Homeಅಂತರಾಷ್ಟ್ರೀಯಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

ಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

ಶಾಂತಿ ಒಪ್ಪಂದದ ಬಳಿಕವೂ ಇಸ್ರೇಲ್‌ನಿಂದ ಗಾಝಾ ಮೇಲೆ ವಾಯುದಾಳಿ-ವರದಿ

- Advertisement -
- Advertisement -

ಬರೋಬ್ಬರಿ 67 ಸಾವಿರಕ್ಕೂ ಹೆಚ್ಚು ಅಮಾಯಕರ ಹತ್ಯೆ ಹಾಗೂ ಸುಂದರ ಗಾಝಾವನ್ನು ನರಕವಾಗಿಸಿದ ಬಳಿಕ ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.

ಇಸ್ರೇಲ್ ಗಾಝಾ ಮೇಲೆ ಆಕ್ರಮಣ ಮಾಡಲು ಪ್ರಾರಂಭಿಸಿ ಅಕ್ಟೋಬರ್ 8, 2025ಕ್ಕೆ ಎರಡು ವರ್ಷ ಪೂರ್ಣಗೊಂಡಿದೆ. ಇದರ ಮರುದಿನ, ಅಂದರೆ ಅಕ್ಟೋಬರ್ 9, 2025ರಂದು ಈಜಿಫ್ಟ್‌ನಲ್ಲಿ ನಡೆದ ಗಾಝಾ ಶಾಂತಿ ಮಾತುಕತೆ ಫಲಪ್ರದವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 20 ಅಂಶಗಳ ಶಾಂತಿ ಯೋಜನೆಗೆ ಉಭಯ ಪಕ್ಷಗಳು ಸಹಿ ಹಾಕಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಈ ಹಿಂದೆ ಅನೇಕ ಬಾರಿ ಕದನ ವಿರಾಮ ಜಾರಿಗೆ ಬಂದು ಬಳಿಕ ಅದು ವಿಫಲಗೊಂಡಿತ್ತು. ಆದರೆ, ಈ ಬಾರಿಯ ಶಾಂತಿ ಒಪ್ಪಂದ ಹಿಂದಿಗಿಂತ ಆಶಾದಾಯಕವಾಗಿದೆ. ಇದು ಕೇವಲ ಇಸ್ರೇಲ್-ಪ್ಯಾಲೆಸ್ತೀನ್ ಮಾತ್ರವಲ್ಲದೆ, ಯೆಮನ್, ಲೆಬನಾನ್ ಸೇರಿದಂತೆ ಎಲ್ಲಾ ದೇಶಗಳ ಮೇಲಿನ ಆಕ್ರಮಣ ಕೊನೆಗೊಳಿಸುವ ಒಪ್ಪಂದವಾಗಿದೆ. ಈ ಮೂಲಕ ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಶಮನವಾಗುವ ನಿರೀಕ್ಷೆಯಿದೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

ಮತ್ತೊಂದೆಡೆ, ಬುಧವಾರ (ಅ.8) ರಾತ್ರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಕದನ ವಿರಾಮ ಒಪ್ಪಂದವು ಸಾಕಷ್ಟು ವಿವರಗಳನ್ನು ಒಳಗೊಂಡಿಲ್ಲ, ಅಂದರೆ ಅದರಲ್ಲಿ ಸ್ಪಷ್ಟವಾದ ಮಾಹಿತಿ ಅಥವಾ ಯೋಜನೆಯ ಕೊರತೆಯಿದೆ. ಜೊತೆಗೆ, ಇದು ಹಲವು ಪ್ರಶ್ನೆಗಳಿಗೆ ಉತ್ತರಿಸದೆ ಉಳಿಸಿದೆ. ಇವು ಇನ್ನೂ ಪರಿಹಾರವಾಗದಿರುವ ಸಮಸ್ಯೆಗಳಾಗಿವೆ. ಈ ಕಾರಣಗಳಿಂದಾಗಿ, ಈ ಒಪ್ಪಂದವು ಹಿಂದಿನ ಶಾಂತಿ ಪ್ರಯತ್ನಗಳಂತೆ ವಿಫಲಗೊಳ್ಳುವ ಸಾಧ್ಯತೆಯೂ ಇದೆ ಎಂದು ವರದಿ ಅಭಿಪ್ರಾಯಪಟ್ಟಿದೆ.

