Homeಅಂತರಾಷ್ಟ್ರೀಯಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

ಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

ಶಾಂತಿ ಒಪ್ಪಂದದ ಬಳಿಕವೂ ಇಸ್ರೇಲ್‌ನಿಂದ ಗಾಝಾ ಮೇಲೆ ವಾಯುದಾಳಿ-ವರದಿ

- Advertisement -
- Advertisement -

ಬರೋಬ್ಬರಿ 67 ಸಾವಿರಕ್ಕೂ ಹೆಚ್ಚು ಅಮಾಯಕರ ಹತ್ಯೆ ಹಾಗೂ ಸುಂದರ ಗಾಝಾವನ್ನು ನರಕವಾಗಿಸಿದ ಬಳಿಕ ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.

ಇಸ್ರೇಲ್ ಗಾಝಾ ಮೇಲೆ ಆಕ್ರಮಣ ಮಾಡಲು ಪ್ರಾರಂಭಿಸಿ ಅಕ್ಟೋಬರ್ 8, 2025ಕ್ಕೆ ಎರಡು ವರ್ಷ ಪೂರ್ಣಗೊಂಡಿದೆ. ಇದರ ಮರುದಿನ, ಅಂದರೆ ಅಕ್ಟೋಬರ್ 9, 2025ರಂದು ಈಜಿಫ್ಟ್‌ನಲ್ಲಿ ನಡೆದ ಗಾಝಾ ಶಾಂತಿ ಮಾತುಕತೆ ಫಲಪ್ರದವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 20 ಅಂಶಗಳ ಶಾಂತಿ ಯೋಜನೆಗೆ ಉಭಯ ಪಕ್ಷಗಳು ಸಹಿ ಹಾಕಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಈ ಹಿಂದೆ ಅನೇಕ ಬಾರಿ ಕದನ ವಿರಾಮ ಜಾರಿಗೆ ಬಂದು ಬಳಿಕ ಅದು ವಿಫಲಗೊಂಡಿತ್ತು. ಆದರೆ, ಈ ಬಾರಿಯ ಶಾಂತಿ ಒಪ್ಪಂದ ಹಿಂದಿಗಿಂತ ಆಶಾದಾಯಕವಾಗಿದೆ. ಇದು ಕೇವಲ ಇಸ್ರೇಲ್-ಪ್ಯಾಲೆಸ್ತೀನ್ ಮಾತ್ರವಲ್ಲದೆ, ಯೆಮನ್, ಲೆಬನಾನ್ ಸೇರಿದಂತೆ ಎಲ್ಲಾ ದೇಶಗಳ ಮೇಲಿನ ಆಕ್ರಮಣ ಕೊನೆಗೊಳಿಸುವ ಒಪ್ಪಂದವಾಗಿದೆ. ಈ ಮೂಲಕ ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಶಮನವಾಗುವ ನಿರೀಕ್ಷೆಯಿದೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

ಮತ್ತೊಂದೆಡೆ, ಬುಧವಾರ (ಅ.8) ರಾತ್ರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಕದನ ವಿರಾಮ ಒಪ್ಪಂದವು ಸಾಕಷ್ಟು ವಿವರಗಳನ್ನು ಒಳಗೊಂಡಿಲ್ಲ, ಅಂದರೆ ಅದರಲ್ಲಿ ಸ್ಪಷ್ಟವಾದ ಮಾಹಿತಿ ಅಥವಾ ಯೋಜನೆಯ ಕೊರತೆಯಿದೆ. ಜೊತೆಗೆ, ಇದು ಹಲವು ಪ್ರಶ್ನೆಗಳಿಗೆ ಉತ್ತರಿಸದೆ ಉಳಿಸಿದೆ. ಇವು ಇನ್ನೂ ಪರಿಹಾರವಾಗದಿರುವ ಸಮಸ್ಯೆಗಳಾಗಿವೆ. ಈ ಕಾರಣಗಳಿಂದಾಗಿ, ಈ ಒಪ್ಪಂದವು ಹಿಂದಿನ ಶಾಂತಿ ಪ್ರಯತ್ನಗಳಂತೆ ವಿಫಲಗೊಳ್ಳುವ ಸಾಧ್ಯತೆಯೂ ಇದೆ ಎಂದು ವರದಿ ಅಭಿಪ್ರಾಯಪಟ್ಟಿದೆ.

