.

ಅಕ್ಟೊಬರ್ 8, 2023ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಲ್ಲಿ ಇದುವರೆಗೆ 67 ಸಾವಿರ ಜನರು ಸಾವನ್ನಪ್ಪಿರುವ ಲೆಕ್ಕ ಸಿಕ್ಕಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಿದೆ ಎಂದು ಅಂದಾಜಿಸಲಾಗಿದೆ. ಏಕೆಂದರೆ, ಸಾವಿರಾರು ಜನರ ದೇಹಗಳು ಇಸ್ರೇಲ್ ಧ್ವಂಸಗೊಳಿಸಿದ ಕಟ್ಟಡಗಳ ಅವಶೇಷಗಳಡಿ ಹುದುಗಿ ಹೋಗಿರಬಹುದು ಎಂದು ನಂಬಲಾಗಿದೆ.

ಅಕ್ಟೋಬರ್ 7, 2023ರಂದು ಇಸ್ರೇಲ್‌ನ ಟೆಲ್ ಅವೀವ್ ಮೇಲೆ ಹಮಾಸ್ ನಡೆಸಿದ್ದ ದಾಳಿಯಲ್ಲಿ 1,200 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದಾಳಿಯ ವೇಳೆ ಸುಮಾರು 251 ಜನರನ್ನು ಹಮಾಸ್ ಒತ್ತೆಯಾಳಾಗಿ ಗಾಝಾಗೆ ಕರೆ ತಂದಿತ್ತು. ಈ ಪೈಕಿ ಹಲವರನ್ನು ಬಿಡುಗಡೆ ಮಾಡಲಾಗಿದೆ. ಪ್ರಸ್ತುತ 48 ಒತ್ತೆಯಾಳುಗಳು ಹಮಾಸ್ ವಶದಲ್ಲಿದ್ದಾರೆ. ಈ ಪೈಕಿ 20 ಜನರು ಇನ್ನೂ ಜೀವಂತ ಇದ್ದಾರೆ ಎಂದು ಅಂದಾಜಿಸಲಾಗಿದೆ.

ಕದನ ವಿರಾಮ ಒಪ್ಪಂದ ಬಳಿಕವೂ ಗಾಝಾ ಮೇಲೆ ದಾಳಿ

ಅಕ್ಟೋಬರ್ 8, 2025 ಬುಧವಾರ ರಾತ್ರಿ ಹಮಾಸ್-ಇಸ್ರೇಲ್ ನಡುವೆ ಕದನ ವಿರಾಮ ಒಪ್ಪಂದವಾಗಿದೆ ಎಂದು ಟ್ರಂಪ್ ಘೋಷಿಸಿದ್ದಾರೆ. ಇದರಿಂದ ಗಾಝಾ ಮೇಲಿನ ಬಾಂಬ್ ದಾಳಿ ಅಂತ್ಯಗೊಂಡಿದೆ ಎಂದು ಹೇಳಲಾಗಿತ್ತು. ಆದರೆ, ಅಕ್ಟೋಬರ್ 9, 2025 ಗುರುವಾರ ಇಸ್ರೇಲ್ ಗಾಝಾ ಮೇಲೆ ದಾಳಿ ಮಾಡಿದೆ ಎಂದು ವರದಿಯಾಗಿದೆ.

ಹೌದು, ನಿನ್ನೆ ಕದನ ವಿರಾಮ ಒಪ್ಪಂದವಾಗಿದ್ದರೂ, ಇಂದು ಗಾಝಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ ಎಂದು ಗಾಝಾದ ನಾಗರಿಕ ರಕ್ಷಣಾ ಅಧಿಕಾರಿ ಮೊಹಮ್ಮದ್ ಅಲ್-ಮುಘಯ್ಯಿರ್ ಅವರು ಹೇಳಿರುವುದಾಗಿ ಸುದ್ದಿ ಸಂಸ್ಥೆ ಅಲ್-ಜಝೀರಾ ವರದಿ ಮಾಡಿದೆ.

ಕದನ ವಿರಾಮ ಒಪ್ಪಂದದ ಬಳಿಕ ಉತ್ತರ ಗಾಝಾದ ಪ್ರದೇಶಗಳಲ್ಲಿ ಹಲವಾರು ಸ್ಫೋಟಗಳು ವರದಿಯಾಗಿವೆ ಎಂದು ಅಲ್-ಮುಘಯ್ಯಿರ್ ಹೇಳಿದ್ದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ವಿದ್ಯಾರ್ಥಿಯನ್ನು ಸೆರೆ ಹಿಡಿದ ಉಕ್ರೇನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...