“ನಮ್ಮ ಶಾಂತಿ ಯೋಜನೆಯ ಮೊದಲ ಹಂತಕ್ಕೆ ಇಸ್ರೇಲ್ ಮತ್ತು ಹಮಾಸ್ ಎರಡೂ ಸಹಿ ಹಾಕಿವೆ ಎಂದು ಘೋಷಿಸಲು ನನಗೆ ತುಂಬಾ ಹೆಮ್ಮೆಯಾಗುತ್ತಿದೆ” ಎಂದು ಟ್ರಂಪ್ ತಮ್ಮ ಟ್ರುಥ್ ಸೋಶಿಯಲ್‌ನಲ್ಲಿ ಬುಧವಾರ ಹೇಳಿದ್ದಾರೆ.

“ಇದರರ್ಥ ಎಲ್ಲಾ ಒತ್ತೆಯಾಳುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಮತ್ತು ಇಸ್ರೇಲ್ ಬಲವಾದ, ಬಾಳಿಕೆ ಬರುವ ಮತ್ತು ಶಾಶ್ವತ ಶಾಂತಿಯತ್ತ ಮೊದಲ ಹೆಜ್ಜೆಯಾಗಿ ತಮ್ಮ ಸೈನಿಕರನ್ನು ನಿರ್ದಿಷ್ಟ ಗಡಿ ರೇಖೆಗೆ ಹಿಂತೆಗೆದುಕೊಳ್ಳುತ್ತದೆ” ಎಂದು ಟ್ರಂಪ್ ತಿಳಿಸಿದ್ದಾರೆ.

ಗುರುವಾರ ತಮ್ಮ ಸರ್ಕಾರದ ಸಭೆ ಕರೆದು ಒಪ್ಪಂದಕ್ಕೆ ಅನುಮೋದನೆ ಪಡೆಯುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

“ಶಾಂತಿ ಯೋಜನೆಯ ಮೊದಲ ಹಂತದ ಅನುಮೋದನೆಯೊಂದಿಗೆ, ನಮ್ಮ ಎಲ್ಲಾ ಒತ್ತೆಯಾಳುಗಳನ್ನು ಮನೆಗೆ ಕರೆತರಲಾಗುವುದು” ಎಂದು ನೆತನ್ಯಾಹು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಇದು ಇಸ್ರೇಲ್‌ನ ರಾಜತಾಂತ್ರಿಕ ಯಶಸ್ಸು ಮತ್ತು ರಾಷ್ಟ್ರೀಯ ಮತ್ತು ನೈತಿಕ ಗೆಲುವು” ಎಂದಿದ್ದಾರೆ.

ಯುದ್ಧವನ್ನು ಕೊನೆಗೊಳಿಸಲು ಒಪ್ಪಂದಕ್ಕೆ ಬಂದಿರುವುದನ್ನು ಹಮಾಸ್ ಕೂಡ ದೃಢಪಡಿಸಿದೆ. ಒಪ್ಪಂದವು ಗಾಝಾ ಪ್ರದೇಶದಿಂದ ಇಸ್ರೇಲಿ ಪಡೆಗಳನ್ನು ಹಿಂತೆಗೆದುಕೊಳ್ಳುವುದು ಮತ್ತು ಒತ್ತೆಯಾಳು-ಕೈದಿಗಳ ವಿನಿಮಯವನ್ನು ಒಳಗೊಂಡಿದೆ ಎಂದಿದೆ.

“ನಮ್ಮ ಜನರ ತ್ಯಾಗಗಳು ವ್ಯರ್ಥವಾಗುವುದಿಲ್ಲ ಎಂದು ನಾವು ದೃಢೀಕರಿಸುತ್ತೇವೆ. ನಮ್ಮ ಜನರ ರಾಷ್ಟ್ರೀಯ ಹಕ್ಕುಗಳನ್ನು ಎಂದಿಗೂ ಕೈಬಿಡದಿರುವ ನಮ್ಮ ಪ್ರತಿಜ್ಞೆಗೆ ನಾವು ನಿಷ್ಠರಾಗಿರುತ್ತೇವೆ, ಸ್ವಾತಂತ್ರ್ಯ, ಸ್ವತಂತ್ರತೆ ಮತ್ತು ಸ್ವಯಂ-ನಿರ್ಧಾರದ ಹಕ್ಕು ಸಾಧಿಸುವವರೆಗೆ” ಎಂದು ಹಮಾಸ್ ಹೇಳಿದೆ.