“ನಮ್ಮ ಶಾಂತಿ ಯೋಜನೆಯ ಮೊದಲ ಹಂತಕ್ಕೆ ಇಸ್ರೇಲ್ ಮತ್ತು ಹಮಾಸ್ ಎರಡೂ ಸಹಿ ಹಾಕಿವೆ ಎಂದು ಘೋಷಿಸಲು ನನಗೆ ತುಂಬಾ ಹೆಮ್ಮೆಯಾಗುತ್ತಿದೆ” ಎಂದು ಟ್ರಂಪ್ ತಮ್ಮ ಟ್ರುಥ್ ಸೋಶಿಯಲ್‌ನಲ್ಲಿ ಬುಧವಾರ ಹೇಳಿದ್ದಾರೆ.

“ಇದರರ್ಥ ಎಲ್ಲಾ ಒತ್ತೆಯಾಳುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಮತ್ತು ಇಸ್ರೇಲ್ ಬಲವಾದ, ಬಾಳಿಕೆ ಬರುವ ಮತ್ತು ಶಾಶ್ವತ ಶಾಂತಿಯತ್ತ ಮೊದಲ ಹೆಜ್ಜೆಯಾಗಿ ತಮ್ಮ ಸೈನಿಕರನ್ನು ನಿರ್ದಿಷ್ಟ ಗಡಿ ರೇಖೆಗೆ ಹಿಂತೆಗೆದುಕೊಳ್ಳುತ್ತದೆ” ಎಂದು ಟ್ರಂಪ್ ತಿಳಿಸಿದ್ದಾರೆ.

ಗುರುವಾರ ತಮ್ಮ ಸರ್ಕಾರದ ಸಭೆ ಕರೆದು ಒಪ್ಪಂದಕ್ಕೆ ಅನುಮೋದನೆ ಪಡೆಯುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

“ಶಾಂತಿ ಯೋಜನೆಯ ಮೊದಲ ಹಂತದ ಅನುಮೋದನೆಯೊಂದಿಗೆ, ನಮ್ಮ ಎಲ್ಲಾ ಒತ್ತೆಯಾಳುಗಳನ್ನು ಮನೆಗೆ ಕರೆತರಲಾಗುವುದು” ಎಂದು ನೆತನ್ಯಾಹು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಇದು ಇಸ್ರೇಲ್‌ನ ರಾಜತಾಂತ್ರಿಕ ಯಶಸ್ಸು ಮತ್ತು ರಾಷ್ಟ್ರೀಯ ಮತ್ತು ನೈತಿಕ ಗೆಲುವು” ಎಂದಿದ್ದಾರೆ.

ಯುದ್ಧವನ್ನು ಕೊನೆಗೊಳಿಸಲು ಒಪ್ಪಂದಕ್ಕೆ ಬಂದಿರುವುದನ್ನು ಹಮಾಸ್ ಕೂಡ ದೃಢಪಡಿಸಿದೆ. ಒಪ್ಪಂದವು ಗಾಝಾ ಪ್ರದೇಶದಿಂದ ಇಸ್ರೇಲಿ ಪಡೆಗಳನ್ನು ಹಿಂತೆಗೆದುಕೊಳ್ಳುವುದು ಮತ್ತು ಒತ್ತೆಯಾಳು-ಕೈದಿಗಳ ವಿನಿಮಯವನ್ನು ಒಳಗೊಂಡಿದೆ ಎಂದಿದೆ.

“ನಮ್ಮ ಜನರ ತ್ಯಾಗಗಳು ವ್ಯರ್ಥವಾಗುವುದಿಲ್ಲ ಎಂದು ನಾವು ದೃಢೀಕರಿಸುತ್ತೇವೆ. ನಮ್ಮ ಜನರ ರಾಷ್ಟ್ರೀಯ ಹಕ್ಕುಗಳನ್ನು ಎಂದಿಗೂ ಕೈಬಿಡದಿರುವ ನಮ್ಮ ಪ್ರತಿಜ್ಞೆಗೆ ನಾವು ನಿಷ್ಠರಾಗಿರುತ್ತೇವೆ, ಸ್ವಾತಂತ್ರ್ಯ, ಸ್ವತಂತ್ರತೆ ಮತ್ತು ಸ್ವಯಂ-ನಿರ್ಧಾರದ ಹಕ್ಕು ಸಾಧಿಸುವವರೆಗೆ” ಎಂದು ಹಮಾಸ್ ಹೇಳಿದೆ.

