Homeಮುಖಪುಟಇಸ್ರೇಲ್-ಹಮಾಸ್ ಕದನ ವಿರಾಮ ಎರಡು ದಿನಗಳವರೆಗೆ ವಿಸ್ತರಣೆ

ಇಸ್ರೇಲ್-ಹಮಾಸ್ ಕದನ ವಿರಾಮ ಎರಡು ದಿನಗಳವರೆಗೆ ವಿಸ್ತರಣೆ

- Advertisement -
- Advertisement -

ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮವನ್ನು ಇನ್ನೂ ಎರಡು ದಿನಗಳವರೆಗೆ ವಿಸ್ತರಿಸಲಾಗಿದ್ದು, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಗೆ ಮಂಗಳವಾರ ಬಿಡುಗಡೆ ಮಾಡಲಿರುವ ಒತ್ತೆಯಾಳುಗಳ ಪಟ್ಟಿ ತಲುಪಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಒಪ್ಪಂದ ಸೋಮವಾರ ರಾತ್ರಿ ಕೊನೆಗೊಳ್ಳಬೇಕಿತ್ತು ಆದರೆ ಇನ್ನೂ ನಾಲ್ಕು ದಿನಗಳ ಕದನ ವಿರಾಮ ವಿಸ್ತರಣೆಯಾಗಿದೆ. ಕದನ ವಿರಾಮ ವಿಸ್ತರಣೆಯ ನಂತರ ಹಮಾಸ್ ಸದಸ್ಯರು ಒತ್ತೆಯಾಳುಗಳ ಹೊಸ ಪಟ್ಟಿಯನ್ನು ಇಸ್ರೇಲ್ ಪ್ರಧಾನಿ ಕಚೇರಿಗೆ ಕಳುಹಿಸಿದ್ದಾರೆ.

ಸೋಮವಾರ ಸ್ಪೇನ್‌ನಲ್ಲಿ ನಡೆದ ಸಭೆಯಲ್ಲಿ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ ಕೊನೆಯಾಗಬೇಕು ಅದಕ್ಕೆ ಬೇಕಾದ ಪರಿಹಾರದ ಅಗತ್ಯವನ್ನು ಅರಬ್ ರಾಜ್ಯಗಳು ಮತ್ತು ಯುರೋಪಿಯನ್ ಒಕ್ಕೂಟವು ಒಪ್ಪಿಕೊಂಡಿವೆ.

ಸ್ಪೇನ್‌ನ ಬಾರ್ಸಿಲೋನಾದಲ್ಲಿ ನಡೆದ ಯೂನಿಯನ್ ಫಾರ್ ಮೆಡಿಟರೇನಿಯನ್ ಶೃಂಗಸಭೆಯಲ್ಲಿ, ಯುರೋಪಿಯನ್ ಒಕ್ಕೂಟದ ವಿದೇಶಾಂಗ ವ್ಯವಹಾರಗಳ ಮುಖ್ಯಸ್ಥ ಜೋಸೆಪ್ ಬೊರೆಲ್ ಅವರು, ಗಾಜಾವನ್ನು ಪ್ಯಾಲೇಸ್ಟಿನಿಯನ್ ಪ್ರಾಧಿಕಾರವು ಆಳಬೇಕು ಅದುವೇ, ಏಕೈಕ ಪರಿಹಾರ ಎಂದು ಪ್ರತಿಪಾದಿಸಿದರು.

ಹಮಾಸ್ ಮತ್ತೆ 11 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದೆ. ಅವರೆಲ್ಲರೂ ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ಗುಂಪು ದಾಳಿ ಮಾಡಿದಾಗ ಅಪಹರಣಕ್ಕೊಳಗಾದ ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ. ಅವರನ್ನು ಇಸ್ರೇಲಿ ಭದ್ರತಾ ಏಜೆನ್ಸಿಗಳಿಗೆ ಹಸ್ತಾಂತರಿಸಲಾಯಿತು. ಇದಕ್ಕೆ ಪ್ರತಿಯಾಗಿ ಇಸ್ರೇಲ್ 33 ಪ್ಯಾಲೆಸ್ಟೀನಿಯನ್ನರನ್ನು ಬಿಡುಗಡೆ ಮಾಡಿತು.

ಕಳೆದ ಮೂರು ದಿನಗಳಿಂದ ಇಸ್ರೇಲಿಗಳು ಮತ್ತು ಇಸ್ರೇಲಿಗಳಲ್ಲದ 69 ಒತ್ತೆಯಾಳುಗಳನ್ನು ಹಮಾಸ್ ಗುಂಪು ಬಿಡುಗಡೆ ಮಾಡಿದೆ. ಇನ್ನು ಇಸ್ರೇಲ್ ಕೂಡ ಸುಮಾರು 150 ಪ್ಯಾಲೆಸ್ಟೀನಿಯನ್ನರನ್ನು ಬಿಡುಗಡೆ ಮಾಡಿದೆ.

ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ಹಠಾತ್ ದಾಳಿ ನಡೆಸಿ ಸುಮಾರು 1,200 ಜನರನ್ನು ಕೊಂದಿತು ಮತ್ತು ಸುಮಾರು 240 ಜನರನ್ನು ಒತ್ತೆಯಾಳುಗಳಾಗಿಸಿಕೊಂಡಿತು.

ಮತ್ತೊಂದೆಡೆ, ಇಸ್ರೇಲ್ ಗಾಜಾದ ಮೇಲೆ ಬಾಂಬ್ ದಾಳಿ ನಡೆಸಿ ಸುಮಾರು 15,000 ಪ್ಯಾಲೆಸ್ಟೀನಿಯನ್ನರನ್ನು ಕೊಂದಿತು.

ಇದನ್ನೂ ಓದಿ: ಗಾಝಾ ಕರಾವಳಿ ಪಟ್ಟಿಗೆ ನೆತನ್ಯಾಹು ಭೇಟಿ: ಇಸ್ರೇಲ್‌ ನಿಯಂತ್ರಣದಲ್ಲಿ ಹಮಾಸ್‌ ಆಳ್ವಿಕೆಯ ಭೂ ಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...