ಅಕ್ಟೊಬರ್ 8, 2023ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಲ್ಲಿ ಇದುವರೆಗೆ 67 ಸಾವಿರ ಜನರು ಸಾವನ್ನಪ್ಪಿರುವ ಲೆಕ್ಕ ಸಿಕ್ಕಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಿದೆ ಎಂದು ಅಂದಾಜಿಸಲಾಗಿದೆ. ಏಕೆಂದರೆ, ಸಾವಿರಾರು ಜನರ ದೇಹಗಳು ಇಸ್ರೇಲ್ ಧ್ವಂಸಗೊಳಿಸಿದ ಕಟ್ಟಡಗಳ ಅವಶೇಷಗಳಡಿ ಹುದುಗಿ ಹೋಗಿರಬಹುದು ಎಂದು ನಂಬಲಾಗಿದೆ.

ಅಕ್ಟೋಬರ್ 7, 2023ರಂದು ಇಸ್ರೇಲ್‌ನ ಟೆಲ್ ಅವೀವ್ ಮೇಲೆ ಹಮಾಸ್ ನಡೆಸಿದ್ದ ದಾಳಿಯಲ್ಲಿ 1,200 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದಾಳಿಯ ವೇಳೆ ಸುಮಾರು 251 ಜನರನ್ನು ಹಮಾಸ್ ಒತ್ತೆಯಾಳಾಗಿ ಗಾಝಾಗೆ ಕರೆ ತಂದಿತ್ತು. ಈ ಪೈಕಿ ಹಲವರನ್ನು ಬಿಡುಗಡೆ ಮಾಡಲಾಗಿದೆ. ಪ್ರಸ್ತುತ 48 ಒತ್ತೆಯಾಳುಗಳು ಹಮಾಸ್ ವಶದಲ್ಲಿದ್ದಾರೆ. ಈ ಪೈಕಿ 20 ಜನರು ಇನ್ನೂ ಜೀವಂತ ಇದ್ದಾರೆ ಎಂದು ಅಂದಾಜಿಸಲಾಗಿದೆ.

ಕದನ ವಿರಾಮ ಒಪ್ಪಂದ ಬಳಿಕವೂ ಗಾಝಾ ಮೇಲೆ ದಾಳಿ

ಅಕ್ಟೋಬರ್ 8, 2025 ಬುಧವಾರ ರಾತ್ರಿ ಹಮಾಸ್-ಇಸ್ರೇಲ್ ನಡುವೆ ಕದನ ವಿರಾಮ ಒಪ್ಪಂದವಾಗಿದೆ ಎಂದು ಟ್ರಂಪ್ ಘೋಷಿಸಿದ್ದಾರೆ. ಇದರಿಂದ ಗಾಝಾ ಮೇಲಿನ ಬಾಂಬ್ ದಾಳಿ ಅಂತ್ಯಗೊಂಡಿದೆ ಎಂದು ಹೇಳಲಾಗಿತ್ತು. ಆದರೆ, ಅಕ್ಟೋಬರ್ 9, 2025 ಗುರುವಾರ ಇಸ್ರೇಲ್ ಗಾಝಾ ಮೇಲೆ ದಾಳಿ ಮಾಡಿದೆ ಎಂದು ವರದಿಯಾಗಿದೆ.

ಹೌದು, ನಿನ್ನೆ ಕದನ ವಿರಾಮ ಒಪ್ಪಂದವಾಗಿದ್ದರೂ, ಇಂದು ಗಾಝಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ ಎಂದು ಗಾಝಾದ ನಾಗರಿಕ ರಕ್ಷಣಾ ಅಧಿಕಾರಿ ಮೊಹಮ್ಮದ್ ಅಲ್-ಮುಘಯ್ಯಿರ್ ಅವರು ಹೇಳಿರುವುದಾಗಿ ಸುದ್ದಿ ಸಂಸ್ಥೆ ಅಲ್-ಜಝೀರಾ ವರದಿ ಮಾಡಿದೆ.

ಕದನ ವಿರಾಮ ಒಪ್ಪಂದದ ಬಳಿಕ ಉತ್ತರ ಗಾಝಾದ ಪ್ರದೇಶಗಳಲ್ಲಿ ಹಲವಾರು ಸ್ಫೋಟಗಳು ವರದಿಯಾಗಿವೆ ಎಂದು ಅಲ್-ಮುಘಯ್ಯಿರ್ ಹೇಳಿದ್ದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ವಿದ್ಯಾರ್ಥಿಯನ್ನು ಸೆರೆ ಹಿಡಿದ ಉಕ್ರೇನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...