ಅಕ್ಟೊಬರ್ 8, 2023ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಲ್ಲಿ ಇದುವರೆಗೆ 67 ಸಾವಿರ ಜನರು ಸಾವನ್ನಪ್ಪಿರುವ ಲೆಕ್ಕ ಸಿಕ್ಕಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಿದೆ ಎಂದು ಅಂದಾಜಿಸಲಾಗಿದೆ. ಏಕೆಂದರೆ, ಸಾವಿರಾರು ಜನರ ದೇಹಗಳು ಇಸ್ರೇಲ್ ಧ್ವಂಸಗೊಳಿಸಿದ ಕಟ್ಟಡಗಳ ಅವಶೇಷಗಳಡಿ ಹುದುಗಿ ಹೋಗಿರಬಹುದು ಎಂದು ನಂಬಲಾಗಿದೆ.

ಅಕ್ಟೋಬರ್ 7, 2023ರಂದು ಇಸ್ರೇಲ್‌ನ ಟೆಲ್ ಅವೀವ್ ಮೇಲೆ ಹಮಾಸ್ ನಡೆಸಿದ್ದ ದಾಳಿಯಲ್ಲಿ 1,200 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದಾಳಿಯ ವೇಳೆ ಸುಮಾರು 251 ಜನರನ್ನು ಹಮಾಸ್ ಒತ್ತೆಯಾಳಾಗಿ ಗಾಝಾಗೆ ಕರೆ ತಂದಿತ್ತು. ಈ ಪೈಕಿ ಹಲವರನ್ನು ಬಿಡುಗಡೆ ಮಾಡಲಾಗಿದೆ. ಪ್ರಸ್ತುತ 48 ಒತ್ತೆಯಾಳುಗಳು ಹಮಾಸ್ ವಶದಲ್ಲಿದ್ದಾರೆ. ಈ ಪೈಕಿ 20 ಜನರು ಇನ್ನೂ ಜೀವಂತ ಇದ್ದಾರೆ ಎಂದು ಅಂದಾಜಿಸಲಾಗಿದೆ.

ಕದನ ವಿರಾಮ ಒಪ್ಪಂದ ಬಳಿಕವೂ ಗಾಝಾ ಮೇಲೆ ದಾಳಿ

ಅಕ್ಟೋಬರ್ 8, 2025 ಬುಧವಾರ ರಾತ್ರಿ ಹಮಾಸ್-ಇಸ್ರೇಲ್ ನಡುವೆ ಕದನ ವಿರಾಮ ಒಪ್ಪಂದವಾಗಿದೆ ಎಂದು ಟ್ರಂಪ್ ಘೋಷಿಸಿದ್ದಾರೆ. ಇದರಿಂದ ಗಾಝಾ ಮೇಲಿನ ಬಾಂಬ್ ದಾಳಿ ಅಂತ್ಯಗೊಂಡಿದೆ ಎಂದು ಹೇಳಲಾಗಿತ್ತು. ಆದರೆ, ಅಕ್ಟೋಬರ್ 9, 2025 ಗುರುವಾರ ಇಸ್ರೇಲ್ ಗಾಝಾ ಮೇಲೆ ದಾಳಿ ಮಾಡಿದೆ ಎಂದು ವರದಿಯಾಗಿದೆ.

ಹೌದು, ನಿನ್ನೆ ಕದನ ವಿರಾಮ ಒಪ್ಪಂದವಾಗಿದ್ದರೂ, ಇಂದು ಗಾಝಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ ಎಂದು ಗಾಝಾದ ನಾಗರಿಕ ರಕ್ಷಣಾ ಅಧಿಕಾರಿ ಮೊಹಮ್ಮದ್ ಅಲ್-ಮುಘಯ್ಯಿರ್ ಅವರು ಹೇಳಿರುವುದಾಗಿ ಸುದ್ದಿ ಸಂಸ್ಥೆ ಅಲ್-ಜಝೀರಾ ವರದಿ ಮಾಡಿದೆ.

ಕದನ ವಿರಾಮ ಒಪ್ಪಂದದ ಬಳಿಕ ಉತ್ತರ ಗಾಝಾದ ಪ್ರದೇಶಗಳಲ್ಲಿ ಹಲವಾರು ಸ್ಫೋಟಗಳು ವರದಿಯಾಗಿವೆ ಎಂದು ಅಲ್-ಮುಘಯ್ಯಿರ್ ಹೇಳಿದ್ದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ವಿದ್ಯಾರ್ಥಿಯನ್ನು ಸೆರೆ ಹಿಡಿದ ಉಕ್ರೇನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...